ಚಿತ್ತಾಪುರ: ಮತದಾರರ ಪಟ್ಟಿ ಪರಿಷ್ಕರಣೆ 100% ಅರ್ಜಿ ವಿತರಣೆ

ಸುದ್ದಿ ಸಂಗ್ರಹ ಚಿತ್ತಾಪುರಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಚಿತ್ತಾಪುರ ಮತಕ್ಷೇತ್ರದ 257 ಮತಗಟ್ಟೆಗಳಲ್ಲಿ ಶೇ.100 ರಷ್ಟು ಅರ್ಜಿ ವಿತರಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ. ಮತಕ್ಷೇತ್ರದ 257 ಮತಗಟ್ಟೆಗಳಲ್ಲಿ ಒಟ್ಟು 2,51,226 ಮತದಾರರಿದ್ದು ಮಂಗಳವಾರದವರೆಗೆ ಎಲ್ಲಾ ಮತದಾರರಿಗೆ ಅರ್ಜಿ ವಿತರಿಸಲಾಗಿದೆ. ನೀಡಿರುವ ಅರ್ಜಿಗಳನ್ನು ಭರ್ತಿ ಮಾಡಿಕೊಟ್ಟಿರುವ ಮತದಾರರ ಅರ್ಜಿಗಳ ಪೈಕಿ ಒಟ್ಟು 94,250 ಅರ್ಜಿಗಳನ್ನು ಡಿಜಿಟಲೈಸ್ ಮಾಡಲಾಗಿದ್ದು ಶೇ.37.52 ರಷ್ಟು ಸಾಧನೆಯಾಗಿದೆ ಎಂದು ಹೇಳಿದ್ದಾರೆ. ಬಿಎಲ್ಒಗಳು ತಮಗೆ ವಹಿಸಿರುವ ಮತಗಟ್ಟೆ […]

Continue Reading

ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡೇಟು, ಬಂಧನ

ಸುದ್ದಿ ಸಂಗ್ರಹ ಕಲಬುರಗಿನಗರದ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷೆಗೊಳಗಾದ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬೆಳಗ್ಗೆ ಪತ್ತೆಹಚ್ಚಿದ್ದು, ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ‌ ದಾಳಿ ಮಾಡಿದ್ದರಿಂದ ಖಾಕಿಪಡೆವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಸಂತೋಷ ಮೇತ್ರೆ ಗುಂಡೇಟು ತಿಂದು ಗಾಯಗೊಂಡಿದ್ದು, ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ಔರಾದ ತಾಲೂಕಿನ ಸಂತಪುರ ಗ್ರಾಮದವ. ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಈ ಕುರಿತು ನಗರ ಪೊಲೀಸ್ […]

Continue Reading

ಕಲಬುರಗಿ ಸೆಂಟ್ರಲ್ ‌ಜೈಲಿನಿಂದ‌ ಕೈದಿಗಳು ಪರಾರಿ: ಪತ್ತೆಗೆ ಮೂರು ತಂಡ ರಚನೆ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಸೆಂಟ್ರಲ್ ಜೈಲಿನಿಂದ ಮಂಗಳವಾರ ನಸುಕಿನಲ್ಲಿ ಪರಾರಿಯಾಗಿರುವ ಮೂವರು ಅಪರಾಧಿಗಳ ಪತ್ತೆಗೆ ಮೂರು ತಂಡಗಳು ರಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್‌ ಕಮಿಷನರ್ ಶರಣಪ್ಪ ಎಸ್‌.ಡಿ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 4.30ರ ಹೊತ್ತಿಗೆ ಕೈದಿಗಳು ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಮೂವರು ಬೇರೆ–ಬೇರೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಅವರ ಪತ್ತೆಗೆ ಕಾನೂನು ಮತ್ತು ಸುವವಸ್ಥೆ ವಿಭಾಗದ ಡಿಸಿಪಿ ಶಾಲೂ ನೇತೃತ್ವದಲ್ಲಿ ಮೂವರು ಎಸಿಪಿಗಳ ನೇತೃತ್ವದ […]

Continue Reading

ಮನೆ ಮನೆಗೆ ಹೋಗದೆ ಒಂದೆ ಕಡೆ ಕುಳಿತು SIR ಪ್ರಕ್ರಿಯೆ: BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸುದ್ದಿ ಸಂಗ್ರಹ ಚಿಕ್ಕೋಡಿಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೆ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ. ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದ […]

Continue Reading

ಕಲಬುರಗಿ: ಸೆಂಟ್ರಲ್ ‌ಜೈಲಿನಿಂದ‌ ಮೂವರು ಸಜಾ‌ ಕೈದಿಗಳು ಪರಾರಿ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಮಂಗಳವಾರ ನಸುಕಿ‌ನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಮಸ್ತಾನ್, ಸಂತೋಷ್ ಮತ್ತು ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. […]

Continue Reading

ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ: ಶೇ.92 ರಷ್ಟು ಮತದಾನ

ಸುದ್ದಿ ಸಂಗ್ರಹ ಶಹಾಬಾದ್ ಪ್ರಜಾಪ್ರಭುತ್ವದ ನಿಜವಾದ ಆಶಯ ಈಡೇರುವುದು ಉತ್ತಮ ನಾಯಕರ ಆಯ್ಕೆ ಪಾರದರ್ಶಕ ಚುನಾವಣೆ ಅವಲಂಬಿಸಿದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷ ಕೆ ರಮೇಶ ಭಟ್ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಆಮಿಷದ ಮತದಾನ ಪ್ರಜಾಪ್ರಭುತ್ವದ ಆಶಯಗಳನ್ನು ಹಾಳುಮಾಡುತ್ತವೆ. ಆದ್ದರಿಂದ ಯಾವುದೆ ಚುನಾವಣೆಯಲ್ಲಿ ಯಾವುದೆ ಆಸೆ- ಆಮಿಷಕ್ಕೆ […]

