ಯುಗಾದಿ ವಿಶೇಷ: ಆರೋಗ್ಯಕರ ಪಚಡಿ ರೆಸಿಪಿ

ಭಾರತದಾದ್ಯಂತ ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಯುಗಾದಿ ಹಬ್ಬವನ್ನು ಬಹಳ ವಿಶೇಷವಾಗಿ ಆಚರಿಸಲಾಗುತ್ತದೆ. ಆಪ್ತರಿಗೆ ಬೇವು ಬೆಲ್ಲ ಹಂಚುವ ಮೂಲಕ ಜೀವನದಲ್ಲಿ ಸಿಹಿ – ಕಹಿ ಎರಡು ಸಮಾನವಾಗಿ ಸ್ವೀಕರಿಸಿ ಎಂದು ಸಾರುವ ಹಬ್ಬ ಇದಾಗಿದೆ. ಯುಗಾದಿಯಂದು ವಿವಿಧ ಬಗೆಯ ಪಾಯಸ, ಒಬ್ಬಟ್ಟು ಬಗೆ ಬಗೆಯ ಅಡುಗೆಯ ಜೊತೆಗೆ ಪಚಡಿ ಎಂಬ ವಿಶೇಷ ರೆಸಿಪಿ ತಯಾರಿಸಲಾಗುತ್ತದೆ. ಆಂಧ್ರ ಪ್ರದೇಶದಲ್ಲಿ ಇದನ್ನು ಹೆಚ್ಚು ತಯಾರಿಸುತ್ತಾರಾದರೂ ಕರ್ನಾಟಕ ಕೆಲವು ಭಾಗದಲ್ಲಿ ಯುಗಾದಿಗೆ ಪಚಡಿ ತಯಾರಿಸುವ ಕ್ರಮವಿದೆ. ಪಚಡಿ ಎಂದರೇನು ?ಪಚಡಿ […]

Continue Reading

ಸಮಾಜಕ್ಕೆ ಸಿದ್ದಮುನಿಂದ್ರ ಶಿವಯೋಗಿಗಳ ಕೊಡುಗೆ ಅಪಾರ

ಚಿತ್ತಾಪುರ: ಮಠ ಕಟ್ಟದೆ, ಭಕ್ತರ ಮನಸ್ಸನ್ನು ಕಟ್ಟಿರುವ ಪವಾಡ ಪುರುಷ, ನಡೆದಾಡುವ ದೇವರು, ಸದಾ ಸಮಾಜಪರ ಕಾಳಜಿ ಹೊಂದಿದ್ದ ಸಿದ್ದಮುನಿಂದ್ರ ಶಿವಯೋಗಿಗಗಳ ಕೊಡುಗೆ ಅಪಾರ ಎಂದು ಕಲಬುರಗಿಯ ಚವದಾಪುರಿ ಹಿರೇಮಠದ ಡಾ.ರಾಜಶೇಖರ ಶಿವಾಚಾರ್ಯರು ಹೇಳಿದರು. ತಾಲೂಕಿನ ಬೆಳಗುಂಪಾ ಪರ್ವತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ಜರುಗಿದ ಮಠದ ಪೂಜ್ಯ ಸಿದ್ದಮುನಿಂದ್ರ ಶಿವಯೋಗಿಗಳ ದ್ವಿತೀಯ ವರ್ಷದ ಲಿಂಗೈಕ್ಯ ಸ್ಮರಣೋತ್ಸವ ಹಾಗೂ ತನಾರತಿ ಉತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಧ್ಯಾನದಿಂದ ಮನಸ್ಸು ಶುದ್ಧಿ, ದಾನದಿಂದ ಸಮಾಜ ಶುದ್ದಿಯಾಗುತ್ತದೆ. ಸಮಾಜದಲ್ಲಿ ಗುರುವಿನ […]

Continue Reading

ಒಳ ಮೀಸಲಾತಿ ಜಾರಿ‌ ಮಾಡಲು ಮತ್ತೆ ಸಮೀಕ್ಷೆ ಯಾಕೆ ಬೇಕು: ದೀಪಕ್ ಹೊಸ್ಸೂರಕರ್

ಚಿತ್ತಾಪುರ: ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮಹಂದಾಸ್ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಮಧ್ಯಂತರ ವರದಿ ಮೀಸಲಾತಿ ವರ್ಗೀಕರಣದ ಕುರಿತು ಎಲ್ಲೂ ಹೇಳಿಲ್ಲಲ ಮೊದಲಿಗೆ ಆದಿ ಕರ್ನಾಟಕ (ಎ.ಕೆ) ಆದಿ ದ್ರಾವಿಡ(ಎ.ಡಿ) ಜಾತಿಗಳಲ್ಲಿ ಗೊಂದಲವಿರುವುದರಿಂದ ಮತ್ತೊಂದು ಸಮೀಕ್ಷೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಸರ್ಕಾರ ಶಿಫಾರಸು ಮಾಡಿದೆ ಸಮೀಕ್ಷೆ ವಿವರಗಳು ಮತ್ತು ನಿರ್ವಹಣೆ ಮಾಡಲು ಸಮಿತಿ ರಚಿಸಬೇಕು ಎಂದು ಹೇಳಿರುವುದು ಸರಿಯಲ್ಲ ಎಂದು ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ತಿಳಿಸಿದ್ದಾರೆ. […]

