ರೋಗ ತಡೆಯಲು ಲಸಿಕೆ ಪಡೆಯುವದು ಅಗತ್ಯ: ಡಾ.ಅಮರೇಶ ಪತ್ತಾರ

ಕಲಬುರಗಿ: ಲಸಿಕೆಗಳು ಕಾಯಿಲೆ ವಿರುದ್ದ ರಾಮಬಾಣದಂತೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಪಡೆಯುವ ಬಗ್ಗೆ ಭಯ ಪಡದೆ ತೆಗೆದುಕೊಳ್ಳಬೇಕು ಎಂದು ಖ್ಯಾತ ಕುಟುಂಬ ವೈದ್ಯ ಡಾ.ಅಮರೇಶ ಪತ್ತಾರ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಿವಶಕ್ತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ರಾಷ್ಟ್ರೀಯ ಲಸಿಕೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ವಿವಿಧ ಕಾರಣಗಳಿಂದ ಕಾಯಿಲೆ ಬರುತ್ತವೆ. ಅವುಗಳ ನಿವಾರಣೆಗೆ ಮತ್ತು ಬರದಂತೆ ತಡೆಯಲು ಲಸಿಕೆ ಪಡೆಯುವದು ಅಗತ್ಯವಾಗಿದೆ ಎಂದರು. ಇಜೇರಿ […]

Continue Reading

ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು

ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]

Continue Reading

ವ್ಯವಹಾರದ ಬಗ್ಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ನಡೆಯುತ್ತಿವೆ

ಚಿತ್ತಾಪುರ: ಸಂಸ್ಥೆಯ ವ್ಯವಹಾರಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ನೀಡಿ ಜನರಿಗೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿವೆ, ಸದಸ್ಯರು ಅಂತಹ ವಿಚಾರಗಳ ಬಗ್ಗೆ ನಿರ್ಲಕ್ಷ್ಯವಹಿಸಿ. ಈ ಯೋಜನೆಯ ಪ್ರಯೋಜನ ಪಡೆದು ಕುಟುಂಬದ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ಕಾಶಿ ಹೇಳಿದರು. ಪಟ್ಟಣದ ವೆಂಕಟೇಶ್ವರ ನಗರದ ಅಮೃತ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಬ್ಯಾಂಕಿನಿಂದ […]

Continue Reading

ವಾಡಿ: ಬಿಜೆಪಿಯಿಂದ ವಿಶ್ವ ಮಹಿಳಾ ದಿನಾಚರಣೆ

ವಾಡಿ: ಪಟ್ಟಣದ ಅಂಬಾಭವಾನಿ ಮಂದಿರದ ಆವರಣದಲ್ಲಿ ತಾಲೂಕು ಬಿಜೆಪಿ ಮಂಡಲದ ಮಹಿಳಾ ಮೂರ್ಚಾದಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಮಹಿಳಾ ಮೂರ್ಚಾದ ತಾಲೂಕು ಅಧ್ಯಕ್ಷ ನಾಗುಬಾಯಿ ಜಿತುರೆ ಮಾತನಾಡಿ, ಮಹಿಳೆ ತನ್ನ ಹಕ್ಕನ್ನು ಪಡೆಯಲು ಹೋರಾಟ ನಡೆಸಿ ಗೆಲುವು ಪಡೆದ ದಿನವನ್ನೆ ವಿಶ್ವ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ. ಹಿಂದೆ ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಜೀವಿಸುವ ಕಾಲವಿತ್ತು. ಮಾತ್ರವಲ್ಲದೆ ಮತದಾನ […]

Continue Reading

ಮುಂಜಾಗ್ರತೆ ವಹಿಸಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಾನವನ ದೇಹದ ಪ್ರಮುಖ ಭಾಗವಾದ ಕಿಡ್ನಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತದೆ. ನಿರಂತರ ಆಯಾಸ, ನಿದ್ರೆಯ ತೊಂದರೆ, ಒಣಗಿದ ಚರ್ಮ, ಮೂತ್ರದಲ್ಲಿ ಉರಿಯೂತ ಮತ್ತು ರಕ್ತಪಾತ, ಸ್ನಾಯು ಸೆಳೆತದಂತಹ ಲಕ್ಷಣಗಳು ಕಿಡ್ನಿಯ ತೊಂದರೆಯನ್ನು ಸೂಚಿಸುತ್ತವೆ. ಆಗ ನಿರ್ಲಕ್ಷ ಮಾಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ಕಿಡ್ನಿಯನ್ನು ರಕ್ಷಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದರು. ಶೇಖರೋಜಾ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ […]

