ಮನೆಯ ಹಿಂಬಾಗಿಲ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ

ಮೈಸೂರು: ಮನೆಯ ಹಿಂಬಾಗಿಲ ಬೀಗ ಮುರಿದು ಸುಮಾರು 22 ಲಕ್ಷ ರೂ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿರುವ ಘಟನೆ ಮೈಸೂರು ತಾಲೂಕಿನ ನಾಗವಾಲದಲ್ಲಿ ನಡೆದಿದೆ. ನಾಗವಾಲದ ನಿವಾಸಿ ರೇಣುಕಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿರುವ ವೇಳೆ ಹಿಂಬಾಗಿಲ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 3,26,700 ರೂ ನಗದು, 276 ಗ್ರಾಂ ಚಿನ್ನ, 1,350 ಗ್ರಾಂ ಬೆಳ್ಳಿ ಸೇರಿ ಸುಮಾರು 22 ಲಕ್ಷ ಮೌಲ್ಯದ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಸದ್ಯ […]

Continue Reading

ತಾಯಂದಿರು ಆರೋಗ್ಯ ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯ

ಕಲಬುರಗಿ: ಆರೋಗ್ಯವಂತ ಮಗು ಪಡೆಯಬೇಕಾದರೆ, ಸದೃಢ, ಆರೋಗ್ಯಯುತ ತಾಯಂದಿರಿರಬೇಕು. ಸಾಮಾನ್ಯವಾಗಿ ತಾಯಂದಿರು ರಕ್ತಹೀನತೆ ಸಮಸ್ಯೆ ಎದುರಿಸುತ್ತಾರೆ. ಶುದ್ದವಾದ ಕುಡಿಯುವ ನೀರಿನ ಸೇವನೆ, ದಿನಕ್ಕೆ 7-8ರಿಂದ ಗಂಟೆಗಳ ಕಾಲ ಗಾಡ ನಿದ್ರೆ, ವ್ಯಾಯಾಮ, ಯೋಗ, ಧನಾತ್ಮಕ ಚಿಂತನೆ, ಎಣ್ಣೆಯಲ್ಲಿ ಹುರಿದ, ಕರಿದ ಮಸಾಲೆಯುಕ್ತ, ಹೆಚ್ಚು ಹುಳಿ, ಖಾರ, ಉಪ್ಪು ಇರುವ ಆಹಾರ ಸೇವನೆ ಮಾಡದಿರುವ ಮತ್ತಿತರ ಆರೋಗ್ಯಕರ ಕ್ರಮಗಳನ್ನು ಪಾಲಿಸುವ ಮೂಲಕ ತಾಯಂದಿರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. […]

Continue Reading

ಶ್ರೇಷ್ಠ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ

ಕಲಬುರಗಿ: ಮಹಿಳಾ ಶಿಕ್ಷಣಕ್ಕೆ ಪ್ರಯತ್ನ, ಸ್ತಿçÃ-ಪುರುಷರ ನಡುವಿನ ಅಸಮಾನತೆ ನಿರ್ಮೂಲನೆ, ಜಾತಿ, ಧರ್ಮದ ಹೆಸರಿನ ಮೇಲೆ ನಡೆಯುತ್ತಿದ್ದ ವ್ಯಾಪಕ ಶೋಷಣೆ, ಮೌಢ್ಯತೆ, ಅಂಧಶೃದ್ಧೆ, ಅಸ್ಪೃಷ್ಯತೆ ಹೋಗಲಾಡಿಸಲು ನಿರಂತರವಾಗಿ ಇಡೀ ಜೀವನದುದ್ದಕ್ಕೂ ಹೋರಾಟ ಮಾಡಿದ ಮಹಾತ್ಮ ಜ್ಯೋತಿಬಾ ಫುಲೆಯವರು ಶ್ರೇಷ್ಠ ಸಮಜ ಸುಧಾರಕರಾಗಿದ್ದರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿಯ ಕರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಮಹಾತ್ಮ […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ

