ಕಲಬುರಗಿ: ರಾಜೇಶ್ ನಾಗೂರೆ ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

ಸುದ್ದಿ ಸಂಗ್ರಹ ಕಲಬುರಗಿನಗರದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ರಾಜೇಶ್ ನಾಗೂರೆ ಅವರಿಗೆ 2025ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅನಿತಾ ಕೌಲ್ ಸ್ಮರಣಾರ್ಥ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌ ಮುಕುಂದರಾಜ್‌ , ಬೆಂಗಳೂರಿನ ಬಿಸಿನೆಸ್‌ ಕಾರಿಡಾರ್‌ […]

Continue Reading

ಅಂಗಡಿ ಮಾಲಿಕನಿಗೆ ಚಾಕು ಇರಿತ: ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ರದುರ್ಗ ಮೊಬೈಲ್‌ ಅಂಗಡಿ ಮಾಲಿಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಚಿತ್ರದುರ್ಗದ ಸಂತೆ ಮೈದಾನದಲ್ಲಿ ನಡೆದಿದೆ. ವಿಕ್ರಮ್‌ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್‌ ಸ್ಕ್ರೀನ್‌ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್‌ನ ಮೊಬೈಲ್‌ ಸ್ಕ್ರೀನ್‌ಗೆ 100 ರೂ. ಹೆಚ್ಚುವರಿ ಆಗುತ್ತದೆ ಎಂದು ಹೇಳಿದ್ದಾರೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಕ್ರಮ್‌ ಚೌದ್ರಿ ಜಿಲ್ಲಾಸ್ಪತ್ರೆಗೆ ದಾಖಲಾಗಿ […]

Continue Reading

ಸೇವಾಲಾಲರ ವಿಚಾರಧಾರೆ ತಿಳಿಯಿರಿ: ಬಸವರಾಜ ಮತ್ತಿಮೂಡ್

ಸುದ್ದಿ ಸಂಗ್ರಹ ಶಹಾಬಾದಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಮಹಾರಾಜರ ತತ್ವ ಆದರ್ಶಗಳು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದು ಶಾಸಕ ಬಸವರಾಜ ಮತ್ತಿಮೂಡ್ ಹೇಳಿದರು. ತಾಲೂಕಿನ ಗ್ರಾಮೀಣ ಬಂಜಾರ ಸೇವಾ ಸಂಘ ಹಾಗೂ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾಲಾಲ್ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ಸರ್ವರು ಶಾಂತಿಯಿಂದ ಸಹಭಾಳ್ವೆಯೊಂದಿಗೆ, ಸಹೋದರತೆ ಭಾವದಿಂದ ಸಮಾಜದಲ್ಲಿ ಬಾಳಬೇಕು, ಕಾಯಕ ಜೀವಿಯಾಗಿ ಬದುಕಬೇಕು, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮಾನವಿಯಗುಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮಾನವ […]

Continue Reading

ನುಡಿದಂತೆ ನಡೆದ ಶಾಸಕ ಮತ್ತಿಮೂಡ: ರಾವೂರ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಜನರಿಗೆ ಆಶ್ವಾಸನೆ ನೀಡಿ ಮರೆತು ಹೋಗುವ ಜನಪ್ರತಿನಿಧಿಗಳ ಮಧ್ಯೆ, ಪಕ್ಷ ಭೇದ ಮರೆತು ಜನಪರ ಕೆಲಸ ಮಾಡುತ್ತಿರುವ ಮತ್ತು ನುಡಿದಂತೆ ನಡೆಯುತ್ತಿರುವ ಶಾಸಕ ಬಸವರಾಜ ಮತ್ತಿಮೂಡ ಅಪರೂಪದ ಶಾಸಕರು ಎಂದು ರಾವೂರಿನ ಸಿದ್ದಲಿಂಗೇಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗೋಳಾ(ಕೆ) ಗ್ರಾಮದಲ್ಲಿ ಸಮುದಾಯ ಭವನ ಹಾಗೂ ರಸ್ತೆ ಕಾಮಗಾರಿ ಅಡಿಗಲ್ಲು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಶಾಸಕ ಬಸವರಾಜ ಮತ್ತಿಮಡು ಗುದ್ದಲಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ […]

Continue Reading

ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ನೆನಪಿಸುವ ಕೃತಿ ಲೋಕಾರ್ಪಣೆ

ಸುದ್ದಿ ಸಂಗ್ರಹ ಶಹಾಬಾದ್ದಶಕಗಳ ಹಿಂದೆ ಈ ನೆಲದಲ್ಲಿ ನಡೆದಾಡಿದ ಸಿದ್ದೇಶ್ವರ ಸ್ವಾಮೀಜಿ ಕುರಿತು ಮತ್ತು ಬಸವಣ್ಣನಂತಹ ಮಹಾ ಮಾನವತಾವಾದಿಯ ಕುರಿತು ರಚಿಸಿದ ಎರಡು ಕೃತಿಗಳು ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿ ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರದ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠದ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ನೃಪತುಂಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಡಲಗಿರಿ ಪ್ರಸನ್ನ ಅವರ ‘ಎಣ್ಣೆ ಬತ್ತಿಯ ಸೊಡರು’ ಮತ್ತು ‘ಮಹಾಮನೆ’ ಎರಡು ಕೃತಿಗಳು ಲೋಕಾರ್ಪಣೆ ಮಾಡಿ […]

