ಕೋಲಿ ಸಮಾಜದ ಅಧ್ಯಕ್ಷರಿಗೆ ಈಡಿಗ ಸಮಾಜದಿಂದ ಸನ್ಮಾನ

ಚಿತ್ತಾಪುರ: ಕೋಲಿ ಸಮಾಜದ ನೂತನ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಈಡಿಗ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಈಡಿಗ ಸಮಾಜದ ಮುಖಂಡರಾದ ನಾಗಯ್ಯ ಗುತ್ತೆದಾರ್, ಸುರೇಶ ಗುತ್ತೆದಾರ್, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ರಾಜೇಶ ಹೋಳಿಕಟ್ಟಿ, ಅಶೋಕ ಬಾನರ, ಮಲ್ಲಿಕಾರ್ಜುನ ಹೊನ್ನಪೂರ, ಶಿವಶರಣ ಹೊನ್ನಪೂರ ಇದ್ದರು.

Continue Reading

ಕೋಲಿ ಸಮಾಜದ ನೂತನ ಅಧ್ಯಕ್ಷರಿಗೆ ಡಾ.ಪ್ರಣವಾನಂದ ಸ್ವಾಮಿ ಅವರಿಂದ ಸನ್ಮಾನ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ನೂತನ ಅದ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಕರದಾಳ ಗ್ರಾಮದ ಬ್ರಹ್ಮರ್ಷಿ ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಡಾ.ಪ್ರಣಾವನಂದ ಸ್ವಾಮೀಜಿ ಅವರು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸುಲೇಪೇಠದ ದೊಡ್ಡೆಂದ್ರ ಸ್ವಾಮಿಜಿ, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ನಾಗಯ್ಯಾ ಗುತ್ತೆದಾರ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ಸುರೇಶ ಗುತ್ತೆದಾರ್, ರಾಜೇಶ ಹೋಳಿಕಟ್ಟಿ, […]

Continue Reading

ಕೋಲಿ ಸಮಾಜದ ಸಂಘಟನೆ ಬಲಪಡಿಸಲು ಲಚ್ಚಪ್ಪ ಜಮಾದಾರ ಸಲಹೆ

ಚಿತ್ತಾಪುರ: ಕೋಲಿ ಸಮಾಜದ ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಕೋಲಿ, ಕಬ್ಬಲಿಗ ಎಸ್.ಟಿ‌ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಜನರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕವಾಗಿ ಅರಿವು, ಜಾಗ್ರತೆ ಮೂಡಿಸುವ ಕೆಲಸ ಮಾಡಬೇಕು. ಸಮಾಜದ ಮೇಲೆ ನಡೆಯುವ ದಬ್ಬಾಳಿಕೆ, ದೌರ್ಜನ್ಯ, ಅನ್ಯಾಯವನ್ನು ತಡೆಗಟ್ಟಲು ಪ್ರಬಲ ಹೋರಾಟ ರೂಪಿಸಬೇಕು. ಸಮಾಜದ ಜನರಿಗೆ ನ್ಯಾಯ ಕೊಡಿಸಲು ಚಳುವಳಿ ರೂಪಿಸಿ ಧ್ವನಿ […]

Continue Reading

ನಿಮಗೆ ಸಲಾಂ ಹೊಡಿಬೇಕಾ ?: ತಹಸೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

ಬೆಂಗಳೂರು: ಪೋಡಿ ದುರಸ್ತಿ ಮುಗಿದಿದ್ದರು ಎಡಿಎಲ್‌ಆರ್‌ಗಳಿಗೆ ಕಡತಗಳನ್ನು ಕಳುಹಿಸದಿರುವ ತಹಸೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜನ ನಿಮ್ಮ ಬಳಿ ಬಂದು ಸಲಾಂ ಹೊಡೀಬೇಕಾ ? ಅಲ್ಲಿ ರೈತರು ತ್ರಿಶಂಕು ಸ್ಥಿತಿಯಲ್ಲಿದ್ದು, ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ನಿಮ್ಮಂತಹವರು ಮಾಡುತ್ತಿರುವ ಕೆಲಸದಿಂದ ಇಡಿ ಇಲಾಖೆಗೆ ಕೆಟ್ಟ ಹೆಸರು ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಸೀಲ್ದಾರ್‌ ಹಾಗೂ ಎಡಿಎಲ್‌ಆ‌ರ್‌ (ಭೂ ದಾಖಲೆಯ ಸಹಾಯ ನಿರ್ದೇಶಕರು) ಅಧಿಕಾರಿಗಳ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ […]

