ಸಮಾಜದ ಒಗ್ಗಟ್ಟಿಗೆ ಧಕ್ಕೆ ತರುವುದು ಅಕ್ಷಮ್ಯ: ಭೀಮಣ್ಣಾ ಸಾಲಿ

ಚಿತ್ತಾಪುರ: ಹಾಲಿನಲ್ಲಿ ಸಗಣಿ ಎಸೆಯುವವರಿಂದ ಜನರು ಎಚ್ಚರವಿರಬೇಕು. ತಮ್ಮ ಸ್ವಾರ್ಥಕ್ಕೆ ಸಮಾಜ ಒಡೆಯುವುದು, ಸಂಘಟನೆಗೆ ಮತ್ತು ಒಗ್ಗಟ್ಟಿಗೆ ಧಕ್ಕೆಯುಂಟು ಮಾಡುವುದು ಅಕ್ಷಮ್ಯ. ಅದು ಯಾರೇ ಮಾಡಿದರೂ ಸಮಾಜದ ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ ಹೇಳಿದರು. ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಶನಿವಾರ ತಾಲೂಕು ಕೋಲಿ ಸಮಾಜದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸನ್ಮಾನ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಚಿತ್ತಾಪುರ ಕೋಲಿ ಸಮಾಜದ […]

Continue Reading

ಹೊಸ ಕಾರು, ಬೈಕ್ ಖರೀದಿಸುವವರಿಗೆ ಸರ್ಕಾರದಿಂದ ಶಾಕ್: ಫೆಬ್ರವರಿಯಿಂದ ರಿಜಿಸ್ಟ್ರೇಷನ್ ದರ ಏರಿಕೆ

ಬೆಂಗಳೂರು: ಮುಂದಿನ ತಿಂಗಳಿನಿಂದ ಹೊಸ ದ್ವಿಚಕ್ರ ವಾಹನ ಹಾಗೂ ಕಾರು ಖರೀದಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಿದೆ. ಕೆಲವೇ ದಿನಗಳಲ್ಲಿ ಸೆಸ್ ಜಾರಿಯಾಗಲಿದ್ದು,ವಾಹನ ಖರೀದಿ ಮೇಲೆ ಮತ್ತಷ್ಟು ಹೊರೆ ಬಿಳಲಿದೆ. ಈಗಾಗಲೇ ಹೊಸ ವರ್ಷದಿಂದ ಅಟೊಮೊಬೈಲ್‌ ಕಂಪನಿಗಳು ತಮ್ಮ ದ್ವಿಚಕ್ರ ವಾಹನ ಮತ್ತು ಕಾರುಗಳ ದರವನ್ನು ಏರಿಕೆ ಮಾಡಿದೆ. ಈಗ ರಾಜ್ಯ ಸರ್ಕಾರ ಕಾರ್ಮಿಕ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರ ವಾಹನ, ಸಾರಿಗೆತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂ. ಮತ್ತು 1,000 […]

Continue Reading

ಬಾಹ್ಯಾಕಾಶದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದ ಇಸ್ರೋ, ಮಹತ್ವಾಕಾಂಕ್ಷೆಯ SpaDeX ಮಿಷನ್ ಸಕ್ಸಸ್

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬಾಹ್ಯಾಕಾಶ ಲೋಕದಲ್ಲಿ ಮತ್ತೊಂದು ಮಹತ್ವದ ಇತಿಹಾಸವನ್ನು ಸೃಷ್ಟಿಸಿದೆ. Spacex ಮಿಷನ್ ಅಡಿಯಲ್ಲಿ ಬಾಹ್ಯಾಕಾಶ ನೌಕೆ ಡಾಕಿಂಗ್ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಇಸ್ರೋದ ಬಾಹ್ಯಾಕಾಶ ನೌಕೆ ಡಾಕಿಂಗ್ ಪ್ರಕ್ರಿಯೆಯು ಯಶಸ್ವಿಯಾಗಿದೆ. ಅಂದರೆ ಇಸ್ರೋ ಎರಡೂ ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಜೋಡಿಸಿದೆ. ಅಮೆರಿಕ, ರಷ್ಯಾ, ಚೀನಾ ನಂತರ ಭಾರತ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು 2025 ರಲ್ಲಿ ಇಸ್ರೋದ ಮೊದಲ ಪ್ರಮುಖ ಯಶಸ್ಸು ಎಂಬುದು ಗಮನಾರ್ಹ. ಈ […]

Continue Reading

ಉದಯಕಾಲ ಸಿಇಒ ಡಿ.ಬಿ ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ ಬಸವರಾಜು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ […]

Continue Reading

ಎಲ್ಲಾ ಹೀರೋಗೂ ಒಂದು ಟೈಮ್‌ಲೈನ್‌ ಇರುತ್ತದೆ: ರಿಟೈರ್‌ಮೆಂಟ್‌ ಬಗ್ಗೆ ಸುದೀಪ್‌ ಮಾತು

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆದ್ದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸುದೀಪ್ ನಿವೃತ್ತಿ ಬಗ್ಗೆ ಮಾತೆತ್ತಿದ್ದಾರೆ. ಎಲ್ಲಾ ಹೀರೋಗೂ ಒಂದು ಟೈಮ್ ಲೈನ್ ಅಂತ ಇರುತ್ತದೆ. ಕೊನೆಗೆ ಅವರು ಬೋರ್ ಆಗಿಬಿಡುತ್ತಾರೆ ಅಂತ ರಿಟೈರ್‌ಮೆಂಟ್ ಬಗ್ಗೆ ಸುದೀಪ್ ಮುಕ್ತವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಸಿನಿಮಾ ಕೆರಿಯರ್ ಬಗ್ಗೆ ಮಾತನಾಡಿದ ಸುದೀಪ್, ಟೆನ್ಶನ್ ಅಂತ ಅಲ್ಲ, ಸುಸ್ತಾಗಬಹುದು. ಆದರೆ ನೀವು ಮಾಡೋದೆಲ್ಲಾ ಕರೆಕ್ಟ್ ಮಾಡಿದ್ರೆ ಎಲ್ಲಿ ಸುಸ್ತಾಗುತ್ತೆ ? ನಮಗೆಲ್ಲರಿಗೂ ವಿಶ್ರಾಂತಿ ಬೇಕು. ಹೊಟ್ಟೆ ಇದೆ ಅಂತಾ ಸಿಕ್ಕಾಪಟ್ಟೆ ತಿನ್ನೊನಲ್ಲ. […]

Continue Reading

ಉತ್ತರ ಕನ್ನಡ ಸಂಸದ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು ನುಗ್ಗಿದ್ದು, ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ. ಈ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಮವಾರ ಮಧ್ಯರಾತ್ರಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹಾಗೂ ಕುಟುಂಬದ ಸದಸ್ಯರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದೆ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದ್ದು, ಮನೆಯ ಮುಂಭಾಗದಲ್ಲಿದ್ದ ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು […]

Continue Reading

ಅಕೌಂಟ್​ಗೆ ಅಚಾನಕ್​ ದುಡ್ಡು ಬಂದರೆ ಕೂಡಲೆ ಬ್ಯಾಲೆನ್ಸ್​ ಚೆಕ್​ ಮಾಡಬೇಡಿ, ಇದು ಹೊಸ ಸ್ಕ್ಯಾಮ್

ಈಗ ಹೊಸ ಹೊಸ ಡಿಟಿಜಲ್​ ಸ್ಕ್ಯಾಮ್​ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಜನರನ್ನು ಮರುಳು ಮಾಡಿ, ಕುಳಿತಲ್ಲಿಯೇ ಅವರಿಗೆ ಟೋಪಿ ಹಾಕಬಹುದು ಎಂದು ತಿಳಿದುಕೊಳ್ಳುವ ದೊಡ್ಡ ಗ್ಯಾಂಗ್​ ಕೆಲಸ ಮಾಡುತ್ತಿದೆ. ಜನರು ಒಂದು ಸ್ಕ್ಯಾಮ್​ ಬಗ್ಗೆ ಹೆಚ್ಚು ಜಾಗೃತರಾಗುತ್ತಿದ್ದಂತೆಯೇ ಮತ್ತೊಂದು ಹೊಸ ಸ್ಕ್ಯಾಮ್​ ತೆರೆದುಕೊಳ್ಳುತ್ತದೆ. ನಿಮ್ಮ ಅರಿವಿಗೆ ಬಾರದೆ ನಿಮ್ಮ ಬ್ಯಾಂಕ್ ಖಾತೆ ಕ್ಷಣಾರ್ಧದಲ್ಲಿ ಖಾಲಿಯಾಗುತ್ತದೆ. ಇದಾಗಲೇ ಅದೆಷ್ಟೋ ರೀತಿಯ ಸೈಬರ್​ ಕ್ರೈಮ್​, ಡಿಜಿಟಲ್​ ಅರೆಸ್ಟ್​ ಸೇರಿದಂತೆ ಅದೆಷ್ಟು ಬಂದಿವೆಯೋ ಲೆಕ್ಕಕ್ಕಿಲ್ಲ. ಈಗ ಹೊಸ ಸೇರ್ಪಡೆ Jumped deposit […]

