209 ತಾಲೂಕುಗಳಲ್ಲಿ ಭೂ ಸುರಕ್ಷಾ ಪ್ರಾರಂಭ: ಕಂದಾಯ ಇಲಾಖೆ

ಬೆಂಗಳೂರು: ತಾಲೂಕು ಕಚೇರಿಯಲ್ಲಿರುವ ಪ್ರಮುಖ ಭೂದಾಖಲೆಗಳನ್ನು ಗಣಕೀಕರಣಗೊಳಿಸುವ ‘ಭೂ ಸುರಕ್ಷತಾ ಯೋಜನೆ’ಯ ಎರಡನೇ ಹಂತಕ್ಕೆ ಇದೆ ಜನವರಿಯಿಂದ ಚಾಲನೆ ನೀಡಲಾಗುವದು ಎಂದು ಕಂದಾಯ ಇಲಾಖೆ ಹೇಳಿದೆ. ತಾಲೂಕು ಕಚೇರಿಗಳಲ್ಲಿ ಸಂಗ್ರಹವಾಗಿರುವ ಅತ್ಯಂತ ಪ್ರಮುಖವಾದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ಹಳೆಯ ಭೂದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯಕ್ಕೆ ಕಳೆದ ವರ್ಷ ಚಾಲನೆ ನೀಡಲಾಗಿತ್ತು. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ತಲಾ ಒಂದು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಂಡಿರುವ ಈ ಕಾರ್ಯದಲ್ಲಿ ಇದುವರೆಗೂ 7.95 ಕೋಟಿ ಪುಟಗಳನ್ನು ಒಳಗೊಂಡ 14.87 ಲಕ್ಷ […]

Continue Reading

ವಿಮೆ ದುರಾಸೆಗೆ ತಂದೆಯನ್ನೇ ಕೊಲ್ಲಿಸಿದ ಪುತ್ರ

ಕಲಬುರಗಿ: ಸಾಲದ ಹಣ ತರೋಣವೆಂದು ನಂಬಿಸಿ ತಂದೆಯನ್ನು ಸ್ಕೂಟರ್‌ನಲ್ಲಿ ಕರೆದೊಯ್ದ ಪುತ್ರ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್‌ನಿಂದ ಎರಡು ಬಾರಿ ಡಿಕ್ಕಿ ಹೊಡೆಸಿ ಆತನನ್ನು ಕೊಲ್ಲಿಸಿ ವಿಮೆಯ ಹಣದಲಿ, ಸಾಲ ತೀರಿಸಲು ಹವಣಿಸಿದ್ದವನು ಹಾಗೂ ಕೃತ್ಯಕ್ಕೆ ಕೈಜೋಡಿಸಿದ್ದ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದಾರೆ. ಮಾಡಬೂಳ ಪೊಲೀಸ್ ಠಾಣೆಯಲ್ಲಿ ಜುಲೈ 2024ರಲ್ಲಿ ದಾಖಲಾಗಿದ್ದ ಅಪಘಾತ ಪ್ರಕರಣವನ್ನು ಭೇದಿಸಿದ್ದ ಪೊಲೀಸರಿಂದ ಕೊಲೆಯಾದ ಮಾಳಿಂಗರಾವ ಅವರ ಮಗ ಸತೀಶನ ಭೀಭತ್ಸ ಕೃತ್ಯ ಬಯಲಾಗಿದೆ. ಆರೋಪಿಗಳು ರೂಪಿಸಿದ್ದ ಕೊಲೆಯ ಸಂಚು ಅದನ್ನು ಕಾರ್ಯರೂಪಕ್ಕೆ ತಂದಿದ್ದು, ಕೃತ್ಯದ […]

