ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ

ಚಿತ್ತಾಪುರ: ಸಚ್ಚಿದಾನಂದ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಶರಣು ತಂದೆ ಮಹಿಂದ್ರಾ (10ನೇ) ಮತ್ತು ಉಲ್ಲಾಸ್ ತಂದೆ ಸುನೀಲ (9ನೇ) ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಕಲಬುರಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಗಳಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. […]

Continue Reading

ಕೇವಲ 1.50 ಪೈಸೆಗಾಗಿ ಗ್ಯಾಸ್‌ ಏಜೆನ್ಸಿ ವಿರುದ್ಧ 7 ವರ್ಷ ಹೋರಾಟ ಮಾಡಿ ಯಶಸ್ಸು ಕಂಡ ಗ್ರಾಹಕ

ಭೋಪಾಲ್‌: ಈಗಿನ ಬ್ಯುಸಿ ಜಗತ್ತಿನಲ್ಲಿ ಒಂದೂವರೆ ರೂಪಾಯಿ ಬಗ್ಗೆ ಯಾರೂ ಗಮನ ನೀಡೋದೇ ಇಲ್ಲ. ಹಾಗೆನಾದರೂ ಬಸ್‌ನಲ್ಲಿ, ಟ್ರೇನ್‌ನಲ್ಲಿ ಟಿಕೆಟ್‌ಕೊಳ್ಳುವಾಗ ಒಂದೂವರೆ ರೂಪಾಯಿ ಹಣ ಚಿಲ್ಲರೆ ಇಲ್ಲದಿದ್ದಾಗ ರೌಂಡ್‌ಆಫ್‌ ಕೂಡ ಮಾಡ್ತಾರೆ. ಆದರೆ ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯ ಚಕ್ರೇಶ್‌ ಜೈನ್‌ ಎನ್ನುವ ವ್ಯಕ್ತಿ ಕೇವಲ 1.50 ರೂಪಾಯಿಗಾಗಿ ಬರೋಬ್ಬರಿ 7 ವರ್ಷಗಳ ಕಾಲ ಗ್ಯಾಸ್‌ ಏಜೆನ್ಸಿ ವಿರುದ್ಧ ಹೋರಾಟ ಮಾಡಿದ್ದಾರೆ. ಇದು ಸಣ್ಣ ಅಮೌಂಟ್‌ ಆಗಿರಬಹುದು. ಆದರೆ ಗ್ರಾಹಕರ ಹಕ್ಕುಗಳ ವಿಚಾರದಲ್ಲಿ ಇದು ದೊಡ್ಡ ಗೆಲುವು ಎಂದಿದ್ದಾರೆ. […]

Continue Reading

ಠಾಣೆಯಲ್ಲಿ ರಾಸಲೀಲೆ ಕೇಸ್‌: ಅಮಾನತು ಬೆನ್ನಲ್ಲೆ DySP ರಾಮಚಂದ್ರಪ್ಪಗೆ ಬಿಗ್‌ ಶಾಕ್‌

ತುಮಕೂರು: ಪೊಲೀಸ್‌ ಠಾಣೆಗೆ ದೂರು ನೀಡಲು ಬಂದಿರುವ ಮಹಿಳೆ ಜೊತೆ ಡಿವೈಎಸ್‌ಪಿ ರಾಸಲೀಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. 2026ರಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ ಇದೆಲ್ಲಾ ಬೇಕಿತ್ತಾ ಎನ್ನುವಂತಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ರಾಮಚಂದ್ರಪ್ಪ ಹಾಗೂ ಮಹಿಳೆಯೊಬ್ಬರ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸ್‌ ಠಾಣೆಯಲ್ಲೇ ಮಹಿಳೆಯನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದರು ಎನ್ನುವ ಆರೋಪದ ಮೇಲೆ ಡಿವೈಎಸ್‌ಪಿ ರಾಮಚಂದ್ರಪ್ಪರನ್ನು ಅಮಾನತು […]

Continue Reading

ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ನಿಂಗಣ್ಣಾ ಹೆಗಲೇರಿ ಆಯ್ಕೆ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ಸಂಘಟನೆ, ಒಗ್ಗಟ್ಟು, ಐಕ್ಯತೆಯಿಂದ ಸಮಾಜದ ಎಲ್ಲರೂ ಸಾಮೂಹಿಕವಾಗಿ ಸಮಾಜಪರ ಕೆಲಸ ಮಾಡುವ ಹಾಗೂ ಸಮಾಜದಲ್ಲಿ ಸಾಮರಸ್ಯೆ ಮೂಡಿಸುವ ದೃಷ್ಟಿಯಿಂದ ಅಧ್ಯಕ್ಷರ ಮೂರು ವರ್ಷದ ಅಧಿಕಾರ ಅವಧಿಯನ್ನು ಇಬ್ಬರು ಆಕಾಂಕ್ಷಿಗಳಿಗೆ ಹಂಚಿಕೆ ಮಾಡಲು ನಿರ್ಣಯಿಸಿ ಮೊದಲ 18 ತಿಂಗಳ ಅವಧಿಗಾಗಿ ಡೋಣಗಾಂವ ಗ್ರಾಮದ ನಿಂಗಣ್ಣಾ‌ ದೇವಿಂದ್ರಪ್ಪಾ ಹೆಗಲೇರಿ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಇನ್ನುಳಿದ 18 ತಿಂಗಳ ಅಧಿಕಾರ ಅವಧಿಯನ್ನು ಕಾಟಮ್ಮದೇವರಹಳ್ಳಿ ಗ್ರಾಮದ ಶಿವಕುಮಾರ ಸಿದ್ರಾಮಪ್ಪ ಯಾಗಾಪೂರ ಅವರಿಗೆಂದು ಈ ಮೂಲಕ […]

