UPI ಪಾವತಿ ಬಂದ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ

ಮಹಾರಾಷ್ಟ್ರ: ಮೇ.10 ರಿಂದ ಪೆಟ್ರೋಲ್ ಪಂಪ್‌ಗಳಲ್ಲಿ UPI ಮತ್ತು ಕಾರ್ಡ್‌ಗಳ ಮೂಲಕ ಪಾವತಿಸುವುದು ಕಷ್ಟವಾಗಬಹುದು. ಪೆಟ್ರೋಲ್ ಪಂಪ್ ಮಾಲೀಕರು ಇಂದಿನಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಪಂಪ್ ಮಾಲೀಕರು ಮತ್ತು ಅವರ ಸಂಘಟನೆಗಳು UPI ಮತ್ತು ಕಾರ್ಡ್ ಪಾವತಿಗಳನ್ನು ಸ್ವೀಕರಿಸುವದಿಲ್ಲ ಎಂದು ಹೇಳುತ್ತಿದ್ದಾರೆ. ಈ ರೀತಿಯ ಪಾವತಿಗಳಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಮೇ 10 ರಿಂದ UPI […]

Continue Reading

ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವ

ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವವನ್ನು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು. ಗೋಖಲೆಯವರು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ಕಾದಂಬರಿ ಸಾರ್ವಭೌಮ ಅ.ನ ಕೃಷ್ಣರಾವ

ಕಲಬುರಗಿ: ಅ.ನ ಕೃಷ್ಣರಾವ ಅವರು ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡಪರ ಹೋರಾಟಗಾರರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ವಿಶೇಷ ಕಾದಂಬರಿಗಳು ನೀಡಿದ ಅವರು ‘ಕಾದಂಬರಿ ಸಾರ್ವಭೌಮ’ರಾಗಿದ್ದಾರೆ ಎಂದು ಲೇಖಕ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಅ.ನ ಕೃಷ್ಣರಾವ ಅವರ 117ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, […]

Continue Reading

ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ

ಕಲಬುರಗಿ: ನಮ್ಮ ಭಾಗದಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಮಾಡಲು ಸಾಧ್ಯ ಎಂದು ದೈಹಿಕ ಶಿಕ್ಷಣ ಶಿಕ್ಷಕ ಶರಣು ಮಲಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಅಥ್ಲೆಟಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೆ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಬೇಕು. […]

Continue Reading

ಮೇ.15 ರಿಂದ ಜೂನ್‌ 14ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ.15 ರಿಂದ ಜೂನ್‌ 14ರವರೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಡಿಪಿಎಆರ್) ಈ ಬಗ್ಗೆ ಸಚಿವ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವ ಮಂಡಿಸಿದೆ. ಗ್ರೂಪ್‌ ಎ, ಬಿ, ಸಿ ಮತ್ತು ಡಿ ವರ್ಗದ ನೌಕರರನ್ನು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ವರ್ಗಾವಣೆ ಮಾಡಬಹುದು. ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ […]

Continue Reading

ವಾಡಿ: ಬಿಜೆಪಿ ಮಾಜಿ ಅಧ್ಯಕ್ಷರಿಗೆ ಶ್ರದ್ಧಾಂಜಲಿ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ, ವಾಡಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಹಾಗೂ ಪುರಸಭೆ ಮಾಜಿ ಸದಸ್ಯ ರಾಮಚಂದ್ರರೆಡ್ಡಿ ಮುನಿಯಪ್ಪ ದಾಸ್ ಅವರಿಗೆ ಬಿಜೆಪಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ಪಕ್ಷದ ಧೀಮಂತ ನಾಯಕರಾಗಿ ಪಕ್ಷವನ್ನು ಬೇರು ಮಟ್ಟದಲ್ಲಿ ಗಟ್ಟಿಗೊಳಿಸಿ, ಮಾಜಿ ಶಾಸಕ ವಾಲ್ಮೀಕ ನಾಯಕ ಅವರ ಜೊತೆ ಪಕ್ಷ ಸಂಘಟನೆಗೆ ಶ್ರಮಿಸಿದ್ದ ರಾಮಚಂದ್ರರೆಡ್ಡಿ ಅವರು ಅನಾರೋಗ್ಯದಿಂದ ಬುಧವಾರ ನಮ್ಮನ್ನು […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರೆಡ್‌ಕ್ರಾಸ್ ಸಂಸ್ಥೆಯ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಟ್’ಕ್ರಾಸ್ ಸಂಸ್ಥೆ ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳೀದರು. ನಗರದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ಸಂಸ್ಥೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಈ […]

Continue Reading

ವಿಶ್ವದ ಅಭಿವೃದ್ಧಿಗೆ ರೆಡ್‌ಕ್ರಾಸ್‌ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜಮುಖಿ ಕಾರ್ಯಗಳನ್ನು ಕಳೆದ ಅನೇಕ ವರ್ಷಗಳಿಂದ ಮಾಡುವ ಮೂಲಕ ರೆಡ್’ಕ್ರಾಸ್ ಸಂಸ್ಥೆಯು ವಿಶ್ವದ ಅಭಿವೃದ್ಧಿಗೆ ತನ್ನದೆಯಾದ ಅಪಾರ ಕೊಡುಗೆ ನೀಡುತ್ತಿದೆ ಎಂದು ಕಿರಿಯ ರೆಡ್’ಕ್ರಾಸ್ ಘಟಕದ ಕೌನ್ಸಲರ್ ಎಚ್.ಬಿ ಪಾಟೀಲ ಹೇಳಿದರು . ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾಲೇಜಿನ ಕಿರಿಯ ರೆಡ್ ಕ್ರಾಸ್ ಘಟಕದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೈಸರ್ಗಿಕ ವಿಪತ್ತು ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ರಕ್ತದಾನ, ಪ್ರವಾಹ, ಸಂಕಷ್ಟದಲ್ಲಿರುವ ಜನರಿಗೆ […]

Continue Reading

ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ

ಬೆಳಗಾವಿ: ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಶಿಯವರು ಬೇರೆ ಯಾರು ಅಲ್ಲ. ಅವರು ಕರ್ನಾಟಕದ ಬೆಳಗಾವಿಯ ಹೆಮ್ಮೆಯ ಸೊಸೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಹೆಸರಿನ ಏರ್‌ಸ್ಟ್ರೈಕ್‌ ಮಾಡಿತ್ತು. ಈ ಕಾರ್ಯಚರಣೆಯ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಶಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿಯಾಗಿದ್ದಾರೆ. ಮೂಲತಃ ಗುಜರಾತ್ ರಾಜ್ಯದ […]

Continue Reading

ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ರವಿವಾರ ಮದುವೆ ನಡೆದಿತ್ತು. ಮದುವೆಗೆ ಹಾಜರಾದವರಿಗೆ ರವಿವಾರ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಸೋಮವಾರ ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading