ಕಲಬುರಗಿ: ನಾಗಾವಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ ಮಲೇಷ್ಯಾ ಕರೆನ್ಸಿ

ಸುದ್ದಿ ಸಂಗ್ರಹ ಚಿತ್ತಾಪುರ ಪಟ್ಟಣದ ಹೊರವಲಯದ ನಾಗಾವಿಯ ಮುಜರಾಯಿ ಇಲಾಖೆಯ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿ ತೆರೆದು ಹಣ ಎಣಿಸುವಾಗ ಮಲೇಷ್ಯಾ ದೇಶದ ಕರೆನ್ಸಿ ಪತ್ತೆಯಾಗಿದೆ. ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಶನಿವಾರ ಹುಂಡಿ ಹಣ ಎಣಿಕೆಯಲ್ಲಿ ಮಲೇಷ್ಯಾದ 18 ನೋಟು ಮತ್ತು 2 ನಾಣ್ಯಗಳು ದೊರೆತಿವೆ. ಒಂದು ರಿಂಗಿತ್‌ಗೆ ಭಾರತದ ರೂ.23.26 ಪೈಸೆ ಮೌಲ್ಯವಾಗುತ್ತದೆ ಎಂದು ಹೇಳಿದ್ದಾರೆ. ಹುಂಡಿಯಲ್ಲಿ 500 ರೂ ಮುಖಬೆಲೆಯ 556 ನೋಟು, 200 ರೂ ಮುಖಬೆಲೆಯ 455 ನೋಟು, 100 ರೂ ಮುಖಬೆಲೆಯ […]

Continue Reading

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಸುದ್ದಿ ಸಂಗ್ರಹ ಕಲಬುರಗಿ ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕಿರಿ ಮಾಡಿದೆ. ಸೌಂಡ್ ಕಡಿಮೆ ಮಾಡುವಂತೆ ಕಿರಿಕ್ […]

Continue Reading

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ: ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

ಸುದ್ದಿ ಸಂಗ್ರಹ ಕೊಪ್ಪಳನೆರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ್ ಸೂಚನೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದು ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೋಳಿ ಫಾರಂ ಮಾಲೀಕರು ಮತ್ತು […]

Continue Reading

ಶಹಾಬಾದ್: ಸರ್ವಜ್ಞ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಸರಳವಾಗಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಲಗೊಳಕರ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವದಾಸ ಜಾಧವ, ಕನಕಪ್ಪ ದಂಡಗುಲಕರ, ಭೀಮಾಶಂಕರ ಕುಂಬಾರ, ಸದಾನಂದ ಕುಂಬಾರ, ಮಹದೇವ ಗೊಬ್ಬೂರಕರ, ರಾಜು ಕುಂಬಾರ, ನಾರಾಯಣ ಕಂದಕೂರ, ಅರುಣ ಪಟ್ಟಣಕರ, ಅನೀಲ ಬೊರಗಾಂವಕರ, ಶಿವಕುಮಾರ ಇಂಗಿನಶೆಟ್ಟಿ, ಬಸವರಾಜ ಬಿರಾದಾರ, ಸಾಬಣ್ಣ ಬೆಳಗುಂಪಿ, ಯಲ್ಲಪ್ಪ ದಂಡಗುಲಕರ, ಭೀಮಯ್ಯ ಗುತ್ತೆದಾರ, ರೇವಣಸಿದ್ದ ಮತ್ತಿಮಡು, […]

Continue Reading

ದಸಂಸ: ತಾಲೂಕು ಸಂಚಾಲಕರಾಗಿ ಸುಭಾಷ ಸಾಕ್ರೆ ನೇಮಕ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಶಹಾಬಾದ ತಾಲೂಕು ಸಂಚಾಲಕರಾಗಿ ಸುಭಾಷ ಸಾಕ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸಂ. ಸಂಚಾಲಕ ಸತೀಶ ಕೋಬಾಳಕರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕದಸಂಸ (ಅಂಬೇಡ್ಕರವಾದ) ತಾಲೂಕು ಸಮಿತಿ ಬಲಗೊಳಿಸುವ ನಿಟ್ಟಿನಲ್ಲಿ ಪದಾದಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದರು. ತಾಲೂಕು ಸಂಘಟನಾ ಸಂಚಾಲಕರಾಗಿ ಮನೋಹರ ಕೋಳೂರ, ಶಿವಶಾಲ ಪಟ್ಟಣಕರ್, ಹುಲಿಗೇಶ ನಾಟೇಕರ, ರಾಣೋಜಿ ಹಾದಿಮನಿ ಶಂಕರವಾಡಿ, ನಾಗರಾಜ ಕರದಳ್ಳಿ ಅಲ್ಲಿದಾಳ, ತುಳಜಾರಾಮ ಬೋಯಿ, ಮಲ್ಲಪ್ಪ […]

Continue Reading

ಜಾತಿ, ಮತಗಳ ಮೇಲೆ ಮೇಲು-ಕೀಳು ಸಲ್ಲದು

ಸುದ್ದಿ ಸಂಗ್ರಹ ಕಲಬುರಗಿ ಜಾತಿ, ಧರ್ಮ, ಭಾಷೆ, ಪ್ರಾಂತ್ಯ, ಲಿಂಗ ಸೇರಿದಂತೆ ಮುಂತಾದ ಅಂಶಗಳ ಮೇಲೆ ಯಾವುದೆ ರೀತಿಯ ತಾರತಮ್ಯ ಮಾಡದೆ ಎಲ್ಲರು ಸರಿಸಮಾನರೆಂದು ಭಾವಿಸಬೇಕು. ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ ದೊಡ್ಡವನಾಗಲು ಸಾಧ್ಯವಿದೆ ಎಂದು ಸಮಾಜ ಸೇವಕ ಸಿದ್ದರಾಮ ತಳವಾರ ಹೇಳಿದರು. ನಗರದ ಗಾಜಿಪೂರ ಬಡಾವಣೆಯ ಶ್ರೀನಿವಾಸ ಸಭಾಂಗಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ’ಯಲ್ಲಿ ಮಾತನಾಡಿದರು. ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ದೇಶದ ಸಂವಿಧಾನ, ಕಾನೂನಿನ […]

Continue Reading

ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ: ಎಲ್ಲೆಡೆ ಗುರುವೈಭವೋತ್ಸವ ಸಂಭ್ರಮ

ಸುದ್ದಿ ಸಂಗ್ರಹ ರಾಯಚೂರು ಮಂತ್ರಾಲಯದಲ್ಲಿ ಗುರುರಾಯರ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದೆ. ಮಠದ ಅಂಗಳದ ಪುಷ್ಕರಣಿಯಲ್ಲಿ ರಾತ್ರಿ ವೇಳೆ ಅದ್ದೂರಿಯಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ರಾಯರ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಪುಷ್ಕರಣಿಯಲ್ಲಿ ಉತ್ಸವ ಮೂರ್ತಿ ಪ್ರಹ್ಲಾದರಾಯರ ಮೆರವಣಿಗೆ ಮಾಡಲಾಯಿತು. ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವದಿಂದ ಮಂತ್ರಾಲಯ ಕಳೆಕಟ್ಟಿದೆ. ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಪ್ರವಚನ, ರಥೋತ್ಸವ ನಡೆಯುತ್ತಿವೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ […]

