ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ

ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]

Continue Reading

60 ಕೋಟಿ ವಂಚನೆ ಕೇಸ್: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ. ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಥಿಕ ಅಪರಾಧಗಳ ವಿಭಾಗ ಮೂಲಗಳು ಸೂಚಿಸುವಂತೆ ಪೊಲೀಸರು ಈಗ ಶೆಟ್ಟಿ ಮತ್ತು ಕುಂದ್ರಾ ಅವರ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ […]

Continue Reading

ವಿದ್ಯಾರ್ಥಿ ಸ್ನೇಹಿ ಶಿಕ್ಷಕರು ಹೆಚ್ಚಾಗಲಿ

ಕಾಳಗಿ: ವಿದ್ಯಾರ್ಥಿಗಳು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ, ಅವರಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ದೇಶದ ಅಮೂಲ್ಯ ಸಂಪತ್ತನ್ನಾಗಿಸುವ ವಿದ್ಯಾರ್ಥಿ ಸ್ನೇಹಿ ಶಿಕ್ಷಕರ ಸಂಖ್ಯೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕ ಹಾಗೂ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ‌ ಮತ್ತು ಕಾಳಗಿ ಕನ್ನಡ ಸಾಹಿತ್ಯ ಪರಿಷತ್’ನ ತಾಲೂಕಾ ಘಟಕ ಇವುಗಳು ಜಂಟಿಯಾಗಿ ಶುಕ್ರವಾರ ಏರ್ಪಡಿಸಿದ್ದ ‘63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ : ಶಿಕ್ಷಕರಿಗೆ […]

Continue Reading

ಶಿಕ್ಷಕರ ಕೈಯಲ್ಲಿ ಮಕ್ಕಳ ಭವಿಷ್ಯವಿದೆ: ಡಾ. ಚಂದ್ರಕಾಂತ ಕೆಳಮನಿ

ಸುದ್ದಿ ಸಂಗ್ರಹ ಚಿತ್ತಾಪುರ ಶಿಕ್ಷಕ ಕೇವಲ ವ್ಯಕ್ತಿಯಲ್ಲ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಚಂದ್ರಕಾಂತ ಕೆಳಮನಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಲ್ಲಿ ನಕಾರಾತ್ಮಕ ಭಾವನೆಗಳು ತುಂಬದೆ ನಿಮ್ಮಿoದ ಎಲ್ಲವೂ ಸಾಧ್ಯವೆಂಬ ಸಕಾರಾತ್ಮಕ ಭಾವನೆ ತುಂಬುವ ಕೆಲಸ ಮಾಡಬೇಕು. ಶಿಕ್ಷಕ […]

Continue Reading

ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವವಾದದ್ದು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಪಟ್ಟಣದ ಚವ್ಹಾಣ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಅವರು ನಂದಗೋಕುಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು‌. ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯರ ಪರಂಪರೆಭದ್ರ ಅಡಿಪಾಯವಾಗಿದೆ. ಶಿಕ್ಷಕರು ಪಾಠಕ್ಕೆ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನು ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ […]

Continue Reading

8 ಕೋಟಿ ಮೌಲ್ಯದ ಐಷಾರಾಮಿ ಹಡಗು: ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲವೇ ನಿಮಿಷದಲ್ಲಿ ಮುಳುಗಡೆ

ಟರ್ಕಿ: ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲವೇ ಕ್ಷಣದಲ್ಲಿ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ವಿಹಾರಿ ಹಡಗೊಂದು ಮುಳುಗಿದ ಆಘಾತಕಾರಿ ಘಟನೆ ಟರ್ಕಿಯಲ್ಲಿ ನಡೆದಿದೆ. ಡೋಲ್ಸ್ ವೆಂಟೊ ಹೆಸರಿನ ಈ ವಿಹಾರಿ ನೌಕೆಯು ಸರಿಸುಮಾರು 85 ಅಡಿ ಉದ್ದವಿತ್ತು. ಮಂಗಳವಾರ ಉತ್ತರ ಟರ್ಕಿಯ ಎರೆಗ್ಲಿ ಜಿಲ್ಲೆಯ ಜೊಂಗುಲ್ಡಕ್ ಕರಾವಳಿಯಲ್ಲಿ ಚೊಚ್ಚಲ ಪ್ರಯಾಣ ಆರಂಭಿಸಿದ 15 ನಿಮಿಷದಲ್ಲೇ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ ಹಡಗಿನ ಮಾಲೀಕ ಹಡಗು ಮುಳುಗುತ್ತಿದ್ದಂತೆ ನದಿಗೆ ಹಾರಿ ದಡ ಸೇರಲು […]

Continue Reading

ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ: ಶುರು-ಅಂತ್ಯ ಯಾವಾಗ ? ಸೂತಕ ಸಮಯ ಸೇರಿದಂತೆ 5 ವಿಶೇಷ ಸಂಗತಿ

ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ. ಭಾದ್ರಪದ ಪೂರ್ಣಿಮೆ ಸೆಪ್ಟೆಂಬರ್ 7ರಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ. ಭಾರತದಲ್ಲಿ ಗೋಚರಿಸುವುದರಿಂದ, ಅದರ ಸೂತಕ ಅವಧಿಯು ಸಹ ಮುಖ್ಯವಾಗುತ್ತದೆ. ಸೂತಕ ಅವಧಿಯಲ್ಲಿ, ದೇವಾಲಯಗಳ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಆ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು […]

Continue Reading

ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು: ಇಬ್ಬರು ನರ್ಸ್‌ಗಳ ಅಮಾನತು

ಇಂದೋರ್: ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆಯೊಂದರಲ್ಲಿ, ನವಜಾತ ಶಿಶುಗಳ ತೀವ್ರ ನಿಗಾ ಘಟಕದ ಒಳಗಿದ್ದ ಎರಡು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿವೆ. ವಾರಾಂತ್ಯದಲ್ಲಿ ಇಲಿಗಳು ಕಚ್ಚಿದ್ದು, ಒಂದು ಶಿಶು ಮಂಗಳವಾರ ಸಾವಿಗೀಡಾಗಿದೆ. ಆದಾಗ್ಯೂ, ಆಸ್ಪತ್ರೆ ಅಧಿಕಾರಿಗಳು ಸಾವಿಗೆ ಕಾರಣ ಇಲಿ ಕಡಿತವಲ್ಲ, ಆಕೆಯ ಗಂಭೀರ ವೈದ್ಯಕೀಯ ಸ್ಥಿತಿ ಎಂದು ಹೇಳಿದ್ದಾರೆ. ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ರವಿವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ. ಹುಟ್ಟಿ ಮೂರ್ನಾಲ್ಕು ದಿನಗಳಷ್ಟೇ […]

Continue Reading