ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ಗೆ ಆರಂಭದಲ್ಲಿ ವಿಘ್ನ: ಸೇವಾಸಿಂಧು ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷ

ಸುದ್ದಿ ಸಂಗ್ರಹ ಯಾದಗಿರಿರಾಜ್ಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರಕಾರ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿರುವ ಆರಂಭದಲ್ಲೆ ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷಗಳು ಎದುರಾಗಿದ್ದು, ಉಚಿತ ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಣ ಖರ್ಚು ಮಾಡಿಕೊಂಡು ನಗರಗಳಿಗೆ ಅಲೆಯುವಂತಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕರಿಸಿದ ಸಮಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ […]

Continue Reading

ಶಹಾಬಾದ್‌ನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಲಕ್ಷ್ಮಿ ಗಂಜ್ ಬಡಾವಣೆಯಲ್ಲಿ ಸಾರ್ವಜನಿಕ ಸೌಲಭ್ಯಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡಾವಣೆಯಲ್ಲಿ ಕುಡಿಯುವ ನೀರಿನ ಮೂಲವಾದ ಬೋರ್‌ವೆಲ್ ಕೆಟ್ಟುಹೋಗಿ ಹಲವು ದಿನಗಳಾಗಿದ್ದರೂ ನಗರಸಭೆ ಯಾವುದೆ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಬಡಾವಣೆಯಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಯಾಗಿದೆ. ದೂರದಿಂದ ನೀರು ಹೊರುತ್ತಿರುವ ನಿವಾಸಿಗಳು: ಬೋರ್‌ವೆಲ್ ದುರಸ್ತಿಯಾಗದ ಕಾರಣ ಬಡಾವಣೆಯ ನಿವಾಸಿಗಳು ನಿತ್ಯದ ಬಳಕೆಗೆ ಹಾಗೂ ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗಿ ನೀರು ತರಬೇಕಾದ ದುಸ್ಥಿತಿ […]

Continue Reading

ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ

ಸುದ್ದಿ ಸಂಗ್ರಹ ವಾಡಿಪಟ್ಟಣದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕುಂದನೂರ ವೃತ್ತದಿಂದ ಶ್ರೀನಿವಾಸ ಗುಡಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಆಝಾದ್ ವೃತ್ತದವರೆಗೆ ಪಟ್ಟಣದ ವಿವಿಧ ಪ್ರೌಢ ಶಾಲೆಯ ನೂರಾರು ವಿದ್ಯಾರ್ಥಿಗಳಿಂದ ಸೈಕಲ್‌ ಜಾಥಾ ನಡೆಯಿತು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, 12ನೇ ಅಂತರರಾಷ್ಟ್ರೀಯ ಯೋಗ ದಿನದ ಘೋಷ ವಾಕ್ಯವಾದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಸಂದೇಶದ ಮಹತ್ವ ಸಾರುವುದು ಸೈಕಲ್‌ ಜಾಥಾದ ಉದ್ದೇಶವಾಗಿದೆ ಎಂದರು. ದೈಹಿಕ […]

Continue Reading

ಹಾಲಿನಲ್ಲಿ ಕಲಬೆರಕೆ ಶಂಕೆ: ಗಡಿಭಾಗಗಳಲ್ಲಿ ಮಾದರಿ ಸಂಗ್ರಹ, ತೀವ್ರ ತಪಾಸಣೆ

ಸುದ್ದಿ ಸಂಗ್ರಹ ಬೆಂಗಳೂರುಹಾಲಿನ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಆಹಾರ ಸುರಕ್ಷತಾ ಇಲಾಖೆ ಎಚ್ಚರ ವಹಿಸಿದೆ. ಅಧಿಕಾರಿಗಳು ವಿವಿಧ ಗಡಿಭಾಗಗಳಲ್ಲಿ ತಪಾಸಣೆ ನಡೆಸಿ ಹಾಲಿನ ಮಾದರಿ ಸಂಗ್ರಹಿಸಿದ್ದಾರೆ. ಹಾಲಿನ ಗುಣಮಟ್ಟ ಪರಿಶೀಲನೆಗಾಗಿ ಹೊಸೂರು, ಚಾಮರಾಜನಗರ ಮತ್ತು ಮೈಸೂರು ಗಡಿಭಾಗಗಳಲ್ಲಿ ತಪಾಸಣೆ ನಡೆಸಲಾಗಿದೆ. ಖಾಸಗಿ ಒಡೆತನದ ಹಾಲಿನ ಟ್ಯಾಂಕರ್‌ಗಳನ್ನು ತಡೆದು ಮಾದರಿ ಸಂಗ್ರಹಿಸಲಾಗಿದೆ. ದೊಡ್ಲಾ ಸೇರಿದಂತೆ ವಿವಿಧ ಕಂಪನಿಗಳ ಹಾಲಿನ ಟ್ಯಾಂಕರ್‌ಗಳಿಂದ ಸ್ಯಾಂಪಲ್‌ ಪಡೆಯಲಾಗಿದೆ. ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಹಾಲಿನಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ದೂರಿನ […]

Continue Reading

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಶಿಫಾರಸು

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೆ ಇದೀಗ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಗ್ಯಾರಂಟಿ ಅನುಷ್ಠಾನ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರ ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಶಿಫಾರಸು ಮಾಡಿದ್ದಾರೆ. ಶಕ್ತಿ ಯೋಜನೆಯಿಂದ ಉಂಟಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ದರ ಹೆಚ್ಚಳ ಅನಿವಾರ್ಯ ಎಂದು ಮುಖ್ಯಮಂತ್ರಿಗಳಿಗೆ ಸಮಿತಿ ಮನವಿ ಮಾಡಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ಸದ್ಯ 5,173 ಕೋಟಿ ರೂ.ಗಳ ಬೃಹತ್ ಮೊತ್ತದ […]

