ನೇತ್ರಾದಾನ ಮಾಡಿದ ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕರ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಹಾಗೂ ಚಿತ್ತಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ ಅವರು ನೇತ್ರಾದಾನ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಹುಟ್ಟು ಹಬ್ಬವು ನ.22 ರಂದು ಇರುವ ಪ್ರಯುಕ್ತ ಅವರ ಅಭಿಮಾನಿ ಹಾಗೂ ಚಿತ್ತಾಪುರ […]

Continue Reading

ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ, ಪಿಎಸ್ಐ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವೈದ್ಯೆ

ಬೆಂಗಳೂರು: ಯುವ ವೈದ್ಯೆಗೆ ನಗ್ನ ಫೋಟೋ ಕಳುಹಿಸುವಂತೆ ಕಿರುಕುಳ ನೀಡಿರುವದಲ್ಲದೆ, ನಿರಾಕರಣೆ ಮಾಡಿದ್ದಕ್ಕೆ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪಿಎಸ್ಐ ವಿರುದ್ಧ ಕೇಳಿ ಬಂದಿದೆ. ಬಸವನಗುಡಿ ಪೊಲೀಸ್ ಠಾಣೆ ಪಿಎಸ್ಐ ರಾಜಕುಮಾರ ಎಸ್ ಜೋಡಟ್ಟಿ ವಿರುದ್ದ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ದೂರು ನೀಡಿದ್ದಾರೆ, ತನಗೆ ನ್ಯಾಯ ಕೊಡಿಸುವಂತೆ ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ನೊಂದ ವೈದ್ಯೆ ಮನವಿ ಮಾಡಿದ್ದಾರೆ. ಘಟನೆಯ ವಿವರ: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ […]

Continue Reading

ಓದುವ ಬೆಳಕು ಕಾರ್ಯಕ್ರಮ ಪ್ರಾರಂಭ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಓದುವ ಬೆಳಕು ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ . ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಶಾಲಾ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ನವೆಂಬರ್ 14 ರ ಮಕ್ಕಳ ದಿನಾಚರಣೆ ಹಾಗೂ ನವೆಂಬರ್ 20 ರ ಅಂತಾರಾಷ್ಟ್ರೀಯ ಮಕ್ಕಳ […]

Continue Reading

ಮಾಡಬೂಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ

ಚಿತ್ತಾಪುರ: ಮಾಡಬೂಳ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರಿಗೆ ಜಿ.ಪಂ ಮಾಜಿ ಸದಸ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಮನವಿ ಮಾಡಿದರು. ಮಂಗಳವಾರ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾಡಬೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಶಾಲಾ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಾಡಬೂಳ ಗ್ರಾಮಕ್ಕೆ ಡಿಗ್ರಿ ಕಾಲೇಜು ಹಾಗೂ ವಸತಿ ನಿಲಯದ ಅವಶ್ಯಕತೆ ಇದೆ. ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಬ್ಯಾಂಕಿನ ಸೌಲಭ್ಯ ಒದಗಿಸಬೇಕು, ರಸ್ತೆ, […]

Continue Reading

ಕಣ್ಣು ಜೀವನದ ಪ್ರಮುಖ ಅಂಗ: ಗವಿಮಠ

ಚಿತ್ತಾಪುರ: ಕಣ್ಣು ಜೀವನ ಪ್ರಮುಖ ಅಂಗವಾಗಿದೆ. ಇದರ ಬಗ್ಗೆ ನಿರ್ಲಕ್ಷ್ಯ ಬೇಡ, ಕಣ್ಣಿನ ಬಗ್ಗೆ ತೀವ್ರ ಕಾಳಜಿ ವಹಿಸಬೇಕು ಎಂದು ಕಲಬುರ್ಗಿ ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯ ನೇತೃ ತಜ್ಞ ಡಾ. ನಾಗರಾಜ್ ಗವಿಮಠ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಕಲಬುರಗಿಯ ಸಿದ್ದರಾಮೇಶ್ವರ ಆಸ್ಪತ್ರೆ ಮತ್ತು ವಿಶ್ವ ಜನ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜ್ಞಾನಜ್ಯೋತಿ ಶಾಲೆ ಸಾವಿರ ದೇವರ ಸಂಸ್ಥಾನ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯು […]

