ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ನೇಮಕ

ಸುದ್ದಿ ಸಂಗ್ರಹ ಕಲಬುರಗಿ ‌ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾಗಿದ್ದ ಮಹೇಶ ಹೂಗಾರ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರಿಂದ ಜಿಲ್ಲಾ ಕಾರ್ಯದರ್ಶಿ ಸ್ಥಾನ ತೆರವಾದ ಹಿನ್ನೆಲೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರ ಅನುಮೋದನೆ ಪಡೆದುಕೊಂಡು ಆರೋಗ್ಯ ಇಲಾಖೆ ನಿರ್ದೇಶಕ ಚಂದ್ರಕಾಂತ ಏರಿ ಅವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ […]

Continue Reading

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ನಮ್ಮ ಗೈಡ್ ವೆಬ್‌ಸೈಟ್‌ & ಆಪ್ ಅಭಿವೃದ್ಧಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೂತನವಾಗಿ ‘ನಮ್ಮ ಗೈಡ್’ ಆನ್‌ಲೈನ್ ವೇದಿಕೆ ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ರಾಜ್ಯದ ಯಾವುದೆ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ದೇಶ-ವಿದೇಶಗಳ ಪ್ರವಾಸಿಗರಿಗೆ ಆಯಾ ಪ್ರದೇಶದ ಇತಿಹಾಸ, ಸಂಸ್ಕೃತಿ ಮತ್ತು ಮಹತ್ವದ ಬಗ್ಗೆ ನಿಖರ ಮಾಹಿತಿ ನೀಡುವಲ್ಲಿ ಸ್ಥಳೀಯ ಗೈಡ್‌ಗಳ ಸೇವೆ ಅತ್ಯಂತ ಪ್ರಮುಖವಾಗಿದೆ. ಪ್ರಸ್ತುತ ವಿದೇಶಗಳಲ್ಲಿ ಪ್ರವಾಸಿಗರು ತಮಗೆ ಬೇಕಾದ ಗೈಡ್‌ಗಳನ್ನು ಆನ್‌ಲೈನ್ ಮೂಲಕವೇ ಕಾಯ್ದಿರಿಸುವ […]

Continue Reading

ಯಲ್ಲಾಲಿಂಗ ಆಶ್ರಮದಲ್ಲಿ ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಸಮೀಪದ ಮಹಾನಗರ ತಾಂಡದ ಶ್ರೀ ಯಲ್ಲಾಲಿಂಗ ಪುಣ್ಯಾಶ್ರಮದ ಪೀಠಾಧಿಪತಿ ಸದ್ಗುರು ಶ್ರೀ ಜೇಮಸಿಂಗ ಮಹಾರಾಜರ 78ನೇ ಹುಟ್ಟು ಹಬ್ಬದ ನಿಮಿತ್ತ ಜೂನ್ 24 ರಂದು ಬೆಳಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಮಠದ ಪರವಾಗಿ ಪ್ರಕಾಶ ರಾಠೋಡ, ನೀಲಕಂಠ ಚವ್ಹಾಣ್ ಹೇಳಿದ್ದಾರೆ. ಆಶ್ರಮದ ಯಲ್ಲಾಲಿಂಗ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ನಡೆಯುವುದು ನಂತರ ಆಯುಷ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ […]

Continue Reading

ಗಿರವಿ ಇಟ್ಟ ಚಿನ್ನ ‌ವಾಪಸ್ ಕೇಳಿದ್ದಕ್ಕೆ ಫೈರಿಂಗ್‌: ಶಾಲಾ ಬಾಲಕಿಗೂ ತಗುಲಿದ ಗುಂಡು

ಸುದ್ದಿ ಸಂಗ್ರಹ ಧಾರವಾಡಗಿರಿವಿ ಇಟ್ಟಿದ್ದ ಚಿನ್ನವನ್ನು ವಾಪಸ್ ಕೇಳಿದ್ದಕ್ಕೆ ಧಾರವಾಡದ ಗರಗ ಗ್ರಾಮದಲ್ಲಿ ಫೈರಿಂಗ್ ನಡೆದಿದೆ. ಚಿನ್ನ ಕೇಳಿದ ಅಪ್ಪ ಮಗನ ಮೇಲೆ ಚಿನ್ನದಂಗಡಿ ಮಾಲೀಕ ಗುಂಡು ಹಾರಿಸಿದ್ದಾನೆ. ಈ ವೇಳೆ ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಗೆ ಸಹ ಗುಂಡು ತಗುಲಿದೆ. ಗರಗ ಗ್ರಾಮದ ಜ್ಯುವೆಲ್ಲರಿ ಶಾಪ್ ಮಾಲೀಕ ಮೌನೇಶ್ ಬಳಿ ಜೀರಿಗವಾಡ ಗ್ರಾಮದ ನಿಂಗಪ್ಪ ಹೊರಕೇರಿ ಹಾಗೂ ಆತನ ಪುತ್ರ ಸಿದ್ದಪ್ಪ ಹೊರಕೇರಿ 4 ವರ್ಷಗಳ ಹಿಂದೆ 40 ಗ್ರಾಂ ಚಿನ್ನವನ್ನು 60 ಸಾವಿರ ರೂ.ಗೆ […]

