ಸಿದ್ದರಾಮಯ್ಯ ದೇಶದಲ್ಲೇ 3ನೇ ಶ್ರೀಮಂತ ಮುಖ್ಯಮಂತ್ರಿ, ನಂಬರ್‌ ಒನ್‌ ಯಾರು ?

ನವದೆಹಲಿ: ದೇಶದಲ್ಲೇ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ಸರ್ವೆ ನಡೆಸಿ ವರದಿ ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಂಬರ್‌ 1 ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ನಂಬರ್‌ 2 ಶ್ರೀಮಂತ ಮುಖ್ಯಮಂತ್ರಿಗಳಾಗಿದ್ದಾರೆ. ಆಂಧ್ರ ಮುಖ್ಯಮಂತ್ರಿ 931 ಕೋಟಿ ಹಾಗೂ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ 332 ಕೋಟಿ […]

Continue Reading

ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ, ಈ ಪ್ರಯೋಗದ ಮಹತ್ವ ಗೊತ್ತಿದೆಯೇ ?

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್ ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ. ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ ಮತ್ತು ಅನ್‌ಡಾಕಿಂಗ್‌ ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್‌ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ. ಈ ಪ್ರಯೋಗದ ಭಾಗವಾಗಿ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 117ನೇ ಸಂಚಿಕೆಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಖಂಡರು ವೀಕ್ಷಿಸಿದರು. ವೀಕ್ಷಣೆಯ ನಂತರ ಬಿಜೆಪಿ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜನವರಿ 26ರಂದುನಮ್ಮ ಸಂವಿಧಾನವು 75 ವರ್ಷಗಳು ಪೂರೈಸುತ್ತಿರು ಹೆಮ್ಮೆಯ ವಿಷಯದ ಬಗ್ಗೆ ಹಾಗೂ ನಾವು ಕೈಗೊಳ್ಳಬೇಕಾದ ಕಾರ್ಯಗಳನ್ನು ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದರು. ಸಂವಿಧಾನವು ನಮಗೆ ಮಾರ್ಗದರ್ಶಕ ಬೆಳಕು ಮತ್ತು ಮಾರ್ಗದರ್ಶನ ಮಾಡುತ್ತಿದೆ. ಇದರ ಗೌರವಾರ್ಥವಾಗಿ ಸಂವಿಧಾನದ ಪೀಠಿಕೆ ಓದಲು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು […]

Continue Reading

ಪಿಎಸ್‌ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ

ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಅವರ ಪುತ್ರ ಆನಂದ ಕಾಶಿ ಪಿಎಸ್‌ಐ ಆಗಿ ರಾಜಭವನಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ರಾಜಭವನಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾಡಿದ ಪ್ರಯತ್ನಗಳು ಮತ್ತು ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. […]

Continue Reading

ಅಯ್ಯಪ್ಪ ಸ್ವಾಮಿ ಮಹಾಪಡಿ ಪೂಜೆ: ಭಕ್ತಿಯಲ್ಲಿ ಮಿಂದೆದ್ದ ಅಯ್ಯಪ್ಪ ಮಾಲಧಾರಿಗಳು

ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ 20ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪಡಿ ಪೂಜಾ ಕಾರ್ಯಕ್ರಮ ಆನಂದಕುಮಾರ ಗುರುಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಶ್ರದ್ಧೆ ಭಕ್ತಿ, ಸಂಭ್ರಮ, ಸಡಗರದಿಂದ ಅದ್ಧೂರಿಯಾಗಿ ನಡೆಯಿತು. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಕ್ತಿಯಲ್ಲಿ ಮಿಂದೆದ್ದರು. ಶ್ರೀಕಾಂತ ಲಂಭೋದರ ಗುರುಸ್ವಾಮಿ ಹಾಗೂ ಅವರ ತಂಡದಿಂದ ನವಗೃಹ ಪೂಜೆ, ಗಣಪತಿ ಪೂಜೆ, ಲಕ್ಷ್ಮಿ ಪೂಜೆ, ಸುಬ್ರಹ್ಮಣ್ಯ ಪೂಜೆ, ಅಯ್ಯಪ್ಪ ಅಭಿಷೇಕ ಹಾಗೂ ಮಹಾಪಡಿ ಪೂಜೆ ನಡೆಯಿತು. ಕಾರ್ತಿಕ ನಾರಾಯಣಪೇಟ್ ಅವರ ತಂಡದಿಂದ ಅಯ್ಯಪ್ಪ ಭಕ್ತಿಗೀತೆಗಳ ಸಂಗೀತ […]

Continue Reading

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. ಮಾರುಕಟ್ಟೆಯಲ್ಲಿ ಇನ್ನುಮುಂದೆ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಈ ಸಂದರ್ಭದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ವೆಂಕಟೇಶ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್, […]

