ವಿದೇಶದಲ್ಲೆ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

ಸುದ್ದಿ ಸಂಗ್ರಹ ಮಂಗಳೂರು ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದ್ವೆಯಾಗಿ ನಂಬಿಸಿ ಹಣ ವಂಚಿಸಿದ್ದ ಪ್ರಕರಣ ಮಾಸುವ ಮುನ್ನವೆ ಮತ್ತೊಬ್ಬ ʻಮಂಗಳೂರು ಮನ್ಮಥʼನ ಪ್ರಕರಣ ಬೆಳಕಿಗೆ ಬಂದಿದೆ. ಈತ ವಿದೇಶದಲ್ಲೆ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಎನ್ನುವುದು ಗೊತ್ತಾಗಿದೆ. ಗಂಡನ ಪ್ರೀತಿ, ಪ್ರೇಮ, ಪ್ರಣಯದಾಟವನ್ನು ಸ್ವತಃ ಪತ್ನಿಯೆ ಬಟಾಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರೀತಿಯನ್ನು ಪ್ರೀತಿಸಿ ಮದ್ವೆಯಾಗಿದ್ದು ಹೇಗೆ ?ಸಂತ್ರಸ್ತೆ ಪ್ರೀತಿ ಎಂಬಾಕೆಗೆ […]

Continue Reading

ಗದಗ: ಶಿವರಾತ್ರಿಯಂದೆ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಸುದ್ದಿ ಸಂಗ್ರಹ ಗದಗ ನಾಡಿನೆಲ್ಲಡೆ ಮಹಾ ಶಿವರಾತ್ರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಶಿವನ ಆರಾಧನೆ ದಿನವೆ ದುಷ್ಕರ್ಮಿಗಳು ಶಿವಲಿಂಗ ಹಾಗೂ ನಂದಿ ವಿಗ್ರಹ ಭಗ್ನಗೊಳಿಸಿದ ಘಟನೆ ಮುಂಡರಗಿ ತಾಲೂಕಿನ ಶಿಂಗಟಾಲೂರ ಬಳಿ ನಡೆದಿದೆ. ಗ್ರಾಮದ ಹೊರವಲಯದ ಶ್ರೀ ರಾಮಲಿಂಗೇಶ್ವರ, ನಂದಿ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ದುಷ್ಕೃತ್ಯ ಮೆರೆದಿದ್ದಾರೆ. ಮಹಾ ಶಿವರಾತ್ರಿ ಹಿನ್ನೆಲೆ ಗ್ರಾಮಸ್ಥರು ಶನಿವಾರ ದೇವಸ್ಥಾನಕ್ಕೆ ಸುಣ್ಣ, ಬಣ್ಣ ಹಚ್ಚಿ ಬಂದಿದ್ದರು. ಬೆಳಿಗ್ಗೆ ಪೂಜೆಗೆ ತೆರಳಿದಾಗ ಮೂರ್ತಿ ಭಗ್ನವಾಗಿರುವ ವಿಷಯ ಬೆಳಕಿಗೆ ಬಂದಿದೆ. […]

Continue Reading

ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನದ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವ ನೇಮಕ

ಸುದ್ದಿ ಸಂಗ್ರಹ ಕಲಬುರಗಿಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸರ್ಕಾರಿ ಶಾಲೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನ’ ಸಂಘಟನೆಯ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ ಹೇಳಿದರು. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಮಗೆ ವಹಿಸಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ, ತಾಲೂಕಿನಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸಬೇಕು. ವಿದ್ಯಾರ್ಥಿಗಳಿಗೆ ಅಭಿಯಾನದ ಉದ್ದೇಶ ತಿಳಿಸಿ, ಕನ್ನಡ ವಿಷಯದಲ್ಲಿ 100ಕ್ಕೆ 100ರಷ್ಟು […]

