ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ, ಒಂದೆ ದಿನಕ್ಕೆ 5,020 ರೂ ಜಂಪ್‌: ಚಿನ್ನದ ಬೆಲೆ ಈಗ 1.54 ಲಕ್ಷ ರೂ

ಸುದ್ದಿ ಸಂಗ್ರಹ ಬೆಂಗಳೂರುಚಿನ್ನದ ಬೆಲೆ ಒಂದೆ ದಿನಕ್ಕೆ ಈ ಹಿಂದಿನ ಎಲ್ಲಾ ದಾಖಲೆ ಮುರಿದು ಬರೋಬ್ಬರಿ 5,020 ರೂ ಹೆಚ್ಚಳವಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ದರ 1,54,800 ರೂ ಏರಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ?ಜನವರಿ 21 2026, ಬುಧವಾರದಂದು ಮಾರುಕಟ್ಟೆಯಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 15,480 ರೂ ಇತ್ತು, ಇಂದು 502 ರೂ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,54,800 ರೂ ಇದೆ. 24 […]

Continue Reading

ರಾಯರನ್ನ ಅಪಮಾನ ಮಾಡಿದವರು ಉದ್ಧಾರವಾದ ಇತಿಹಾಸವಿಲ್ಲ: ಸಿಎಂ ನಡೆಗೆ ಜಗ್ಗೇಶ್ ಖಂಡನೆ

ಸುದ್ದಿ ಸಂಗ್ರಹ ಬೆಂಗಳೂರು ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡಿದೆ ಫೋಟೋವನ್ನು ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರಾದ ನಟ ಜಗ್ಗೇಶ್‌ ತೀವ್ರ ಬೇಸರ ಹೊರಹಾಕಿದ್ದಾರೆ. ಸಿದ್ರಾಮಯ್ಯ ಅವರು ರಾಘವೇಂದ್ರ ಸ್ವಾಮಿಯ ಫೋಟೋ ತಳ್ಳುತ್ತಿರುವ ವಿಡಿಯೋ ಜೊತೆಗೆ ಸಂದೇಶವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರವಾದ ಇತಿಹಾಸವಿಲ್ಲಾ. ರಾಯರ ಸಣ್ಣ ಕೃಪೆ ನಮ್ಮ ಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, […]

Continue Reading

ಕಲಬುರಗಿ: ಜ.21, 22 ರಂದು ಸರಕಾರಿ ನೌಕರರ ಕ್ರೀಡಾಕೂಟ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜ.21 ಮತ್ತು 22 ರಂದು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.‌ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಕ್ರೀಡಾಕೂಟವನ್ನು ಐಟಿ- ಬಿಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ […]

Continue Reading

ಹೆಂಡತಿಯನ್ನು ಅಕ್ಕ ಎಂದು ಪರಿಚಯಿಸಿ ಮದುವೆ ನಾಟಕ: ಟೆಕ್ಕಿ ಯುವತಿಗೆ 1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ

ಸುದ್ದಿ ಸಂಗ್ರಹ ಬೆಂಗಳೂರು ಮ್ಯಾಟ್ರಿಮೋನಿ ಸೈಟ್‌ಗಳ ಮೂಲಕ ಪರಿಚಯವಾಗಿ, ಕೋಟಿ ಕೋಟಿ ಆಸ್ತಿಯ ಆಮಿಷವೊಡ್ಡಿ, ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ ಬರೋಬ್ಬರಿ 1.75 ಕೋಟಿ ರೂ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲದೆ, ಆತನ ಇಡಿ ಕುಟುಂಬವೆ ವಂಚನೆಗೆ ಸ್ಕೆಚ್ ಹಾಕಿರುವ ಆಘಾತಕಾರಿ ಸತ್ಯ ಬಯಲಾಗಿದೆ. ಘಟನೆಯ ಹಿನ್ನೆಲೆ ವೈಟ್‌ಫೀಲ್ಡ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ 2024ರ ಮಾರ್ಚ್‌ನಲ್ಲಿ ಮ್ಯಾಟ್ರಿಮೋನಿ ಸೈಟ್ ಮೂಲಕ ವಿಜಯರಾಜ್ ಗೌಡ ಎಂಬ ವ್ಯಕ್ತಿಯ ಪರಿಚಯವಾಗಿತ್ತು. […]

Continue Reading

ಮಕ್ಕಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು

ಸುದ್ದಿ ಸಂಗ್ರಹ ಶಹಾಬಾದ್ಶಾಲೆಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಣ ಪ್ರೇಮಿ ಅನಿಲ ಜೋಸಫ ಜಾನ ತಿಳಿಸಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂಥ ಕಾರ್ಯಕ್ರಮಗಳು ಶಾಲೆಯಲ್ಲಿ ಮಾಡುವುದರಿಂದ ಮಕ್ಕಳ ಕಲಿಕಾ ಒತ್ತಡದ ಬದಲು ಸಂತೋಷದಾಯಕ ಚಟುವಟಿಕೆಯಾಗಿರಬೇಕು. ಮಕ್ಕಳಲ್ಲಿ ಅಡಗಿರುವ […]