Continue Reading

ಬದುಕಿನ ಸಂಘರ್ಷಕ್ಕೆ ತಾಳ್ಮೆಯೆ ಮದ್ದು: ಗವಿಸಿದ್ದೇಶ್ವರ ಶ್ರೀಗಳು

ಸುದ್ದಿ ಸಂಗ್ರಹ ನಾಲವಾರಜೀವನವೆಂಬುದು ಸಮುದ್ರದ ಅಲೆಗಳಿದ್ದಂತೆ, ಇಲ್ಲಿ ಏರಿಳಿತಗಳು ಸಹಜ. ಆದರೆ ಅಲೆಗಳಿಗೆ ಹೆದರಿ ದಡ ಸೇರುವುದು ನಿಲ್ಲಿಸಬಾರದು. ಸೋತಾಗ ಹತಾಶರಾಗದೆ, ಗೆದ್ದಾಗ ಉನ್ಮಾದಕ್ಕೊಳಗಾಗದೆ ಬದುಕನ್ನು ಸಮಚಿತ್ತದಿಂದ ಸಾಗಿಸುವುದೆ ನಿಜವಾದ ಧರ್ಮ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು. ಕಲ್ಯಾಣ ಕರ್ನಾಟಕ ಭಾಗದ ಮತ್ತೊಂದು ಪ್ರತಿಷ್ಠಿತ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಮಧ್ಯರಾತ್ರಿಯ ಸಮಯದಲ್ಲೂ ನೆರೆದಿದ್ದ ಸಾವಿರಾರು ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಬದುಕಿನ ಸಂಕಷ್ಟ ಹಾಗೂ […]

Continue Reading

ಕಲಬುರಗಿ: ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ನೌಕರರು ನಾಮನಿರ್ದೇಶನ ಅರ್ಜಿ ಆನ್‌ಲೈನ್ ಮೂಲಕ ಸಲ್ಲಿಸಲು ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. 2026ನೇ ಸಾಲಿನಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರಿ ನೌಕರರು ತಮ್ಮ ನಾಮನಿರ್ದೇಶನ ಅರ್ಜಿ ಸಲ್ಲಿಸಬಯಸುವರು https://dparar.karnataka.gov.in ಅಥವಾhttps://sarvothamaawards.karnataka.gov.in ಮೂಲಕ ಫೆ‌.25ರ ರೊಳಗಾಗಿ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಆಲಿಸಿದ ಮನ್ ಕಿ ಬಾತ್ ಕಾರ್ಯಕ್ರಮ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೊ ಕಾರ್ಯಕ್ರಮದ ‘ಮನ್ ಕಿ ಬಾತ್’ನ 131ನೇ ಸಂಚಿಕೆಯನ್ನು ಮುಖಂಡರು ಆಲಿಸಿದರ. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮೋದಿ ಅವರು ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಕೃಷಿ ಪ್ರಯತ್ನವನ್ನು ಉದಾಹರಣೆಯಾಗಿ ಉಲ್ಲೇಖಿಸಿ “ಭಾರತದ ರೈತರು ಕೇವಲ ಅನ್ನದಾತರಲ್ಲ, ಭೂಮಿಯ ನಿಜವಾದ ಭಕ್ತರು. ಮಣ್ಣನ್ನು ಚಿನ್ನವಾಗಿಸುವ ಕಲೆಯನ್ನು ರೈತರಿಂದಲೆ ಕಲಿಯಬೇಕು” ಎಂದು ಹೇಳಿದ್ದನ್ನು ಪ್ರಶಂಸಿಸಿ ರೈತರ ಕಾಳಜಿಯ ಜೊತೆಗೆ ಅವರ ಪಾಂಡಿತ್ಯದ ಬಗ್ಗೆ […]

Continue Reading

ಕಲಬುರಗಿ: ನಾಗಾವಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ ಮಲೇಷ್ಯಾ ಕರೆನ್ಸಿ

ಸುದ್ದಿ ಸಂಗ್ರಹ ಚಿತ್ತಾಪುರ ಪಟ್ಟಣದ ಹೊರವಲಯದ ನಾಗಾವಿಯ ಮುಜರಾಯಿ ಇಲಾಖೆಯ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿ ತೆರೆದು ಹಣ ಎಣಿಸುವಾಗ ಮಲೇಷ್ಯಾ ದೇಶದ ಕರೆನ್ಸಿ ಪತ್ತೆಯಾಗಿದೆ. ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಶನಿವಾರ ಹುಂಡಿ ಹಣ ಎಣಿಕೆಯಲ್ಲಿ ಮಲೇಷ್ಯಾದ 18 ನೋಟು ಮತ್ತು 2 ನಾಣ್ಯಗಳು ದೊರೆತಿವೆ. ಒಂದು ರಿಂಗಿತ್‌ಗೆ ಭಾರತದ ರೂ.23.26 ಪೈಸೆ ಮೌಲ್ಯವಾಗುತ್ತದೆ ಎಂದು ಹೇಳಿದ್ದಾರೆ. ಹುಂಡಿಯಲ್ಲಿ 500 ರೂ ಮುಖಬೆಲೆಯ 556 ನೋಟು, 200 ರೂ ಮುಖಬೆಲೆಯ 455 ನೋಟು, 100 ರೂ ಮುಖಬೆಲೆಯ […]

Continue Reading

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಸುದ್ದಿ ಸಂಗ್ರಹ ಕಲಬುರಗಿ ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕಿರಿ ಮಾಡಿದೆ. ಸೌಂಡ್ ಕಡಿಮೆ ಮಾಡುವಂತೆ ಕಿರಿಕ್ […]

Continue Reading