ಚಿತ್ತಾಪುರ: ಸಂತ್ರಸ್ತ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಚಿತ್ತಾಪುರ: ಪಟ್ಟಣದ ಬಾಹರ್ ಪೇಟ್ ಮತ್ತು ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಳವಡಗಿ ಗ್ರಾಮಗಳಲ್ಲಿ ಮನೆಗಳಲ್ಲಿ ನೀರು ನುಗ್ಗಿದ ಸಂತ್ರಸ್ತ ಕುಟುಂಬಗಳಿಗೆ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳುಹಿಸಿರುವ 500 ಆಹಾರ ಧಾನ್ಯದ ಕಿಟ್’ಗಳನ್ನು ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಸದಾ ಬಡವರ ಏಳಿಗೆಗಾಗಿ ಶ್ರಮಿಸುವ ನಾಯಕರಾಗಿದ್ದಾರೆ. ಬಡವರಿಗೆ ಏನೇ ತೊಂದರೆಯಾದರೆ ಕೂಡಲೆ ಅವರಿಗೆ ಪರಿಹಾರ ರೂಪದಲ್ಲಿ ಸಹಾಯ ಮಾಡುವ […]

Continue Reading

ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಜನನ ನಿಯಂತ್ರಣದಲ್ಲಿ ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳು ಮತ್ತು ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕೇಂದ್ರ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ “ವಿಶ್ವ ಗರ್ಭನಿರೋಧಕ/ಜನನ ನಿಯಂತ್ರಣ ದಿನಾಚರಣೆ”ಯಲ್ಲಿ ಮಾತನಾಡಿದ ಅವರು,ಜನಸಂಖ್ಯಾ ಸ್ಪೋಟದಿಂದ ತತ್ತರಿಸಿರುವ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಜನನ ನಿಯಂತ್ರಣ, ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯವಾಗಿದೆ ಎಂದರು‌. ಅನಪೇಕ್ಷಿತ ಗರ್ಭಧಾರಣೆಗಳನ್ನು […]

Continue Reading

ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸ್ವಚ್ಛತೆ ಕಾಪಾಡುವುದು, ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಮಾಲಿನ್ಯ ನಿಯಂತ್ರಿಸಿ ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವಿಶ್ವ ಪರಿಸರ ಆರೋಗ್ಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಸಕಲ ಜೀವರಾಶಿಗಳು ಉಳಿದು, ಸಮೃದ್ಧವಾಗಿ ಬೆಳವಣಿಗೆಯಾಗಬೇಕಾದರೆ ಪರಿಸರದ ಪಾತ್ರ ಪ್ರಮುಖವಾಗಿದೆ ಎಂದರು. ವಿವಿಧ […]

Continue Reading

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ, ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭೀಮಾತೀರದಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ಸ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯ ಭೀಮಾನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಅಲಮೇಲ ತಾಲೂಕಿನ ದೇವಣಗಾಂವನ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಹಳೆಯ ತಾವರಖೇಡ ಗ್ರಾಮದ ಮನೆಗಳಿಗೂ ನೀರು ನುಗ್ಗಿದೆ. ಕಲಬುರಗಿಯ ಗಾಣಗಾಪೂರದ ಸಂಗಮ ಕ್ಷೇತ್ರದ ಪಾರಾಯಣ ಮಂಟಪ, […]

Continue Reading

ಚಿತ್ತಾಪುರ: ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿತ್ತಾಪುರ: ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರವಾಗಿ ಸುರಿದ ಮಳೆಗೆ ತಾಲೂಕಿನಾದ್ಯಂತ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಿಂದ ತೀವ್ರ ತೊಂದರೆ ಅನುಭವಿಸಿದರು. ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಮಳೆಯು ಕೂಲಿಕಾರ್ಮಿಕರಿಗೆ ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.