Continue Reading

ಇನ್ಮುಂದೆ ಡಾಕ್ಯುಮೆಂಟ್ ಸ್ಕ್ಯಾನ್ ವ್ಯಾಟ್ಸಾಪ್‌ನಲ್ಲಿ ಮಾಡಿ, ಹೊಸ ಫೀಚರ್

ನವದೆಹಲಿ: ಡಾಕ್ಯುಮೆಂಟ್ ಸ್ಕ್ಯಾನ್ ಮಾಡಲು ಹಲವರು ಬೇರೆ ಬೇರೆ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿರುತ್ತಾರೆ. ಅಥವಾ ಅಗತ್ಯವಿದ್ದಾಗ ಡೌನ್ಲೋಡ್ ಮಾಡಿ ಬಳಿಕ ಡಿಲೀಟ್ ಮಾಡುತ್ತಾರೆ. ಬಳಕೆ ಮಾಡದ ಹಲವಾರು ಆಯಪ್‌ಗಳಿಂದ ಫೋನ್ ಸ್ಟೋರೇಜ್ ತುಂಬಿಹೋಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಗೆ ಈಗ ವ್ಯಾಟ್ಸಾಪ್ ಉತ್ತರ ನೀಡಿದೆ. ವ್ಯಾಟ್ಸಾಪ್ ತನ್ನ ಬಳಕೆದಾರರಿಗೆ ಮತ್ತೊಂದು ಫೀಚರ್ ಪರಿಚಯಿಸಿದೆ. ಡಾಕ್ಯುಮೆಂಟ್ ಸ್ಕ್ಯಾನ್ ಫೀಚರ್. ಇನ್ಮುಂದೆ ಗ್ರಾಹಕರು ಬೇರೆ ಬೇರೆ ಆ್ಯಪ್‌ ಬಳಸುವ ಅಗತ್ಯವಿಲ್ಲ. ವ್ಯಾಟ್ಸಾಪ್ ಮೂಲಕವೇ ಎಲ್ಲವೂ ಸಾಧ್ಯ. ವ್ಯಾಟ್ಸಾಪ್ ಹೊಸ ಅಪ್‌ಡೇಟ್ […]

Continue Reading

ಮನುಷ್ಯನ ದೇಹದೊಳಗಿನ ಮಾಂಸವನ್ನೆ ತಿನ್ನುತ್ತಂತೆ ಈ ಬ್ಯಾಕ್ಟೀರಿಯಾ, ಜಗತ್ತಿಗೆ ಶುರುವಾಯಿತಾ ಮತ್ತೊಂದು ಮಾರಕ ರೋಗದ ಟೆನ್ಷನ್ ?

ದೇಹದ ಮಾಂಸವನ್ನೇ ಕಿತ್ತು ತಿನ್ನುವ ಬುರುಲಿ ಹುಣ್ಣು ಆಸ್ಟ್ರೇಲಿಯಾದಲ್ಲಿ ಹೆಚ್ಚಾಗ್ತಿದೆ. ವಿಕ್ಟೋರಿಯಾ, ಉತ್ತರ ಕ್ವೀನ್ಸ್‌ಲ್ಯಾಂಡ್ ಮತ್ತು ಉತ್ತರ ಪ್ರಾಂತ್ಯದಲ್ಲಿ ಪ್ರಕರಣಗಳು ವರದಿಯಾಗುತ್ತಿವೆ.ಆಸ್ಟ್ರೇಲಿಯಾದಲ್ಲಿ ವಿಚಿತ್ರ ಕಾಯಿಲೆ. ನ್ಯೂ ಸೌತ್ ವೇಲ್ಸ್ ಮತ್ತು ಒಂದು ಪ್ರಕರಣವಿಲ್ಲದ ಬೇಟೆಮನ್ಸ್ ಕೊಲ್ಲಿಯಲ್ಲಿ ಈ ರೋಗ ಕಂಡುಬಂದಿರುವುದು ಆಸ್ಟ್ರೇಲಿಯನ್ನರಿಗೆ ಮತ್ತು ಸಂಶೋಧಕರಿಗೆ ತಲೆನೋವು ಉಂಟು ಮಾಡಿದೆ. ಸಿಡ್ನಿಗೂ ಸೋಂಕು ಹರಡುವ ಅಪಾಯವಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಕ್ಯಾನ್‌ಬೆರಾದಿಂದ 110 ಕಿ.ಮೀ ದೂರದಲ್ಲಿರುವ NSW ಪಟ್ಟಣವಾದ ಬೇಟೆಮನ್ಸ್ ಬೇಯಲ್ಲಿ ಹುಣ್ಣು ಸಾಮಾನ್ಯವಾಗುತ್ತಿದೆ. ನೂರಾರು ಕಿಲೋಮೀಟರ್ ಅಂತರದಲ್ಲಿ […]

Continue Reading

ಚಿತ್ತಾಪುರ: ಎಕ್ಸಲೆಂಟ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ

ಚಿತ್ತಾಪುರ: ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಗುರುಬಸವ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ನಿಮಿತ್ಯ ಗಣಿತ ಪ್ರದರ್ಶನ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಸಿಸಿ ಪ್ಲಾಂಟ್ ಹೆಡ್ ರವೀಂದ್ರ ಲಿಂಗಪ್ಪ ಬೊಮ್ಮನಳ್ಳಿ ಮಾತನಾಡಿ, ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರಿಕರಣ ಶಕ್ತಿ, ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಅನೇಕ […]

Continue Reading

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಮಾಹಿತಿ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಒಂದಷ್ಟು ಮಾಹಿತಿ. ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆಕೆಆರ್’ಡಿಬಿಯ 302 ಕೋಟಿ ರೂ ಸೇರಿದಂತೆ ಸರ್ಕಾರದ ವಿಶೇಷ ಅನುದಾನ ಸೇರಿ ಒಟ್ಟು 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆ ಕಲಬುರಗಿ ಶಾಖಾ ಆಸ್ಪತ್ರೆಯ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಸಾರ್ವಜನಿಕರಿಗೆ ಲಭ್ಯವಿದೆ, […]

Continue Reading