ಲಂಚ ಪಡೆದ ಗ್ರಾ.ಪಂ ಕರವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಬಲೆಗೆ

ಸುದ್ದಿ ಸಂಗ್ರಹ ಚಿತ್ತಾಪುರ ಯುಪಿಐ ಮೂಲಕ ಲಂಚ ಪಡೆದ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕರದಾಳ ಪಂಚಾಯಿತಿ ವ್ಯಾಪ್ತಿಯ ಹನ್ನಿಕೇರಿ ಗ್ರಾಮದ ರಾಮನಾಯಕ ತಾಂಡಾ ನಿವಾಸಿ ಸವಿತಾ ಎಂಬುವವರಿಗೆ ಸರ್ಕಾರ ಡಾ. ಬಿ.ಆರ್‌ ಅಂಬೇಡ್ಕರ್‌ ನಿವಾಸ ಯೋಜನೆಯಡಿಯ ಮನೆ ಮಂಜೂರು ಮಾಡಿತ್ತು. ಆ ಮನೆ ಕಟ್ಟಡದ 3 ಹಾಗೂ 4ನೇ ಕಂತಿನ ಹಣ ಬಿಡುಗಡೆಗೆ ಬಿಲ್‌ ಕಲೆಕ್ಟರ್‌ ಸಂತೋಷ 22 ಸಾವಿರ ಲಂಚಕ್ಕೆ ಬೇಡಿಕೆ […]

Continue Reading

ಶರಣಬಸವೇಶ್ವರ ದೇವಸ್ಥಾನ, ಕೆಬಿಎನ್ ದರ್ಗಾ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಕಲಬುರಗಿಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಈ ಭಾಗದ ಸೌಹಾರ್ದ ಪರಂಪರೆಯ ಎರಡು ಕಣ್ಣುಗಳಂತಿರುವ ಶರಣಬಸವೇಶ್ವರರ ‌ದೇವಸ್ಥಾನ ಹಾಗೂ ಸೂಫಿ ಸಂತ ಖಾಜಾ ಬಂದಾನವಾಜ್ ದರ್ಗಾಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಗರದ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ‌ಸಾರ್ವಜನಿಕರ ಅಹವಾಲು ಆಲಿಸಿದ ಮುಖ್ಯಮಂತ್ರಿ ‌ಶಿವಕುಮಾರ್, ಮೊದಲಿಗೆ ವೈದ್ಯಕೀಯ ‌ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರ ಮನೆಗೆ ಸೌಜನ್ಯಯುತ ಭೇಟಿ ನೀಡಿದರು. ಅಲ್ಲಿಯೆ ಉಪಾಹಾರ ಸ್ವೀಕರಿಸಿದರು. ನಂತರ ಈ ಭಾಗದ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ […]

Continue Reading

ಪೊಲೀಸ್ ವಾಹನದಲ್ಲಿ ಶೂಟ್‌: ಕಲಬುರಗಿ ಪೇದೆ ಆತ್ಮಹತ್ಯೆ

ಸುದ್ದಿ ಸಂಗ್ರಹ ಕಲಬುರಗಿನಗರದ ಹೃದಯಭಾಗವಾದ ಜಗತ್ ವೃತ್ತದಲ್ಲಿ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆ ಸಂಭವಿಸಿದೆ. ಕರ್ತವ್ಯ ನಿರತರಾಗಿದ್ದ ಪೊಲೀಸ್ ಪೇದೆಯೊಬ್ಬರು ತಮಗೆ ನೀಡಲಾಗಿದ್ದ ಸರ್ಕಾರಿ ರೈಫಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.‌ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೆ ಶಿವಕುಮಾರ್ ರಾತ್ರಿ 9 ಗಂಟೆಗೆ ಪೊಲೀಸ್ ವಾಹನದಲ್ಲಿ ಕುಳಿತಿದ್ದಾಗ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್’ನಿಂದ ಶೂಟ್ ಮಾಡಿಕೊಂಡಿದ್ದಾರೆ. ಗುಂಡಿನ […]

Continue Reading

ಗುಳೆ ತಡೆದು ಊರಿನಲ್ಲೆ ಜನಕ್ಕೆ ಉದ್ಯೋಗ ನೀಡಲು ಕ್ರಮವಹಿಸಿ: ಡಿಸಿಎಂ ಪರಮೇಶ್ವರ

ಸುದ್ದಿ ಸಂಗ್ರಹ ಕಲಬುರಗಿಸೂಪರ್ ಎಲ್‌ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ‌ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಸಭಾಂಗಣದ‌ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, […]

