ಕೊಂತನಪಲ್ಲಿ: ಮಳೆಗೆ ನೆಲ ಕಚ್ಚಿದ ಪಪ್ಪಾಯಿ ಗಿಡಗಳು

ಸೇಡಂ: ತಾಲೂಕಿನ ಕೊಂತನಪಲ್ಲಿ ಗ್ರಾಮದಲ್ಲಿ ಗುಡುಗು ಮಿಂಚಿನ ಮಳೆಗೆ ಪಪ್ಪಾಯಿ ಗಿಡಗಳು ನೆಲಕ್ಕುರುಳಿ ಬಿದ್ದು ಬೆಳೆ ನಷ್ಟವಾಗಿದೆ. ಗ್ರಾಮದ ರೈತ ಸಂಗಯ್ಯ ಮಾಸ್ಟರ್ ಅವರ 3 ಎಕರೆ ಹೊಲದಲ್ಲಿ 3 ಸಾವಿರ ಪಪ್ಪಾಯಿ ಬೆಳೆದಿದ್ದಾರೆ. ಇದೀಗ ಮಳೆಗೆ ಪಪ್ಪಾಯಿ ಗಿಡಗಳು ನೆಲ ಕಚ್ಚಿವೆ. ಮಳೆಯಿಂದ ಪಪ್ಪಾಯಿ ಹಾಳಾಗಿದೆ.12 ಲಕ್ಷ ರೂ ನಷ್ಟ ಉಂಟಾಗಿದೆ ಎಂದು ರೈತ ಸಂಗಯ್ಯ ಮಾಸ್ಟರ್ ಹೇಳಿದರು‌. ಕೊಂತನಪಲ್ಲಿ ಗ್ರಾಮದ ಮತ್ತೊರ್ವ ರೈತ ಮಹೆಬೂಬ ಸೇಡಂ ಅವರ 1 ಎಕರೆ ಹೊಲದಲ್ಲಿ 1 ಸಾವಿರ […]

Continue Reading

ಅವಹೇಳನಕಾರಿ ಜಾಹೀರಾತು ಆರೋಪ: Uber ವಿರುದ್ಧ ಮೊಕದ್ದಮೆ ಹೂಡಿದ RCB

ನವದೆಹಲಿ: ಭಾರತೀಯ ಪ್ರೀಮಿಯರ್ ಲೀಗ್ (IPL)ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕಬ್ಯಾಟರ್ ಟ್ರಾವಿಸ್ ಹೆಡ್ ಅಭಿನಯಿಸಿರುವ ಉಬರ್‌ನಜಾಹೀರಾತೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡವನ್ನು ನ್ಯಾಯಾಲಯದ ಮೊರೆಹೋಗುವಂತೆ ಮಾಡಿದೆ. ಟ್ರಾವಿಸ್ ಹೆಡ್ ಕಳ್ಳಹೆಜ್ಜೆಯೊಂದಿಗೆ ಕ್ರೀಡಾಂಗಣದೊಳಗೆಕಾಲಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂಹೈದರಬಾದ್ ತಂಡದ ನಡುವಿನ ಪಂದ್ಯದ ಫಲಕದಲ್ಲಿ ಸ್ಪೇಪೇಯಿಂಟ್ ಬಳಸಿ ‘ರಾಯಲಿ ಚಾಲೆಂಜ್ ಬೆಂಗಳೂರು’ಎಂದು ಬದಲಿಸುತ್ತಾರೆ. ಆ ಹೊತ್ತಿಗೆ ಭದ್ರತಾ ಸಿಬ್ಬಂದಿ ಇವರನ್ನು ಬೆನ್ನಟ್ಟುತ್ತಾರೆ. ಉಬರ್‌ನ ಮೂರು ನಿಮಿಷಗಳಲ್ಲಿ ವಾಹನ ಸೌಲಭ್ಯವನ್ನು ಪಡೆದು ಬೈಕ್‌ನಲ್ಲಿ ಹೆಡ್‌ ಪರಾರಿಯಾಗುತ್ತಾರೆ. ಮೂರು ನಿಮಿಷಗಳಲ್ಲಿ ತನ್ನ ಸೇವೆ […]

Continue Reading

ಭಾರತೀಯರು ಕ್ಯಾಡ್ಬರಿ ಜೆಮ್ಸ್‌ನಂತೆ Dolo-650 ಮಾತ್ರೆ ತೆಗೆದುಕೊಳ್ಳುತ್ತಾರೆ: ವೈದ್ಯರೊಬ್ಬರ ಪೋಸ್ಟ್ ವೈರಲ್

