ನರೋಣಾ ಕ್ಷೇಮಲಿಂಗೇಶ್ವರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳ್ಳಲಿ: ಮುಡಬಿ ಗುಂಡೇರಾವ

ಕಲಬುರಗಿ: ಅಯೋಧ್ಯ ನಗರದಂತೆ ನರೋಣಾ ಕ್ಷೇಮಲಿಂಗೇಶ್ವರರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳಿಸುವುದರಿಂದ ಈ ಕ್ಷೇತ್ರದ ಮಹಿಮೆ ದೇಶದೆಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಪಯಟ್ಟರು. ಆಳಂದ ತಾಲೂಕಿನ ನರೋಣಾ ಗ್ರಾಮದ ಐತಿಹಾಸಿಕ ಸುಕ್ಷೇತ್ರ ಕ್ಷೇಮಲಿಂಗೇಶ್ವರ ದೇವಸ್ಥಾನದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-6ರಲ್ಲಿ ಮಾತನಾಡಿದ ಅವರು, ಶ್ರೀ ರಾಮನು ರಾವಣನನ್ನು ಸಂಹರಿಸಿ, ಪಾಪ ಪರಿಹಾರಕ್ಕಾಗಿ ಕೋಟಿ ಲಿಂಗ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು ದೇಶದಾದ್ಯಂತ […]

Continue Reading

ನಾಡಿನ ಇತಿಹಾಸ ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯ: ಮುಡಬಿ ಗುಂಡೇರಾವ

ಕಲಬುರಗಿ: ಅಪರೂಪದ ವಾಸ್ತುಶಿಲ್ಪ ಶೈಲಿಯುಳ್ಳ, ಕಲೆ-ಸಾಹಿತ್ಯ, ಸಂಸ್ಕೃತಿ, ಭವ್ಯ ಪರಂಪರೆಯನ್ನು ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯದ ಇತಿಹಾಸ ಅದಮ್ಯ ಹಾಗೂ ಅದ್ಭುತವಾಗಿದೆ. ಎಳು ಊರುಗಳಿಂದ ಕೂಡಿರುವ ಮತ್ತು ನಾಡಿನ ರಕ್ಷಣೆ ಮಾಡಿದ ವೀರ-ಶೂರರ ಇತಿಹಾಸವುಳ್ಳದಾಗಿದೆ. ಇಂತಹ ಸ್ಮಾರಕಗಳ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಯಪಟ್ಟರು. ಚಿಂಚನಸೂರ್‌ನ ಗ್ರಾಮದ ಐತಿಹಾಸಿಕ ಹಾಗೂ ಪ್ರಾಚೀನ ಮಹೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]

Continue Reading

ಚಿತ್ತಾಪುರ: ರಾಯರ ಮಠದಲ್ಲಿ 11ನೇ ವರ್ಧಂತಿ ಮಹೋತ್ಸವ

ಚಿತ್ತಾಪುರ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ವೃಂದಾವನ ಪುನರ್ ಪ್ರತಿಷ್ಟಾಪನೆ 11ನೇ ವರ್ಷದ ವರ್ಧಂತಿ ಮಹೋತ್ಸವವು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳವಾರ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭೀಷೇಕ, ತುಳಸಿ ಅರ್ಚನೆ, ಅಲಂಕಾರ ಪೂಜೆ, ಗಜವಾಹನ ಉತ್ಸವ, ಪಲ್ಲಕಿ ಉತ್ಸವ, ತೋಟ್ಟಿಲು ಸೇವೆ, ಪ್ರವಚನ, ಹಸ್ತೋದಕ, ಮಹಾ ಮಂಗಳಾರುತಿ, ತೀರ್ಥ, ಅನ್ನದಾನ ಸೇವೆ, ಭಜನೆ ಕಾರ್ಯಕ್ರಮ ಜರುಗಿದವು. ಅದ್ಧೂರಿಯಾಗಿ ರಾಯರ ರಥೋತ್ಸವ ಜರುಗಿತು.ಮಳಖೇಡದ ಸುಧಾ ಪಂಡಿತ ವೆಂಕಣಚಾರ್ಯರು ಹಾಗೂ ಅರ್ಚಕರು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ಅಲಂಕಾರ ಮಾಡಿದರು. ವಾದಿರಾಜ […]