Continue Reading

ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಸೋಮವಾರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ನಿರ್ದೇಶಕ ಲಿಂಗರಾಜ ಹಿರೇಗೌಡ, ಉಪನ್ಯಾಸಕರಾದ ಅಸ್ಮಾ‌ ಜಬೀನ್, ಮಲ್ಲಿಕಾರ್ಜುನ ದೊಡ್ಡಮನಿ, ನಯಿಮಾ‌ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ ಪಾಟೀಲ್, ಮಲ್ಲಪ್ಪ ರಂಜಣಗಿ, ಪ್ರದಸ ಪ್ರೇಮಾ ಸುರಪುರ, ದ್ವಿದಸ ರಾಮಚಂದ್ರ ಚವ್ಹಾಣ, ಅತಿಥಿ ಉಪನ್ಯಾಸಕರಾದ ವಿರೇಶ್ ಗೋಗಿ, ಶರಣು ಸುರಪುರ, […]

Continue Reading

ನಾಲವಾರ ಜಾತ್ರಾ ಮಹೋತ್ಸವ: ತನಾರತಿ ಹೊತ್ತು ಹರಕೆ ಸಮರ್ಪಿಸಿದ ಭಕ್ತಸಾಗರ‌

ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕ ಭಾಗದ ಅತಿದೊಡ್ಡ ಜಾತ್ರೆಗಳಲ್ಲೊಂದಾದ ನಾಲವಾರದ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ನಾಡಿನ ವಿಶಿಷ್ಟ ಉತ್ಸವಗಳಲ್ಲೊಂದಾದ ತನಾರತಿ ಮಹೋತ್ಸವವು, ಸಹಸ್ರಾರು ಭಕ್ತರ ಮಧ್ಯೆ ಅವರಾತ್ರಿ ಅಮಾವಾಸ್ಯೆ ದಿನವಾದ ರವಿವಾರ ಮಧ್ಯರಾತ್ರಿ ಭಕ್ತಿ ಭಾವದಿಂದ ನೆರವೇರಿತು. ದಕ್ಷಿಣ ಭಾರತದ ಮಹಾ ದೀಪಮೇಳವೆಂದೆ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು, ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆಯ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು […]

Continue Reading

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು ?

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಗ್‌ ಬಾಸ್‌ ಇತಿಹಾಸದಲ್ಲಿ ಫಸ್ಟ್‌ ಟೈಮ್‌ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಹಾರೈಕೆ ನಿಜವಾಗಿದೆ. ಈ ಹಂತದಲ್ಲಿ ಬಿಗ್‌ ಬಾಸ್‌ ವಿನ್ನರ್’ಗೆ ಏನೇನು ಸಿಗುತ್ತೆ ಎಂಬುದನ್ನು ಕಿಚ್ಚ ಸುದೀಪ್ ಅನೌನ್ಸ್ ಮಾಡಿದ್ದಾರೆ. ಗಿಲ್ಲಿಗೆ ಬಂಪರ್‌ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಗೆದ್ದ ಗಿಲ್ಲಿ ನಟನಿಗೆ ಟ್ರೋಫಿ ಜೊತೆಗೆ ವಿಶೇಷ ಲಕ್ಷ ಲಕ್ಷ ಬಹುಮಾನ […]

Continue Reading

ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ತೆರೆ ಬಿದ್ದಿದೆ. ಬಿಗ್‌ಬಾಸ್‌ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗಿಲ್ಲಿ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನೂ ಗಿಲ್ಲಿ ಬರೆದಿದ್ದಾರೆ. ಹಲವು ವಾರಗಳಿಂದ ಗಿಲ್ಲಿ ನಟನೆ ಬಿಗ್ ಬಾಸ್ ಗೆಲ್ಲೋದು ಅಂತ ಜನಾಭಿಪ್ರಾಯ ವ್ಯಕ್ತವಾಗಿತ್ತು, ಅದು ಈಗ ನಿಜವಾಗಿದೆ. ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳು ಆಯ್ಕೆಯಾಗಿದ್ದರು. ನಟ ಗಿಲ್ಲಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, […]

Continue Reading

ನಾಡಿನ ಇತಿಹಾಸದ ಪುಟ ತರೆಯುವ ತಡಕಲ್ ಜೈನ ಬಸದಿ: ಮುಡುಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿತಡಕಲ್ ಗ್ರಾಮದ ಜೈನ ಬಸದಿಯು ನಾಡಿನ ಇತಿಹಾಸದ ಪುಟ ತೆರೆಯುತ್ತವೆ. ನಮ್ಮ ನೆಲವೆ ನಮಗೆ ಪ್ರೇರಣೆ. ಜೈನರ ಕಾವ್ಯ, ಶರಣರ ವಚನ, ದಾಸರ ವಾಣಿ ಮೊಳಗಿದ ಪುಣ್ಯ ಭೂಮಿ ಆಳಂದ ಸಾಸಿರ ನಾಡಿನ ಕೊಡುಗೆ ಅಪಾರ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ತಡಕಲ್ ಗ್ರಾಮದ ಜೈನ ಶಾಂತಿನಾಥ ಬಸದಿಯಲ್ಲಿ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ -49 ಸರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ […]

Continue Reading