ನಾನು ಗಂಡಸಾಗಿ ಹುಟ್ಟಿರುವುದೆ ತಪ್ಪಾ ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆಯ ಮುಖ್ಯಶಿಕ್ಷಕ

ಸುದ್ದಿ ಸಂಗ್ರಹ ಕೊಪ್ಪಳಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್​​ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ. ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ […]

Continue Reading

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಸುದ್ದಿ ಸಂಗ್ರಹ ಬಳ್ಳಾರಿ ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೆ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತಿ ಹೆಚ್ಚು ಬಿಸಿ ಗಾಳಿ ಸಾಧ್ಯತೆ […]

Continue Reading

ಪಂಡಿತ ಡಾ.ಪುಟ್ಟರಾಜ ಗವಾಯಿಗಳ ಕೊಡುಗೆ ಅವಿಸ್ಮರಣೀಯ

ಸುದ್ದಿ ಸಂಗ್ರಹ ಕಲಬುರಗಿ ತ್ರಿಕಾಲ ಜ್ಞಾನಿ, ಸಾಹಿತಿ, ಸಮಾಜಕ್ಕೆ ಆದರ್ಶ ಗುರು, ಸಮಾಜ ಸುಧಾರಕರಾಗಿ ವಿವಿಧ ಆಯಾಮಗಳಿಂದ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಗಾನಯೋಗಿ ಪಂಡಿತ ಡಾ.ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಎರಡು ವರ್ಷದವರಿದ್ದಾಗ ಕಣ್ಣುಗಳ ಕಳೆದುಕೊಂಡ ಪಂಡಿತ ಡಾ.ಪುಟ್ಟರಾಜ ಗವಾಯಿಗಳು […]

Continue Reading

ಗುಣಮಟ್ಟ ಕಾಪಾಡಬೇಕು, ಕಳಪೆ ಕಾಮಗಾರಿ ಸಹಿಸಲ್ಲ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ, ಸಂಪರ್ಕ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡದಿದ್ದರೆ ಸಹಿಸುವ ಮಾತೆ ಇಲ್ಲ ಎಂದು ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದಲ್ಲಿನ ತಾಲೂಕು ಆಡಳಿತದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಸಾಕಷ್ಟು ಅನುದಾನ ತಂದರೂ, ಕೆಲಸ ಮಾಡಲು ಅವಕಾಶವಿದ್ದರೂ, ಅಧಿಕಾರಿಗಳು ಮಾತ್ರ ಆಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. […]

Continue Reading

ಮಾರುಕಟ್ಟೆಗಾಗಿ ಪ್ರಪಂಚ ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್: ಎಂ ಶಶಿಧರ

ಸುದ್ದಿ ಸಂಗ್ರಹ ಶಹಾಬಾದವಿಶ್ವದ ತೈಲ ಮಾರುಕಟ್ಟೆಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಅಮೆರಿಕ ಹುನ್ನಾರ ನಡೆಸುತ್ತಿದೆ. ತೈಲ ನಿಕ್ಷೇಪ ಹೊಂದಿರುವ ರಾಷ್ಟ್ರಗಳನ್ನು ಕುತಂತ್ರದಿಂದ ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಪ್ರಯತ್ನಿಸುತಿದೆ. ಅದು ಸಾಧ್ಯವಾಗದಿದ್ದರೆ ಇಲ್ಲಸಲ್ಲದ ಕಾರಣ ನೀಡಿ ಸಾರ್ವಭೌಮ ರಾಷ್ಟ್ರಗಳ ಮೇಲೆ ಮಿಲಿಟರಿ ದಾಳಿ ಮಾಡುವುದರ ಮೂಲಕ ಅಮೆರಿಕ ಮತ್ತು ಇಸ್ರೇಲ್ ಸಾಮ್ರಾಜ್ಯಶಾಹಿಗಳು ಪ್ರಪಂಚವನ್ನು ಸ್ಮಶಾನ ಮಾಡುತ್ತಿವೆ. ಅವರಿಗೆ ನಮ್ಮ ಧಿಕ್ಕಾರವಿದೆ ಎಂದು ಎಸ್’ಯುಸಿಐ (ಸಿ)ನ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಎಮ್ ಶಶಿಧರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ […]

