ವಾಡಿ: ಬಿಜೆಪಿ ಕಛೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಎಂದರು. ಚರ್ತುವೇದಗಳಲ್ಲಿ ಒಂದಾದ ಸಂಗೀತ ವೇದ ಎಂದೇ ಕರೆಯಲ್ಪಡುವ ಸಾಮವೇದ ರಚಿಸಿದ ಮಹಾನ್ ಬ್ರಹ್ಮಜ್ಞಾನಿ ಸವಿತಾ ಮಹರ್ಷಿ ಎಂದು ಹೇಳಲಾಗುತ್ತದೆ. ಸಾಮವೇದವು ಸಂಗೀತದ ಮೂಲಗ್ರಂಥವಾಗಿದ್ದು, ಹಾಗಾಗಿ ನಮ್ಮ ಸವಿತಾ ಸಮಾಜದವರು ಸಂಗೀತ, ವೈದ್ಯ ವೃತ್ತಿ ಹಾಗೂ […]
Continue Reading