ಪುರಂದರ ದಾಸರ ಕೀರ್ತನೆಗಳ ಪಾತ್ರ ಮಹತ್ವದ್ದು: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕದ ದಾಸ ಪರಂಪರೆಯ ಪ್ರಮುಖ ಸಂತರು, ಕವಿಗಳು, ‘ಕರ್ನಾಟಕ ಸಂಗೀತದ ಪಿತಾಮಹ’ ಎಂದು ಖ್ಯಾತರಾದ ಪುರಂದರ ದಾಸರು ವೇದ, ಉಪನಿಷತ್ತುಗಳ ಸಾರಾಂಶ ಕನ್ನಡದಲ್ಲಿ ಕೀರ್ತನೆಗಳನ್ನು ಸರಳ, ಸುಲಭವಾಗಿ ಜನರಿಗೆ ತಲುಪಿಸಿದರು. ಅವರ ಕೀರ್ತನೆಗಳು ಭಕ್ತಿ, ಸಾಮಾಜಿಕ ಮತ್ತು ತತ್ವಶಾಸ್ತ್ರಿಯ ಅಂಶಗಳು ಹೊಂದಿದ್ದು, ಸಾಂಸ್ಕೃತಿಕ, ಆಧ್ಯಾತ್ಮಿಕ ಪರಂಪರೆಯಲ್ಲಿ ಪುರಂದರ ದಾಸರ ಕೀರ್ತನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ ಮಂದಿರ ಮತ್ತು ಸ್ವಾತಿ […]

Continue Reading

ಮಾದರಿ ಆಡಳಿತಗಾರ ಶ್ರೀಕೃಷ್ಣ ದೇವರಾಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಕಂಡು ಅಭಿವೃದ್ಧಿ ಬಯಸುತ್ತಿದ್ದ ಶ್ರೀಕೃಷ್ಣದೇವರಾಯ ಮಾದರಿ, ಶಕ್ತಿಶಾಲಿ ಮತ್ತು ಪ್ರಸಿದ್ಧ ಅರಸ. ವಿಜಯನಗರ ಸಾಮ್ರಾಜ್ಯ ಜಗತ್ತಿನಲ್ಲಿ ಪ್ರಸಿದ್ಧವಾಗಲು ಅವರ ಜನಪರ ಕಾರ್ಯಗಳೆ ಆಧಾರವಾಗಿವೆ. ರಸ್ತೆ ಬದಿಯಲ್ಲಿ ವಜ್ರ, ವೈಡುರ್ಯ, ಚಿನ್ನ, ಬೆಲೆ ಬಾಳುವ ವಸ್ತುಗಳು ಮಾರಾಟ ಮಾಡುತ್ತಿದ್ದ ಶ್ರೀಮಂತ ಸಾಮ್ರಾಜ್ಯದ ರೂವಾರಿಯಾಗಿದ್ದಾರೆ  ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಶ್ರೀಕೃಷ್ಣ […]

Continue Reading

ಶಹಾಬಾದ: ನದಿಯಲ್ಲಿ ಈಜಲು ಹೋದ ಬಾಲಕ ಸಾವು

ಸುದ್ದಿ ಸಂಗ್ರಹ ಶಹಾಬಾದಶಂಕರವಾಡಿ ಬ್ರಿಜ್ ಹತ್ತಿರದ ಕಾಗಿಣಾ ನದಿಯಲ್ಲಿ ಸಂಕ್ರಾಂತಿ ಹಬ್ಬದ ದಿನದಂದು ಈಜಲು ಹೋದ 16 ವರ್ಷದ ವೆಂಕಟೇಶ್ ಶರಣಪ್ಪ ಎಂಬ ಬಾಲಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತ ಬಾಲಕ ನಗರದ ಹನುಮಾನ ನಗರ ನಿವಾಸಿಯಾಗಿದ್ದು, ಸ್ನೇಹಿತರ ಜೊತೆ ನದಿಯಲ್ಲಿ ಈಜಾಡಲು ಹೋದಾಗ ಘಟನೆ ನಡೆದಿದೆ. ಕುಟುಂಬದ ವಾರಸುದಾರ ಮಗನನ್ನು ಕಳೆದುಕೊಂಡ ತಂದೆ ತಾಯಿ ಮತ್ತು ಕುಟುಂಬಸ್ಥರ ಅಕ್ರಂದನ ನೆರೆದಿದ್ದ ಜನರ ಕಣ್ಣಲ್ಲಿ ನೀರು ಬರುವಂತಾಯಿತು. ಬಾಲಕ ಓದುವುದರಲ್ಲಿ ಚುರುಕಾಗಿದ್ದ, ಕರಾಟೆ, […]