ಕಲಬುರಗಿ: ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆ ಉಂಟು ಮಾಡುತ್ತದೆ. ಕೈಕಾಲು ಜೋಮು ಹಿಡಿಯುವುದು, ನಿಲ್ಲಲು ಹಾಗೂ ನಡೆಯಲು ಆಯಾಸವಾಗುವದು, ನಿದ್ರಾಹೀನತೆ, ಮಾತಿನಲ್ಲಿ ಬದಲಾವಣೆ, ಮೂಗಿನ ಕಾರ್ಯದಲ್ಲಿ ತೊಂದರೆ, ಮೂತ್ರ ಸೋರುವಿಕೆಯಂತಹ ಲಕ್ಷಣಗಳು ಪಾರ್ಕಿನ್ಸನ್ ಕಾಯಿಲೆಯದಾಗಿದೆ, ಇದರ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ […]

Continue Reading

ಸ್ವಾತಂತ್ರ್ಯ ಹೋರಾಟದ ಮಹಿಳಾ ಸೇನಾನಿ ಕಸ್ತೂರಬಾ ಗಾಂಧೀಜಿ

ಕಲಬುರಗಿ: ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಹೋರಾಟಕ್ಕೆ ಸಂಪೂರ್ಣವಾಗಿ ಕೈಜೋಡಿಸುವ ಮೂಲಕ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿದ ಸ್ವಾತಂತ್ರ್ಯ ಹೋರಾಟದ ವೀರ ಮಹಿಳೆಯಾಗಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಕಸ್ತೂರಬಾ ಗಾಂಧೀಜಿಯವರ 156ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಬಾ ಅವರು ರಾಷ್ಟ್ರಪತಿ ಗಾಂಧೀಜಿವರ ಪತ್ನಿ ಮಾತ್ರವಲ್ಲದೆ ಸ್ವಾತಂತ್ರ್ಯ ಆಂದೋಲದಲ್ಲಿ […]

Continue Reading

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಎ.ಟಿ ಮೀನಾ ಸೇರಿ ಐವರ ಅಮಾನತು

ಬೆಂಗಳೂರು: ಹೈಕೋರ್ಟ್‌ನ ನೆಲಮಾಳಿಗೆಯ ಲೋಕೋಪಯೋಗಿ ವಿಶೇಷ ಕಟ್ಟಡಗಳ ಉಪ ವಿಭಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿಸಿ ಜನ್ಮದಿನ ಆಚರಿಸಿಕೊಂಡು ಮೋಜು-ಮಸ್ತಿ ಮಾಡಿದ ಆರೋಪದಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಎ.ಟಿ ಮೀನಾ ಸೇರಿದಂತೆ ಒಟ್ಟು ಐವರನ್ನು ಸೇವೆಯಿಂದ ಅಮಾನತುಗೊಳಿಸಿ ಲೋಕೋಪಯೋಗಿ ಇಲಾಖೆ ಆದೇಶಿಸಿದೆ. ದೂರಿನ ಕುರಿತು ವಿಚಾರಣೆ: ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಎಂಜಿನಿಯರ್ ಸಲ್ಲಿಸಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. 22 ಫೆಬ್ರುವರಿ 2025 ರಂದು ಜನ್ಮದಿನ ಆಚರಿಸಿಕೊಂಡಿರುವ ಎ.ಟಿ […]

Continue Reading

ವಾಡಿ ಪಟ್ಟಣದಲ್ಲಿ ಮತ್ತೆ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ವೀರಣ್ಣ ಯಾರಿ ಒತ್ತಾಯ

ವಾಡಿ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಕುಡಿಯಲು, ಬಳಸಲು ನೀರಿಲ್ಲ, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಪೈಪ್ ಲೈನ್ ಸಮಸ್ಯೆ ಎನ್ನುತ್ತಾರೆ ಪದೆ ಪದೆ ಜನಸಾಮಾನ್ಯರು ನೀರಿಗಾಗಿ ಗೋಳಾಡುವಂತೆ ಮಾಡುತ್ತಿರುವ ಪುರಸಭೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸೇಡಂ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಸುಮಾರು 55 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣಕ್ಕೆ ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ‌ […]