Continue Reading

ಕವಲಗಾ(ಬಿ) ಪಿಡಿಓ ಪ್ರೀತಿರಾಜ್ ಅಮಾನತು

ಕಲಬುರಗಿ: ತಾಲೂಕಿನ ಕವಲಗಾ(ಬಿ) ಗ್ರಾಮದ ಪಂಪ್ ಆಪರೇಟರ್ ಗುರುಸಿದ್ದಯ್ಯ ಸ್ಥಾವರಮಠ ಎಂಬುವವರ ವೇತನ ಬಿಡುಗಡೆ ಮಾಡಲು ಹಾಗೂ ಸೇವೆಗೆ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಪಿಡಿಓ ಪ್ರೀತಿರಾಜ್ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ದಾಳಿಯಾಗಿರುವುದರಿಂದ ಕೆಸಿಎಸ್‌ಆ‌ರ್ ನಿಯಮಾವಳಿಗಳ ಅನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಇನ್‌ಸ್ಪೆಕ್ಟರ್ ಅರುಣಕುಮಾ‌ ಮುರಗುಂಡಿ ಅವರು ತಾ.ಪಂ ಇಒ […]

Continue Reading

ವಿದ್ಯಾರ್ಥಿಗಳು ಇತಿಹಾಸದ ಆಸಕ್ತಿ ಬೆಳೆಸಿಕೊಳ್ಳಬೇಕು: ಡಿ.ಎನ್ ಅಕ್ಕಿ

ಚಿತ್ತಾಪುರ: ಮಕ್ಕಳು ಪಠ್ಯದ ಜೊತೆಗೆ ಇತಿಹಾಸದ ಅಧ್ಯಯನ ಕಡೆಗೆ ಆಸಕ್ತಿ ತೋರಬೇಕು, ಅಂದಾಗ ಮಾತ್ರ ನಮ್ಮ ಪರಂಪರೆ, ವೈಭವವನ್ನು ತಿಳಿಯಲು ಸಾಧ್ಯ ಎಂದು ಹಿರಿಯ ಸಂಶೋಧಕ ಡಿ.ಎನ್ ಅಕ್ಕಿ ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಧಕರೊಂದಿಗೆ ಮಾತುಕತೆ ಮತ್ತು ವಿಶೇಷ ಉಪನ್ಯಾಸ’ ಕಾರ್ಯಕ್ರಮದಲ್ಲಿ ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನೆಲದ ಸ್ಮಾರಕಗಳನ್ನು ಸಂರಕ್ಷಣೆ ಮಾಡುವದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೇವಲ ಬೇಲೂರು ಹಳೇಬೀಡು ನಂತಹ ದಕ್ಷಿಣ […]

Continue Reading

ಡಿ.20 ರಂದು ಕೋಲಿ ಸಮಾಜದ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ: ಕೋಲಿ ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ನೂತನ ಅದ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ಅದ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಯಾರು ಸಮರ್ಥರು ಎಂಬುದರ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಲಾಗುತ್ತದೆ. ಸಮಾಜದ […]

Continue Reading

ಕಲಬುರಗಿ: ಬಾಕಿ ವೇತನ ಪಾವತಿಗೆ 17 ಸಾವಿರ ಲಂಚ, ಲೋಕಾಯುಕ್ತ ಬಲೆಗೆ ಪಿಡಿಒ

ಕಲಬುರಗಿ: ಪಂಪ್ ಆಪರೇಟರ್ ಒಬ್ಬರ ಬಾಕಿ ವೇತನ ಪಾವತಿ ಹಾಗೂ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ರೂ ಲಂಚದ ಹಣ ಪಡೆಯುತ್ತಿದ್ದ ಆರೋಪದಡಿ ಪಿಡಿಒ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. . ಕಲಬುರಗಿ ತಾಲೂಕಿನ ಕವಲಗಾ (ಬಿ) ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ . ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ . ಗುರುಸಿದ್ದಯ್ಯ ಅವರ ಆರು ತಿಂಗಳ […]