Continue Reading

ಸರಳ ಸ್ವಭಾವದ ರಾಷ್ಟ್ರೀಯ ಸಂತ ಸಿದ್ದೇಶ್ವರ ಶ್ರೀಗಳು: ಶಿವರಾಜ ಅಂಡಗಿ

ಕಲಬುರಗಿ: ಆಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ಚಿಂತನೆ ನಡೆಸಿರುವ ಶ್ರೇಷ್ಠ ಅನುಭವಿ ಶ್ರೀಗಳು ಅತ್ಯಂತ ಸರಳ ಸಜ್ಜನಿಕೆಯ ಸಹಕಾರ ಮೂರ್ತಿಯ ಸಿದ್ದೇಶ್ವರ ಶ್ರೀಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಹೇಳಿದರು. ನಗರದ ಬಡೆಪೂರ ಕಾಲೋನಿಯ ಎಸ್‌ಬಿಐ ಗ್ರಾಹಕ ಸೇವಾ ಕೇಂದ್ರದಲ್ಲಿ ಸಿದ್ದೇಶ್ವರ ಶ್ರೀಗಳ ದ್ವಿತೀಯ ಪುಣ್ಯಸ್ಮರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನದು, ತನ್ನದೆಂಬ ಮಮಕಾರ ತೊರಿದ ವಿಜಾಪೂರದ ಸಿದ್ದೇಶ್ವರ ಶ್ರೀಗಳು ಸಂತರಷ್ಟೇ ಅಲ್ಲದೇ ಜ್ಞಾನೋಪಸಾಕರು ಹೀಗಾಗಿ ಇವರಿಗೆ […]

Continue Reading

ಕಲಬುರಗಿ: ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ, ದಲ್ಲಾಳಿ

ಕಲಬುರಗಿ: ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ 1 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ 15 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ) ಹಾಗೂ ದಲ್ಲಾಳಿಯೊಬ್ಬರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಂತೋಷ ರಾಮಚಂದ್ರ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ ಪೊಲೀಸರು ದಾಳಿ ಮಾಡಿ ಎಫ್‌ಡಿಎ ಶಿಲ್ಪಾ ಹಾಗೂ ದಲ್ಲಾಳಿ ದೇವಪ್ಪನನ್ನು ಬಂಧಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗೆ ನೇಮಕಾತಿ ಅರ್ಜಿ […]

Continue Reading

ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶ್ರೀನಿಧಿ ಅವರು ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‌ ಮೇಘಣ್ಣನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Continue Reading

ಪ್ರಿಯಾಂಕ್ ಖರ್ಗೆ ಒಬ್ಬ ಪ್ರಬುದ್ಧ ರಾಜಕಾರಣಿ, ಬಿಜೆಪಿಯವರ ಷಡ್ಯಂತ್ರ ಫಲಿಸದು: ಓಂಕಾರೇಶ್ವರ ರೇಶ್ಮಿ

ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಒಬ್ಬ ಪ್ರಬುದ್ಧ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಬಿಜೆಪಿಯವರು ನಮ್ಮ ನಾಯಕರ ಮೇಲೆ ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಫಲಿಸದು ಎಂದು ಕಾಂಗ್ರೆಸ್ ಮುಖಂಡ ಓಂಕಾರೇಶ್ವರ ರೇಶ್ಮಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗುತ್ತಿಗೆದಾರ ಸಚಿನ ಪ್ರಕರಣದಲ್ಲಿ ನಮ್ಮ ನಾಯಕರನ್ನು ಎಳೆದು ತರುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಮ್ಮ ಪ್ರಿಯಾಂಕ್ ಖರ್ಗೆಯವರಿಗೂ ಯಾವುದೇ ಸಂಭಂದವಿಲ್ಲದಿದ್ದರು ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ […]

Continue Reading

ಶಿಕ್ಷಣ ರತ್ನ ಪ್ರಶಸ್ತಿಗೆ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಶಿಕ್ಷಣರತ್ನ ಪ್ರಶಸ್ತಿ’ಗೆ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿರುವ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನಾಳೆ ಸಂಜೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ […]

Continue Reading

ಖರ್ಗೆ ಮೇಲೆ ವ್ಯರ್ಥ ಆರೋಪ ಸಲ್ಲ: ಮಲ್ಲಪ್ಪ ಹೊಸಮನಿ

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸದು. ಡೆತ್ ನೋಟ್ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಸುಳ್ಳು ಹೇಳುವ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜಕೀಯ ದುರುದ್ದೇಶದಿಂದ ವ್ಯರ್ಥ ಆರೋಪ, ಹೋರಾಟ ಮುಂದುವರಿಸಿದರೆ ನಾವು ಬಿಜೆಪಿ ನಾಯಕರ ವಿರುದ್ಧ ಧರಣಿ ಮಾಡಲು ಸಿದ್ಧರಿದ್ದೆವೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ […]

Continue Reading