ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ

ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]

Continue Reading

ಅಗ್ನಿಶಾಮಕರು ಸಮಾಜದ ರಕ್ಷಕರು: ಅಂಕುಶ್ ಆಳಂದೆ

ಕಲಬುರಗಿ: ಬೆಂಕಿ ಅವಗಡ, ಭೂಕಂಪ, ಅತಿವೃಷ್ಟಿ, ನೆರೆ ಹಾವಳಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಿಸುವ ಅಗ್ನಿಶಾಮಕರು ಸಮಾಜದ ಕಾವಲುಗಾರ ಹಾಗೂ ರಕ್ಷಕರಾಗಿದ್ದಾರೆ. ಅವರಿಗೆ ಸಾರ್ವಜನಿಕ ಸುರಕ್ಷತೆ, ಸಮಾಜದ ರಕ್ಷಣೆಯೆ ಪ್ರಮುಖವಾಗಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ ಆಳಂದೆ ಅಭಿಪ್ರಾಯಪಟ್ಟರು. ನಗರದ ಅಗ್ನಿಶಾಮಕ ಠಾಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಅಗ್ನಿಶಾಮಕ ಠಾಣೆಯ ಜಂಟಿ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ್ ‘ಅಂತಾರಾಷ್ಟ್ರೀಯ ಅಗ್ನಿಶಾಮಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಡಿಸೆಂಬರ್ […]

Continue Reading

ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading

ಚಿತ್ತಾಪುರ: ವಿದ್ಯಾನಿಕೇತನ ಪ್ರೌಢ ಶಾಲೆಗೆ ಸಹನಾ ಬಳ್ಳಾ ಟಾಪರ್

ಚಿತ್ತಾಪುರ: ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಹನಾ ಬಳ್ಳಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 611 ಅಂಕ ಪಡೆದಿದ್ದಾಳೆ. ಸಂಧ್ಯಾಕಾಲ ಪತ್ರಿಕೆಯ ವರದಿಗಾರ ಚಂದ್ರಶೇಖರ ಬಳ್ಳಾ ಅವರ ಪುತ್ರಿ ಸಹನಾ ಬಳ್ಳಾ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 611 (ಶೇ.97.76) ಅಂಕ ಪಡೆಯುವ ಮೂಲಕ ವಿದ್ಯಾನಿಕೇತನ ಪ್ರೌಢ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಮಗಳು ಸಹನಾಗೆ ಸಿಹಿ ತಿನ್ನಿಸಿ ಪೋಷಕರು ಸಂಭ್ರಮಿಸಿದ್ದಾರೆ. 2024-25ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು […]

Continue Reading

ಇನ್ನುಮುಂದೆ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ, ಈ 2 ಡಾಕ್ಯುಮೆಂಟ್‌ ಇದ್ದರೆ ಮಾತ್ರ ಭಾರತದ ಪ್ರಜೆ: ಸರ್ಕಾರದ ಹೊಸ ಆದೇಶ

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನಿ ನಾಗರಿಕರನ್ನು ತನಿಖೆ ಮಾಡಿ ದೇಶದಿಂದ ಹೊರಹೋಗುವ ಮಾರ್ಗ ತೋರಿಸಲಾಗಿದೆ. ಇದಾದ ನಂತರ ಸರ್ಕಾರ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ ಎಂದು ಹೇಳಿದೆ. ಇವು ಆಡಳಿತಾತ್ಮಕ ಅಗತ್ಯಗಳನ್ನು ಮಾತ್ರ ಪೂರೈಸುತ್ತವೆ. ಇದಲ್ಲದೆ ಸರ್ಕಾರದಿಂದ ಗುರುತಿಸಲ್ಪಟ್ಟ ಏಕೈಕ ದಾಖಲೆಗಳು ಜನನ ಪ್ರಮಾಣಪತ್ರ ಮತ್ತು ನಿವಾಸ ಪ್ರಮಾಣಪತ್ರ ಎಂದು ಸರ್ಕಾರ ಹೇಳಿದೆ. ಇದರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಕ್ರಮ ವಿದೇಶಿ ನಾಗರಿಕರು ಪರಿಶೀಲನೆಯ ಸಮಯದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪ್ಯಾನ್ […]

Continue Reading

ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]

Continue Reading

SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ದಿ: 21 ಮಾರ್ಚ್ 2025 ರಿಂದ 04 ಎಪ್ರಿಲ್ 2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಬಸವೇಶ್ವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಎಸ್.ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, 12ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಸಾಮಾನತೆಯ ಜ್ಯೋತಿ ಬೆಳಗಿಸಿ, ಸರ್ವರಿಗೂ ಸಮ ಬಾಳು ನೀಡಿದ ಮಹಾನ ಸಮಾಜ ಸುಧಾರಕರು ಅಣ್ಣ ಬಸವಣ್ಣನವರು ಎಂದರು. ಜಾತಿ ಎಂಬ ಅನಿಷ್ಠ ಪದ್ಧತಿಯನ್ನು ನಾವಾಗಿಯೇ ಸೃಷ್ಟಿಮಾಡಿಕೊಂಡಿದ್ದೆವೆ. ಬಸವಣ್ಣನವರು ಎಲ್ಲರೂ […]

Continue Reading