ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮೂರು ಪ್ರತ್ಯೇಕ ಪೋಕ್ಸೊ ಪ್ರಕರಣಗಳಲ್ಲಿ ಮೂವರು ಯುವಕರಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಒಂದು ಪ್ರಕರಣದಲ್ಲಿ ಕಲಬುರಗಿಯ ಮಹಾದೇವ ನಗರದ ನಿವಾಸಿ ನಾಗೇಶ ಅಲಿಯಾಸ್ ಬಾಬು ರಾಠೋಡ (30) ನ್ಯಾಯಾಲಯವು 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಇನ್ನೆರಡು ಪ್ರಕರಣಗಳಲ್ಲಿ ಕಲಬುರಗಿಯ ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ […]

Continue Reading

ಮೋಹನ್ ಭಾಗವತ್‌ಗೆ ಸಾವರ್ಕರ್ ಕೃತಿ ನೀಡಿ ಗೌರವಿಸಿದ ಬಿಜೆಪಿಗರು

ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ಕೃತಿ ನೀಡಿ ಗೌರವಿಸಿದರು. ರಾಜ್ಯದ ವಿವಿಧೆಡೆ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಗುರುವಾರ ಸಂಜೆ ಉದ್ಯಾನ್‌ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದರು. ಈ ವೇಳೆ ವಾಡಿ […]

Continue Reading

ತನಾರತಿ ಹರಕೆ ಸಮರ್ಪಿಸಿದ ಭಕ್ತರು

ಸುದ್ದಿ ಸಂಗ್ರಹ ಚಿತ್ತಾಪುರ ಕತ್ತಲನ್ನು ಸೀಳಿ ಬೆಳಕಿನ ನದಿಯೇ ಹರಿಯುತ್ತಿರುವಂತೆ ಭಾಸವಾಯಿತು. ಸಾವಿರಾರು ಭಕ್ತರು ತಲೆಯ ಮೇಲೆ ಗೋದಿಹಿಟ್ಟಿನ ವಿಶೇಷ ಹಣತೆಗಳನ್ನು ಹೊತ್ತು ಮಠದ ಸುತ್ತ ಪ್ರದಕ್ಷಿಣೆ ಹಾಕಿದಾಗ ಆ ದೃಶ್ಯ ನೋಡಿದ ಪ್ರತಿಯೊಬ್ಬರ ಮನಸ್ಸು ಭಕ್ತಿಯಿಂದ ತುಂಬಿತು. ಕಲ್ಯಾಣ ಕರ್ನಾಟಕದ ಪವಿತ್ರ ಪುಣ್ಯಕ್ಷೇತ್ರವಾದ ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ಮಧ್ಯರಾತ್ರಿ ತನಾರತಿ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ದಕ್ಷಿಣ ಭಾರತದಲ್ಲೆ ‘ಮಹಾದೀಪಮೇಳ’ ಎಂದು ಪ್ರಸಿದ್ಧವಾಗಿರುವ ಈ ಉತ್ಸವವು ಇಷ್ಟಾರ್ಥಗಳು […]

Continue Reading

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಸಚಿವ ಕೆ.ಎಚ್ ​ಮುನಿಯಪ್ಪ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೆ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೆವೆ ಎಂದು ಆಹಾರ ಸಚಿವ ಕೆ.ಎಚ್ ​ಮುನಿಯಪ್ಪ ಹೇಳಿದ್ದಾರೆ.‌ ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ದರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು […]

Continue Reading

ಕಾಳಗಿ ಬಸ್ ನಿಲ್ದಾಣದ ನಾಮಫಲಕದ ಅಕ್ಷರಗಳು ಕಳಚಿಬಿದ್ದಿವೆ

ಸುದ್ದಿ ಸಂಗ್ರಹ ಕಾಳಗಿಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ಕ್ಕೆ ಸೇರಿರುವ ಕಾಳಗಿ ತಾಲೂಕು ಕೇಂದ್ರದ ಹೊಸ ಬಸ್ ನಿಲ್ದಾಣದಲ್ಲಿ ಹಾಕಿರುವ ನಾಮಫಲಕದಲ್ಲಿನ ಅಕ್ಷರಗಳು ಕಳಚಿಬಿದ್ದಿವೆ. ನಿಲ್ದಾಣದ ಮುಖ್ಯದ್ವಾರದ ಮೇಲೆ ಕನ್ನಡ ಅಕ್ಷರಗಳಿಂದ ಬಸ್ ನಿಲ್ದಾಣದ ಹೆಸರು ಬರೆಯಲಾಗಿದೆ. ಹೆಸರಿನಲ್ಲಿ ಕೆಲ ಅಕ್ಷರಗಳು ಕಳಚಿ ಬಿದ್ದು ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ. ಪರಿಣಾಮ ನಾಮಫಲಕದ ಕನ್ನಡ ಶಬ್ದಗಳು ತಪ್ಪಾಗಿ ಕಾಣಿಸುತ್ತಿದ್ದು ಓದುಗರಿಗೆ ಮುಜುಗರ ಎನಿಸುತ್ತಿದೆ. ನಾಮಫಲಕದ ಅಕ್ಷರಗಳು ಜೋಡಿಸಿ ಸರಿಪಡಿಸುವಂತೆ ಓದುಗರು ಆಗ್ರಹಿಸಿದ್ದಾರೆ.

