ಕಲಬುರಗಿ: ಹಗಲು ಕಬ್ಬು ಕಟಾವು, ರಾತ್ರಿ ಮನೆ ಕಳವು

ಸುದ್ದಿ ಸಂಗ್ರಹ ಕಲಬುರಗಿಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎಂ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 4 ಪ್ರಕರಣಗಳಿಗೆ ಸಂಬಂಧಿಸಿದ 67 ಗ್ರಾಂ ಚಿನ್ನಾಭರ ಮತ್ತು 12.14 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಅಳಂದ ತಾಲೂಕಿನ ಕಮಸರ ನಾಯಕ ತಾಂಡಾದ ಅಪ್ಪಾಜಿಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22), ಶಕಾಪುರತಾಂಡಾದ ಸಂತೋಷ ಅಲಿಯಾಸ್ ಅಂತಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ […]

Continue Reading

ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರ ಮಹಿಳೆಯೊಬ್ಬಳು ತನ್ನ ಗಂಡ ಬದುಕಿದ್ದರೂ ಸತ್ತು ಹೋಗಿದ್ದಾನೆ ಎಂದು ಮತ್ತೆರೆಡು ಮದುವೆಯಾಗಿರುವುದು ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಮಹಿಳೆ 11 ವರ್ಷದ ಹಿಂದೆ ವೀರೇಗೌಡ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಬಳಿಕ ಎರಡು ಮಕ್ಕಳಾದ ಮೇಲೆ ಗಂಡ ಸತ್ತು ಹೋಗಿದ್ದಾನೆ ಎಂದು ಹೇಳಿಕೊಂಡು, ಒಂದುವರೆ ವರ್ಷದ ಹಿಂದೆ ಡೆಲಿವರಿ ಬಾಯ್‌ ಆಗಿದ್ದ ಅನಂತ್ ಎಂಬವರನ್ನು ಮದುವೆಯಾಗಿದ್ದಳು. ಅವರ ಬಳಿ 24 ಲಕ್ಷ ರೂ. ಹಣ ಪಡೆದು ಈಗ ಕನಕಪುರ ಮೂಲದ ಮತ್ತೊಬ್ಬನ ಜೊತೆ ಮದುವೆಯಾಗಿದ್ದಾಳೆ […]

Continue Reading

ಅಪಘಾತ: ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ಸಾವು

ಸುದ್ದಿ ಸಂಗ್ರಹ ಕಲಬುರಗಿ ನಗರದ ಹೊಸ ಆರ್’ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದೇ ಇಂದು ನಿಧನರಾದರು. ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು. ವಿದ್ಯಾರ್ಥಿ ಚಳವಳಿಯಲ್ಲಿ ಭಾಗವಹಿಸಿದ್ದ ಶರಣಪ್ಪ ಸೈದಾಪುರ ಅವರು ನಂತರ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಅಧ್ಯಾಪಕರ […]

Continue Reading

ವಿದ್ಯಾರ್ಥಿ ದಿಸೆಯಿಂದಲೇ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ‌ ರಾಜಕೀಯ, ಆಧ್ಯಾತ್ಮಿಕ, ಶೈಕ್ಷಣಿಕ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

‘ಕನ್ನಡ ಶಾಲೆ ಉಳಿಸಿ-ಬೆಳೆಸಿ‌’ ಅಭಿಯಾನದ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ

ಸುದ್ದಿ ಸಂಗ್ರಹ ಚಿತ್ತಾಪುರನಾಡು ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ “ಕನ್ನಡ ಶಾಲೆ ಉಳಿಸಿ– ಬೆಳೆಸಿ” ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಲಬುರ್ಗಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ವಿ ಇವಣಿ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದೊಂದಿಗೆ ಈ ಅಭಿಯಾನ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು, ಹಿರಿಯರು ಮತ್ತು ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ […]

Continue Reading

ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಎಸ್ಕೇಪ್‌ ಆದ ಮನೆ ಕೆಲಸದವರು

ಸುದ್ದಿ ಸಂಗ್ರಹ ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಬೆಳ್ಳಿ ಆಭರಣಗಳು ದೋಚಿ ನೇಪಾಳ ದಂಪತಿ ಪರಾರಿಯಾಗಿರುವ ಘಟನೆ ಮಾರತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಯಮಲೂರಿನ ಉದ್ಯಮಿ ಶಿಮಂತ್‌ ಎಸ್‌. ಜೈನ್‌ ನೀಡಿದ ದೂರಿನ ಅನ್ವಯ ದಿನೇಶ್‌ (32), ಆತನ ಪತ್ನಿ ಕಮಲಾ (25) ಮತ್ತು ಇತರರ ವಿರುದ್ಧ ಮನೆಯಲ್ಲಿ ಕೆಲಸ ಮಾಡುವ ನೌಕರ ಕಳ್ಳತನದಲ್ಲಿಭಾಗಿ (ಬಿಎನ್‌ಎಸ್‌ ಕಲಂ 306) ಅನ್ವಯ ಪ್ರಕರಣ […]