Continue Reading

ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ

ಸುದ್ದಿ ಸಂಗ್ರಹ ಉಡುಪಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಮತ್ತು ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ಮತ್ತು ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಮತ್ತು ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ ವತಿಯಿಂದ […]

Continue Reading

ನಾಲವಾರ: ಜ.19ರಂದು ಕೋರಿಸಿದ್ದೇಶ್ವರ ರಥೋತ್ಸವ, ಸಿದ್ಧತೋಟೇಂದ್ರ ಪ್ರಶಸ್ತಿ ಪ್ರದಾನ‌

ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲೊಂದಾದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಲವಾರ ಕ್ಷೇತ್ರ ನವವಧುವಿನಂತೆ ಸಿಂಗಾರಗೊಂಡಿದೆ. ಜಾತ್ರಾ ಮಹೋತ್ಸವದ ನಿಮಿತ್ಯ ವಾರದಿಂದಲೆ ಶ್ರೀಮಠದಲ್ಲಿ ಧಾರ್ಮಿಕ ಪುರಾಣ ಪ್ರವಚನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನನಿತ್ಯ ನಡೆಯುತ್ತಿವೆ.‌‌ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವವು ಜ.18, 19 ಮತ್ತು 20 ರಂದು ಅದ್ಧೂರಿಯಾಗಿ ನಡೆಯಲಿದೆ. ಮಧ್ಯರಾತ್ರಿ ‘ತನಾರತಿ’ಜ.18 ರಂದು ರಾತ್ರಿ 8 ಗಂಟೆಗೆ […]

Continue Reading

ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ: ಐವರು ಅರೆಸ್ಟ್‌

ಸುದ್ದಿ ಸಂಗ್ರಹ ಕೋಲಾರ ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರ್ರ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು. ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಮತ್ತು ಕಲಬೆರೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಮಾಯಲ್, ಮಿಲ್ಕ್ ಪೌಡರ್, […]

Continue Reading

ಕಾಳಗಿ: ಕಾಲೇಜಿನಲ್ಲಿ ಕಿಡಿಗೇಡಿಗಳ ದಾಂಧಲೆ

ಸುದ್ದಿ ಸಂಗ್ರಹ ಕಾಳಗಿ ಇಲ್ಲಿನ ದೇವರಾಜ ಮಾಲಿಪಾಟೀಲ ಉಡಗಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಉಪಕರಣಗಳನ್ನು ಒಡೆದು ಹಾಕಿರುವ ಘಟನೆ ಬುಧವಾರ ಕಂಡುಬಂದಿದೆ. ಎಂದಿನಂತೆ ಸಿಬ್ಬಂದಿ ಬೆಳಿಗ್ಗೆ ಕಾಲೇಜಿಗೆ ಬಂದಾಗ ‘ಯಾರೋ ಕಿಡಿಗೇಡಿಗಳು ಕಾಲೇಜಿನ ಕಚೇರಿ ಬಾಗಿಲು ಮುರಿದು, ಕಂಪ್ಯೂಟರ್, ಟೇಬಲ್ ಮೇಲಿನ ಗಾಜು ಒಡೆದು, ಪ್ರಿಂಟರ್ ಮತ್ತು ವಿದ್ಯುತ್ ಸ್ವಿಚ್ ಗಳನ್ನು ಹಾಳುಮಾಡಿದ್ದು ಕಂಡುಬಂದಿದೆ. ಶೌಚಾಲಯದ ಕೊಠಡಿ ಸಹ ಹಾಳು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ,ಕಾನ್‌ಸ್ಟೇಬಲ್‌ ಮೌನೇಶ, […]