Continue Reading

ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆ: ಚಿತ್ತಾಪುರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ: ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು . ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ಸ್ವಾಮಿ ಮಿನಿ ಹಾಲ್ ನಲ್ಲಿ ರವಿವಾರ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಚೆನ್ನಯ್ಯ ವಸ್ತ್ರದ್, ಜಿಲ್ಲಾಧ್ಯಕ್ಷ ರಾಜೇಂದ್ರ ಪ್ರಸಾದ ಸಮ್ಮುಖದಲ್ಲಿ ತಾಲೂಕು ಗೌರವ ಅಧ್ಯಕ್ಷರಾಗಿ ಉದಯಕುಮಾರ ಎಚ್ ಸಾಗರ್, ತಾಲೂಕು ಅಧ್ಯಕ್ಷರಾಗಿ ಅಣ್ಣಾರಾಯ ವಿ ಇವಣಿ, ಉಪಾಧ್ಯಕ್ಷರಾಗಿ ನಾಗೇಶ ಎ ಹಲಗಿ, ಪ್ರಧಾನ ಕಾರ್ಯದರ್ಶಿಯಾಗಿ ಶಾಮಣ್ಣ ಡಿ ಮೇಧಾ, ಸಹ ಕಾರ್ಯದರ್ಶಿಯಾಗಿ ಚಂದ್ರಕಾಂತ ವಿ ಉಪ್ಪಿನ್, […]

Continue Reading

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಚಿಕ್ಕಮಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಎನ್.ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಜೀವಂತ ಆನೆಯನ್ನೂ ನಾಚಿಸುವಂತೆ ರೋಬೋಟಿಕ್ ಆನೆ ಇದೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ. ಈ ರೋಬೋಟಿಕ್ ಆನೆ ಸದಾ ಮಠದ ಆವರಣದಲ್ಲೇ ಇದ್ದು, ಭಕ್ತರನ್ನು ಆಶೀರ್ವದಿಸಲಿದೆ. ಮಠದ ಆವರಣದಲ್ಲಿ ಇದಕ್ಕಾಗಿ ಕಟ್ಟಡ ನಿರ್ಮಿಸಲಾಗಿದೆ. ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು […]

Continue Reading

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ಅಣ್ಣಾರಾಯ ಇವಣಿ ಆಕ್ರೋಶ

ಚಿತ್ತಾಪುರ: ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿನಡೆಸುತ್ತಿರುವ ಹೋರಾಟದ ಕುರಿತು ಮುಂಚೆಯೇ ಸರ್ಕಾರದ ಅರಿವಿಗೆ ಬಂದಿದ್ದರೂ ಯಾವುದೇ ಮುಂಜಾಗ್ರತಾ ಕ್ರಮ ವಹಿಸದ ಸರ್ಕಾರ ದುರುದ್ದೇಶಪೂರ್ವಕವಾಗಿ ಚಳುವಳಿ ಹತ್ತಿಕ್ಕುವ ದುರಾಲೋಚನೆಯಿಂದ ಚಳವಳಿ ನಿರತ ಅಮಾಯಕರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿದೆ ಎಂದು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ತಾಲೂಕ ಅಧ್ಯಕ್ಷ ಅಣ್ಣಾರಾಯ ವಿ ಇವಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವಾರದಿಂದಲೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟದ ಕುರಿತು ಮಾಹಿತಿ ಒದಗಿಸುತ್ತಲೇ ಬಂದಿದ್ದಾರೆ. ಈ ಹಂತದಲ್ಲಿ ಪೂಜ್ಯರೊಂದಿಗೆ […]

Continue Reading