Continue Reading

ಮಾ.6ರಂದು ಚಿತ್ತಾಪುರದಲ್ಲಿ ಸರಕಾರಿ ನೌಕರರ ಸಂಘದ ಮಹಾಸಭೆ: ಬಸವರಾಜ ಬಳೊಂಡಗಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ರೈಲ್ವೆ ಸ್ಟೇಷನ್ ಹತ್ತಿರದ ಪಶುಪಾಲನೆ ಇಲಾಖೆಯ ಸಭಾಂಗಣದಲ್ಲಿ ಮಾ.6 ರಂದು ಶುಕ್ರವಾರ ಮಧ್ಯಾಹ್ನ 1.30ಕ್ಕೆ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಆಯೋಜಿಸಲಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಸಭೆಯಲ್ಲಿ ಸಂಘದ ಕಾರ್ಯಕಲಾಪಗಳ ವರದಿ ಮಂಡನೆ, ಸಂಘದ ಲೆಕ್ಕಪತ್ರಗಳ ಅಡಿಟ್ ವರದಿ ಮಂಡನೆ, ವಿವಿಧ ಇಲಾಖೆ ಪ್ರತಿನಿಧಿಗಳ, ಪದಾಧಿಕಾರಿಗಳ ನೇಮಕ, ಪ್ರಮಾಣ ಪತ್ರ ವಿತರಣೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಅದಕ್ಕಾಗಿ ತಾಲೂಕಿನ […]

Continue Reading

ಶಾಸಕ ಮತ್ತಿಮೂಡ್ ಜನ್ಮದಿನ: ಬೈಕ್ ಸವಾರರಿಗೆ ಹೆಲ್ಮೆಟ್, ಆಟೋ ಚಾಲಕರಿಗೆ ಏಫ್ರಾನ್ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ಪಕ್ಷಬೇಧ ಮಾಡದೆ ಸರ್ವರಿಗೂ ಗೌರವ ಕೊಡುತ್ತಾ ಸದಾ ಹಸನ್ಮುಖಿಯಾಗಿರುವ ಶಾಸಕ ಬಸವರಾಜ ಮತ್ತಿಮೂಡ್ ಅವರ ಜನ್ಮ ದಿನದ ಪ್ರಯುಕ್ತ ಆಟೋ ಚಾಲಕರಿಗೆ ಏಫ್ರಾನ್ ಮತ್ತು ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು. ನಗರದ ಶ್ರೀರಾಮ ಚೌಕಿನಲ್ಲಿ ಶಾಸಕ ಬಸವರಾಜ ಮತ್ತಿಮೂಡ್ ಅವರ 46ನೇ ಜನ್ಮದಿನದಂದು ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ನಂತರ ಬೈಕ್ ಸವಾರರಿಗೆ ಹೆಲ್ಮೆಟ್ ಹಾಗೂ ಆಟೋ ಚಾಲಕರಿಗೆ ಏಫ್ರಾನ್ ವಿತರಣಾ ಕಾರ್ಯಕ್ರಮ […]