Continue Reading

ದೂರಿಗೆ ಸ್ಪಂಧಿಸದ ಅಧಿಕಾರಿಗಳು: ಮಾನಸಿಕ ಆಘಾತದಿಂದ ವರದಿಗಾರ ಆಸ್ಪತ್ರೆ ಪಾಲು

ಚಿತ್ತಾಪುರ: ಮಾ.5 ರಂದು ತಾಲೂಕಿನ ಆಲಹಳ್ಳಿ ಗ್ರಾ‌.ಪಂ ಅಭಿವೃದ್ಧಿ ಅಧಿಕಾರಿ ದೇವಿಂದ್ರಪ್ಪ ಭಾಲ್ಕೆ ಅವರು ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರು ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೆ ಇರುವದು ನಾಗಯ್ಯ ಸ್ವಾಮಿ ಅವರ ಆರೋಗ್ಯ ಹದಗೆಡಲು ಪ್ರಮುಖ ಕಾರಣ ಎಂದು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಜ್‌ ಎಸ್ ಮಲ್ಕಂಡಿ ಆರೋಪಿಸಿದ್ದಾರೆ ಮಾ.6 ರಂದು ದೂರು ನೀಡಿದರೂ ಸ್ಪಂದನೆ ಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಗಯ್ಯ ಸ್ವಾಮಿ ಅವರು ತೀವ್ರ ಮಾನಸಿಕ ಒತ್ತಡಕ್ಕೊಳಗಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ […]

Continue Reading

ಸಮಾಜಕ್ಕೆ ಹೃದಯವಂತರ ಅವಶ್ಯಕತೆಯಿದೆ: ಹಾರಕೂಡ ಶ್ರೀ

ಕಲಬುರಗಿ: ಸಮಾಜದಲ್ಲಿ ಜ್ಞಾನವಂತ, ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಮತ್ತು ಕೃತಿಯಲ್ಲಿ ಒಂದಾಗಿರುವ, ಸಮಾಜದಲ್ಲಿರುವ ಬಡವರು, ಅಸಹಾಯಕರ ಕಣ್ಣೀರು ಒರೆಸುವ, ಸಹಾಯ ಹಸ್ತ ಚಾಚುವ, ಜಾತಿ-ಧರ್ಮ ಮೀರಿ, ಸರ್ವರನ್ನು ಪ್ರೀತಿಯಿಂದ ಕಾಣುವ, ತಂದೆ-ತಾಯಿ, ಗುರು-ಹಿರಿಯರು, ಜನ್ಮಭೂಮಿ, ಗುರು-ಲಿಂಗ-ಜಂಗಮ ಪ್ರೇಮಿಗಳಾಗಿರುವ ಹೃದಯವಂತ ಜನರು ಪ್ರಸ್ತುತ ಸಮಾಜಕ್ಕೆ ಅವಶ್ಯಕತೆಯಿದೆ, ಅವರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ಹಾರಕೂಡ ಮಠದ ಪೂಜ್ಯ ಡಾ.ಚನ್ನವೀರ ಶಿವಾಚಾರ್ಯರು ಆಶಯ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ತಂಬಾಕವಾಡಿಯ ಜಕ್ಕೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜರುಗಿದ ಧರ್ಮಸಭೆ ಉದ್ಘಾಟಿಸಿ ಆಶೀರ್ವಚನ […]

Continue Reading

SBI ಬ್ಯಾಂಕ್ ದರೋಡೆ ಪ್ರಕರಣ: 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ 5 ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡಿನ ಅಜಯಕುಮಾರ, ವಿಜಯಕುಮಾರ, ನ್ಯಾಮತಿಯ ಮಂಜುನಾಥ, ಹೊನ್ನಾಳಿಯ ನಿವಾಸಿ ಅಭಿಷೇಕ ಹಾಗೂ ಚಂದ್ರಶೇಖರ ಬಂಧಿತ ಆರೋಪಿಗಳು‌. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿಕೊಂಡು ಹೋಗುವಾಗ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿ (ಖಾರದ ಪುಡಿ) […]

Continue Reading

ATM ಕ್ಯಾಷ್ ವಿತ್​​ಡ್ರಾ ಶುಲ್ಕ ಹೆಚ್ಚಳ, SB ಅಕೌಂಟ್​​ನಲ್ಲಿ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ: ಏಪ್ರಿಲ್ 1 ರಿಂದ ಬದಲಾವಣೆ

ನವದೆಹಲಿ: ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ATM ಕ್ಯಾಷ್ ವಿತ್​ಡ್ರಾ ಶುಲ್ಕ ಹೆಚ್ಚಳ, SB ಖಾತೆ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ. 1 ಏಪ್ರಿಲ್ 2025 ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ATM ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ RBI ಸಾಕಷ್ಟು ಬದಲಾವಣೆ ಮಾಡಿದೆ. ATM ಹಣ ವಿತ್ ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ ಶುಲ್ಕ […]

