30 ರೂ ಟೀ ಕುಡಿಯಲು ಹೋಗಿ 30 ಲಕ್ಷ ಮೌಲ್ಯದ ಬೆಳ್ಳಿ- ಬಂಗಾರದ ಆಭರಣ ಕಳೆದುಕೊಂಡ ಟೆಕ್ಕಿ ದಂಪತಿಗಳು

ಸುದ್ದಿ ಸಂಗ್ರಹ ಬೆಂಗಳೂರು ಟೀ ಕುಡಿಯಲು ಕೆಫೆಗೆ ಹೋದ ಸಮಯ ನೋಡಿಕೊಂಡು ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಕದ್ದ ಘಟನೆ ನಡೆದಿದೆ. ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ದಂಪತಿಗಳು ವಾಸವಾಗಿದ್ದರು. ಅವರು ಸಂಜೆ ಟೀ ಕುಡಿಯಲು ಕೆಫೆಗೆ ಹೋದಾಗ, ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ ಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆಯ ವಿವರ ಎಚ್‌ಆರ್‌ಬಿಆರ್ ಲೇಔಟ್ 2ನೇ ಬ್ಲಾಕ್‌ನಲ್ಲಿರುವ ಬಾಲಾಜಿ ಜಿ (34) ಎಂಬುವವರ […]

Continue Reading

85 ಶತಕೋಟಿ ಡಾಲರ್​ ಮೌಲ್ಯದ 1 ಸಾವಿರ ಟನ್​ ಚಿನ್ನದ ನಿಧಿ ಪತ್ತೆ, ಭೂಮಿಯೊಳಗೆ ಸಿಕ್ಕ ಅನ್ಯಗ್ರಹದ ಲೋಹಗಳು

ಕರ್ನಾಟಕದ ಲಕ್ಕುಂಡಿಯಲ್ಲಿ ಸದ್ಯ ನಿಧಿ ಭಾರಿ ಸದ್ದು ಮಾಡುತ್ತಿದೆ. ದಿನದಿಂದ ದಿನಕ್ಕೆ ಇದು ಹೊಸ ಹೊಸ ರೂಪ ಪಡೆಯುತ್ತಲೆ ಇದೆ. ದಿನದಿಂದ ದಿನಕ್ಕೆ ಇದು ಕುತೂಹಲ ಕೆರಳಿಸುತ್ತಿದ್ದು, ಹೆಸರೆ ಗೊತ್ತಿಲ್ಲದ ಗ್ರಾಮವೊಂದು, ಇದೀಗ ಭಾರತದಾದ್ಯಂತ ಸದ್ದು ಮಾಡುತ್ತಿದೆ. ಇಲ್ಲಿಯ ಭೂಮಿಯ ಬೆಲೆಯೂ ದಿಢೀರ್ ಹೆಚ್ಚಾಗಿದ್ದು, ಇಲ್ಲಿ ಸಿಕ್ಕಿರುವ ಶಾಸನಗಳು, ನಿಧಿಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಶ್ವವನ್ನೆ ಬೆರಗುಗೊಳಿಸಿದ ಲೋಹಗಳುಇದು ಕರ್ನಾಟಕದ ಮಾತಾದರೆ, ಇದರ ಬೆನ್ನಲ್ಲೆ 85 ಶತಕೋಟಿ ಡಾಲರ್​ ಮೌಲ್ಯದ 1 ಸಾವಿರ ಟನ್​ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖಂಡರಾದ ವಿಠಲ ನಾಯಕ, ಬಸವರಾಜ ಪಂಚಾಳ ಅವರು ಮಹಾತ್ಮ ಗಾಂಧಿ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ ಪ್ರಭುತ್ವ ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜವಾದ ಅಸ್ಥಿತ್ವ ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದರು. ಡಾ.ಬಿ.ಆರ್ ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ […]

Continue Reading

ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಿರಿಯ ಪತ್ರಕರ್ತ ದಿ.ನಾಗಯ್ಯಸ್ವಾಮಿ ಅಲ್ಲೂರ್ ಅವರ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ನಾಗಾವಿ ನಕ್ಷತ್ರ’ ಸಂಸ್ಮರಣ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾಗಯ್ಯಸ್ವಾಮಿ ಅಲ್ಲೂರ್ ಅವರು ಅತ್ಯಂತ ಪ್ರಾಮಾಣಿಕ ಪತ್ರಕರ್ತರಾಗಿದ್ದರು. ಪ್ರಾಮಾಣಿಕತೆ ಮೈಗೂಡಿಸಿಕೊಂಡಿದ್ದರು. ಪ್ರಾಮಾಣಿಕತೆ ಅವರನ್ನು ಕೇವಲ ಪತ್ರಿಕಾರಂಗಕ್ಕೆ ಮಾತ್ರ […]