Continue Reading

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ NET ಕಡ್ಡಾಯವಲ್ಲ: ಅಧ್ಯಾಪಕರ ನೇಮಕಾತಿಗಾಗಿ UGC ಕರಡು ನಿಯಮ ಪ್ರಕಟ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರ ನೇಮಕಾತಿ ಮತ್ತು ಬಡ್ತಿಗಾಗಿ ಸೋಮವಾರ ಬಿಡುಗಡೆ ಮಾಡಿದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕರಡು ಮಾರ್ಗಸೂಚಿಗಳ ಪ್ರಕಾರ, ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಕ್ಲಿಯರಿಂಗ್ ಇನ್ನು ಮುಂದೆ ಕಡ್ಡಾಯ ಅರ್ಹತೆಯಾಗಿರುವುದಿಲ್ಲ. ಕರಡು ನಿಯಮಗಳು ಅಧ್ಯಾಪಕರ ನೇಮಕಾತಿಗಳಿಗಾಗಿ ಅಸ್ತಿತ್ವದಲ್ಲಿರುವ ಅರ್ಹತಾ ಮಾನದಂಡಗಳಿಂದ ಜಟಿಲತೆಯನ್ನು ತೆಗೆದುಹಾಕುವುದರ ಮೇಲೆ ಕೇಂದ್ರೀಕರಿಸುತ್ತವೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020 ಗೆ ಅನುಗುಣವಾಗಿ ವೈವಿಧ್ಯಮಯ, ಬಹುಶಿಸ್ತೀಯ ಹಿನ್ನೆಲೆಯಿಂದ […]

Continue Reading

ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ, ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ

ಚಿತ್ತಾಪುರ: ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ ನೀಡಿ ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ ಮಾಡಿದರು. ತಾಲೂಕಿನಲ್ಲಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ, ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಸೀಲ್ದಾರ ನಾಗಯ್ಯ ಹಿರೇಮಠ ಮತ್ತು ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕೋಲಿ ಸಮಾಜದ ಒಗ್ಗಟ್ಟು ಒಡೆಯಬೇಡಿ: ಭೀಮಣ್ಣ ಸಾಲಿ

ಚಿತ್ತಾಪುರ: ಜಿಲ್ಲೆಯಲ್ಲಿ ಕೋಲಿ ಸಮಾಜದ ಸ್ವಯಂ ಘೋಷಿತ ಅಧ್ಯಕ್ಷರು ಬಹಳ ಜನರಿದ್ದಾರೆ. ಎಲ್ಲರೂ ಒಗ್ಗೂಡಿ ಸಮಾಜದ ಸಂಘಟನೆಗೆ ಶಕ್ತಿ ತುಂಬಬೇಕು. ಸಮಾಜದ ಒಗ್ಗಟ್ಟಿಗೆ ಧಕ್ಕೆಯುಂಟು ಮಾಡಿ ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕೋಲಿ ಸಮಾಜದ ತಾಲೂಕು ಘಟಕ ಮತ್ತು ನಗರ ಘಟಕದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯರಾದವರು ಸಮಾಜದವರನ್ನು […]

Continue Reading

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

ತುಮಕೂರು: ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಇಂದು ಪುರಲೆಹಳ್ಳಿ ರಸ್ತೆಯಲ್ಲಿರುವ ಕುಮಾರ ಎಂಬವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೆ […]

Continue Reading

ಚಿನ್ನ ಮಾತ್ರವಲ್ಲ, ಇನ್ನುಮುಂದೆ ಬೆಳ್ಳಿಗೂ ಹಾಲ್‌ಮಾರ್ಕ್‌

ನವದೆಹಲಿ: ಗ್ರಾಹಕರ ಬೇಡಿಕೆಗಳನ್ನು ಅನುಸರಿಸಿ ಬೆಳ್ಳಿ ಮತ್ತು ಬೆಳ್ಳಿಯ ಆಭರಣಗಳಿಗೆ ಕಡ್ಡಾಯ ಹಾಲ್‌ಮಾರ್ಕಿಂಗ್ ಅನ್ನು ಜಾರಿಗೆ ತರಲು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪರಿಗಣಿಸಬೇಕು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬೆಳ್ಳಿಯ ಹಾಲ್‌ಮಾರ್ಕ್‌ಗಾಗಿ ಗ್ರಾಹಕರಿಂದ ಬೇಡಿಕೆಯಿದೆ. ನೀವು (BIS) ಈ ಬಗ್ಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬಹುದು ಎಂದು 78ನೇ BIS ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವ ಮತ್ತು ಉತ್ಪನ್ನದ ದೃಢೀಕರಣವನ್ನು ಖಾತರಿಪಡಿಸುವ […]

