ಮಾತೃ ಶಕ್ತಿ ಬೃಹತ್ ಮಹಿಳಾ ಜಾಥಾದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ

ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಇಂಟಿಗ್ರೇಟೆಡ್ ರಿಸರ್ಚ್ ಇನಸ್ಟಿಟ್ಯೂಟ್, ಬಸವೇಶ್ವರ ಸಮಾಜ ಸೇವಾ ಬಳಗ, ಕಲ್ಯಾಣ ಕರ್ನಾಟಕ ಸೇನೆ, ಸ್ಲಂ ಜನಾಂದೋಲನದ ಜಿಲ್ಲಾ ಘಟಕ, ಕೆಎಚ್‌ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು, ಮಹಿಳಾ ಸಂಘಗಳ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರರ 134ನೇ ಜಯಂತಿ ಪ್ರಯುಕ್ತ ‘ಮಾತೃ ಶಕ್ತಿ’ ಬೃಹತ್ ಮಹಿಳಾ ಜಾಥಾದಲ್ಲಿ ಎಲ್ಲರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಡಾ.ಸುನೀಲಕುಮಾರ ಎಚ್ ವಂಟಿ ಮತ್ತು ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ […]

Continue Reading

ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಮಂಗಲಪಾಂಡೆ

ಕಲಬುರಗಿ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಥಮ ಬಾರಿಗೆ ಧ್ವನಿ ಎತ್ತುವ ಮೂಲಕ ಮಂಗಲಪಾಂಡೆ ಸ್ವಾತಂತ್ರ್ಯ ಚಳುವಳಿಗೆ ನಾಂದಿ ಹಾಡಿದ ಅಪ್ರತಿಮ ದೇಶಭಕ್ತರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಂಗಲಪಾಂಡೆ ಸ್ಮರಣೋತ್ಸವ’ದಲ್ಲಿ ಮಾತನಾಡಿದ ಅವರು, ವ್ಯಾಪರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರೀಟಿಷರು ಒಡೆದಾಳುವ ನೀತಿಯ ಮೂಲಕ ಸುಮಾರು 250 ವರ್ಷಗಳ ಕಾಲ ಆಡಳಿತ ಮಾಡಿ […]

Continue Reading

ಗಂಡಸರಿಗೆ ಸೀರೆ ಧರಿಸಿ ನರೇಗಾ ಕೂಲಿ ಕೆಲಸ, ಅಧಿಕಾರಿಯಿಂದ ಹಣ ಲಪಟಾಯಿಸುವ ಸಂಚು

ಯಾದಗಿರಿ: ಹಣ ಎಗರಿಸಲು ಮೈ ತುಂಬ ಸೀರೆ ಧರಿಸಿದಪುರುಷರು, ನರೇಗಾ ಕೂಲಿ ಕೆಲಸಕ್ಕೆ ಮುಂದಾಗಿದ್ದಾರೆ.ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿಇಂತಹದೊಂದು ಘಟನೆ ನಡೆದಿದೆ. ಮಲ್ಹಾರ ಗ್ರಾಮದಲ್ಲಿಯೇ ಕೂಲಿ ಕಾರ್ಮಿಕರ ಹೆಸರಿನಲ್ಲಿಗೊಲ್ಮಾಲ್ ಮಾಡುವ ಹುನ್ನಾರ ಕೆಲ ಪುರುಷರುಅಧಿಕಾರಿಗಳ ಕುಮ್ಮಕ್ಕಿನಿಂದ ಸೀರೆ ಧರಿಸಿ ಕೂಲಿಗೆದುಡಿಯಲು ಮುಂದಾಗಿದ್ದಾರೆ. ಪೂಜಾರಿ ಎಂಬಾತನ ಹೊಲದ ಬಳಿ ನಾಲೆ ಹೂಳೆತ್ತುವಕಾಮಗಾರಿಯಲ್ಲಿ ನಕಲಿ ಪೋಟೋ NMMS ಮಾಡಿಬಿಲ್ ಎತ್ತುವ ಸಂಚು ರೂಪಿತವಾಗಿದೆ. ಕಾರ್ಮಿಕರ ಕೆಲಸದ ಹಾಜರಾತಿ ಪೊಟೋ ಅಪ್ಲೋಡ್ಮಾಡಬೇಕಾದ ಅಧಿಕಾರಿಗಳು ಆದರೆ ಮಹಿಳೆಯರಹೆಸರಿನಲ್ಲಿ ಕೆಲಸ ಮಾಡದೇ ಪುರುಷರು ಸೀರೆ […]

