ರಾಷ್ಟ್ರದ ರಕ್ಷಣೆಯಲ್ಲಿ ಸಿಐಎಸ್‌ಎಫ್ ಸೇವೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿವಿಧ್ವಂಸಕ ಕೃತ್ಯ ತಡೆ, ಅಗ್ನಿಶಾಮಕ ಸೇವೆ ಮತ್ತು ವಿವಿಐಪಿ ರಕ್ಷಣೆ ನಿರ್ವಹಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಸಿಐಎಸ್‌ಎಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಮಹಾಗಾಂವ ಕ್ರಾಸ್ ಸಮೀಪದ ಸಂಜೀವಿನ ವೃದ್ಧಾಶ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಿಐಎಸ್‌ಎಫ್ ದಿನಾಚರಣೆ’ಯಲ್ಲಿ  ನಿವೃತ್ತ ಸಿಐಎಸ್‌ಎಫ್ ಯೋಧ ಕಾಮಣ್ಣ ಮದಗುಣಕಿ ಅವರನ್ನು ಸತ್ಕರಿಸಲಾಯಿತು, ನಂತರ ಮಾತನಾಡಿದ ಅವರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು 1969ರಲ್ಲಿ ಸ್ಥಾಪಿತವಾದ ಪ್ರಮುಖ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾಗಿದ್ದು, ದೇಶದ […]

Continue Reading

ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ರಾವೂರ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಫಲಿತಾಂಶ ಬರಲು ಶಾಲೆಯ ಶಿಕ್ಷಕರ ಪರಿಶ್ರಮ ಅಷ್ಟೆ ಮುಖ್ಯ ಎಂದು ರಾವೂರ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಮಗುವಿನ ಸರ್ವಾಂಗಿಣ ವಿಕಾಸವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ಬರಿ ಫಲಿತಾಂಶದ ದೃಷ್ಟಿಯಲ್ಲಿ ಮಕ್ಕಳನ್ನು ಸೀಮಿತಗೊಳಿಸಿದ್ದಾರೆ. ಇಂತಹ ಮಕ್ಕಳು ಸಮಾಜದಲ್ಲಿ ಸಾಮಾಜಿಕರಣ ಆಗುವುದು ಕಷ್ಟ. ದೈಹಿಕ, ಮಾನಸಿಕ, ಪಠ್ಯ […]

Continue Reading

ಸರ್ಕಾರಕ್ಕೆ ಸೀರೆ ವಾಪಸ್ ಕೊಡುವ ಅಭಿಯಾನ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಘೋಷಣೆ

ಸುದ್ದಿ ಸಂಗ್ರಹ ಹಾವೇರಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡುವ ಬದಲಾಗಿ, ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕೇವಲ ಸೀರೆ ಕೊಟ್ಟು ಅಪಮಾನ ಮಾಡಿದೆ. ಇದನ್ನು ಖಂಡಿಸಿ ಸೀರೆ ವಾಪಸ್ ಕೊಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಪ್ರಧಾನ ಕಾರ್ಯದರ್ಶಿ ಸುನಂದಮ್ಮ ರೇವಣಕರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ […]

Continue Reading

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

ಸುದ್ದಿ ಸಂಗ್ರಹ ಯಾದಗಿರಿ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿ ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೆ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು […]

Continue Reading

ಗ್ರಾಹಕರೆ ಗಮನಿಸಿ: ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಹೊಸ ನಿಯಮ, ಇನ್ನುಮುಂದೆ 21 ದಿನ ಕಾಯಲೇಬೇಕು

ಸುದ್ದಿ ಸಂಗ್ರಹ ನವದೆಹಲಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಅನಿರೀಕ್ಷಿತ ಆಘಾತ ನೀಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಪೂರೈಕೆಯಲ್ಲಿ ಅಡ್ಡಿಯಾಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಈ ಕಳವಳದಿಂದ, ಜನರು ಸಿಲಿಂಡರ್‌ ಬುಕ್ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ. ಪ್ರಪಂಚದಾದ್ಯಂತ ಯುದ್ದದ ವಾತಾವರಣ ಹೆಚ್ಚು ಅಪಾಯಕಾರಿಯಾಗುತ್ತಿರುವುದರಿಂದ ಭಾರತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಈಗ, ಸಿಲಿಂಡರ್ ಬುಕ್ ಮಾಡಿದ ನಂತರ, ನೀವು ಎರಡನೆಯದಕ್ಕಾಗಿ ಕನಿಷ್ಠ 21 ದಿನಗಳು ಕಾಯಬೇಕು. ಸದ್ಯ ಈ ನಿಯಮದಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಹಾರ್ಮುಜ್ ಜಲಸಂಧಿಯ […]

Continue Reading

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.10 ರಿಂದ ನಗರದ ಪತ್ರಿಕಾ ಭವನದಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು […]

Continue Reading

ವಾಡಿ: ವಿಶ್ವಕಪ್ ಗೆಲುವಿಗೆ ಬೆಳಗಿನ ಬಳಗ ಹರ್ಷ

ಸುದ್ದಿ ಸಂಗ್ರಹ ವಾಡಿಪಟ್ಟಣದ ನ್ಯೂ ಟೌನ್‌ನಲ್ಲಿ ಬೆಳಗಿನ ಬಳಗದ ಸದಸ್ಯರು ಭಾರತಾಂಬೆಗೆ ಜೈ ಘೋಷಿಸಿ, ಪರಸ್ಪರ ಅಭಿನಂದಿಸಿ ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದರು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ವಿಶ್ವ ವಿಜೇತವಾಗಿ ಹೊರಹೊಮ್ಮಿದೆ, ಇಡಿ ಭಾರತ ಖುಷಿಯಲ್ಲಿದೆ ಎಂದರು. ಕೋಟ್ಯಾಂತರ ಭಾರತೀಯರ ಹೆಮ್ಮೆಯನ್ನು ಇಮ್ಮಡಿಗೊಳಿಸಿದ ಭಾರತದ ಯುವ ಕ್ರಿಕೆಟ್ ಪಡೆಯ ಕ್ರೀಡಾ ಸ್ಪೂರ್ತಿ […]

Continue Reading

400ಕ್ಕೂ ಹೆಚ್ಚು ಕೆರೆ ತುಂಬಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಚಿತ್ತಾಪುರಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೆವೆ. 400ಕ್ಕೂ ಹೆಚ್ಚು ಕೆರೆಗಳು ತುಂಬಿಸುವ ಕೆಲಸ ಮಾಡುತ್ತೆವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೆವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಪಟ್ಟಣದಲ್ಲಿ ರವಿವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ […]

Continue Reading

ಟ್ರಂಪ್‌ ತಾಳಕ್ಕೆ ಕುಣಿಯುವ ಮೋದಿ ಗುಲಾಮ: ಮಲ್ಲಿಕಾರ್ಜುನ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಬ್ಬ ಸರ್ವಾಧಿಕಾರಿ. ಎಫ್‌ ಸ್ಟೀನ್‌ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ರವಿವಾರ ಆಯೋಜಿಸಿದ್ದ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಚಹಾ […]

Continue Reading

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್

ಸುದ್ದಿ ಸಂಗ್ರಹ ಬೆಂಗಳೂರು ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಮತ್ತು ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ. ತನ್ನ ಅಹವಾಲಿಗೆ […]

Continue Reading