ಭಾರತದಲ್ಲಿ ಪ್ಯಾರಸಿಟಮಾಲ್ ವ್ಯಾಪಕವಾಗಿ ಲಭ್ಯವಿದೆ. ಅನೇಕ ಜನರು ಜ್ವರ ಬಂದರೆ ಸಾಕು ಆ ಮಾತ್ರೆ ತೆಗೆದುಕೊಳ್ಳುತ್ತಾರೆ. ಈ ಪೈಕಿ ಲಭ್ಯವಿರುವ ವಿವಿಧ ಬ್ರ್ಯಾಂಡ್‌ಗಳಲ್ಲಿ ‘ಡೋಲೋ 650’ ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಜನಪ್ರಿಯವಾಗಿದೆ. ಇದನ್ನು ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಈ ಪ್ರವೃತ್ತಿಯನ್ನು ಗ್ಯಾಸ್ಟ್ರೋಎಂಟರಾಲಜಿಸ್ಟ್ ಮತ್ತು ಆರೋಗ್ಯ ಶಿಕ್ಷಕ ಪಳನಿಯಪ್ಪನ್ ಮಾಣಿಕ್ಕಮ್ ಎತ್ತಿ ತೋರಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಭಾರತೀಯರು ಡೋಲೋ 650 ಅನ್ನು ಕ್ಯಾಡ್ಬರಿ ಜೆಮ್ಸ್‌ನಂತೆ ತೆಗೆದುಕೊಳ್ಳುತ್ತಾರೆ’ ಎಂದಿದ್ದಾರೆ. ಭಾರತದಲ್ಲಿ ವೈದ್ಯರು ಸಾಮಾನ್ಯವಾಗಿ […]

Continue Reading

ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಲಾರಿ ಮಾಲೀಕರ ಮುಷ್ಕರ ವಾಪಸ್

ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ವಾಪಸ್​ ತೆಗೆದುಕೊಳ್ಳುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಗಪ್ಪ ಘೋಷಣೆ ಮಾಡಿದ್ದಾರೆ. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರ ಈ ಸಮಯದಿಂದಲೇ ವಾಪಸ್ ಪಡೆಯುತ್ತೆನೆ. ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೆನೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದೆ 20 ವರ್ಷಗಳಿಂದ ಈಡೇರದ ಬೇಡಿಕೆ ಸಚಿವ ರಾಮಲಿಂಗಾರೆಡ್ಡಿ ಈಡೇರಿಸಿದ್ದಾರೆ ಎಂದರು. […]

Continue Reading

ಹಿಮೋಫಿಲಿಯಾ ಅನುವಂಶಿಕ ಕಾಯಿಲೆ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತ ಹೆಪ್ಪುಗಟ್ಟುವ ಕ್ರಿಯೆಗೆ ಬೇಕಾಗುವ ಅಂಶಗಳಲ್ಲಿ ಕೆಲವು ಅಂಶಗಳ ತೀವ್ರ ಕೊರತೆಯಿಂದ ದೇಹದಲ್ಲಿ ಗಾಯಗಳಾದರೆ, ರಕ್ತನಾಳಗಳಿಗೆ ಯಾವುದೆ ಪೆಟ್ಟಾದರೆ ರಕ್ತಸ್ರಾವ ನಿರಂತರವಾಗುತ್ತದೆ. ಸಾಮಾನ್ಯವಾಗಿ ಈ ರೋಗದ ಮುಖ್ಯ ಲಕ್ಷಣ ಎಂದರೆ ನಿರಂತರ ರಕ್ತ ಸ್ರಾವವಾಗುವದು. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಖಾದ್ರಿ ಚೌಕ್’ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿಮೋಫಿಲಿಯಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, […]

Continue Reading

50 ಕೋಟಿಗೆ ನಾಯಿ ಖರೀದಿ ಮಾಡಿದ್ದೆನೆ ಅಂತಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ: ಬಯಲಾಯ್ತು ಸತ್ಯ

ಬೆಂಗಳೂರು: 50 ಕೋಟಿ ರೂ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ಖರೀದಿ ಮಾಡಿದ್ದೆನೆ ಎಂದು ಹೇಳುತ್ತಿದ್ದ ಬೆಂಗಳೂರಿನ ಶ್ವಾನ ಪ್ರೇಮಿ ಸತೀಶ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಅನ್ನೊದು ಸುಳ್ಳು ಎಂಬುದು ಗೊತ್ತಾಗಿದೆ. ಸದ್ಯ ಸ್ಥಳದಲ್ಲೆ ಬೀಡುಬಿಟ್ಟಿರುವ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಸತೀಶ್‌ 50 ಕೋಟಿ […]

Continue Reading

ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ: ಇನ್ನುಮುಂದೆ ರೈಲಿನಲ್ಲೂ ಎಟಿಎಂ

