ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದಮೂಲಭೂತ ಸೌಲಭ್ಯ ಮತ್ತು ಸಾರ್ವಜನಿಕರ ಕುಂದು ಕೊರತೆಗೆ ಪೌರಾಯುಕ್ತರು ಸ್ಪಂದನೆ ಮಾಡಬೇಕು ಎಂದು ದಸಂಸ(ಅಂಬೇಡ್ಕರವಾದ)ದ ತಾಲೂಕಿನ ಸಂಚಾಲಕ ಸುಭಾಷ ಸಾಕ್ರೆ ಒತ್ತಾಯಿಸಿದರು. ನಗರದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ ಪ್ರತಿಭಟನಾ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ಅವರು, ನಗರ ಸಭೆಯ ವಾರ್ಡ್ ನಂ.11,12,13 ಮತ್ತು 14ರ ಬಡಾವಣೆಯ ಕೊಳವೆ ಬಾವಿ ಕೆಟ್ಟು ಹೋಗಿವೆ, ಬೇಸಿಗೆ ಕಾಲವಾಗಿದರಿಂದ ಮೋಟರ್ ಮತ್ತು ಪೈಪ್ ಲೈನ್ ಅಳವಡಿಸಿ ತಕ್ಷಣವೆ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು. […]

Continue Reading

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಗಮನಾರ್ಹ

ಸುದ್ದಿ ಸಂಗ್ರಹ ಶಹಾಬಾದ್ಮಹಿಳೆಯರ ಬುದ್ಧಿಶಕ್ತಿ, ತಾಳ್ಮೆ ಮತ್ತು ವಿಶ್ಲೇಷಣಾ ಸಾಮರ್ಥ್ಯದಿಂದ ಕುಟುಂಬದಿಂದ ಬಾಹ್ಯಾಕಾಶದವರೆಗೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ ಎಂದು ಅರ್ಥಶಾಸ್ತ್ರ ಮುಖ್ಯಸ್ಥೆ ಡಾ.ಸುರೇಖಾ ನಾಟೆಕರ್ ಹೇಳಿದರು. ನಗರದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಯುಗದಲ್ಲಿ ಮಹಿಳೆಯರು ಸಂಪ್ರದಾಯಗಳ ಸಂಕೋಲೆಯಿಂದ ಮುಕ್ತಗೊಂಡು ಜಾಗತಿಕ ಮನ್ನಣೆ ಪಡೆಯುವಂತಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ್ ಮಾತನಾಡಿ, […]

Continue Reading

ಒಳ ಮೀಸಲಾತಿಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ತಾಪುರಒಳ ಮೀಸಲಾತಿಯಿಲ್ಲದೆ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಹೇಳಿದರು. ಚುನಾವಣಾ ಪೂರ್ವದಲ್ಲಿ ಸರ್ಕಾರ ಬಂದ ಮೊದಲ ಅಧಿವೇಶನದಲ್ಲಿ ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತದೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಚಿತ್ರದುರ್ಗ ಸಮಾವೇಶದಲ್ಲಿ ಅದೆ ಭರವಸೆ ನೀಡಲಾಗಿತ್ತು. ಸರ್ಕಾರ ಬಂದು ಎರಡು ವರ್ಷ ಮುಗಿಯುತ್ತಿದ್ದರೂ ಒಳಮೀಸಲಾತಿ ಜಾರಿಗೊಳಿಸಲು ಪ್ರಮಾಣಿಕ […]

Continue Reading

ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕ: ಮಾಲೀಕ ಗಿರವಿಟ್ಟಿದ್ದ 13 ಲಕ್ಷ ಚಿನ್ನವನ್ನು ಮಾರಿದ ಭೂಪ

ಸುದ್ದಿ ಸಂಗ್ರಹ ಬೆಂಗಳೂರು ಆತ ಚಾಲಕ ಕಳೆದ ಹತ್ತು ವರ್ಷದಿಂದ ಒಂದೆ ಕಡೆ ಕೆಲಸ ಮಾಡುತ್ತಿದ್ದ. ಆತ ಮನೆ ಮಾಲೀಕರ ನಂಬಿಕೆ ಗಳಿಸಿದ್ದ. ಅವರು ಕೂಡ ಈತನನ್ನು ಬಹಳ ಆತ್ಮೀಯತೆಯಿಂದ ನೋಡಿಕೊಳ್ಳುತ್ತಿದ್ದರು. ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಆಸಾಮಿ ಮನೆಯಲ್ಲಿದ್ದ ಚಿನ್ನದ ಮೇಲೆ ಕಣ್ಣು ಹಾಕಿದ್ದ. ಆ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದ. ಚಾಲಕನ ಕಳ್ಳಾಟ ಬಯಲಾಗಿದ್ದೆ ನಿಜಕ್ಕೂ ರೋಚಕ. ಉಂಡ ಮನೆಗೆ ದ್ರೋಹಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕನ ಹೆಸರು ಅಭಿಲಾಷ್. ಪ್ರತೀಕ್​​ […]

