ವಾಡಿ: ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಬಸವೇಶ್ವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಎಸ್.ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, 12ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಸಾಮಾನತೆಯ ಜ್ಯೋತಿ ಬೆಳಗಿಸಿ, ಸರ್ವರಿಗೂ ಸಮ ಬಾಳು ನೀಡಿದ ಮಹಾನ ಸಮಾಜ ಸುಧಾರಕರು ಅಣ್ಣ ಬಸವಣ್ಣನವರು ಎಂದರು. ಜಾತಿ ಎಂಬ ಅನಿಷ್ಠ ಪದ್ಧತಿಯನ್ನು ನಾವಾಗಿಯೇ ಸೃಷ್ಟಿಮಾಡಿಕೊಂಡಿದ್ದೆವೆ. ಬಸವಣ್ಣನವರು ಎಲ್ಲರೂ […]

Continue Reading

ರಾತ್ರಿ ವೇಳೆ ಮನೆಗಳಿಗೆ ಕನ್ನ, ಐಷಾರಾಮಿ ಜೀವನ: ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ

ಕಲಬುರಗಿ: ಕದ್ದ ಹಣವನ್ನು ಜಾತ್ರೆಗಳಲ್ಲಿ ಸಾಮೂಹಿಕ ಭೋಜನಕ್ಕೆ, ಮದ್ಯ ಮತ್ತು ಮನರಂಜನೆಗಾಗಿ ಖರ್ಚು ಮಾಡುತ್ತಿದ್ದ ಕಳ್ಳನನ್ನು ಕಲಬುರಗಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಭಾಗ್ಯವಂತಿ ನಗರದ ನಿವಾಸಿ ಶಂಕರಗೌಡ ನೀಡಿದ ದೂರಿನ ಆಧಾರದ ಮೇಲೆ, ಏಪ್ರಿಲ್ 13 ರಂದು ತಮ್ಮ ಕುಟುಂಬದೊಂದಿಗೆ ಹೊರ ಹೋಗಿದ್ದರು. ಆ ಸಮಯದಲ್ಲಿ ಕಳ್ಳರು 343 ಗ್ರಾಂ ಚಿನ್ನಾಭರಣ, 14.5 ಲಕ್ಷ ರೂ. ನಗದು, 10,000 ರೂ. ಮೌಲ್ಯದ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಕಲಬುರಗಿ ಪೊಲೀಸ್ ಆಯುಕ್ತ […]

Continue Reading

ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೆ ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ: ಪಾಕ್ ಸಚಿವ

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೆ ಭಾರತ ಸೇನಾಪಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಈ ಬೆಳವಣಿಗೆ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. ಮೋದಿ ನಿರ್ಧಾರ ಬೆನ್ನಲ್ಲೆ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ “ನೆಪ”ವಾಗಿ […]

Continue Reading

ಕರ್ನಾಟಕದಲ್ಲಿ ಇಂದಿನಿಂದ ಒಂದೆ ಗ್ರಾಮೀಣ ಬ್ಯಾಂಕ್‌

ಧಾರವಾಡ: ರಾಜ್ಯಕ್ಕೆ ಈಗ ಒಂದೆ ಗ್ರಾಮೀಣ ಬ್ಯಾಂಕ್‌ ಅಸ್ವಿತ್ವಕ್ಕೆ ಬಂದಿದೆ. ಧಾರವಾಡದಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ (ಕೆವಿಜಿ ಬ್ಯಾಂಕ್‌) ಮತ್ತು ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌’ಗಳು ಪರಸ್ಪರ ವಿಲೀನಗೊಂಡಿದ್ದು, ಮೇ 1ರ ಗುರುವಾರದಿಂದ ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ಉದಯಿಸಲಿದೆ. ಒಂದು ರಾಜ್ಯ, ಒಂದು ಗ್ರಾಮೀಣ ಬ್ಯಾಂಕ್ ಎಂಬ ನೀತಿಯನ್ವಯ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯ ಮೇರೆಗೆ ರಾಜ್ಯಕ್ಕೆ ಈಗ ಒಂದೆ ಗ್ರಾಮೀಣ ಬ್ಯಾಂಕ್‌ ಅಸ್ವಿತ್ವಕ್ಕೆ ಬಂದಿದೆ. ನೂತನ […]