Continue Reading

ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ: ಸಿಎಂ ಡಿಕೆಶಿ ಎಚ್ಚರಿಕೆ

ಸುದ್ದಿ ಸಂಗ್ರಹ ಕಲಬುರಗಿರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಸಿದರು. ನಗರದ ಹೊರ‌ ವಲಯದ ಗುಲಬರ್ಗಾ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ‌ಸಭಾಂಗಣದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಬರ ಸನ್ನದ್ಧತೆ ಕುರಿತು ಅಧಿಕಾರಿಗಳ ‌ಸಭೆ ನಡೆಸಿ ಮಾತನಾಡಿದ ಅವರು, ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. […]

Continue Reading

ನಾಲವಾರ ಗ್ರಾಮಕ್ಕೆ ಹೊರಟಿದ್ದಾಗ ಹಲಕರ್ಟಿ ಬಳಿ ಕಂದಕಕ್ಕೆ ಉರುಳಿದ KKRTC ಬಸ್

ಸುದ್ದಿ ಸಂಗ್ರಹ ವಾಡಿ ಚಾಲಕನ ನಿಯಂತ್ರಣ ತಪ್ಪಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (KKRTC)ಯ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಹಲಕರ್ಟಿ ಸಮೀಪ ಸಂಭವಿಸಿದೆ. ಕಲಬುರ್ಗಿಯಿಂದ ವಾಡಿ ಮಾರ್ಗವಾಗಿ ನಾಲವಾರ ಗ್ರಾಮಕ್ಕೆ ಹೊರಟಿದ್ದ KKRTC ಬಸ್ ಅಪಘಾತಕ್ಕಿಡಾಗಿದೆ. ಬಲರಾಮ ಚೌಕ್ ಮಾರ್ಗದ ಫ್ಲೈಓವರ್ ಹತ್ತಿರದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ, ಪಕ್ಕದ ನಾಲೆಗೆ ಜಾರಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, […]

Continue Reading

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಸುದ್ದಿ ಸಂಗ್ರಹ ಶಿವಮೊಗ್ಗಎಸ್‌ಐಆರ್‌ ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಗ್ರಾಮ ಆಡಳಿತ […]

Continue Reading

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ: ಮೂವರು ಕಳ್ಳಿಯರ ಬಂಧನ

ಸುದ್ದಿ ಸಂಗ್ರಹ ಉಡುಪಿಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೆ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ […]

Continue Reading

ರಾಷ್ಟ್ರೀಯತೆಯ ಆದರ್ಶಗಳು ಅಜರಾಮರ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ರಾಷ್ಟ್ರಕ್ಕಾಗಿ ನಿಸ್ವಾರ್ಥ ಸೇವೆಯೇ ತನ್ನ ಧ್ಯೇಯವಾಗಿರಿಸಿಕೊಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಆದರ್ಶಗಳು ದೇಶ ಭಕ್ತರ ಮನದಲ್ಲಿ ಎಂದೆಂದಿಗೂ ಅಜಾರಾಮರ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ 125ನೇಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ದಿನದಂದು ದೇಶಕ್ಕಾಗಿ ಅವರು ಮಾಡಿರುವ ತ್ಯಾಗ ಮತ್ತು ರಾಷ್ಟ್ರದ ಏಕತೆಗಾಗಿ ಅವರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ […]

Continue Reading

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ: ಕೆಕೆಆರ್‌ಟಿಸಿಯ ಚಾಲಕ ಮತ್ತು ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಮಂದವಾಗಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿ ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಘಟನೆ ಗಂಭೀರವಾಗಿ ಪರಿಗಣಿಸಿ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್ ಚಾಲಕ ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಬಸ್‌ನ ಹೆಡ್‌ಲೈಟ್ ಸರಿಯಾಗಿ ದೀಪ ಹೊರಸೂಸುತ್ತಿರಲಿಲ್ಲ. ಹೀಗಾಗಿ ಬಸ್ ನಿರ್ವಾಹಕ ಮತ್ತು ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಿಂಚೋಳಿ ತಲುಪಿತ್ತು. […]

Continue Reading