ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಹಿಂಪಡೆಯಲು ಒತ್ತಾಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಒತ್ತಾಯಿಸಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಮದುವೆಯ ಅರತಕ್ಷತೆಗೆ ಫೇಸ್‌ಬುಕ್‌ ಲೈವ್‌ ಮೂಲಕ ಸಾರ್ವಜನಿಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌, ಅವುಗಳನ್ನು ನೀಡುವುದು ಬೇಡವೆಂದು ಮನವಿ ಮಾಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು […]

Continue Reading

ಸದೃಢ ಆರೋಗ್ಯ– ಮಾದಕವಸ್ತು ಮುಕ್ತ ಕರ್ನಾಟಕಕ್ಕಾಗಿ ಓಟ

ಕಲಬುರಗಿ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮತ್ತು ತಂಬಾಕು ನಿಷೇಧ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ – 2025 ಓಟದಲ್ಲಿ 5 ಕಿ.ಮೀ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಹೆಬ್ಬಾಳ ಮಕ್ಕಳು ಭಾಗವಹಿಸಿ ಕ್ರಮವಾಗಿ ಮಹೇಶ 6ನೇ ಸ್ಥಾನ ಮತ್ತು ಸಮೀರ್ 8ನೇ ಸ್ಥಾನ ಪಡೆದಿದ್ದಕ್ಕಾಗಿ ಕಲಬುರಗಿ ನಗರ ಪೊಲಿಸ್ ಆಯುಕ್ತರಿಂದ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಇಂದು (ಸೋಮವಾರ) ಶಾಲೆಯಲ್ಲಿ ಪ್ರಭಾರಿ ಮುಖ್ಯ ಗುರುಗಳು ಮತ್ತು ಶಿಕ್ಷಕರಿಂದ […]

Continue Reading

ಭಾರತೀಯರ ಕನಸು ನನಸು: ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ

ದುಬೈ: 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕೆ ಇದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 […]

Continue Reading

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದರೆ 50 ಸಾವಿರ, ಗಂಡು ಜನಿಸಿದರೆ ಹಸು ಗಿಫ್ಟ್‌

ಅಮರಾವತಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ, ಗಂಡು ಮಗುವಿಗೆ […]

Continue Reading

ಹಠಾತ್‌ ಎದೆನೋವು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ನವದೆಹಲಿ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ರವಿವಾರ ಮುಂಜಾನೆ ದಾಖಲಿಸಲಾಗಿದೆ. 73 ವರ್ಷ ವಯಸ್ಸಿನ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Continue Reading

ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆ ದೊರೆಯಲಿ

ಕಲಬುರಗಿ: ಕುಂಬಾರಿಕೆಗೆ ಆಧುನಿಕತೆಯಿಂದ ವೃತ್ತಿಗೆ ತೊಂದರೆಯಾಗುತ್ತಿದೆ. ಕಷ್ಟದ ಸ್ಥಿತಿಯಲ್ಲಿಯೂ ವೃತ್ತಿ ಕಾಪಾಡಿಕೊಂಡು ಬರುತ್ತಿರುವ ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆಯ ಯೋಜನೆಗಳು ಸಮರ್ಪಕವಾಗಿ ದೊರೆಯಬೇಕಾಗಿದೆ ಎಂದು ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಟಾಕೀಸ್ ಸಮೀಪದ ವೃತ್ತಿ ಕುಂಬಾರ ಶಿವಶರಣಪ್ಪ ಕುಂಬಾರ ಅವರಳ್ಳಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗೃಹ ಕೈಗಾರಿಕೆಯಲ್ಲಿ ಕುಂಬಾರಿಕೆ ಒಂದು. ಈ ವೃತ್ತಿಗೆ ಮಣ್ಣೆ ಆಧಾರ. […]

Continue Reading

ಬಳ್ಳಾರಿಯಲ್ಲಿ ಚರ್ಚೆಗೆ ಗ್ರಾಸವಾದ ಅಮಿತ್ ಶಾ, ಜನಾರ್ದನ ರೆಡ್ಡಿ ಭೇಟಿ

ಬಳ್ಳಾರಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಬಳ್ಳಾರಿಯ ಬಿಜೆಪಿ ನಾಯಕ ಶ್ರೀರಾಮುಲು ಬಯಸಿದ್ದರು. ಆದರೆ ಇತ್ತೀಚಿಗಷ್ಟೇ ಅವರ ವಿರುದ್ಧ ಮುನಿಸಿಕೊಂಡಿರುವ ಶಾಸಕ ಜನಾರ್ದನ ರೆಡ್ಡಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ರಾಮುಲುಗೆ ಅಮಿತ್ ಶಾ ಭೇಟಿಯಾಗುವ ಅವಕಾಶ ಸಿಗಲಿಲ್ಲ. ಇದು ಸದ್ಯ ಬಳ್ಳಾರಿ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡ ಬಳಿಕ ದೆಹಲಿಗೆ […]

