ನೋಡ ಬನ್ನಿ ನಾಲವಾರದ ಕೋರಿಸಿದ್ದೇಶ್ವರ ಜಾತ್ರಾ ವೈಭವ
ಚಿತ್ತಾಪುರ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ, ಪವಾಡ ಪುರುಷ, ಸಿದ್ಧಕುಲಚಕ್ರವರ್ತಿ, ಗುರುಕುಲಸಾರ್ವಭೌಮ ನಾಲವಾರದ ಮಹಾತ್ಮಾ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಹಾ ಶಿವಯೋಗಿಗಳ ಜಾತ್ರಾಮಹೋತ್ಸವವು ಜ. 29 ಮತ್ತು 30 ರಂದು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಪೀಠಾಧಿಪತಿ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳ ದಿಗ್ದರ್ಶನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹತ್ತು ಹಲವು ವೈಶಿಷ್ಟ್ಯಪೂರ್ಣ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜ.29 ರಂದು ಬುಧವಾರ ಮಧ್ಯರಾತ್ರಿ ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ಭಕ್ತರ ಹರಕೆಯ “ತನಾರತಿ” ಮಹೋತ್ಸವ ಕಾರ್ಯಕ್ರಮ ನಡೆಯಲಿದೆ […]
Continue Reading