ಮುಂಬೈ: ದೇಶದಲ್ಲೆ ಮೊದಲ ಬಾರಿಗೆ ರೈಲಿನಲ್ಲಿ ಸ್ಥಾಪಿಸಲಾದ ಎಟಿಎಂನ (ATM) ಪ್ರಾಯೋಗಿಕ ಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ನಡೆದಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರದ ಸಹಯೋಗದೊಂದಿಗೆ ಮನ್ಮಾಡ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ವರೆಗೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಈ ಪ್ರಾಯೋಗಿಕ ಪರೀಕ್ಷೆಯ ಬಳಿಕ ಈಶಾನ್ಯ ಗಡಿನಾಡು ರೈಲ್ವೆಗಳಲ್ಲಿ ಎಟಿಎಂಗಳನ್ನು ಪರಿಚಯಿಸಲು ನಿರ್ಧರಿಸಿದೆ. ನಾಸಿಕ್‌ನ ಮನ್ಮಾಡ್ ಮತ್ತು ಮುಂಬೈ ನಡುವೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಎಟಿಎಂ ಸ್ಥಾಪಿಸಲಾಗಿದೆ. ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಾಯೋಗಿಕ […]

Continue Reading

ಸಾಮಾಜಿಕ ಸಮತೋಲನ ಕಾಪಾಡುವ ಶಕ್ತಿ ಚಿತ್ರಕಲೆಗಿದೆ

ಕಲಬುರಗಿ: ದೃಶ್ಯ ಕಲೆಯು ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಇದು ಮನುಷ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸಮಾಜದ ಸಮತೋಲನ ಸ್ಥಿತಿಯನ್ನು ಕಾಪಾಡುವ ಶಕ್ತಿ ದೃಶ್ಯಕಲೆಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘ವಿಶ್ವ ಕಲಾ ದಿನಾಚರಣೆ’ಯಲ್ಲಿ ಮಾತನಾಡಿದ […]

Continue Reading

ಬಸವ ಜಯಂತಿ ಪ್ರಯುಕ್ತ ಏ.19 ರಂದು ಪೂರ್ವಭಾವಿ ಸಭೆ: ನಾಗರಾಜ ಭಂಕಲಗಿ

ಚಿತ್ತಾಪುರ: ಏ.19 ರಂದು ಮಧ್ಯಾಹ್ನ 1 ಗಂಟೆಗೆ ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಕರೆಯಲಾಗಿದೆ, ಆದ್ದರಿಂದ ಮಹಾಸಭಾದ ಸರ್ವ ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಕಲಬುರಗಿಯಲ್ಲಿ ಜರುಗುವ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ, ಸಭೆಗೆ ಅಖಿಲ ಭಾರತ ವೀರಶೈವ […]

Continue Reading

ಮುಂಬೈಯಿಂದ ದುಬೈ ಮಧ್ಯೆ ಸಮುದ್ರದೊಳಗೆ ರೈಲು: ದೇಶದ ಭವಿಷ್ಯವನ್ನೆ ಬದಲಿಸಲಿದೆಯಾ ಈ ಪ್ಲ್ಯಾನ್‌ ?

ಸಾಮಾನ್ಯವಾಗಿ ಬಸ್ಸು, ಕಾರುಗಳ ಪ್ರಯಾಣಕ್ಕಿಂತ ರೈಲಿನಲ್ಲಿ ದೀರ್ಘ ಪ್ರವಾಸ ಮಾಡುವ ಮಜಾನೆ ಬೇರೆ. ಇದು ಕೇವಲ ಅಗ್ಗದ ಸಾರಿಗೆ ಮಾತ್ರವಲ್ಲ, ಆರಾಮದಾಯಕವಾಗಿ ನಿಗದಿತ ಸ್ಥಾನವನ್ನು ತಲುಪುತ್ತದೆ. ಮಾರ್ಗದಲ್ಲಿ ಜಲಪಾತಗಳ ಸೌಂದರ್ಯ, ಆಳವಾದ ಕಂದಕ, ಹಚ್ಚ ಹಸಿರಿನ ಸೌಂದರ್ಯ ಸೇರಿದಂತೆ ಅನೇಕ ಅದ್ಭುತವಾದ ಪ್ರಾಕೃತಿಕ ಆಕರ್ಷಣೆಗಳು ಕಣ್ಣು ಕುಕ್ಕುವಂತಿರುತ್ತದೆ. ಜೊತೆಯಲ್ಲಿ ಸ್ನೇಹಿತರಿದ್ದರೆ ಹಿತವಾದ ಮಾತುಗಳನ್ನು ಕೇಳುತ್ತಾ ಊರು ಸೇರಿದ್ದೆ ತಿಳಿಯುದಿಲ್ಲ. ಸಾಮಾನ್ಯ ರೈಲಿನಲ್ಲಿ ಇಷ್ಟೆಲ್ಲಾ ರೋಮಾಂಚಕ ಅನುಭವ ಸಿಗುತ್ತೆ ಅಂದ್ಮೇಲೆ ಇನ್ನೂ ಸಮುದ್ರದೊಳಗೆ ರೈಲಿನಲ್ಲಿ ಪ್ರಯಾಣಿಸಿದರೆ ಅದರ ಅನುಭವ […]

Continue Reading