Continue Reading

ಮಾನವನಿಂದ ಮಾನವನ ಶೋಷಣೆ ತಪ್ಪಿಸಲು ಜೆ.ವಿ ಸ್ಟಾಲಿನ್ ವಿಚಾರಗಳು ಅಗತ್ಯ

ಸುದ್ದಿ ಸಂಗ್ರಹ ಶಹಾಬಾದ ವಿಶ್ವದಲ್ಲಿ ಬಂಡವಾಳಶಾಹಿಗಳ ಹಾಗೂ ಸಾಮ್ರಾಜ್ಯಶಾಹಿಗಳ ಮಾರುಕಟ್ಟೆಗಾಗಿ ಯುದ್ಧವನ್ನು ಪ್ರಚೋದಿಸುತ್ತಿದ್ದು ಮಾನವ ಕುಲವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವದು ಒಂದು ಕಡೆಯಾದರೆ, ಮಾನವನ ಶ್ರಮ ನಿರಂತರವಾಗಿ ಶೋಷಣೆ ಮಾಡುತ್ತಿರುವದು ಮತ್ತೊಂದೆಡೆ ಕಾಣಬಹುದು ಎಂದು ಎಸ್’ಯುಸಿಐ (ಸಿ) ಶಹಾಬಾದ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ ಕೆ ಮಾನೆ ಹೇಳಿದರು. ಹನುಮಾನ ನಗರದಲ್ಲಿ ಕಾರ್ಮಿಕ ವರ್ಗದ ಮಹಾನ್ ನಾಯಕ ಕಾಮ್ರೇಡ್ ಜೆ.ವಿ ಸ್ಟಾಲಿನ್ ಅವರ 72ನೇ ಸ್ಮರಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದುಡಿಯುವ […]

Continue Reading

ಸಮನ್ವಯತೆಯ ಸಾಕಾರ ಮೂರ್ತಿ ಸಂತ ಶಿಶುನಾಳ ಶರೀಫ್

ಕಲಬುರಗಿ: ಯಾವುದೆ ಜಾತಿ, ಧರ್ಮ, ಪ್ರದೇಶ ದೊಡ್ಡದಲ್ಲ. ಬದಲಿಗೆ ಮಾನವೀಯತೆಯಿಂದ ಬದುಕುವದೆ ಶ್ರೇಷ್ಠ ಜೀವನವಾಗುತ್ತದೆಯೆಂದು ಪ್ರತಿಯೊಬ್ಬರಲ್ಲಿ ಸೌಹಾರ್ಧತೆಯುತವಾದ ಬದುಕುವ ಕಲೆಯನ್ನು ಸಾರಿದ ಸಂತ ಶಿಶುನಾಳ ಶರೀಫರು ಸಮನ್ವಯತೆಯ ಸಾಕಾರ ಮೂರ್ತಿಯಾಗಿ ಕಂಡುಬರುತ್ತಾರೆ ಎಂದು ಉಪನ್ಯಾಸ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಖಾದ್ರಿ ಚೌಕ್‌ನಲ್ಲಿರುವ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಸಂಜೆ ಏರ್ಪಡಿಸಿದ್ದ ‘ಶ್ರೇಷ್ಠ ಸಂತ ಶಿಶುನಾಳ ಶರೀಫ್‌ರ 206ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ […]

Continue Reading

ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರಕ್ಕೆ ಬಂಪರ್ ಫಲಿತಾಂಶ

ಕಲಬುರಗಿ: ಗುಣಮಟ್ಟದ ಕಂಪ್ಯೂಟರ ಶಿಕ್ಷಣ ನೀಡುವಲ್ಲಿ ತನ್ನದೆಯಾದ ಛಾಪು ಮೂಡಿಸಿರುವ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ ‘ಗಣಕಯಂತ್ರ ಶಿಕ್ಷಣ ಪರೀಕ್ಷೆ’ಯಲ್ಲಿ ಶೇ.97.23 ಉತ್ತಮ ಫಲಿತಾಂಶ ಪಡೆದಿದೆ ಎಂದು ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್ ಹೇಳಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಅಗಷ್ಟನಲ್ಲಿ ಪರೀಕ್ಷೆ ನಡೆಸಲಾಗಿತ್ತು, ಪರೀಕ್ಷೆಗೆ ಹಾಜರಾದ 181 ವಿದ್ಯಾರ್ಥಿಗಳಲ್ಲಿ 176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾವೇರಿ ಬಿ. ಹೌದೆ (ಶೇ.91),ರಹಿಮಾ ಬೇಗಂ (ಶೇ.91), ಶಾಂತಲಾ […]

Continue Reading