Continue Reading

ಅನ್ನಭಾಗ್ಯದಿಂದ 14 ಲಕ್ಷ ಅನರ್ಹರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರುಗ್ಯಾರಂಟಿ ಯೋಜನೆಗಳಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರ, ಯೋಜನೆಗಳ ಪರಿಷ್ಕರಣೆ ಮಾಡುವದು ಖಚಿತವಾಗಿದೆ. ಗೃಹಜ್ಯೋತಿ, ಗೃಹಲಕ್ಷ್ಮಿ ಜೊತೆ ಅನ್ನಭಾಗ್ಯಕ್ಕೂ ಫಿಲ್ಟರ್ ಆಗಲಿದೆ. ಆಹಾರ ಖಾತೆ ಸಚಿವ ಮುನಿಯಪ್ಪ ಸುಳಿವು ಕೊಟ್ಟಿದ್ದು, 13-14 ಲಕ್ಷ ಅನರ್ಹರನ್ನು ತೆಗೆಯೋ ಕೆಲಸ ಮಾಡ್ತೆವೆ ಅಂದಿದ್ದಾರೆ. ಸರ್ಕಾರಿ ನೌಕರಿ ಇರುವ ಕುಟುಂಬಕ್ಕೆ ಗ್ಯಾರಂಟಿ ಕಡಿತ ಮಾಡೋದಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ನಿನ್ನೆಯಷ್ಟೆ ನೌಕರರ ಜೊತೆ ಚರ್ಚೆ ಮಾಡ್ತೆನೆ ಎಂದಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಇವತ್ತು ಉಲ್ಟಾ […]

Continue Reading

ಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ: ಕೆಎಸ್ಆರ್‌ಟಿಸಿ 33%, ಬಿಎಂಟಿಸಿ 44% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ […]

Continue Reading

ಇಂಗಿನಶೆಟ್ಟಿ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ಲಕ್ಷ್ಮಿ ಗಂಜ್ ಬಡಾವಣೆಯ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮುಖ್ಯಾಧಿಕಾರಿ ದೇವೆಂದ್ರ ಅಂಗಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನಸ್ಸು ಮತ್ತು ದೇಹ ಸಮತೋಲನದಲ್ಲಿಡುವ ಅತ್ಯುತ್ತಮ ಮಾರ್ಗವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ರೂಢಿಸಿಕೊಳ್ಳಬೇಕು’ ಎಂದರು. ಮುಖ್ಯ ಅತಿಥಿಯಾಗಿ […]

Continue Reading

ಇನ್ನುಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ: ಸಿದ್ದರಾಮಯ್ಯ ಮನವಿ

ಸುದ್ದಿ ಸಂಗ್ರಹ ಬೆಂಗಳೂರುಇವತ್ತು ನಾನೇ ಕೊನೆಯ ಭಾಷಣಕಾರ, ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಅಧ್ಯಕ್ಷರಿಗೆ ಮನವಿ ಮಾಡುತ್ತೆನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಮಾತನಾಡುತ್ತಾ, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹರಿಪ್ರಸಾದ್ ಹೋರಾಟ ಮಾಡ್ತಾರೆ. ಅವರ ಪ್ರಯತ್ನವನ್ನು ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ಇಲ್ಲಿವರೆಗೆ ಅಧ್ಯಕ್ಷರಾಗಿ ಕೆಲಸ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು. ನಾನು ವಿರೋಧ ಪಕ್ಷದ ನಾಯಕನಾಗಿ, ಸಿಎಂ ಆಗಿ […]

Continue Reading

ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ

ಸುದ್ದಿ ಸಂಗ್ರಹ ಕಾರವಾರಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು […]

Continue Reading

ತಿನ್ನುವ ಆಹಾರದ ಮೇಲೆ ನಿಯಂತ್ರಣವಿರಲಿ: ವೀರಭದ್ರಪ್ಪ ಆರ್.ಕೆ

ಸುದ್ದಿ ಸಂಗ್ರಹ ವಾಡಿ ಅಡುಗೆ ರುಚಿಯಾಗಿದೆ ಎಂದು ಸಿಕ್ಕಾಪಟ್ಟೆ ತಿಂದರೆ ಹೊಟ್ಟೆಯೊಳಗಿನ ಜಠರ ಪಚನಕ್ರಿಯೆ ನಿಲ್ಲಿಸುತ್ತದೆ. ತಿನ್ನುವ ಆಹಾರದ ಮೇಲೆ ನಿಯಂತ್ರಣವಿಲ್ಲದಿದ್ದರೆ ಆರೋಗ್ಯ ಹದಗೆಟ್ಟು ಜೀವಾಪಾಯ ಉಂಟಾಗುತ್ತದೆ ಎಂದು ಪ್ರಗತಿಪರ ಚಿಂತಕ, ಶಿಕ್ಷಕ ವೀರಭದ್ರಪ್ಪ ಆರ್.ಕೆ ಹೇಳಿದರು. ಪಟ್ಟಣದ ಮುನಿಯಪ್ಪ ದಾಸ್ ಶಾಲೆಯ ಮೈದಾನದಲ್ಲಿ ಬೆಳಗಿನ ಬಳಗ, ಪುರಸಭೆ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬರುವ ಮೊದಲು ಯೋಗ ಅಭ್ಯಾಸ ರೂಢಿಸಿಕೊಳ್ಳಬೇಕು. […]

Continue Reading