ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್: ಆಹಾರಕ್ಕೆ ವೃದ್ಧರ ಪರದಾಟ

ಸುದ್ದಿ ಸಂಗ್ರಹ ಕಲಬುರಗಿ ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಕಲಬುರಗಿಯ ಕಾಕಡೆ ಚೌಕ್ ಬಳಿಯ ವೃದ್ಧಾಶ್ರಮಕ್ಕೂ ತಟ್ಟಿದ್ದು, ಸಿಲಿಂಡರ್ ಅಭಾವ ಉಂಟಾಗಿದೆ. ಸಿಲಿಂಡರ್ ಸಿಗದ ಹಿನ್ನೆಲೆ ಸೌದೆ ಮೇಲೆ ಅಡುಗೆ ಮಾಡಲಾಗುತ್ತಿದೆ. ಬಿರು ಬಿಸಿಲಿನಲ್ಲಿ ಕೂತು ಸಿಬ್ಬಂದಿ ಅಡುಗೆ ತಯಾರಿಸಲು ಕಷ್ಟಪಡುತ್ತಿದ್ದಾರೆ. ಆಶ್ರಮದ ವೃದ್ಧರು ಆಹಾರಕ್ಕಾಗಿ ಪರದಾಡುವಂತಾಗಿದೆ. ಎಲ್‌ಪಿಜಿ ಸಿಗದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿರುವ 15ಕ್ಕೂ ಹೆಚ್ಚು ವೃದ್ಧರಿಗೆ ಸಮಸ್ಯೆಯಾಗಿದೆ.

Continue Reading

ಭೀಮ ಗಾಯನ ಹೆಸರಿನಲ್ಲಿ ರಾಜಕೀಯ: ವಿಕ್ರಮ್ ತೇಜಸ್ ಆಕ್ರೋಶ‌

ಸುದ್ದಿ ಸಂಗ್ರಹ ಚಿತ್ತಾಪುರ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಭೇಟಿ ನೀಡಿದ ಹತ್ತು ಊರುಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಂಡ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅಂಬೇಡ್ಕರ್ ಅವರು ಭೇಟಿ ನೀಡಿದ ವಾಡಿ ಪಟ್ಟಣ ಮರೆತು ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ವಾರ್ತಾ ಇಲಾಖೆ ರಾಜಕಾರಣ ಮಾಡಿದೆ ಎಂದು ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಬಾ […]

Continue Reading

ಸಚಿವರ ಅನುದಾನದಿಂದ ಬಿಜೆಪಿ ನಾಯಕರಿಗೆ ದಿಗ್ಭ್ರಮೆ‌

ಸುದ್ದಿ ಸಂಗ್ರಹ ಚಿತ್ತಾಪುರಸಚಿವ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿನಾಟಕ ಎಂಬ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತ್ಯುತ್ತರ ನೀಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಅವರು, ಸಚಿವರು ತಮ್ಮ ಸತತ ಪ್ರಯತ್ನದಿಂದ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿರುವುದನ್ನು ಸಹಿಸದ ಬಿಜೆಪಿ ನಾಯಕರು ದಿಗ್ಭ್ರಮೆಗೊಂಡು ಆಧಾರರಹಿತ ಹೇಳಿಕೆಗಳು ನೀಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ 224 ಶಾಸಕರಲ್ಲಿ ಅತಿ ಹೆಚ್ಚು ಅನುದಾನ […]

Continue Reading

ಕೆಪಿಎಸ್‌ಸಿ ಅಕ್ರಮ ನೇಮಕಾತಿಗಳ ತನಿಖೆ: ಪ್ರಿಯಾಂಕ್‌ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿ ನಡೆಸಿದ ಪಿಡಿಒ, ಬಿಬಿಎಂಪಿ ಸಹಾಯಕ ಎಂಜಿನಿಯರ್, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading

ಕಾಳಗಿ ಜನರ ಪ್ರಜಾಸೌಧದ ಕನಸು ನನಸು: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಜನರ ಬಹುಕಾಲದ ಕನಸಾಗಿದ್ದ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು, ಮುಂದಿನ ದಿನಗಳಲ್ಲಿ ತಾಲೂಕಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಹಂತವಾಗಿ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.‌ ಪಟ್ಟಣದ ನೀಲಕಂಠ ಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ, ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದ ಅವರು, ಕಾಳಗಿ- ಚಿಂಚೋಳಿ ತಾಲೂಕಿನ ಅಭಿವೃದ್ಧಿಗೆ 60 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ […]