Continue Reading

ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರರಿಗೆ ಕಸಾಪದಿoದ ಸನ್ಮಾನ

ಕಲಬುರಗಿ: ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ್ ಇಲಾಖೆ ವತಿಯಿಂದ ಕೊಡಮಾಡಿದ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಭುವನೇಶ್ವರಿ ಭಾವಚಿತ್ರ ನೀಡಿ, ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.‌

Continue Reading

ಕ್ರೀಡಾ ಪತ್ರಿಭೆಗಳ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ

ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ […]

Continue Reading

ಮಹಾದೇವಿ ಭೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಮದ ಜಾನಪದ ಕಲಾವಿದೆ ಮಹಾದೇವಿ ಶರಣಪ್ಪ ಹೊಸಮನಿ ಅವರು ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ತಿಳಿಸಿದ್ದಾರೆ. ಜನವರಿ 11 ಮತ್ತು 12 ರಂದು ಬೀದರ್’ನಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ವಿಭಾಗ ಮಟ್ಟದ ತತ್ವಪದ ಸಮಾವೇಶ ಹಾಗೂ ಭಜನಾ ಸ್ಪರ್ಧೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

Continue Reading

ಕಾಡಿನಿಂದ ಹೊರಬಂದ ನಕ್ಸಲರು: ಶರಣಾದವರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ಬೆಂಗಳೂರು: 6 ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದೆ, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ 6 ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ. ನಿನ್ನೆ ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ […]

Continue Reading

ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಬಾರಿಗೆ ಸಿಎಂ ಮುಂದೆ 6 ನಕ್ಸಲರು ಶರಣಾಗತಿ

ರಾಯಚೂರು: ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಯಾಕೆಂದರೆ ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಈಗ ಮುಖ್ಯವಾಹಿನಿಗೆ ಬಂದಿದ್ದಾರೆ. 6 ನಕ್ಸಲರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸಿಎಂ ಸಂವಿಧಾನದ ಪುಸ್ತಕ ನೀಡಿದರು. ಈ ಮೂಲಕ ಕರ್ನಾಟಕ ನಕ್ಸಲ ಮುಕ್ತ ರಾಜ್ಯ ಎಂದು ವ್ಯಾಖ್ಯಾನಿಸಬಹುದು. […]

Continue Reading

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಪತ್ರಿಕಾ ರಂಗದ ಮೇಲಿದೆ ಗುರುತರ ಜವಾಬ್ದಾರಿ: ಡಾ. ಶಿವರಂಜನ ಸತ್ಯಂಪೇಟೆ

ಕಲಬುರಗಿ: ಪತ್ರಿಕೆಗಳು ಸಮಾಜಮುಖಿ, ಅಭಿವೃದ್ಧಿ, ವೈಚಾರಿಕತೆ, ಮೌಲ್ಯಯುತ, ಧನಾತ್ಮಕ ವಿಷಯದ ಬಗ್ಗೆ ಸುದ್ದಿ ಬಿತ್ತರಿಸಿದರೆ ಮಾತ್ರ ಸಾಮಾಜಿಕ ಸ್ವಾಸ್ಥ್ಯಕಾಪಾಡಲು ಸಾಧ್ಯವಾಗುತ್ತದೆ. ಇಂತಹ ಗುರುತರ ಜವಾಬ್ದಾರಿ ಪತ್ರಿಕೆ, ಪತ್ರಕರ್ತರ ಮೇಲಿದೆ ಎಂದು ಹಿರಿಯ ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅಭಿಮತಪಟ್ಟರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜ್’ನ ಎನ್.ಎಸ್.ಎಸ್ ಘಟಕದ ವತಿಯಿಂದ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನವಾದ ಬುಧವಾರ ಶಕಾಪೂರ ಗ್ರಾಮದ ವಿಶ್ವರಾಧ್ಯ ತಪೋವನ ಮಠದ ಆವರಣದಲ್ಲಿ ಏರ್ಪಡಿಸಿದ್ದ ‘ಸಾಮಾಜಿಕ ಸ್ವಾಸ್ಥ್ಯಕಾಪಾಡುವಲ್ಲಿ […]

Continue Reading