ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು

ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]

Continue Reading

ಮುಂಜಾಗ್ರತೆ ವಹಿಸಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಾನವನ ದೇಹದ ಪ್ರಮುಖ ಭಾಗವಾದ ಕಿಡ್ನಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತದೆ. ನಿರಂತರ ಆಯಾಸ, ನಿದ್ರೆಯ ತೊಂದರೆ, ಒಣಗಿದ ಚರ್ಮ, ಮೂತ್ರದಲ್ಲಿ ಉರಿಯೂತ ಮತ್ತು ರಕ್ತಪಾತ, ಸ್ನಾಯು ಸೆಳೆತದಂತಹ ಲಕ್ಷಣಗಳು ಕಿಡ್ನಿಯ ತೊಂದರೆಯನ್ನು ಸೂಚಿಸುತ್ತವೆ. ಆಗ ನಿರ್ಲಕ್ಷ ಮಾಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ಕಿಡ್ನಿಯನ್ನು ರಕ್ಷಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದರು. ಶೇಖರೋಜಾ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ […]

Continue Reading

ಶಹಾಬಾದ ಹೋಳಿ ಹಬ್ಬ ಮಾದರಿಯಾಗಲಿ: ಡಿವೈಎಸ್‌ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ: ಹೋಳಿ ಹಬ್ಬದಲ್ಲಿ ಕಾಮದಹನ ಮಾಡುವಾಗ ವಿದ್ಯುತ್ ತಂತಿ, ಕೇಬಲ್, ವಿದ್ಯುತ್ ಟಿಸಿಗಳ ಬಗ್ಗೆ ಎಚ್ಚರ ವಹಿಸಿ ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ದಿನದಂದು ಒತ್ತಾಯಪೂರ್ವಕವಾಗಿ ಬಣ್ಣ ಎರಚುವುದು ಅಥವಾ ಶಾಂತಿ ಕದಡುವ ಕೆಲಸ ಮಾಡಬಾರದು. ಪ್ರತಿ ವರ್ಷದಂತೆ ಈ ವರ್ಷವು ಕೂಡ ಅತ್ಯಂತ ಸಂಭ್ರಮದಿಂದ ಹೋಳಿ ಹಬ್ಬ ಅಚರಿಸಿ ಮಾದರಿಯಾಗಲಿ ಎಂದರು. […]

Continue Reading

ತೆಂಗಳಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ತೆಂಗಳಿ: ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ನ್ಯಾಯಬೆಲೆ ಅಂಗಡಿ ವರ್ತಕರ ಸಂಘದ ತಾಲೂಕು ಅಧ್ಯಕ್ಷ ವೀರಭದ್ರಯ್ಯ ಸಾಲಿಮಠ ಮಾತನಾಡಿ, ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದರು. ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ, ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಸಮಾಜಕ್ಕೆ ನಾಂದಿ ಹಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ […]

Continue Reading

ಧೂಮಪಾನದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

ಕಲಬುರಗಿ: ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ರಾಷ್ಟೀಯ ಧೂಮಪಾನ ನಿಷೇಧ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಆದರೆ ನಮ್ಮ […]

Continue Reading

ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು: ಸಂಪೂರ್ಣ ಪೊಲೀಸ್ ಕಸ್ಟಡಿಗೆ

ಕಲಬುರಗಿ: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ ಅವರನ್ನು ಇಲ್ಲಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನಗರದ ಮಿಲಿಂದ್ ಶಾಲೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿಯ ಬದಲಿಗೆ ಅಕ್ರಮವಾಗಿ ಸಂಪೂರ್ಣ ಪಾಟೀಲ ಬರೆಯುತ್ತಿರುವುದನ್ನು ದಲಿತ ಸೇನೆ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಪೊಲೀಸರು […]

Continue Reading

ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಹಿಂಪಡೆಯಲು ಒತ್ತಾಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಒತ್ತಾಯಿಸಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಮದುವೆಯ ಅರತಕ್ಷತೆಗೆ ಫೇಸ್‌ಬುಕ್‌ ಲೈವ್‌ ಮೂಲಕ ಸಾರ್ವಜನಿಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌, ಅವುಗಳನ್ನು ನೀಡುವುದು ಬೇಡವೆಂದು ಮನವಿ ಮಾಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು […]

Continue Reading

ಸದೃಢ ಆರೋಗ್ಯ– ಮಾದಕವಸ್ತು ಮುಕ್ತ ಕರ್ನಾಟಕಕ್ಕಾಗಿ ಓಟ

ಕಲಬುರಗಿ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮತ್ತು ತಂಬಾಕು ನಿಷೇಧ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ – 2025 ಓಟದಲ್ಲಿ 5 ಕಿ.ಮೀ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಹೆಬ್ಬಾಳ ಮಕ್ಕಳು ಭಾಗವಹಿಸಿ ಕ್ರಮವಾಗಿ ಮಹೇಶ 6ನೇ ಸ್ಥಾನ ಮತ್ತು ಸಮೀರ್ 8ನೇ ಸ್ಥಾನ ಪಡೆದಿದ್ದಕ್ಕಾಗಿ ಕಲಬುರಗಿ ನಗರ ಪೊಲಿಸ್ ಆಯುಕ್ತರಿಂದ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಇಂದು (ಸೋಮವಾರ) ಶಾಲೆಯಲ್ಲಿ ಪ್ರಭಾರಿ ಮುಖ್ಯ ಗುರುಗಳು ಮತ್ತು ಶಿಕ್ಷಕರಿಂದ […]

Continue Reading

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದರೆ 50 ಸಾವಿರ, ಗಂಡು ಜನಿಸಿದರೆ ಹಸು ಗಿಫ್ಟ್‌

ಅಮರಾವತಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ, ಗಂಡು ಮಗುವಿಗೆ […]

Continue Reading

ಹಠಾತ್‌ ಎದೆನೋವು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ನವದೆಹಲಿ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ರವಿವಾರ ಮುಂಜಾನೆ ದಾಖಲಿಸಲಾಗಿದೆ. 73 ವರ್ಷ ವಯಸ್ಸಿನ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Continue Reading