Continue Reading

ನೆಲನೆಲ್ಲಿ ಗಿಡ: ಮೊಡವೆಯಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು

ನಮ್ಮ ಸುತ್ತಮುತ್ತ ಹಲವು ಬಗೆಯ ಔಷಧಿಯ ಸಸ್ಯಗಳಿವೆ. ಅವುಗಳಲ್ಲಿ ಕೆಲವುದರ ಬಗ್ಗೆ ನಮಗೆ ತಿಳಿದಿದೆ. ಆದರೆ ತಿಳಿದಿಲ್ಲದ ನೈಸರ್ಗಿಕ ಔಷಧಿ ಗುಣಗಳು ಹೊಂದಿರುವ ಹಲವು ಸಸ್ಯಗಳಿವೆ. ಇವು ವಿವಿಧ ರೀತಿಯ ರೋಗಗಳು ತಡೆಗಟ್ಟಲು ಸಹಾಯ ಮಾಡುತ್ತದೆ. ಇಂತಹ ಸಸ್ಯಗಳಲ್ಲಿ ನೆಲದ ನೆಲ್ಲಿಕಾಯಿ ಅಥವಾ ನೆಲನೆಲ್ಲಿಯೂ ಒಂದು. ಹಳ್ಳಿಗಳಲ್ಲಿ ತೋಟ, ಗದ್ದೆ ಹಾಗೂ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಸ್ಯಗಳು ಹೆಚ್ಚಾಗಿ ಕಾಣಬಹುದು, ಸುಮಾರು ಒಂದು ಅಡಿ ಎತ್ತರಕ್ಕೆ ಬೆಳೆಯುವ ಈ ಸಸ್ಯ ನೆಲ್ಲಿಕಾಯಿ ಹೋಲುವ ಎಲೆಗಳನ್ನು ಹೊಂದಿರುತ್ತದೆ. […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸವಿತಾ ಮಹರ್ಷಿ ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿ ಆಚರಿಸುವ ಮೂಲಕ ಆದರ್ಶಗಳ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದರು. ಧರ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿ, ಹಿಂದೂ ಧರ್ಮದ ಚತುರ್ವೇದದಲ್ಲಿ ಒಂದಾದ ಸಾಮವೇದ ಬರೆದವರು, ರಥಸಪ್ತಮಿ ದಿನದಂದು ಸೂರ್ಯನ ಆರಾಧನೆ ಜೊತೆಗೆ ಸವಿತಾ ಮಹರ್ಷಿ ಜಯಂತಿ ಆಚರಿಸುವುದರೊಂದಿಗೆ ಇಡಿ ಜಗತ್ತಿಗೆ ಒಳಿತನ್ನು ಬಯಸುವುದು ಇದರ ಹಿಂದಿನ […]

Continue Reading

ಐತಿಹಾಸಿಕ, ಪುರಾತನ ಸ್ಥಂಭ ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೊಳಿಸಿ

ಸುದ್ದಿ ಸಂಗ್ರಹ ಕಲಬುರಗಿ ಐತಿಹಾಸಿಕ, ಅಪರೂಪದ ವಾಸ್ತುಶಿಲ್ಪ ಹೊಂದಿರುವ, ಸುಮಾರು 1,400 ವರ್ಷಗಳ ಪ್ರಾಚೀನ ಕಾಲದ ‘ಕಲಬುರಗಿ ಗ್ರಾಮ ದೇವತೆ’ ಎಂದು ನಂಬಲ್ಪಟ್ಟ ಶಹಾಬಜಾರ ನಾಕಾ ಸಮೀಪದ ಸ್ಥಂಭ ರಾಮಲಿಂಗೇಶ್ವರ ದೇವಾಲಯ ಹಾಗೂ ಆವರಣದ ಸ್ಥಳ ಅಭಿವೃದ್ಧಿಗೊಳಿಸಿ, ಅದರ ಬಗ್ಗೆ ವ್ಯಾಪಕ ಪ್ರಚಾರವಾಗುವ ಕೆಲಸ ಜರುಗಬೇಕಾಗಿದೆ ಎಂದು ದೇವಸ್ಥಾನದ ಪೂಜ್ಯ ನಾಗೇಶ ಮಹಾರಾಜ ಸ್ವಾಮಿಜಿ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ನಾಕಾ ಸಮೀಪದ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ […]

Continue Reading

ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪ: ಗಾರಂಪಳ್ಳಿ

ಸುದ್ದಿ ಸಂಗ್ರಹ ಕಲಬುರಗಿ ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಸಮಾಜ ಸೇವಕ ಚನ್ನಬಸಪ್ಪ ಗಾರಂಪಳ್ಳಿ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ಸವಿತಾ ಮಹರ್ಷಿಯವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಅನೇಕ ಮಹನೀಯರು ತಮ್ಮದೆಯಾದ ಕೊಡುಗೆ ನೀಡಿ, ದೇಶದ ಸಂಸ್ಕೃತಿ, ಪರಂಪರೆ ಹೆಚ್ಚಿಸಿದ್ದಾರೆ. ಯಾವುದೆ ಜಾತಿ, ಧರ್ಮ, ಜಯಂತಿಗೆ ಮಾತ್ರ ಸೀಮಿತವಾಗದೆ, ಅವರು ನೀಡಿರುವ ತತ್ವ, ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು […]

Continue Reading

ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಪ್ರಮುಖ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೆ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘16ನೇ ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಪ್ರತಿಜ್ಞೆ […]

Continue Reading

ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 8.76 ಲಕ್ಷ ರೂ ದಂಡ

ಸುದ್ದಿ ಸಂಗ್ರಹ ಬೆಳಗಾವಿ ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. 8 ತಿಂಗಳ ಅವಧಿಯಲ್ಲಿ ಪ್ರಕರಣ ಇತ್ಯರ್ಥಗೊಳಿಸಿ ನಾಲ್ವರಿಗೆ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ಸಾಕೀಬ್ ನಿಜಾಮಿ (22), ರವಿ ನಾಯ್ಯೋಡಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 8.76 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್, ಅಶುತೋಷ್ ಪಾಟೀಲ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಈ ಇಬ್ಬರಿಗೂ […]

Continue Reading