Continue Reading

ವಾಡಿಯಲ್ಲಿ ಮಹಾವೀರ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಪ್ರಯುಕ್ತ, ಮಹಾವೀರ ರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮಹಾವೀರ ರು ತಮ್ಮ ಜೀವನದಲ್ಲಿ ಸತ್ಯ ಮತ್ತು ಅಹಿಂಸೆಯ ಮರ‍್ಗವನ್ನು ಅಳವಡಿಸಿಕೊಂಡು ಇಡೀ ಸಮಾಜಕ್ಕೆ ಸತ್ಯ ಮತ್ತು ಅಹಿಂಸೆಯ ಬೆಳಕನ್ನುತೋರಿಸಿದ್ದಾರೆ. ಮನುಷ್ಯ ಶ್ರೇಷ್ಠನಾಗುವುದು ಹುಟ್ಟಿನಿಂದಲ್ಲ, ರ‍್ಮದಿಂದ ನಡೆದುಕೊಳ್ಳುವುದರಿಂದ ಎಂದರು. ಭಗವಾನ್ ಮಹಾವೀರರು ಅಹಿಂಸೆ, ಸತ್ಯನಿಷ್ಠೆ, ತಾರತಮ್ಯ, ಬ್ರಹ್ಮರ‍್ಯ ಮತ್ತು ಅಪರಿಗ್ರಹಗಳೆಂಬ ಐದು ವ್ರತಗಳನ್ನು ಪಾಲಿಸುವಂತೆ ಪ್ರತಿಯೊಬ್ಬ ವ್ಯಕ್ತಿಯನ್ನು […]

Continue Reading

ಹೋಮಿಯೋಪಥಿ ಅಡ್ಡಪರಿಣಾಮವಿಲ್ಲದ ಉತ್ತಮ ವೈದ್ಯಕೀಯ ಪದ್ಧತಿ

ಕಲಬುರಗಿ: ಹೋಮಿಯೋಪಥಿಯು ಯಾವುದೆ ಅಡ್ಡಪರಿಣಾಮಗಳಿಲ್ಲದ, ಬಹುತೇಕ ಎಲ್ಲಾ ಕಾಯಿಲೆಗಳಿಗೆ ಸೂಕ್ತ ಪರಿಣಾಮಕಾರಿ ಚಿಕಿತ್ಸೆ ಹೊಂದಿರುವ, ರೋಗ ಮುಕ್ತತೆ ಹೊಂದಿ ಜೀವನ ನಿರ್ವಹಣೆಗೆ ಪೂರಕವಾದ ವಿಶೇಷ ಚಿಕಿತ್ಸಾ ವಿಧಾನವಾಗಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಗತ್ಯವಾಗಿದೆ ಎಂದು ಹೋಮಿಯೋಪಥಿ ತಜ್ಞ ವೈದ್ಯ ಡಾ.ಮಂಜುನಾಥ ಬಿ ಪವಾಡಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಜರುಗಿದ ‘ವಿಶ್ವ ಹೋಮಿಯೋಪಥಿ ದಿನಾಚರಣೆ’ಯನ್ನು ‘ಹೋಮಿಯೋಪಥಿ […]

Continue Reading

ಶಾಂತಿ, ಅಹಿಂಸೆಯ ಸಾಕಾರಮೂರ್ತಿ ವರ್ಧಮಾನ ಮಹಾವೀರ

ಕಲಬುರಗಿ: ಶಾಂತಿ, ತ್ಯಾಗ, ಅಹಿಂಸೆ, ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಮೂಡಿಸಿ, ಅದರಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಪ್ರಮುಖವಾಗಿದೆ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಜೈನ ತತ್ವ ಚಿಂತಕ ಜೀನೇಂದ್ರ ಸಾಗರಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವರ್ಧಮಾನ ಮಹಾವೀರರ 2624ನೇ ಜಯಂತಿ’ ಕಾರ್ಯಕ್ರಮದಲ್ಲಿ […]

Continue Reading