Continue Reading

ಪೆದ್ದು ಮಠದಲ್ಲಿ ರೇಣುಕಾಚಾರ್ಯ ಜಯಂತಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದಲ್ಲಿರುವ ಕಡಬೂರ ಗಲ್ಲಿಯಲ್ಲಿನ ಪೆದ್ದು ಮಠದಲ್ಲಿರೇಣುಕಾಚಾರ್ಯರ ಜಯಂತಿಯನ್ನು ಮಠದ ಪೀಠಾಧ್ಯಕ್ಷ ದಿಗ್ಗಾಂವದ ಪಂಚಗೃಹ ಹಿರೇಮಠದ ಸಿದ್ಧವೀರ ಶಿವಾಚಾರ್ಯರ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜ್ಞಾನಜ್ಯೋತಿ ಪ್ರವಚನ ಕಾರ್ಯಕ್ರಮದ ಸಮಾರೋಪನಡೆಯಿತು. ಶ್ರೀಗಳು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬೆಳಗ್ಗೆ ಮಠದಲ್ಲಿ ಸಿದ್ಧವೀರೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ತೊಟ್ಟಿಲು ಉತ್ಸವ,ಮಹಾಂಗಲ ನಂತರ ಪ್ರಸಾದ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಚಂದ್ರಶೇಖರ ಅವಂಟಿ, ಗಂಗಾಧರಯ್ಯ ಸ್ವಾಮಿ ಹಿರೇಮಠ, ಬಸಯ್ಯ ಸ್ವಾಮಿ ಸಾತನೂರು, ಚಂದ್ರಪ್ರಕಾಶ ತಿರ್ಮಲ್, ಶರಣಗೌಡ ಪಾಟೀಲ್ ಮರಗೋಳ, ಬನ್ನಯ್ಯ […]

Continue Reading

ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದರಂಜಾನ್‌ ಮತ್ತು ಹೋಳಿ ಹಬ್ಬ ಶಾಂತಿ- ಸೌಹಾರ್ದತೆಯ ಸಂಕೇತವಾಗಿದ್ದು, ಹಬ್ಬಗಳು ಸಂತೋಷದಿಂದ ಆಚರಿಸಿ, ಯುವಕರು, ಮಕ್ಕಳು ಮಾಡುವ ಸಣ್ಣಪುಟ್ಟ ಸಮಸ್ಯೆಗಳನ್ನು ಅಲ್ಲಿಯೆ ಪರಿಹರಿಸುವ ಮೂಲಕ ಹಬ್ಬಗಳಲ್ಲಿ ಶಾಂತಿ- ಸೌಹಾರ್ದತೆ ಕಾಪಾಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ರಂಜಾನ್‌ ಮತ್ತು ಹೋಳಿ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ 3-4 ದಿನದಲ್ಲಿ ಬಿಸಿಲಿನ ಝಳ ಹೆಚ್ಚಲಿದ್ದು, ಜನರು ಈ ವಾತಾವರಣಕ್ಕೆ ಹೊಂದಿಕೊಳ್ಳುವದು ಅಗತ್ಯವಾಗಿದೆ, ಆರೋಗ್ಯದ […]

Continue Reading

ಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ ಎಂದು ರೇಣುಕಾಚಾರ್ಯರು ತಿಳಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಚಾರ್ಯರಲ್ಲಿ ಬಹಳ ಪ್ರಮುಖವಾದ ಆಚಾರ್ಯರಾಗಿದ್ದ ಇವರು ಪ್ರಭಾವಶಾಲಿಯಾದ ರಂಭಾಪುರಿ ಪೀಠದ ಸಂಸ್ಥಾಪಕರಾಗಿದ್ದರು. ಸತ್ಯದ ಮಾರ್ಗದೊಂದಿಗೆ ಸಾಮರಸ್ಯದಿಂದ ಸಮಾಜ ನಡೆಯುವುದಕ್ಕೆ ಅನುಸರಿಸಬೇಕಾದ ಅಂಶಗಳು ಧಾರೆಯೆರಿದಿದ್ದಾರೆ ಎಂದರು. ರೇಣುಕಾಚಾರ್ಯರರ ಸರ್ವಶ್ರೇಷ್ಠ ಮೌಲಿಕ ಗ್ರಂಥವಾದ ಸಿದ್ಧಾಂತ ಶಿಖಾಮಣಿಯ ತತ್ವ ಸಿದ್ದಾಂತದ ಬೋಧನೆ, ಮಾನವಕುಲ ದೈವತ್ವದೆಡೆಗೆ […]

Continue Reading