ನಾಲವಾರ: ಆ.21 ರಂದು ಭಕ್ತರಿಗೆ ಗುರುದೀಕ್ಷಾ, ಅಯ್ಯಾಚಾರ ಕಾರ್ಯಕ್ರಮ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಷ್ಟಲಿಂಗ ಸಹಿತ ಗುರುಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನಡೆಯುತ್ತಿದ್ದು, ಶ್ರಾವಣ ಸಂಭ್ರಮ ಕಳೆಗಟ್ಟಿದೆ ಎಂದು ಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಪ್ರತಿ ವರ್ಷದ ಪದ್ಧತಿಯಂತೆ ಶ್ರಾವಣದ ಕೊನೆಯ ಗುರುವಾರ ಆಗಸ್ಟ್ 21ರಂದು ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಭಕ್ತರಿಗೆ ಗುರುದೀಕ್ಷೆ ಹಾಗೂ ಜಂಗಮ […]

Continue Reading

ಸಾಲ ಕೊಟ್ಟವರ ಮನೆಯಲ್ಲಿ ಕನ್ನ: ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ನೆಲಮಂಗಲ: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲಿ ಕಳ್ಳತನ ಮಾಡಿದ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಠಾಣೆಯ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿ, 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ […]

Continue Reading

ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ: ದೀಪಕ್ ಹೊಸೂರಕರ್

ಚಿತ್ತಾಪುರ: ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಜಿ‌‌.ಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಗಸ್ಟ್ 19ರ ವಿಶೇಷ ಸಂಪುಟ ಸಭೆಯಲ್ಲಿ ಒಳ ಮಿಸಲಾತಿ ಜಾರಿಗೆ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲೇಬೇಕು. ಇಲ್ಲವಾದರೆ ರಾಜ್ಯದ 29 ಸಾವಿರ ಹಳ್ಳಿಗಳಲ್ಲಿ ಅಸ್ಪೃಶ್ಯ ಸಮಾಜದವರು ಬೀದಿಗಿಳಿದು ಮಾಡು ಇಲ್ಲವೇ ಮಡಿ ಹೋರಾಟ […]

Continue Reading

ದಂಡೋತಿ: ಪ್ರವಾಹದಲ್ಲಿ ಕಿತ್ತುಹೋದ ಸೇತುವೆ ರಸ್ತೆ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದಹತ್ತಿರದ ಕಾಗಿಣಾ ನದಿಗೆ ಕಟ್ಟಿರುವ ಸೇತುವೆ ಮೇಲಿನ ರಸ್ತೆ ಪ್ರವಾಹದಲ್ಲಿ ಕಿತ್ತು ಹೋಗಿದೆ. ಸೇತುವೆ ಮೇಲಿನ ಡಾಂಬರ್ ರಸ್ತೆ ಮತ್ತು ಸಿಮೆಂಟ್ ಕಾಂಕ್ರಿಟ್ ರಸ್ತೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಗುರುವಾರ ದಿನವಿಡಿ ಪ್ರವಾಹದಲ್ಲಿ ಸೇತುವೆ ಮುಳುಗಿತ್ತು. ಶುಕ್ರವಾರ ಬೆಳಿಗ್ಗೆ ಪ್ರವಾಹ ಕಡಿಮೆಯಾದಾಗ ಸೇತುವೆ ಮೇಲಿನ ರಸ್ತೆ ಕಿತ್ತು ಹೋಗಿರುವುದು ಬೆಳಕಿಗೆ ಬಂದಿದೆ. ಸೇತುವೆ ಮೇಲಿನ ಅನೇಕ ಸಿಮೆಂಟ್ ಕಂಬಗಳು ಕೊಚ್ಚಿಕೊಂಡು ಹೋಗಿವೆ. ಸೇತುವೆ ಮೇಲೆ ಅಳವಡಿಸಿದ ಮೊಬೈಲ್ ನೆಟ್‌ವರ್ಕ್ ಮತ್ತು ಕೇಬಲ್ ಕಿತ್ತು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್’ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಜರುಗಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವವೇ ಅಚ್ಚರಿಯಿಂದ ನೋಡುವಂತೆ ದೇಶವನ್ನು ಮುನ್ನಡೆಸಿದ ಕೀರ್ತಿಗೆ ಪಾತ್ರರಾದ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿ ಹುದ್ದೆಗೇರಿದ್ದರು ಎಂದರು. ಒಂದು ಬಾರಿ 13 ದಿನಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೊಮ್ಮೆ 13 ತಿಂಗಳಿಗೆ ಅಧಿಕಾರ ಕಳೆದುಕೊಂಡರು. ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಿ ಐದು ವರ್ಷ ಅಧಿಕಾರ […]

Continue Reading

ವಾಹನ ಮಾಲೀಕರಿಗೆ ಸೂಚನೆ: ಮೊಬೈಲ್ ನಂಬರ್ ಲಿಂಕ್ ಕಡ್ಡಾಯ, ಆನ್‌ಲೈನ್ ಪ್ರಕ್ರಿಯೆ ಹೇಗೆ ?