Continue Reading

ರಾವೂರ ಮಕ್ಕಳಿಂದ ಅಣಕು ವಿಧಾನಸಭಾ ಅಧಿವೇಶನ

ಚಿತ್ತಾಪುರ: ಪ್ರತಿ ವರ್ಷ ಮಕ್ಕಳ ದಿನಾರಣೆಯ ಅಂಗವಾಗಿ ಒಂದಿಲ್ಲದೊಂದು ಮಕ್ಕಳ ವಿನೂತನ ಪ್ರಯೋಗಗಳನ್ನು ಹಮ್ಮಿಕೊಳ್ಳುವ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ಈ ಬಾರಿ ಅಣಕು ವಿಧಾನಸಭಾ ಅಧಿವೇಶನಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ಅವರು, ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮಕ್ಕಳಿಗಾಗಿ ಇಂತಹದೊಂದು ಪ್ರಯೋಗ ಹಮ್ಮಿಕೊಳ್ಳಲಾಗಿದೆ. ಒಟ್ಟು 40 ಮಕ್ಕಳು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರಾಗಿ, ಸಚಿವರಾಗಿ, ಸಭಾಪತಿಯಾಗಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ನವೆಂಬರ್ 13 […]

Continue Reading

ಎರಡು ದೇಹ ಒಂದು ಹೃದಯದ ಅವಳಿ ಮಕ್ಕಳು, ಈ ಸಹೋದರರ ಮಧ್ಯೆ ಬಡಿಯೊದು ಒಂದೇ ಹೃದಯ

ಮಧ್ಯಪ್ರದೇಶ: ನಮ್ಮ ಸುತ್ತಮುತ್ತ ಹಲವಾರು ಆಘಾತಕಾರಿ ಮತ್ತು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಸೋಶಿಯಲ್​​ ಮೀಡಿಯಾದಲ್ಲಿಯೂ ವೈರಲ್ ಆಗುತ್ತಿರುವದನ್ನು ನೋಡುತ್ತೆವೆ. ಅಂತಹದೆ ಅಪೂರೂಪದ ಘಟನೆಯೊಂದು ಮಧ್ಯಪ್ರದೇಶದ ಶಾಹದೋಲ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಲ್ಲಿ ವಿಶೇಷವೆಂದರೆ ಎರಡು ದೇಹಕ್ಕೆ ಒಂದೇ ಹೃದಯ, ಕಿಡ್ನಿ ಮತ್ತು ಲಿವರ್​ ಇದೆ. ಇದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೆಚ್ಚು ಅಪಾಯಕಾರಿ ಎಂದು ತಜ್ಱರು ಸೂಚಿಸುತ್ತಿದ್ದಾರೆ. ರವಿ ಜೋಗಿ ಮತ್ತು ವರ್ಷಾ ಜೋಗಿ […]