Continue Reading

ವಾಡಿ: ನೂತನ ವರ್ಷದ ದಿನದರ್ಶಿಕೆ ಬಿಡುಗಡೆ

ಸುದ್ದಿ ಸಂಗ್ರಹ ವಾಡಿ ಸಮೀಪದ ಸುಕ್ಷೇತ್ರ ಎಲ್ಲಾಂಬಿಕಾ ದೇವಿ ದೇವಸ್ಥಾನದಲ್ಲಿ ಹಲಕರ್ಟಿಯ ಸಿದ್ದೇಶ್ವರ ಹಿರೇಮಠದ ರಾಜಶೇಖರ ಶಿವಾಚಾರ್ಯರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಲ್ಲಣಗೌಡ ಪಾಟೀಲ, ದಂಡಯ್ಯ ಸ್ವಾಮಿ, ಬಸವರಾಜ ಸಜ್ಜನ, ಶರಣಗೌಡ ಚಾಮನೂರ, ವೀರಣ್ಣ ಯಾರಿ, ದೇವೇಂದ್ರ ಬಡಿಗೇರ ಮತ್ತು ಮೌನೇಶ ಪಂಚಾಳ ಇದ್ದರು.

Continue Reading

ಕುಂದನೂರು ಸಂಗಮದಲ್ಲಿನ ಪುಣ್ಯ ಸ್ನಾನಕ್ಕೆ ಉಚಿತ ಕಡಲೆ ಹಿಟ್ಟು ವಿತರಣೆ

‌ಸುದ್ದಿ ಸಂಗ್ರಹ ವಾಡಿಪಟ್ಟಣದ ಸಮೀಪದ ಕುಂದೂರು ಗ್ರಾಮದಲ್ಲಿರುವ ಭೀಮಾ ಮತ್ತು ಕಾಗಿಣಾ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆಂದು ಆಗಮಿಸಿದ ಸಾವಿರಾರು ಭಕ್ತರಿಗೆ ವರದಶ್ರೀ ಫೌಂಡೇಶನ್ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ನದಿಯ ದಂಡೆಯಲ್ಲಿ ಸೇರಿದ ಸಾವಿರಾರು ಜನ ಭಕ್ತರಿಗೆ ಉಚಿತ ಕಡಲೆ ಹಿಟ್ಟಿನ ಪ್ಯಾಕೆಟ್ ನೀಡುವ ಮೂಲಕ ನದಿ ಸಂರಕ್ಷಣೆ ಜಾಗೃತಿ ಮೂಡಿಸಲಾಯಿತು. ನದಿಯ ಪಾವಿತ್ರೃ ಮತ್ತು ಶುದ್ಧತೆ ಬಗ್ಗೆ ಅರಿವು ಮೂಡಿಸಲು ವಿಷಮುಕ್ತ ಪುಣ್ಯಸ್ನಾನ ಅಭಿಯಾನವನ್ನು ವರದಶ್ರೀ ಫೌಂಡೇಶನ್ ಸಂಸ್ಥೆ ಹಮ್ಮಿಕೊಂಡಿದೆ‌ ಎಂದು ಸಂಸ್ಥೆಯ […]

Continue Reading

ಶಿವಯೋಗಿ ಸಿದ್ದರಾಮೇಶ್ವರರ ತತ್ವ, ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಸುದ್ದಿ ಸಂಗ್ರಹ ಶಹಾಬಾದಶಿವಯೋಗಿಗಳು ತಮ್ಮ ತತ್ವೋಪದೇಶಗಳ ಮೂಲಕ ಜಾತಿ–ಭೇದ, ಅಸಮಾನತೆ ವಿರುದ್ಧ ಹೋರಾಡಿ ಶಾಂತಿ, ಸಹಬಾಳ್ವೆ ಮತ್ತು ಕಾಯಕದ ಮಹತ್ವ ಸಮಾಜಕ್ಕೆ ಬೋಧಿಸಿದ್ದಾರೆ. ವಚನಗಳ ಮೂಲಕ ನೀಡಿದ ತತ್ವ, ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮೇಶ್ವರರು ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ.12ನೇ ಶತಮಾನದಲ್ಲಿ ಸಿದ್ದರಾಮೇಶ್ವರರು […]

Continue Reading