Continue Reading

ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ: ಜೇಮಸಿಂಗ್ ಮಹಾರಾಜ

ಸುದ್ದಿ ಸಂಗ್ರಹ ಶಹಾಬಾದ್ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮಳ ಜೀವನ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದು ಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಹೇಳಿದರು. ತಾಲೂಕಿನ ಮಹಾನಗರ ಯಲ್ಲಾಲಿಂಗ ಪುಣ್ಯಾಶ್ರಮದಲ್ಲಿ 35ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ರ ಪುರಾಣ ಪ್ರವಚನ ಶ್ರೀಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸದ್ಗುರುಗಳ ಕೃಪೆಯಿಂದ ಭಕ್ತಿ ಮತ್ತು ಧರ್ಮದ ಹಾದಿಯಲ್ಲಿ ನಡೆಯುವುದು ಜೀವನದ ಮುಖ್ಯ ಉದ್ದೇಶವಾಗಬೇಕು ಎಂದರು. […]

Continue Reading

ಕರಾಳ ಲೇಬರ್ ಕೋಡ್ ಹಿಂಪಡೆಯಲು ಕಾರ್ಮಿಕರಿಂದ ಬೃಹತ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ಕಾರ್ಮಿಕ ವಿರೋಧಿ ಕರಾಳ ಕಾರ್ಮಿಕ ಸಹಿತೆ ಲೇಬರ್ ಕೋಡ್ ದುಡಿಯುವ ವರ್ಗದ ಮರಣ ಶಾಸನವಾಗಿವೆ ಕೂಡಲೆ ಕೇಂದ್ರ ಸರ್ಕಾರ ಇದನ್ನು ವಾಪಸ್ಸು ಪಡೆಯಬೇಕೆಂದು ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ‌.ಜಿ ಆಗ್ರಹಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕೂಲಿ ಕಾರ್ಮಿಕರು ಮತ್ತು ಕಾರ್ಮಿಕರ ಕಾಯ್ದೆಗಳಾದ ವಿದ್ಯುತ್ ಕಾಯ್ದೆ ತಿದ್ದುಪಡಿ, ಬೀಜ ಕಾಯ್ದೆ, ಭೂಸ್ವಾಧೀನ ಕಾಯ್ದೆ […]

Continue Reading

ಸೇವಾಲಾಲ್ ಜಯಂತಿ ಆಚರಣೆಗೆ ನಿರ್ಧಾರ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದಲ್ಲಿ ಫೆ.15ರಂದು ತಾಲೂಕು ಆಡಳಿತದಿಂದ ಆಯೋಜನೆ ಮಾಡಿರುವ ಬಂಜಾರ ಸಮಾಜದ ಕುಲಗುರು ಸಂತ ಸೇವಾಲಾಲ್ ಮಹಾರಾಜರ 287 ಜಯಂತಿ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಪಾಲ್ಗೊಂಡು ಸಡಗರ, ಸಂಭ್ರಮದಿಂದ ಆಚರಣೆ ಮಾಡಬೇಕು ಎಂದು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲ ರಾಠೋಡ ಹೇಳಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತ ಕೇಂದ್ರ ಪ್ರಜಾಸೌಧ ಅವರಣದಲ್ಲಿ ಬೆಳಗ್ಗೆ 10 ಗಂಟೆಗೆ ಸೇವಾಲಾಲ್ ಮಹಾರಾಜರ ಭಾವಚಿತ್ರದ ಪೂಜೆ ಮತ್ತು ವೇದಿಕೆ […]

Continue Reading

ಹೊಸ ಜಿಲ್ಲೆ ವಿಜಯನಗರ ಪ್ರಗತಿಗೆ 394 ಕೋಟಿ ರೂ. ಒದಗಿಸಿ

ಸುದ್ದಿ ಸಂಗ್ರಹ ಹಂಪಿ ವಿಜಯನಗರವು ನೂತನ ಜಿಲ್ಲೆಯಾಗಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಮುಂಬರುವ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಮೀಸಲಿಡಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಒತ್ತಾಯಿಸಿದರು. ಶುಕ್ರವಾರ ರಾತ್ರಿ ಹಂಪಿ ಉತ್ಸವದ ಮೊದಲ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಕಳೆದ 3 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಈ ಉತ್ಸವ ಆಚರಿಸಲಾಗುತ್ತಿದೆ. ಹಿಂದೆ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ […]