Continue Reading

ವಾಡಿ: 16 ವರ್ಷದ ಬಾಲಕಿಯ ಮದುವೆ ಯತ್ನಕ್ಕೆ ತಡೆ

ಸುದ್ದಿ ಸಂಗ್ರಹ ವಾಡಿತಾಯಿಯ ಅನಾರೋಗ್ಯದ ಕಾರಣಕ್ಕೆ ತರಾತುರಿಯಲ್ಲಿ 16 ವರ್ಷದ ಬಾಲಕಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದರ ಕುರಿತು ಮಕ್ಕಳ ಸಹಾಯವಾಣಿಗೆ ಬಂದ ಕರೆಯನ್ನು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆ ಮದುವೆಯನ್ನು ಶುಕ್ರವಾರ ರದ್ದು ಮಾಡಿದ್ದಾರೆ. ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯ ಮನೆ ಇದೆ. ಸೇಡಂ ತಾಲೂಕಿನ ವಜ್ರಗಾಂವ ಗ್ರಾಮದಲ್ಲಿ ಅದೆ ಗ್ರಾಮದ ಯುವಕನೊಂದಿಗೆ ಬಾಲಕಿಯ ಮದುವೆ ಜೂನ್ 20ರಂದು ನಿಶ್ಚಯವಾಗಿತ್ತು. ಶುಕ್ರವಾರ ಬಾಲಕಿಯನ್ನು ಉಡಿ ತುಂಬಿ ವರನ ಮನೆಗೆ ಕಳುಹಿಸಿ ಕೊಡುವ ಕಾರ್ಯಕ್ರಮ […]

Continue Reading

ಬಳ್ಳಾರಿ: 3.50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ‌ ಭ್ರಷ್ಟ ಅಧಿಕಾರಿ

ಸುದ್ದಿ ಸಂಗ್ರಹ ಬಳ್ಳಾರಿ3.50 ಲಕ್ಷ ಲಂಚ ಪಡೆಯುವಾಗ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನಗರಾಭಿವೃದ್ಧಿ ಪ್ರಾಧಿಕಾರದ ಸರ್ವೇಯರ್ ಶಾಂತಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲೇಔಟ್ ಪ್ಲ್ಯಾನ್ ಡೆವಲಪ್ಮೆಂಟ್ ಅಪ್ರೂವಲ್ ಮಾಡಲು ವೀರೇಶ್ ಎಂಬವರ ಬಳಿ ಸರ್ವೇಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದ. ವೀರೇಶ್ ಅವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಶಾಂತಮೂರ್ತಿ ಪರವಾಗಿ ಮೊಹಮ್ಮದ್ ಸಾಜೀದ್ ಎಂಬಾತ ವೀರೇಶ್‌ನಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ […]

Continue Reading

ವಾಡಿಯಲ್ಲಿ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸುದ್ದಿ ಸಂಗ್ರಹ ವಾಡಿ ಪುರಸಭೆ, ಬೆಳಗಿನ ಬಳಗ ಮತ್ತು ಪತಂಜಲಿ ಯೋಗ ಸಮಿತಿಯ ಸಹಯೋಗದಲ್ಲಿ ಜೂನ್ 21ರಂದು ಮುನಿಯಪ್ಪ ದಾಸ ಶಾಲಾ ಆವರಣದಲ್ಲಿ ಬೆಳಿಗ್ಗೆ 6.30ರಿಂದ 7.30ರ ವರೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಿನ ಬಳಗದ ಸದಸ್ಯ ಬಸವರಾಜ ಕೇಶ್ವಾರ ಹೇಳಿದರು. ‘ಆರೋಗ್ಯಕರ ಜೀವನಕ್ಕಾಗಿ, ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎನ್ನುವ ಘೋಷವಾಕ್ಯದೊಂದಿಗೆ 12ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು’ ಎಂದು ತಿಳಿಸಿದರು.‌ ಯೋಗ ಶಿಕ್ಷಕರಾದ ವೀರಣ್ಣ ಯಾರಿ, ಮಲ್ಲಯ್ಯ ಸ್ವಾಮಿ ಅವರಾದಿ ಅವರು ಯೋಗಾಭ್ಯಾಸ […]

Continue Reading

ತಾಲೂಕು ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಕರವೇ ಮುಖಂಡರಿಂದ ಮನವಿ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಆಸ್ಪತ್ರೆಯಲ್ಲಿನ ಕುಂದು ಕೊರತೆಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರು ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಮತ್ತು ನೀರಿನ […]

Continue Reading

ಜೂನ್ 20 ರಂದು ವಿಶ್ವಯೋಗ ದಿನಾಚರಣೆ ನಿಮಿತ್ತ ಸೈಕಲ್‌ ಜಾಥಾ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 20ರಂದು ಬೆಳಗ್ಗೆ 7:30ಕ್ಕೆ ಪಟ್ಟಣದ ಕುಂದನೂರ ವೃತ್ತದಿಂದ ಶ್ರೀನಿವಾಸ ಗುಡಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಆಝಾದ್ ವೃತ್ತದ ವರೆಗೆ ಪಟ್ಟಣದ ಪುರಸಭೆ, ಬೆಳಗಿನ ಬಳಗ ಮತ್ತು ಪತಂಜಲಿ ಯೋಗ ಸಮಿತಿಯಿಂದ ಸೈಕಲ್‌ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ತಿಳಿಸಿದ್ದಾರೆ. ಪಟ್ಟಣದ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಯೋಗಾಸಕ್ತರು ಹೆಚ್ಚಿನ ಪ್ರಮಾಣದಲ್ಲಿ […]

Continue Reading