Continue Reading

ರಾಯಚೂರಿನ ಸಿಂಧನೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ರಾಯಚೂರುಸಿಂಧನೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಂಧನೂರು 2ನೇ ಅಧಿಕ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ತೀರ್ಪು ನೀಡಿದೆ.‌ ಆರೋಪಿ ಶೋರನಜಿತ್ ಮಂಡಲ್‌ಗೆ 3 ವರ್ಷ ಸಜೆ ಮತ್ತು 5,000 ರೂ. ದಂಡ ನ್ಯಾಯಾಲಯ ವಿಧಿಸಿದೆ. ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ 3ರಲ್ಲಿ 12 ವರ್ಷಗಳಿಂದ ವಾಸಿಸುತ್ತಿದ್ದ ಶೋರನಜಿತ್ ಮಂಡಲ್ ಬಾಂಗ್ಲಾ ವಲಸಿಗರು ವಾಸಿಸುತ್ತಿರುವ ಆರ್‌ಎಚ್ ಕ್ಯಾಂಪ್ 3ರಲ್ಲಿ ಸೇರಿಕೊಂಡಿದ್ದ. ನಕಲಿ ದಾಖಲೆ ಸೃಷ್ಟಿಸಿ 2018ರಲ್ಲಿ ಭಾರತದಲ್ಲಿ […]

Continue Reading

ಪತ್ರಕರ್ತರಿಂದ ಸಮಾಜದ ಕಣ್ತೆರೆಸುವ ಕೆಲಸ‌

ಸುದ್ದಿ ಸಂಗ್ರಹ ಶಹಾಬಾದ್ಎಲ್ಲ ಸಮಸ್ಯೆಗಳನ್ನು ಪತ್ರಿಕೆಯಲ್ಲಿ ಬರೆಯುವ ಮೂಲಕ ಸಮಾಜದ ಕಣ್ಣು ತೆರೆಸುವ ಕೆಲಸ ಪತ್ರಕರ್ತರು ಮಾಡುತ್ತಾರೆ ಎಂದು ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ್ ಹೇಳಿದರು. ನಗರದ ಪಾರ್ವತಿ ಸಭಾಗೃಹದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಶಹಾಬಾದ್​ ಪತ್ರಕರ್ತರು ರಾಜಕೀಯ ರಹಿತ ವರದಿ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ. ಪತ್ರಕರ್ತರು ಸ್ಥಳವನ್ನು ಗುರುತಿಸಿದರೆ, ಪತ್ರಿಕಾ […]

Continue Reading

ಜೈಲು ಅಧೀಕ್ಷಕ ಸೇರಿ 8 ಮಂದಿ ಅಧಿಕಾರಿ, ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ರಾಕೇಶ ಕಾಂಬಳೆ ಸೇರಿದಂತೆ ಎಂಟು ಅಧಿಕಾರಿ, ಸಿಬ್ಬಂದಿಯನ್ನು ಕಾರಾಗೃಹಗಳ ಇಲಾಖೆ ಅಮಾನತುಗೊಳಿಸಿದೆ. ಜೈಲು ಅಧೀಕ್ಷಕ ರಾಕೇಶ ಕಾಂಬಳೆ ಜೊತೆಗೆ ಸಹಾಯಕ ಜೈಲು ಅಧೀಕ್ಷಕ ಸುರೇಶ ಬಿ. ಜೈಲರ್‌ ಶ್ರೀಮಂತಗೌಡ ಪಾಟೀಲ, ಹೆಡ್‌ ವಾರ್ಡರ್‌ಗಳಾದ ನಿಂಗಣ್ಣ ಬಂದರಬಟ್ಟಿ ಮತ್ತು ಯಮನಪ್ಪ ಕುರುಬರ, ವಾರ್ಡರ್‌ಗಳಾದ ಬಸವರಾಜ ಮೇತ್ರಿ, ಸಾವಿತ್ರಿ ತಳಕೇರಿ, ಅಜಿಮ್‌ ಎನ್‌.ಎಸ್‌. ಅಮಾನತುಗೊಂಡಿದ್ದಾರೆ. ಬೆಂಗಳೂರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಕುಮಾರ ಅವರನ್ನು […]

Continue Reading

ದಂಡೋತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಜೆಪಿ ತಂಡ ಭೇಟಿ, ಮಾಹಿತಿ ಸಂಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜು.9ರಂದು ರಾತ್ರಿ ಊಟ ಮಾಡಿದ 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ತಂಡ ಬುಧವಾರ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಬಿ.ಜಿ ಪಾಟೀಲ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ, ಬಾಬುರಾವ ಚವ್ಹಾಣ ಅವರನ್ನೊಳಗೊಂಡ ತಂಡವು ವಸತಿ ಶಾಲೆಯ ವಿದ್ಯಾರ್ಥಿಗಳು, ಪಾಲಕರು […]

Continue Reading

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ ಫಾರ್ಮ್‌ (ನಮೂನೆ) ಹಿಂದಿರುಗಿಸಲು ಅವಧಿ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ತಿಂಗಳ ಅಂತ್ಯದ ವರೆಗೆ ಬಿಎಲ್‌ಒಗಳಿಗೆ (BLOs) ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಸಮಯ ಇತ್ತು. ಇದೀಗ ಆಗಸ್ಟ್‌ 8ರ ಅವಧಿ ವಿಸ್ತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ […]

Continue Reading