Continue Reading

ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬೆಳೆಸುವ ಕೆಲಸ ರಾವೂರ ಸಂಸ್ಥೆ ಯಶಸ್ವಿಯಾಗಿ ಮಾಡುತ್ತಿದೆ: ಕೋಟೇಶ್ವರರಾವ

ರಾವೂರ: ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿ ಬೆಳೆಸುವ ಕೆಲಸ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಯಶಸ್ವಿಯಾಗಿ ಮಾಡುತ್ತಿದೆ ಎಂದು ಎಸಿಸಿಯ ಸಿ ಎಸ್ ಆರ್ ಕ್ಲಸ್ಟರ್ ಹೆಡ್ ಕೋಟೇಶ್ವರರಾವ ಹೇಳಿದರು. ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಂಸ್ಕಾರ ಮನೆಯಲ್ಲಿ ಮತ್ತು ಶಾಲೆಗಳಲ್ಲಿ ಸಿಗದೆ ವಿಚಿತ್ರ ಪೀಳಿಗೆ ಹುಟ್ಟುತ್ತಿದೆ. ಸಮಾಜದಲ್ಲಿ ಇಂತಹ ಪೀಳಿಗೆ ಸಮಾಜಘಾತುಕ ಚಟುವಟಿಕೆ ಮಾಡುತ್ತಿವೆ. ಸಂಸ್ಕಾರದ ಕೊರತೆಯಾದಲ್ಲಿ […]

Continue Reading

ಕೌನ್ ಬನೇಗಾ ಕರೋಡ್​ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆಯ ಬಡ ಯುವಕ

ಜ್ಞಾನವೇ ಎಲ್ಲದಕ್ಕಿಂತ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೆ ಕರ್ನಾಟಕದ ಬಾಗಲಕೋಟೆಯವನು. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್​ಜಾನ್ ಮಲಿಕ್ […]

Continue Reading

ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಾತ್ಮಕತೆ ಹೆಚ್ಚಿಸುತ್ತವೆ: ಸಿಸ್ಟರ್ ಸಿಂಪ್ರೋಜ್

ಚಿತ್ತಾಪುರ: ಮಕ್ಕಳಿಗೆ ಶಿಕ್ಷಣದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ. ವಸ್ತು ಪ್ರದರ್ಶನಗಳು ಮಕ್ಕಳಲ್ಲಿರುವ ಸೃಜನಾತ್ಮಕತೆಯನ್ನು ಹೆಚ್ಚಿಸುತ್ತವೆ ಎಂದು ಶಿಶುವಿಹಾರ ಪ್ರಾಥಮಿಕ ಶಾಲೆಯ ಮುಖ್ಯಗುರು ಸಿಸ್ಟರ್ ಸಿಂಪ್ರೋಜ್ ಹೇಳಿದ್ದಾರೆ. ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ನಡೆಯುವ ಘಟನೆಗಳ ಮೂಲಕ ಮಕ್ಕಳು ಅನೇಕ ವಿಷಯಗಳು ಕಲಿಯುತ್ತಾರೆ. ಮಕ್ಕಳಲ್ಲಿ ಅನೇಕ ಪ್ರತಿಭೆ ಇರುತ್ತವೆ. ಅಂತಹ ಪ್ರತಿಭೆಯನ್ನು ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ಶಿಕ್ಷಕರಿಗೆ ಪಾಲಕರು ಪ್ರೋತ್ಸಾಹಿಸುವ ಮೂಲಕ […]

Continue Reading