Continue Reading

ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ: 597 ಅಂಕ ಪಡೆದ ಸಂಜನಾಬಾಯಿ

ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ ನಿರ್ಮಲಾ ದ್ವಿತೀಯ […]

Continue Reading

ವಾಟರ್ ಬಾಟಲ್ ನೀರು ಅಸುರಕ್ಷಿತ: ಆಹಾರ ಇಲಾಖೆಯ ವರದಿಯಲ್ಲಿ ಆಘಾತಕಾರಿ ಅಂಶ

ಬೆಂಗಳೂರು: ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಈಗ ವಾಟರ್ ಬಾಟಲ್ ನೀರಿನ ಸರದಿ. ಬಾಟಲ್ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ತಿಳಿಸಿದೆ. ಜೊತೆಗೆ ಕೋವಾ ಕೂಡ […]

Continue Reading

ಅರಳಿ ಮರ ಆಕ್ಸಿಜನ್, ಆರೋಗ್ಯದ ಆಗರ 

ಕಲಬುರಗಿ: ಕೆಲವು ಜಾತಿಯ ಮರಗಳ ಎಲೆ, ಬೇರು ಮತ್ತು ತೊಗಟೆಯ ಕಷಾಯವನ್ನು ಭೇದಿ, ವಾಂತಿ, ಹಲ್ಲುನೋವು, ದಮ್ಮು ಇತ್ಯಾದಿ ರೋಗಗಳಿಗೆ ಉಪಯೋಗಿಸುತ್ತಾರೆ. ಇದು ಆಕ್ಸಿಜನ್, ಆರೋಗ್ಯದ ಆಗರವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿಯ ದಕ್ಷಿಣಮುಖಿ ಅಂಜನೇಯ ದೇವಸ್ಥಾನದ ಆವರಣದ ಅರಳಿ ಮರದ ಕಟ್ಟೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಅರಳಿ ಮರದ ಮಹತ್ವದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಳಿ ಮರದ ಎಲೆಯನ್ನು ದನ-ಕರು, ಆಡು, ಕುರಿಗಳಿಗೆ ಮೇವಾಗಿ […]

Continue Reading

ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನುಡಿ ನಮನ ನಾಳೆ

ಚಿತ್ತಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ವತಿಯಿಂದ ಏಪ್ರಿಲ್ 8 ರಂದು ಮಂಗಳವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ತಿಳಿಸಿದ್ದಾರೆ.‌ ಆತ್ಮೀಯ ಸ್ನೇಹಿತರು, ಮಾರ್ಗದರ್ಶಕರು,‌ ಪ್ರೋತ್ಸಾಹದಾಯಕರು, ಸಾಹಿತಿಗಳು, ಲೇಖಕರು, ಶಿಕ್ಷಣ ಪ್ರೇಮಿಗಳು, ಪತ್ರಕರ್ತರಾಗಿದ್ದ ದಿ.ನಾಗಯ್ಯ ಸ್ವಾಮಿ ಅಲ್ಲೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಸಲ್ಲಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ […]