Continue Reading

ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್‌ ಸರಕು ಹಡಗಿನ ಮೇಲೆ ಇರಾನ್‌ ದಾಳಿ

ಸುದ್ದಿ ಸಂಗ್ರಹ ಟೆಹ್ರಾನ್ ಯುಎಇ ಬಂದರಿನಿಂದ ಹೊರಟ ಸ್ವಲ್ಪ ಸಮಯದಲ್ಲೆ ಥಾಯ್‌ ಧ್ವಜ ಹೊತ್ತ ಸರಕು ಹಡಗಿನ ಮೇಲೆ ಹಾರ್ಮುಜ್‌ ಜಲಸಂಧಿಯ ಬಳಿ ದಾಳಿ ನಡೆದಿದೆ. ಸರಕು ಹಡಗಿನ ಮೇಲೆ ಬುಧವಾರ ದಾಳಿ ನಡೆದಿದೆ ಎಂದು ರಾಯಲ್‌ ಥಾಯ್‌ ನೌಕಾಪಡೆ ತಿಳಿಸಿದೆ. ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದೆ. ಆದರೆ ಮೂವರು ಇನ್ನೂ ಪತ್ತೆಯಾಗಿಲ್ಲ. ಥಾಯ್ ಕಂಪನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕ ನೌಕೆ ಮಯೂರಿ ನರಿ, ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿಗೆ […]

Continue Reading

ಕುಟುಂಬದಿಂದ ಬಾಹ್ಯಾಕಾಶದವರೆಗೆ ಮಹಿಳೆಯರ ಸಾಧನೆ ಗಮನಾರ್ಹ: ಜ್ಯೋತಿ ಮರಗೋಳ

ಸುದ್ದಿ ಸಂಗ್ರಹ ಶಹಾಬಾದ್ಮಹಿಳೆಯ ಬುದ್ಧಿಶಕ್ತಿ, ತಾಳ್ಮೆ ಮತ್ತು ವಿಶ್ಲೇಷಣಾ ಸಾಮರ್ಥ್ಯದಿಂದ ಕುಟುಂಬದಿಂದ ಬಾಹ್ಯಾಕಾಶದವರೆಗೂ ಗಮನಾರ್ಹ ಸಾಧನೆ ಮಾಡುತ್ತಿದ್ದು, ಸಂಪ್ರದಾಯಗಳ ಸಂಕೋಲೆಯಿಂದ ಮುಕ್ತಗೊಂಡು ಜಾಗತಿಕ ಮನ್ನಣೆ ಪಡೆಯುವಂತಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಿಳಾ ಮಹಾಸಭಾದ ಜಿಲ್ಲಾಧ್ಯಕ್ಷೆ ಜ್ಯೋತಿ ಮರಗೋಳ ಹೇಳಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಕೊಡುಗೆ ಅಪಾರ, ಮಹಿಳೆಯರು […]

Continue Reading

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

ಸುದ್ದಿ ಸಂಗ್ರಹ ಬೆಂಗಳೂರು ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಲು ಕೇಂದ್ರಕ್ಕೆ ಶೀಘ್ರವೆ ಶಿಫಾರಸು ಕಳಿಸೋದಾಗಿ ಸಚಿವ ಬೋಸರಾಜು ತಿಳಿಸಿದ್ದಾರೆ. ವಿಧಾನ ಪರಿಷತ್ ಗಮನ ಸೆಳೆಯೋ ಪ್ರಸ್ತಾಪದಲ್ಲಿ ಕಾಂಗ್ರೆಸ್‌ನ ತಿಪ್ಪಣ್ಣಪ್ಪ ಕಮಕನೂರು, ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ವಿಷಯ ಪ್ರಸ್ತಾಪ ಮಾಡಿದರು. ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಿ. ಈ ಸಮುದಾಯಗಳು ಹಿಂದುಳಿದ ಸಮುದಾಯಗಳು. ಈ ಸಮುದಾಯಗಳನ್ನು STಗೆ ಸೇರಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ […]