Continue Reading

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

ಸುದ್ದಿ ಸಂಗ್ರಹ ವಾಷಿಂಗ್ಟನ್ ಭಾರತೀಯ-ಅಮೆರಿಕನ್‌ ಕುಟುಂಬದ ಒಡೆತನದ ಜ್ಯುವೆಲರ್ಸ್‌ನಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು 16 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ಯುಎಸ್ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಯಲ್ಲಿ, ದರೋಡೆಕೋರರು ಭಾರತೀಯ-ಅಮೆರಿಕನ್ ಕುಟುಂಬದ ಒಡೆತನದ ಅಂಗಡಿಗೆ ನುಗ್ಗಿ ಕೇವಲ ಒಂದು ನಿಮಿಷದಲ್ಲಿ 15.7 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಕಳೆದ ವರ್ಷ ಜೂನ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದರೋಡೆಯ ಸಮಯದಲ್ಲಿ ಅಂಗಡಿಯು […]

Continue Reading

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೀದರ್ ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್‌ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು ಸಮಸ್ಯೆ ಇಲ್ಲಾ ಅಂದರೆ […]

Continue Reading

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ: ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌

ಸುದ್ದಿ ಸಂಗ್ರಹ ನವದೆಹಲಿ ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ ಮೂಲಕ ಸೀಮೆಎಣ್ಣೆ ವಿತರಿಸಲಾಗುತ್ತದೆ. ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳನ್ನು ಕೇಳಿದೆ. ಸೀಮೆಎಣ್ಣೆಯ ಬದಲು ಅಡುಗೆಗೆ […]

Continue Reading

ಗ್ಯಾಸೇ ಇಲ್ಲದ ಅಡುಗೆ ಮನೆಗೆ ‘ಅದಮ್ಯ ಚೇತನ’ ಸ್ಫೂರ್ತಿ

ಸುದ್ದಿ ಸಂಗ್ರಹ ಬೆಂಗಳೂರುಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ಅಭಾವದ ಚರ್ಚೆ ಮನೆ-ಮನಗಳಲ್ಲಿ ಜೋರಾಗಿದೆ. ಇಂತಹ ಸಮಯದಲ್ಲಿ ‘ನಮ್ಮ ಅಡುಗೆಗೆ ಪರರಾಷ್ಟ್ರಗಳ ಇಂಧನವನ್ನೇಕೆ ಅವಲಂಬಿಸಬೇಕು ? ಎಂಬ ಪ್ರಶ್ನೆಗೆ ಬೆಂಗಳೂರಿನ ‘ಅದಮ್ಯ ಚೇತನ’ ಸಂಸ್ಥೆ ಕಳೆದ 15 ವರ್ಷಗಳಿಂದ ರಚನಾತ್ಮಕ ಉತ್ತರ ಹಾಗೂ ಪರಿಹಾರ- ಎರಡನ್ನೂ ಕಂಡುಕೊಂಡಿದೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್‌ ಅವರು ಆರಂಭಿಸಿದ ಈ ಸಂಸ್ಥೆ, ಇಂದು ವಿಶ್ವದ ಗಮನ ಸೆಳೆಯುತ್ತಿದೆ. 2009ರಿಂದ ಸಂಸ್ಥೆ ಲಕ್ಷಾಂತರ ಮಂದಿಗೆ ಅಡುಗೆ ತಯಾರಿಸುತ್ತಿದ್ದು, […]

Continue Reading

ಶಹಾಬಾದ್‌: ಡಾ.ಫಾರೂಕ್ ಮಣ್ಣೂರರಿಂದ ಸೌಹಾರ್ದ ಇಫ್ತಾರ್ ಕೂಟ

ಸುದ್ದಿ ಸಂಗ್ರಹ ಶಹಾಬಾದಪ್ರೀತಿ, ಭಾಂದವ್ಯ, ಭ್ರಾತೃತ್ವ ಭಾವನೆ ಮೂಡಿಸಲು ಮತ್ತು ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತ ಬದುಕು ಕಲಿತುಕೊಳ್ಳುವುದೆ ಇಫ್ತಾರ್ ಕೂಟದ ಉದ್ದೇಶವಾಗಿದೆ ಎಂದು ಕಲಬುರಗಿಯ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ.ಫಾರೂಕ್ ಮಣ್ಣೂರ ಹೇಳಿದರು. ನಗರದ ಜಾಮಿಯಾ ಮಸ್ಜೀದ್ ಫಂಗ್ಶನ್ ಹಾಲ್’ನಲ್ಲಿ ಡಾ.ಫಾರೂಕ್ ಮಣ್ಣೂರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವ್ರತದ ಇಫ್ತಿಯಾರ್ ಕೂಟದಲ್ಲಿ ಹಿಂದು-ಮುಸ್ಲಿಂ […]

Continue Reading