Continue Reading

ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ನಾಳೆ ಚಿತ್ತಾಪುರಕ್ಕೆ ಆಗಮನ

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಉತ್ಸವದ ಬೆಳ್ಳಿ ಮಹೋತ್ಸವ ನಿಮಿತ್ಯ ನಾಳೆ ಸಂಜೆ ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ಆಗಮಿಸುತ್ತಿದ್ದಾರೆ ಎಂದು ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ವಿನೋದ ಪವಾರ ಹೇಳಿದ್ದಾರೆ. ಸ್ಟೇಷನ್ ತಾಂಡಾದ ಸೇವಾಲಾಲ್, ಜಗದಂಬಾ ದೇವಸ್ಥಾನದ ಆವರಣದಲ್ಲಿ ನಾಳೆ ಸಂಜೆ 7.30ಕ್ಕೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗುವುದು, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ನೃತ್ಯ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಣೆ

ಚಿತ್ತಾಪುರ: ನವರಾತ್ರಿ ಉತ್ಸವದ ನಿಮಿತ್ಯ ಏರ್ಪಡಿಸಲಾಗಿದ್ದ ನೃತ್ಯ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು. ಪಟ್ಟಣದ ಸ್ಟೇಷನ್ ತಾಂಡಾದ ತುಕಾರಾಮ ಖೀರು ನಾಯಕ್ ಏರಿಯಾದಲ್ಲಿ ಮೂರನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದ ನಿಮಿತ್ಯ ಶಾಲೆಗಳ ಮಕ್ಕಳ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಪ್ರಾರ್ಥನಾ ಶಾಲೆಯ ವಿದ್ಯಾರ್ಥಿಗಳು ಮತ್ತು ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಂಕರ್ ಚೋಕ್ಲಾ ಚೌವ್ಹಾಣ್, ರವಿ ಜಯರಾಮ್ ರಾಠೋಡ, ವೆಂಕಿ ಜಾಧವ್, ವಿನೋದ್ ಚೋಕ್ಲಾ ಚೌಹಾನ್ ಮತ್ತು ರಮೇಶ್ ಹನುಮ ಪವಾರ ಕಾರ್ಯಕ್ರಮದ ನಿರ್ಣಾಯಕರಾಗಿದ್ದರು. […]

Continue Reading

ನಾಳೆ ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ತಾಂಡಾದಲ್ಲಿ 25ನೇ ವರ್ಷದ ಬೆಳ್ಳಿ ಮಹೋತ್ಸವದ ನವರಾತ್ರಿ ಉತ್ಸವವು ಸಡಗರದಿಂದ ಜರುಗುತ್ತಿದ್ದು, ಇದರ ಅಂಗವಾಗಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಹೇಳಿದ್ದಾರೆ. 25ನೇ ವರ್ಷದ ಬೆಳ್ಳಿ ಮಹೋತ್ಸವದ ನವರಾತ್ರಿ ಉತ್ಸವ ನಿಮಿತ್ಯ ಸೆ.27 ರಂದು ಸಂಜೆ 7.30ಕ್ಕೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ […]

Continue Reading

ಪ್ರತಿಯೊಬ್ಬರಲ್ಲಿ ರಾಷ್ಟ್ರಪ್ರಜ್ಞೆ ಮೈಗೂಡಲಿ: ಡಾ.ಸಿದ್ದಲಿಂಗ ಶ್ರೀ

ಕಲಬುರಗಿ: ಪ್ರತಿಯೊಬ್ಬರು ಧರ್ಮ ಮತ್ತು ಪ್ರದೇಶಕ್ಕೆ ಪ್ರಾತಿನಿಧ್ಯ ನೀಡದೆ, ಎಲ್ಲರು ಭಾರತೀಯರು ಒಂದೆ ಎಂಬ ರಾಷ್ಟ್ರಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಯಡ್ರಾಮಿ ವಿರಕ್ತ ಮಠದ ಪೂಜ್ಯ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ‘ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಶಿಕ್ಷಕರ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ತಂದೆ-ತಾಯಿ, ಗುರು-ಹಿರಿಯರು, ದೇಶಕ್ಕೆ ಗೌರವ ನೀಡಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು […]

Continue Reading

ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು: ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ. 2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ […]

Continue Reading