Continue Reading

ಫೆ.15 ರಂದು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ, ಸಂಗೀತೋತ್ಸವ

ಸುದ್ದಿ ಸಂಗ್ರಹ ಕಲಬುರಗಿಶಿವರಾತ್ರಿ ನಿಮಿತ್ಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಫೆ.15 ರಂದು ದೀಪೋತ್ಸವ ಮತ್ತು ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ವತಿಯಿಂದ ಫೆಬ್ರವರಿ 15ರಂದು ಸಂಜೆ 6 ಗಂಟೆಗೆ ದೀಪೋತ್ಸವ ಹಾಗೂ ಜನಪದ, ತತ್ವಪದಗಳ ಸಂಗೀತೋತ್ಸವ ಮತ್ತು ಅಂತ್ಯಾಕ್ಷರಿ ವಿಶೇಷ ಕಾರ್ಯಕ್ರಮ ಜರುಗುವುದು ಎಂದರು. ದೀಪೋತ್ಸವ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ ಅಲಂಖಾನ್ ಮತ್ತು […]

Continue Reading

ಪುಣ್ಯ ಆತ ನನಗೆ ತಾಳಿ ಕಟ್ಟಲಿಲ್ಲ, ಅವನಿಂದ ಅವಕಾಶಗಳೆ ಹೋಯಿತು: ಅಣ್ಣಯ್ಯ ನಟಿಯಿಂದ ಶಾಕಿಂಗ್ ಹೇಳಿಕೆ

ಸುದ್ದಿ ಸಂಗ್ರಹ ಮುಂಬೈ ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್​ ವಿ ರವಿಚಂದ್ರನ್​ ಅಭಿನಯದ ಸೂಪರ್​ಹಿಟ್​ ಚಿತ್ರ ಅಣ್ಣಯ್ಯ ಬಹುತೇಕರಿಗೆ ಗೊತ್ತೆಯಿದೆ. ಸಿನಿಮಾದಲ್ಲಿ ರವಿಚಂದ್ರನ್ ಪಾತ್ರಕ್ಕಿಂತ ಹೆಚ್ಚಾಗಿ​ ಅವರ ತಾಯಿಯ ಪಾತ್ರದಲ್ಲಿ ಮಿಂಚಿದ ನಟಿಯನ್ನೆ ಹಲವರು ಬಹುಬೇಗನೆ ನೆನಪಿಸಿಕೊಳ್ಳುತ್ತಾರೆ. ಕಾರಣ ಆ ಮಟ್ಟಿಗಿನ ಅಮೋಘ ಅಭಿನಯ. ನಾಗವೇಣಿ ಪಾತ್ರದಲ್ಲಿ ವಿಷಕಾರಿ ಹೆಣ್ಣಾಗಿ ನಟಿಸುವ ಮೂಲಕ ಇಂದಿಗೂ ಕನ್ನಡ ಸಿನಿಪ್ರಿಯರ ನೆನಪಿನಲ್ಲಿ ಉಳಿದಿರುವ ಬಾಲಿವುಡ್​ನ ಹಿರಿಯ ನಟಿ ಅರುಣಾ ಇರಾನಿ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಕೆಲವು ಅಚ್ಚರಿ ಸಂಗತಿ ಬಿಚ್ಚಿಟ್ಟಿದ್ದಾರೆ. […]

Continue Reading

ಟೆಂಗಳಿ: ಮನೆ-ಮನೆಗೆ ಪೊಲೀಸ್‌ ಕಾರ್ಯಕ್ರಮ

ಸುದ್ದಿ ಸಂಗ್ರಹ ಕಾಳಗಿ ಮನೆ ಮನೆಗೆ ಪೊಲೀಸ್ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಜನರ ಸಮಸ್ಯೆಗಳು ತಾಳ್ಮೆಯಿಂದ ಆಲಿಸಿ ಸ್ಪಂದಿಸಲು ಪೊಲೀಸರಿಗೆ ನೆರವಾಗಲಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಾಳಗಿ ಪೊಲೀಸ್ ಠಾಣೆಯಿಂದ ಮಂಗಳವಾರ ಏರ್ಪಡಿಸಿದ್ದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯಿಂದ ಜನರಲ್ಲಿ ಸುರಕ್ಷತಾ ಭಾವ ಸೃಷ್ಟಿಯಾಗುತ್ತದೆ ಎಂದರು. ಸಿಪಿಐ ಜಗದೇವಪ್ಪ ಪಾಳಾ ಮಾತನಾಡಿ, ಪೊಲೀಸರು […]

Continue Reading