Continue Reading

ಮಾಡಬೂಳ, ಗುಂಡಗುರ್ತಿ ಪರೀಕ್ಷಾ ಕೇಂದ್ರಕ್ಕೆ ಹೆಚ್ಚುವರಿ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ, ಪರಿಶೀಲನೆ

ಸುದ್ದಿ ಸಂಗ್ರಹ ಚಿತ್ತಾಪುರಮಾಡಬೂಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ರಾಹುಲ್ ತುಕಾರಾಮ್ ಪಾಂಡ್ವೆ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ-2 ಪರಿಶೀಲಿಸಿದರು. ಪರೀಕ್ಷೆಗಿಂತ ಮೊದಲ ದಿನವಾಗಿದ್ದ ಈ ದಿನ ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದರು. ಈ ಕೊಠಡಿಯನ್ನು ಪರಿಶೀಲಿಸಿ, ಪರೀಕ್ಷೆ-1ರ ಫಲಿತಾಂಶ ಗಮನಿಸಿದರು.‌ ಫಲಿತಾಂಶ ಉತ್ತಮ ಪಡಿಸಲು ಈಗಾಗಲೆ ನೀಡಿದ ಮಿಷನ್ 40 + ಸರಿಯಾಗಿ ಅನುಷ್ಠಾನ ಮಾಡಿ ಶಾಲೆಯ ಫಲಿತಾಂಶ ಶೇ.90ರಷ್ಟು ಪಡೆಯಲು ಎಲ್ಲಾ ಶಿಕ್ಷಕರು […]

Continue Reading

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ: ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ ಸಂಘಟನೆಗಳ ಪದಾಧಿಕಾರಿಗಳು ಸುಪ್ರೀಂ ಕದ ತಟ್ಟಲು ಮುಂದಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ, ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಕೋರ್ಟ್‌ನಲ್ಲಿ […]

Continue Reading

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ

ಸುದ್ದಿ ಸಂಗ್ರಹ ಚಿತ್ತಾಪುರಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವೈಯಕ್ತಿಕ ಹಣದ ನೆರವಿನಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಹಾಯವಾಗಲೆಂದು ಪಠ್ಯಪುಸ್ತಕಕ್ಕೆ ಅನುಗುಣವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳ ಕೈಪಿಡಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಂಗಳವಾರ ವಿತರಣೆ ಮಾಡಿದರು. ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯವಾರು ಒಟ್ಟು 35 ಸಾವಿರ ಮಾದರಿ ಪ್ರಶ್ನೆ […]

Continue Reading

30 ರೂ ಟೀ ಕುಡಿಯಲು ಹೋಗಿ 30 ಲಕ್ಷ ಮೌಲ್ಯದ ಬೆಳ್ಳಿ- ಬಂಗಾರದ ಆಭರಣ ಕಳೆದುಕೊಂಡ ಟೆಕ್ಕಿ ದಂಪತಿಗಳು

ಸುದ್ದಿ ಸಂಗ್ರಹ ಬೆಂಗಳೂರು ಟೀ ಕುಡಿಯಲು ಕೆಫೆಗೆ ಹೋದ ಸಮಯ ನೋಡಿಕೊಂಡು ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಕದ್ದ ಘಟನೆ ನಡೆದಿದೆ. ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ದಂಪತಿಗಳು ವಾಸವಾಗಿದ್ದರು. ಅವರು ಸಂಜೆ ಟೀ ಕುಡಿಯಲು ಕೆಫೆಗೆ ಹೋದಾಗ, ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ ಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆಯ ವಿವರ ಎಚ್‌ಆರ್‌ಬಿಆರ್ ಲೇಔಟ್ 2ನೇ ಬ್ಲಾಕ್‌ನಲ್ಲಿರುವ ಬಾಲಾಜಿ ಜಿ (34) ಎಂಬುವವರ […]

Continue Reading