Continue Reading

ಡಿವೈಎಸ್ಪಿ ಶಂಕರಗೌಡರಿಗೆ ಪಿತೃ ವಿಯೋಗ

ಸುದ್ದಿ ಸಂಗ್ರಹ ಕಲಬುರಗಿ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ರಾಮಗೇರಿ ನಿವಾಸಿ, ಶಿಕ್ಷಣ ಪ್ರೇಮಿ, ಭೂ ದಾನಿಯಾಗಿದ್ದ ವೀರನಗೌಡ ಪಾಟೀಲ (84) ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನಿಧನ ಹೊಂದಿರುವ ದಿವ್ಯಚೇತನರಾದ ವೀರಗೌಡರಿಗೆ ಪತ್ನಿ, ಪುತ್ರರಾದ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್‌ ಮತ್ತು ಪುತ್ರಿ ಇದ್ದಾರೆ.‌ ವೀರನಗೌಡರು ಶಿಕ್ಷಣದ ಬಗ್ಗೆ ಅಪಾರವಾದ ಗೌರವ ಹೊಂದಿದ್ದು ಇವರನ್ನು ಶಿಕ್ಷಣ ಪ್ರೇಮಿ ಎಂದೆ ಗುರುತಿಸಿಕೊಂಡಿದ್ದಾರೆ. ಇವರ ಪುತ್ರ ಡಿವೈಎಸ್ಪಿ ಶಂಕರಗೌಡ ಪಾಟೀಲರು ಸಹ ತಂದೆಯಂತೆ ಸ್ನೇಹಮಯಿ ಹಾಗೂ ಮಾನವೀಯತೆಗೆ ಹೆಸರುವಾಸಿಯಾಗಿದ್ದಾರೆ. […]

Continue Reading

ಗಿನ್ನೀಸ್ ದಾಖಲೆಗಾಗಿ 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಕೊಟ್ಟ ತಾತ: ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ FIR

ಸುದ್ದಿ ಸಂಗ್ರಹ ಹೈದರಾಬಾದ್ಗಿನ್ನೀಸ್ ದಾಖಲೆ ನಿರ್ಮಿಸಲು 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟಿದ್ದ ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವಾರ ಜು.12 ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಶ್ವದ ಅತ್ಯಂತ ಕಿರಿಯ ಚಾಲಕಿ ಎಂಬ ಗಿನ್ನೀಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್‌ ಪೂಜಾರಿ ತಿರುಪತಿ ಅವರು ಜನಸಂದಣಿಯುಳ್ಳ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮ ಮಗುವನ್ನು ಕಾರಿನ ಸ್ಟೈರಿಂಗ್ ಮುಂದೆ ಕೂರಿಸಿಕೊಂಡು […]

Continue Reading

ಬಸ್‌ ನಿಲುಗಡೆಗೆ ಆಗ್ರಹಿಸಿ ಇಂದು ರಸ್ತೆ ತಡೆ

ಸುದ್ದಿ ಸಂಗ್ರಹ ಶಹಾಬಾದ್‌ ಶಹಾಬಾದ್‌ ಮಾರ್ಗವಾಗಿ ಸಂಚರಿಸುವ ಚಿತ್ತಾಪುರ, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿಗೆ ತೆರಳುವ ಬಸ್‌ಗಳನ್ನು ಶಹಾಬಾದ್ ವಾಡಿ ಕ್ರಾಸ್ ಬಳಿ ನಿಲುಗಡೆ ಮಾಡಲು ಆಗ್ರಹಿಸಿ ಜುಲೈ 13 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಯಾದಗಿರಿ-ಕಲಬುರಗಿ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸ್ಥಳೀಯ ಸಮಿತಿ ಸದಸ್ಯ ಜಗನ್ನಾಥ ಎಸ್‌.ಎಚ್ ತಿಳಿಸಿದ್ದಾರೆ. ಹಲವು ಬಾರಿ ಕೆಎಸ್‌ಆರ್‌ಟಿಸಿ ಜಿಲ್ಲಾ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ […]

Continue Reading

ಜು.14 ರಂದು ನಾಲವಾರದಲ್ಲಿ ತನಾರತಿ ವೈಭವ: ಆರಾಧ್ಯ ಗುರುವಿಗೆ ಹರಕೆ ಅರ್ಪಿಸಲಿರುವ ಭಕ್ತಸಾಗರ

ಸುದ್ದಿ ಸಂಗ್ರಹ ಚಿತ್ತಾಪುರ ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀಕ್ಷೇತ್ರ ನಾಲವಾರದಲ್ಲಿ ತಮ್ಮ ಹರಕೆ ಪೂರೈಸಿದರೆ ಪ್ರತೀಕವಾಗಿ ನೆರವೇರುವ ತನಾರತಿ ಸೇವೆಯನ್ನು ಆರಾಧ್ಯ ಸದ್ಗುರುವಿಗೆ ಸಲ್ಲಿಸುವ ವಿಶಿಷ್ಟ ಉತ್ಸವ ಮಂಗಳವಾರ ಮಧ್ಯರಾತ್ರಿ ಸಂಭ್ರಮದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹದೇವ ಗಂವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪೀಠಾಧಿಪತಿ ಪರಮಪೂಜ್ಯ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ವೈಭವದಿಂದ ಶ್ರದ್ಧೆ ಭಕ್ತಿಯ ಮಧ್ಯೆ […]

Continue Reading