Continue Reading

ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ: ಹೊಸ ಬ್ಯಾನರ್ ಶುರು

ರಾಕಿಂಗ್ ಸ್ಟಾರ್ ಯಶ್ ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರವಲ್ಲ ನಿರ್ಮಾಪಕ ಕೂಡ ಹೌದು. ಬಾಲಿವುಡ್​ನ ರಾಮಾಯಣ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗುವ ಹಂತಕ್ಕೆ ಬೆಳೆದಿದ್ದಾರೆ ಅನ್ನೊದು ವಿಶೇಷ. ಈ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಈಗ ಅವರ ಕುಟುಂಬದವರು ಕೂಡ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿಯಾಗಿದೆ. ಯಶ್ ಬಳಿಕ ಅವರ ತಾಯಿ ಪುಷ್ಪ ಅವರು ಹಲವು ಸಿನಿಮಾಗಳನ್ನು ತಯಾರು […]

Continue Reading

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ: ವೇದಿಕೆಯಲ್ಲೆ ತರಾಟೆ

ಬೆಳಗಾವಿ: ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೆ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ವಿರುದ್ಧ ಗರಂ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು. ಆಗಿದ್ದು ಏನು ?ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ […]

Continue Reading

ವಾಡಿ: ಪಹಲ್ಗಾಮ್ ಘಟನೆಯಲ್ಲಿ ಬಲಿಯಾದವರಿಗೆ ನಮನ, ಪಾಕಿಸ್ತಾನದ ವಿರುದ್ಧ ಘೋಷಣೆ

ವಾಡಿ: ಪಟ್ಟಣದ ಅಜಾದ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಮೇಣದ ಬತ್ತಿ ಬೆಳಗುವ ಮೂಲಕ ಪಹಲ್ಗಾಮ್ ಘಟನೆಯಲ್ಲಿ ಉಗ್ರಗಾಮಿಗಳ ದಾಳಿಗೆ ಬಲಿಯಾದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಹಲ್ಗಾಮ್’ದಲ್ಲಿ ಉಗ್ರಗಾಮಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿ ವೇಳೆ ಉಗ್ರರು ಪ್ರವಾಸಿಗರ ಧರ್ಮ ಯಾವುದು ಎಂದು ಕೇಳಿ ಗುಂಡಿಕ್ಕಿ ಕೊಂದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಎಂದರು. ದುಷ್ಕರ್ಮಿಗಳು ಧರ್ಮದ ಹೆಸರಿನಲ್ಲಿ ಅಮಾಯಕ, ಮುಗ್ಧ ಜನರನ್ನು ಬಲಿ ತೆಗೆದುಕೊಂಡಿದ್ದಾರೆ. […]

Continue Reading

ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒರ್ವ ಬಂಧನ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ […]

Continue Reading

ಮೇ.1 ರಿಂದ ದೇಶವಾಸಿಗಳಿಗೆ ಸಿಗಲಿವೆ 10 ಸೇವೆಗಳು ಫ್ರೀ, ಫ್ರೀ

ನವದೆಹಲಿ: ಪ್ರತಿವರ್ಷ ಸರ್ಕಾರ ದೇಶದ ಜನತೆಗೆ ಹೊಸ ಹೊಸ ಯೋಜನೆ ನೀಡುತ್ತದೆ. ಹಾಗೆ ಹಳೆಯ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಆದೇಶ ಪ್ರಕಟಿಸುತ್ತಿರುತ್ತದೆ. 2025ರಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಲಾಗಿದೆ, ಈ ಮೂಲಕ ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಉದ್ದೇಶ ಸರ್ಕಾರ ಹೊಂದಿರುತ್ತದೆ. ಇದರ ಜೊತೆಗೆ ದೇಶವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಗುರಿ ಹೊಂದಿರುತ್ತವೆ. ಉಚಿತ ಪಡಿತರ ವಿತರಣೆ, ವಿದ್ಯುತ್, ಶಿಕ್ಷಣ, ಕೌಶಲ್ಯ ತರಬೇತಿ, ಪಿಂಚಣಿ, ತೆರಿಗೆ ಸೇರಿದಂತೆ ಇನ್ನಿತರ ಸೇವೆಗಳನ್ನು ಒಳಗೊಂಡಿರುತ್ತದೆ. ಮೇ 1ರಿಂದ ದೇಶದ ಜನತೆಗೆ […]

Continue Reading

ಕಲಬುರಗಿ SBI ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧನ

ಕಲಬುರಗಿ: ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್ (28) ಮತ್ತು ಷರೀಫ್ ( 22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಆ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ […]

Continue Reading