Continue Reading

ರಾಜ್ಯದ ಜನತೆಗೆ ಕರೆಂಟ್‌ ಶಾಕ್‌: ಫಿಕ್ಸೆಡ್ ಚಾರ್ಜ್ ದರ 25 ರೂ ಏರಿಕೆ

ಬೆಂಗಳೂರು: ಕಳೆದ ವಾರ ಇಂಧನ ಇಲಾಖೆಯ ಸಿಬ್ಬಂದಿ ಪಿಂಚಣಿ ಗ್ರಾಚ್ಯುಟಿಯನ್ನು ಸರ್ಕಾರ ಪಾವತಿ ಮಾಡದೆ ಇರುವದಕ್ಕೆ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 36 ಪೈಸೆ ಕೆಇಆರ್‌ಸಿ ದರ ಏರಿಕೆ ಬರೆ ಹಾಕಿತ್ತು. ಇದರ ಬೆನ್ನಲ್ಲೆ ಇಂದು ವಾರ್ಷಿಕ ವಿದ್ಯುತ್ ದರ ಏರಿಕೆ ಆದೇಶ ಹೊರಡಿಸಿದೆ. ವಿದ್ಯುತ್ ಶುಲ್ಕ ಇಳಿಸಿ ನಿಗದಿತ ಶುಲ್ಕ ಏರಿಸಿ ಗ್ರಾಹಕರಿಗೆ ಮತ್ತೊಂದು ಶಾಕ್ ಕೊಟ್ಟಿದೆ. ‌ ಏನಿದೆ ಆದೇಶದಲ್ಲಿ ? ಇಳಿಕೆ ಏನು ? ಸೋಲಾರ್ ಅಳವಡಿಕೆಗೆ ಪ್ರೋತ್ಸಾಹಸೋಲಾರ್ ಅಳವಡಿಸಿಕೊಂಡ ಗೃಹಬಳಕೆಯ ಗ್ರಾಹಕರಿಗೆ 10 […]

Continue Reading

ರಂಗಭೂಮಿ ಉಳಿಸಿ ಬೆಳೆಸುವ ಸವಾಲಿನ ಕಾರ್ಯ ಮಾಡಬೇಕು

ಕಲಬುರಗಿ: ಆಧುನಿಕತೆ, ವಿದೇಶಿ ಸಂಸ್ಕೃತಿಯ ಅನುಕರಣೆ ಮತ್ತು ಎಲೆಕ್ಟ್ರಾನಿಕ್ಸ್ ಮಾಧ್ಯಮಗಳ ಪ್ರಭಾವದಲ್ಲಿ ರಂಗಭೂಮಿ ಸಂದಿಗ್ದ ಪರಿಸ್ಥಿತಿಯಲ್ಲಿದೆ. ಜನರು ನಾಟಕ ನೋಡುವುದು, ರಂಗಭೂಮಿ ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಅಗತ್ಯ. ಪ್ರಸ್ತುತ ಸಂದರ್ಭದಲ್ಲಿ ರಂಗಭೂಮಿ ಉಳಿಸಿ-ಬೆಳೆಸುವುದು ಸವಾಲಿನ ಕಾರ್ಯವಾಗಿದ್ದು, ಇದನ್ನು ಜವಾಬ್ದಾರಿಯಿಂದ ಮಾಡಬೇಕಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ, ನಾಟಕ ರಚನಾಕಾರ ಹಣಮಂತರಾಯ ಮಂಗಾಣೆ ಮಾರ್ಮಿಕವಾಗಿ ಹೇಳಿದರು. ನಗರದ ಕಸ್ತೂರಿ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ರಂಗಭೂಮಿ ದಿನಾಚರಣೆ’ ಕಾರ್ಯಕ್ರಮದಲ್ಲಿ […]

Continue Reading

ಓಲಾ, ಉಬರ್‌ ರೀತಿ ದೇಶದಲ್ಲಿ ಕೇಂದ್ರ ಸರ್ಕಾರದಿಂದ ಸಹಕಾರಿ ಟ್ಯಾಕ್ಸಿ ಸೇವೆ: ಅಮಿತ್ ಶಾ ಘೋಷಣೆ

ನವದೆಹಲಿ: ದೇಶದಲ್ಲಿ ಸಹಕಾರ ಟ್ಯಾಕ್ಸಿ ಸೇವೆ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದಾರೆ. ಓಲಾ, ಊಬರ್‌ ರೀತಿಯಲ್ಲಿ ಈ ಸೇವೆ ಕೆಲಸ ಮಾಡಲಿದೆ ಇದರ ಎಲ್ಲಾ ಬೆನಿಫಿಟ್‌ ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಓಲಾ ಮತ್ತು ಉಬರ್ ನಂತಹ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉತ್ತಮ […]

Continue Reading