Continue Reading

ಡಾ.ತ್ರಿಮೂರ್ತಿ ಶಿವಾಚಾರ್ಯರ ಪಾದಯಾತ್ರೆ: ಮಠದ ಪಹಣಿಯಿಂದ ವಕ್ಫ್ ಹೆಸರು ಡಿಲೀಟ್

ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಜಮೀನು ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ನಮೂದಾಗಿರುವದನ್ನು ವಿರೋಧಿಸಿ ಡಾ. ತ್ರಿಮೂರ್ತಿ ಶಿವಾಚಾರ್ಯರು ಬುಧವಾರ ಪಾದಯಾತ್ರೆ ಆರಂಭಿಸುವ ಮುನ್ನವೇ ಪಹಣಿಯಲ್ಲಿನ ವಕ್ಫ್ ಹೆಸರು ತೆಗೆದು ಹಾಕಲಾಗಿದೆ. ಮಠದ ಡಾ. ತ್ರಿಮೂರ್ತಿ ಶಿವಾಚಾರ್ಯರ ಹೆಸರಿನಲ್ಲಿ 5.24 ಎಕರೆ ಜಮೀನು ಇದೆ. 2018ರಲ್ಲಿ ಮಠದ ಪಹಣಿಯಲ್ಲಿ ಅಶೂರಖಾನಾ ವಕ್ಸ್ ಎಂದು ಸೇರ್ಪಡೆಯಾಗಿತ್ತು. ಇದರ ವಿರುದ್ಧ ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬುಧವಾರ ಬೆಳಿಗ್ಗೆ ಡಾ. ತ್ರಿಮೂರ್ತಿ […]

Continue Reading

ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ: ಬಿಜೆಪಿ ಬೆಂಬಲ

ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿಯ ಶ್ರೀ ಮಹಾಂತೇಶ್ವರ ಮಠದ ಪೂಜ್ಯ ಶ್ರೀ ಡಾ. ತ್ರಿಮೂರ್ತಿ ಶಿವಾಚಾರ್ಯರಿಗೆ ಸೇರಿದ 5 ಎಕರೆ 24 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದು, ಇದನ್ನು ಖಂಡಿಸಿ ಶ್ರೀಗಳು ನ. 6 ರಂದು ತೊಟ್ನಳ್ಳಿಯಿಂದ ಸೇಡಂನ ಸಹಾಯಕ ಆಯುಕ್ತರ ಕಾರ್ಯಾಲಯದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆಗೆ ಬಿಜೆಪಿಯ ಬೆಂಬಲಿವಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ವಕ್ಫ್ ಕಾಯಿದೆ ಅಡ್ಡ ಇಟ್ಟುಕೊಂಡು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಭೂಮಿ […]

Continue Reading

ವಯಸ್ಸಿಗೆ ಅನುಗುಣವಾಗಿ ನಿಮ್ಮ ತೂಕ ಎಷ್ಟಿರಬೇಕು ? ಆರೋಗ್ಯವಾಗಿರಲು ಇಷ್ಟು ಕೆಜಿ ಇರಬೇಕಂತೆ

ವಯಸ್ಸು, ಎತ್ತರ ಮತ್ತು ಲಿಂಗವನ್ನು ಅವಲಂಬಿಸಿ ತೂಕವು ಕಡಿಮೆ ಅಥವಾ ಹೆಚ್ಚಿರಬಹುದು. ಆದರೆ ಪ್ರತಿ ವಯಸ್ಸಿನವರು ಒಂದು ಕನಿಷ್ಠ ತೂಕವನ್ನು ಹೊಂದಿರಲೇಬೇಕು. ಅದರ ಮಾಹಿತಿ ಇಲ್ಲಿದೆ ನೋಡಿ. ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರುತ್ತಾರೆ. ಮಕ್ಕಳು ತಮ್ಮನ್ನು ತಾವು ಸದೃಢವಾಗಿಟ್ಟುಕೊಳ್ಳಲು ಚಿಕ್ಕ ವಯಸ್ಸಿನಿಂದಲೇ ಸರಿಯಾದ ಮಾಹಿತಿ ನೀಡುವದು ಉತ್ತಮ. ಇದರ ಭಾಗವಾಗಿ ಮೊದಲಿಗೆ ತೂಕವನ್ನು ನಿಯಂತ್ರಣದಲ್ಲಿಡುವದು ಮುಖ್ಯವಾಗಿರುತ್ತದೆ. ಆದರೆ ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ತೂಕ ಎಷ್ಟು ಸರಿ ಎಂಬುದು ಹಲವರಿಗೆ ತಿಳಿದಿಲ್ಲ. ಅಂತಹ […]

Continue Reading