Continue Reading

ಸಂಸ್ಕಾರ ರೂಪಿಸಲು ಧಾರ್ಮಿಕ ಕಾರ್ಯಕ್ರಮ ಅಗತ್ಯ: ಟೆಂಗಳಿ ಶ್ರೀ

ಸುದ್ದಿ ಸಂಗ್ರಹ ಕಾಳಗಿಮನುಷ್ಯತ್ವ, ಸಂಸ್ಕಾರ ರೂಪಿಸಲು ಶಾಲೆಗಳಿಂದ ಸಾಧ್ಯವಿಲ್ಲ, ಧಾರ್ಮಿಕ ಚಟುವಟಿಕೆಗಳು ಸಹ ಸೌಹಾರ್ದತೆ ಮೂಡಿಸಿ ಬಲವಾದ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿವೆ ಎಂದು ಟೆಂಗಳಿ- ಮಂಗಲಗಿಯ ಶಾಂತೇಶ್ವರ ಹಿರೇಮಠದ ಧರ್ಮಾಧಿಕಾರಿ ಡಾ.ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಬುಧವಾರ ರಾತ್ರಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ, ಶ್ರೀ ಶಾಂತವೀರ ಶಿವಾಚಾರ್ಯರ ದರ್ಶನಂ ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾತೃ ದೇವೋ ಭವ, ಪಿತೃ ದೇವೋ ಭವ, ಗುರು ದೇವೋ ಭವ, […]

Continue Reading

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ: ಸಿಬ್ಬಂದಿ ವಿರುದ್ಧ ಶಂಕೆ

ಸುದ್ದಿ ಸಂಗ್ರಹ ಹಾಸನ ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಕೋಟಿ ಕೋಟಿ ರೂ. ಹಣವನ್ನು ತಾವೆ ಲಪಟಾಯಿಸಿ ಕಂಪನಿಗೆ ಸುಳ್ಳು ಲೆಕ್ಕ ನೀಡಿರುವ ಗಂಭೀರ ಆರೋಪ ಸಿಎಂಎಸ್ ಕಂಪನಿ ವಿರುದ್ಧ ಕೇಳಿ ಬಂದಿದೆ. ಕಂಪನಿಯ ಸಿಬ್ಬಂದಿ ನಂದೀಶ್ ಹಾಗೂ ಮಧು ಎಂಬವರು ಕೋಟ್ಯಂತರ ರೂ. ಹಣ ನುಂಗಿ ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಕಂಪನಿಯ ಅಧಿಕಾರಿಗಳು ಆಡಿಟ್ ಮಾಡಿಸುತ್ತಿದ್ದಾರೆ. ಹಾಸನ ನಗರದ ಗೌರಿಕೊಪ್ಪಲಿನಲ್ಲಿ ಕ್ಯಾಶ್ ಮ್ಯಾನೆಜ್‍ಮೆಂಟ್ ಸರ್ವಿಸಸ್ ಕಚೇರಿಯಿದ್ದು, ಪ್ರತಿನಿತ್ಯ ನಗರದಲ್ಲಿರುವ ಕೆನರಾ ಬ್ಯಾಂಕ್, ಎಸ್‍ಬಿಐ, ಬ್ಯಾಂಕ್ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಜೈ ಘೋಷ ಮೊಳಗಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೇ ರಾಜ್ಯಭಾರ ವಹಿಸಿಕೊಂಡು ವೀರ, ಶೂರ, ತ್ಯಾಗಿಯಾಗಿ ವೈರಿಯ ಎದುರು ಶರಣಾಗದ ಸ್ವಾಭಿಮಾನಿಯಾಗಿ ಮೆರೆದವರು ಛತ್ರಪತಿ ಶಿವಾಜಿ ಮಹಾರಾಜರು ಎಂದರು. ಛತ್ರಪತಿ ಶಿವಾಜಿ ಮಹಾರಾಜರು ಉತ್ತಮ ಆಡಳಿತ ಸುಧಾರಣಾ ನೀತಿಗಳನ್ನು ಜಾರಿಗೊಳಿಸುವ ಮೂಲಕ ಶ್ರೇಷ್ಠ ಆಡಳಿತಗಾರರಾಗಿದ್ದರು. […]

Continue Reading