Continue Reading

ತೊಟ್ನಳ್ಳಿ: ದುರ್ಗಾದೇವಿ ಜಾತ್ರಾ ಮಹೋತ್ಸವದ ಕರಪತ್ರ ಬಿಡುಗಡೆ

ಸೇಡಂ: ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಜ.12, 13 ರಂದು ದುರ್ಗಾದೇವಿ ಜಾತ್ರಾ ಮಹೋತ್ಸವ ಜರುಗುವದು. ಪ್ರಯುಕ್ತ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಡಾ. ತ್ರಿಮೂರ್ತಿ ಶಿವಾಚಾರ್ಯರು ಮತ್ತು ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಕರಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ತೊಟ್ನಳ್ಳಿ ಗ್ರಾಮದ ಕಲಾವಿದರು ಹಾಗೂ ಪತ್ರಿಕಾ ಸೇವೆ ದಾಸೋಹಿ ವಿಶ್ವನಾಥ ತೊಟ್ನಳ್ಳಿ, ಚಂದ್ರಕಾಂತ ಮುದಕನಳ್ಳಿ, ತೋಟಪ್ಪ ಪೂಜಾರಿ, ಹಣಮಂತ ಹಡಪದ, ರವಿರಾಜ ಹುಣಚಿಹಳ್ಳಿ, ದೇವಿಂದ್ರಪ್ಪ ಹುಳಗೇರಿ, ಉಮೇಶ ಮಠಪತಿ, […]

Continue Reading

ಓರಿಯಂಟ್ ಸಿಮೆಂಟ್ ಕಂಪೆನಿ ಮುಖ್ಯಸ್ಥ ಸತ್ಯಬ್ರರ್ತ್ ವಿರುದ್ಧ ಹೋರಾಟಕ್ಕೆ ಸಿದ್ಧತೆ: ಅಶ್ವಥ ರಾಠೋಡ

ಚಿತ್ತಾಪುರ: ತಾಲೂಕಿನ ಇಟಗಾ ಗ್ರಾಮದ ಸಮೀಪದ ಓರಿಯಂಟ್ ಸಿಮೆಂಟ್ ಕಂಪೆನಿಯಿಂದ ನಕಲಿ ಪತ್ರ ಸೃಷ್ಟಿಸಿ, ಕೆಎ.32 ಎಬಿ.2200 ಸಂಖ್ಯೆಯ ಲಾರಿ ಲೋಡ್ ಮಾಡುವುದನ್ನು ತಡೆಹಿಡಿದು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಕಂಪೆನಿಯ ಮುಖ್ಯಸ್ಥ ಸತ್ಯಬ್ರರ್ತ್ ವಿರುದ್ಧ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನ್ಯಾಯವಾದಿ, ಬಿಜೆಪಿ ಮುಖಂಡ ಅಶ್ವಥರಾಮ ರಾಠೋಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಸಿಪಿಐ ಕಚೇರಿಯಿಂದ ಹೋದ ನಕಲಿ ಪತ್ರವನ್ನು ಎಫ್’ಎಸ್’ಎಲ್ ಕಳುಹಿಸಿ ಸಮಗ್ರ ತನಿಖೆ ನಡೆಸಿದಾಗ ಮಾತ್ರ ಸತ್ಯಾಸತ್ಯತೆ ಹೊರಬರಲಿದೆ, ಫೇಕ್ […]

Continue Reading

ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಶಿವುಕುಮಾರ ಯಾಗಾಪೂರ ಆಯ್ಕೆ

ಚಿತ್ತಾಪುರ: ಕೋಲಿ ಸಮಾಜದ ಹಿರಿಯ ಮುಖಂಡರ ಹಾಗೂ ಯುವಕರ ಒಪ್ಪಿಗೆ ಮೇರೆಗೆ ಸಮಾಜದ ಸಂಘಟನೆಯ ದೃಷ್ಟಿಯಿಂದ ಶಿವುಕುಮಾರ ಯಾಗಾಪೂರ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಮಾಜಿ ನಿರ್ದೇಶಕ ಮತ್ತು ಕೋಲಿ ಸಮಾಜದ ಮುಖಂಡ ಶರಣಪ್ಪ ನಾಟೀಕಾರ ಹೇಳಿದರು‌. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಹಾಗೂ ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಆದೇಶದಂತೆ […]

Continue Reading