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಹತ್ವದ ಅಪ್‌ಡೇಟ್ ನೀಡಿದೆ. ವಾಹನ ಮಾಲೀಕರು ಮತ್ತು ಡ್ರೈವಿಂಗ್ ಲೈಸೆನ್ಸ್ ಹೋಲ್ಡರ್ ಮೊಬೈಲ್ ನಂಬರ್ ಅಪ್‌ಡೇಟ್ ಅಥವಾ ಲಿಂಕ್ ಮಾಡಿಕೊಳ್ಳಬೇಕು, ಇದು ಕಡ್ಡಾಯವಾಗಿದೆ. ದೇಶಾದ್ಯಂತ ಈ ಅಪ್‌ಡೇಟ್ ನಡೆಯಲಿದೆ. ಪಾರದರ್ಶಕತೆ, ಸಂವಹನ ಸೇರಿದಂತೆ ಇತರ ಹಲವು ತಾಂತ್ರಿಕ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ಸಾರಿಗೆಯ ಹಲವು ಸೇವೆಗಳಿಗೆ ಮೊಬೈಲ್ ನಂಬರ್ ಲಿಂಕಿಂಗ್ ಮತ್ತು ಆಧಾರ್ ಅಥೆಂಟಿಕೇಶನ್ ಕಡ್ಡಾಯ ಮಾಡಲಾಗಿದೆ. ಲೈಸೆನ್ಸ್, […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಡಿದ ವೀರರನ್ನು ಗೌರವಿಸಿ ಅವರಿಗೆ ಕೃತಜ್ಞರಾಗಿರುವುದೆ ಈ ನೆಲದ ಗುಣವಾಗಿದೆ ಎಂದರು. ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಜಮ್ಮು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದ ಭಾರತೀಯರ ಮೇಲೆ ಪಹಲ್‌ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ಹಾಡುಹಗಲೆ ಗುಂಡಿಟ್ಟು ಕೊಂದು ಭಾರತೀಯ ಹೆಣ್ಣು ಮಕ್ಕಳ ಹಣೆಯ ಕುಂಕುಮವನ್ನು ಅಳಿಸಿ ಹಾಕಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಉಗ್ರರಿಗೆ ತಕ್ಕ ಪ್ರತ್ಯುತ್ತರ […]

Continue Reading

ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಶರಣಾಂಜಲಿ

ಕಲಬುರಗಿ: ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಭಕ್ತಿಯ ಶರಣಾಂಜಲಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಪೂಜ್ಯ ಅಪ್ಪಾಜಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹುಟ್ಟು ಹಾಕಿ, ದೇಶಕ್ಕೆ ಮಾದರಿಯಾದ ಶಿಕ್ಷಣವನ್ನು ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದ್ದಾರೆ. ಕೋಟ್ಯಾಂತರ ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಅವರು ವಿದ್ಯಾ […]

Continue Reading

1 ಗಂಟೆ 43 ನಿಮಿಷ PM ಮೋದಿ ಭಾಷಣ, ದಾಖಲೆ: ಅತಿ ಕಡಿಮೆ ಸಮಯ ಭಾಷಣ ಮಾಡಿದ PM ಯಾರು ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೆಂಪು ಕೋಟೆಯಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಬರೋಬ್ಬರಿ 1 ಗಂಟೆ 43 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಈ ಮೂಲಕ ದೀರ್ಘ ಭಾಷಣ ಮಾಡಿದ ಪ್ರಧಾನಿ ಎನಿಸಿಕೊಂಡಿದ್ದಾರೆ. ಕಳೆದ ವರ್ಷ 98 ನಿಮಿಷಗಳ ಭಾಷಣ ಮಾಡಿ ದಾಖಲೆ ಬರೆದಿದ್ದ ಮೋದಿ, ಈ ಬಾರಿ 103 ನಿಮಿಷಗಳ ಕಾಲ ಮಾತನಾಡುವ ಮೂಲಕ ತಮ್ಮದೆ ದಾಖಲೆ ಮುರಿದಿದ್ದಾರೆ. 2024ರ ಮೊದಲು ಮೋದಿ ಅವರ ದೀರ್ಘ ಸ್ವಾತಂತ್ರ್ಯ ದಿನಾಚರಣೆಯ ಭಾಷಣ […]

Continue Reading

ಲಿಂಗೈಕ್ಕೆಕ್ಕೂ ಮುನ್ನ ತಮ್ಮ ಕೊನೆಯ ಆಸೆ ಈಡೇರಿಸಿಕೊಂಡ ಡಾ.ಶರಣಬಸಪ್ಪ ಅಪ್ಪ

ಕಲಬುರಗಿ: ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ಡಾ. ಶರಣಬಸಪ್ಪ ಅಪ್ಪ ಅವರು ತಮ್ಮ ಅಂತಿಮ ಇಚ್ಛೆಯಂತೆ ಶ್ರೀ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರು ಎಳೆದಿದ್ದಾರೆ. ಗೃಹ ಆರೈಕೆಗೆಂದು ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲು ಕುಟುಂಬಸ್ಥರು ನಿರ್ಧರಿಸಿದರು. ಅದರಂತೆ, ಡಾ. ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲಾಯಿತು. ಶರಣಬಸವೇಶ್ವರ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು ಹಾಗೂ ಆರತಿ ನಡೆಯಿತು. ನಂತರ […]

Continue Reading