Continue Reading

JEEಯಲ್ಲಿ ಮಗ ದೇಶಕ್ಕೆ ಟಾಪರ್: 4 ಸಾವಿರ ಶಾಲಾ ಮಕ್ಕಳಿಗೆ ಸಿಹಿಯೂಟ ಹಾಕಿ ಸಂಭ್ರಮಿಸಿದ ತಾಯಿ

ಸುದ್ದಿ ಸಂಗ್ರಹ ಮೈಸೂರು‌ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಬಿ.ಆರ್ಕ್, ಬಿ ಪ್ಲಾನಿಂಗ್‌ ಫೇಸ್ 1ರಲ್ಲಿ ಮಗ ದೇಶಕ್ಕೆ ಟಾಪರ್ ಆದ ಖುಷಿಯಲ್ಲಿ ತಾಯಿ ಶಾಲಾ ಮಕ್ಕಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆಯೂರು ಗ್ರಾಮದ ನಿವಾಸಿಗಳಾಗಿರುವ ಎ.ಸಿ ನೇತ್ರಾವತಿ ಮತ್ತು ಎಂ.ಡಿ ಗುರುಸ್ವಾಮಿ ದಂಪತಿಯ ಪುತ್ರ ಎಂ.ಜಿ ನಾಗದೇವ 2026ರ ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಸುತ್ತೂರು ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾಯಿ, ಸುತ್ತೂರಿನ ವಸತಿ ಶಾಲೆಯಲ್ಲಿ […]

Continue Reading

ಮುಷ್ಕರದಿಂದ ಹಿಂದೆ ಸರಿದ ವೈದ್ಯರು: ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

ಸುದ್ದಿ ಸಂಗ್ರಹ ಬೆಂಗಳೂರು ಸರ್ಕಾರಿ ಆಸ್ಪತ್ರೆ ಓಪಿಡಿ ಮುಷ್ಕರದಿಂದ ವೈದ್ಯರು ಹಿಂದೆ ಸರಿದಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ವೈದ್ಯರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಎಂದಿನಂತೆ ಓಪಿಡಿ ಕಾರ್ಯ ನಿರ್ವಹಿಸಲಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ಮುಷ್ಕರದ ಎಚ್ಚರಿಕೆಯಿಂದ ಎಚ್ಚೆತ್ತ ಸರ್ಕಾರ ಇಂದು ವೈದ್ಯಾಧಿಕಾರಿಗಳ ಸಂಘದ ಜೊತೆ ಸಭೆ ನಡೆಸಿತು. ಸಚಿವ ಮಹಾದೇವಪ್ಪ ಮತ್ತು ಆರೋಗ್ಯ ಸಚಿವ […]

Continue Reading

ರಾಷ್ಟ್ರದ ರಕ್ಷಣೆಯಲ್ಲಿ ಸಿಐಎಸ್‌ಎಫ್ ಸೇವೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿವಿಧ್ವಂಸಕ ಕೃತ್ಯ ತಡೆ, ಅಗ್ನಿಶಾಮಕ ಸೇವೆ ಮತ್ತು ವಿವಿಐಪಿ ರಕ್ಷಣೆ ನಿರ್ವಹಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಸಿಐಎಸ್‌ಎಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಮಹಾಗಾಂವ ಕ್ರಾಸ್ ಸಮೀಪದ ಸಂಜೀವಿನ ವೃದ್ಧಾಶ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಿಐಎಸ್‌ಎಫ್ ದಿನಾಚರಣೆ’ಯಲ್ಲಿ  ನಿವೃತ್ತ ಸಿಐಎಸ್‌ಎಫ್ ಯೋಧ ಕಾಮಣ್ಣ ಮದಗುಣಕಿ ಅವರನ್ನು ಸತ್ಕರಿಸಲಾಯಿತು, ನಂತರ ಮಾತನಾಡಿದ ಅವರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು 1969ರಲ್ಲಿ ಸ್ಥಾಪಿತವಾದ ಪ್ರಮುಖ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾಗಿದ್ದು, ದೇಶದ […]

Continue Reading