Continue Reading

ಶಹಾಬಾದ ಹೋಳಿ ಹಬ್ಬ ಮಾದರಿಯಾಗಲಿ: ಡಿವೈಎಸ್‌ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ: ಹೋಳಿ ಹಬ್ಬದಲ್ಲಿ ಕಾಮದಹನ ಮಾಡುವಾಗ ವಿದ್ಯುತ್ ತಂತಿ, ಕೇಬಲ್, ವಿದ್ಯುತ್ ಟಿಸಿಗಳ ಬಗ್ಗೆ ಎಚ್ಚರ ವಹಿಸಿ ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ದಿನದಂದು ಒತ್ತಾಯಪೂರ್ವಕವಾಗಿ ಬಣ್ಣ ಎರಚುವುದು ಅಥವಾ ಶಾಂತಿ ಕದಡುವ ಕೆಲಸ ಮಾಡಬಾರದು. ಪ್ರತಿ ವರ್ಷದಂತೆ ಈ ವರ್ಷವು ಕೂಡ ಅತ್ಯಂತ ಸಂಭ್ರಮದಿಂದ ಹೋಳಿ ಹಬ್ಬ ಅಚರಿಸಿ ಮಾದರಿಯಾಗಲಿ ಎಂದರು. […]

Continue Reading

ತೆಂಗಳಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ತೆಂಗಳಿ: ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ನ್ಯಾಯಬೆಲೆ ಅಂಗಡಿ ವರ್ತಕರ ಸಂಘದ ತಾಲೂಕು ಅಧ್ಯಕ್ಷ ವೀರಭದ್ರಯ್ಯ ಸಾಲಿಮಠ ಮಾತನಾಡಿ, ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದರು. ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ, ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಸಮಾಜಕ್ಕೆ ನಾಂದಿ ಹಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ […]

Continue Reading

ಧೂಮಪಾನದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

ಕಲಬುರಗಿ: ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ರಾಷ್ಟೀಯ ಧೂಮಪಾನ ನಿಷೇಧ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಆದರೆ ನಮ್ಮ […]

Continue Reading

ಸೂಕ್ತ ತಯಾರಿಯಿಂದ ಪರೀಕ್ಷೆ ಸುಲಭ: ಡಾ. ಪ್ರಹ್ಲಾದ ಬರ‍್ಲಿ

ಚಿತ್ತಾಪುರ: 10ನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಸೂಕ್ತ ತಯಾರಿ ಮಾಡಿಕೊಂಡರೆ ಎಂತಹ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಆರ್.ಜೆ ಕಾಲೇಜಿನ ಪ್ರಾಚಾರ್ಯ ಡಾ. ಪ್ರಲ್ಹಾದ್ ಬರ‍್ಲಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ಬೇರೆಡೆಗೆ ಸೆಳೆಯುವ ಆಕರ್ಷಣೆ ಇದ್ದರು ಕೂಡ ಲೆಕ್ಕಿಸದೆ ಓದಿನ ಕಡೆಗೆ ಮಾತ್ರ ಗಮನಹರಿಸಿ ಅಧ್ಯಯನ ಮಾಡಿದರೆ, ಉತ್ತಮ […]

Continue Reading

ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು: ಸಂಪೂರ್ಣ ಪೊಲೀಸ್ ಕಸ್ಟಡಿಗೆ

ಕಲಬುರಗಿ: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ ಅವರನ್ನು ಇಲ್ಲಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನಗರದ ಮಿಲಿಂದ್ ಶಾಲೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿಯ ಬದಲಿಗೆ ಅಕ್ರಮವಾಗಿ ಸಂಪೂರ್ಣ ಪಾಟೀಲ ಬರೆಯುತ್ತಿರುವುದನ್ನು ದಲಿತ ಸೇನೆ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಪೊಲೀಸರು […]

Continue Reading