Continue Reading

₹10, ₹500 ಹೊಸ ನೋಟು ಬಿಡುಗಡೆ ಶೀಘ್ರ: ಆರ್‌ಬಿಐ

ಮುಂಬೈ: ಶೀಘ್ರವೇ ಮಹಾತ್ಮಗಾಂಧಿ ಅವರ ಭಾವಚಿತ್ರ ಮತ್ತು ಗವರ್ನರ್ ಸಂಜಯ್ ಮಲ್ಹೊತ್ರಾ ಅವರ ಸಹಿ ಇರುವ ₹10 ಮತ್ತು ₹500 ಮುಖಬೆಲೆಯ ಹೊಸ ನೋಟುಗಳ ಸರಣಿಯನ್ನು ಚಲಾವಣೆಗೆ ಬಿಡುಗಡೆ ಮಾಡಲಾಗುವದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ. ಮಹಾತ್ಮಗಾಂಧಿ (ಹೊಸ) ಸರಣಿಯ ನೋಟುಗಳಮಾದರಿಯಲ್ಲಿಯೇ ಈ ಹೊಸ ನೋಟುಗಳು ಇರಲಿವೆ ಎಂದು ಹೇಳಿದೆ. ಗವರ್ನರ್ ಮಲ್ಹೊತ್ರಾ ಅವರ ಸಹಿ ಇರುವ ₹100 ಮತ್ತು ₹200 ಮುಖಬೆಲೆಯ ಹೊಸ ನೋಟುಗಳನ್ನೂ ಚಲಾವಣೆಗೆ ಬಿಡುಗಡೆ ಮಾಡುವದಾಗಿ ಕಳೆದ ತಿಂಗಳು ಆರ್‌ಬಿಐ […]

Continue Reading

ನಾಗಯ್ಯಸ್ವಾಮಿ ಅಲ್ಲೂರ ನಿವಾಸಕ್ಕೆ ಭೇಟಿ: ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಅನಾರೋಗ್ಯದಿಂದ ಮೊನ್ನೆ ನಿಧನರಾದ ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರು ಅವರ ಕುಟುಂಬದ ಸದಸ್ಯರನ್ನು ಅಲ್ಲೂರು ಗ್ರಾಮದ ಮನೆಯಲ್ಲಿ ಭೇಟಿ ಮಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವಾನ ಹೇಳಿದರು. ನಾಗಯ್ಯಸ್ವಾಮಿ ಅವರ ಸಹೋದರ, ಅವರ ಪುತ್ರಿ ಮತ್ತು ಪುತ್ರನ ಜೊತೆ ಮಾತನಾಡಿದ ಸಚಿವರು ಸಾಂತ್ವನ ಹೇಳಿ ಅವರ ವಿದ್ಯಾಭ್ಯಾಸದ ಬಗ್ಗೆ ವಿಚಾರಿಸಿದರು. ಹಿರಿಯ ಪತ್ರಕರ್ತರಾಗಿದ್ದ ನಾಗಯ್ಯಸ್ವಾಮಿ ಅವರು ಪತ್ರಿಕೋದ್ಯಮ ವೃತ್ತಿಯ ಜೊತೆಗೆ ಸಾಹಿತ್ಯಿಕ ಚಟುವಟಿಕೆಯಲ್ಲಿ ತಮ್ಮನ್ನು […]

Continue Reading

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಮುಖವಾದದ್ದು

ಕಲಬುರಗಿ: ದೇಶದ ಸ್ವಾತಂತ್ರ ಚಳುವಳಿ ಇತಿಹಾಸದಲ್ಲಿ ಮುಖ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಆಡಳಿತ ಕಾಲದಲ್ಲಿ ಉಪ್ಪಿನ ಮೇಲೆ ವಿಧಿಸಿದ ತೆರಿಗೆಯನ್ನು ವಿರೋಧಿಸಿ ತಮ್ಮ ಅನುಯಾಯಿಗಳೊಂದಿಗೆ ಸಬರಮತಿ ಆಶ್ರಮದಿಂದ ಸಮುದ್ರ ದಡದಲ್ಲಿರುವ ದಂಡಿಯವರೆಗಿನ 240 ಮೈಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ 1930ರ ಎಪ್ರಿಲ್ 6ರಂದು ಉಪ್ಪನ್ನು ತಯಾರಿಸಿ, ಬ್ರಿಟಿಷರಿಗೆ ಬಿಸಿ ಮುಟ್ಟಿಸುವ ಮೂಲಕ ದೇಶದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ […]

Continue Reading