ಆರೋಗ್ಯ ಸಂಪತ್ತೆ ನಿಜವಾದ ಶ್ರೇಷ್ಠ ಸಂಪತ್ತು: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯವೇ ನಿಜವಾದ ಶ್ರೇಷ್ಠ ಸಂಪತ್ತು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಪನ್ಮೂಲ ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,‌ ನಾವು ಜೀವನದಲ್ಲಿ ಏನೆಲ್ಲಾ ಸಂಪಾದನೆ ಮಾಡಿದರೂ ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಇಂದು ವ್ಯಸನಗಳು ಹೆಚ್ಚಾಗಿ ಜನಸಾಮಾನ್ಯರ ಬದುಕನ್ನು ಸಾವಿಗೆ ದೂಡುತ್ತಿವೆ. ದೇಶದ ಪ್ರಗತಿಗೆ […]

Continue Reading

ಪಪ್ಪಾಯಿ ಹಣ್ಣು ಆರೋಗ್ಯಕರ ಮತ್ತು ಲಾಭದಾಯಕ ಕೃಷಿ

ಸುದ್ದಿ ಸಂಗ್ರಹ ಕಾಳಗಿ ಪಪ್ಪಾಯಿ ಹಣ್ಣು ಕೃಷಿಗೆ ಶ್ರಮದಾಯಕ ಅಗತ್ಯ. ಸೂಕ್ತ ಕಾಲಕ್ಕೆ ಬೆಳೆ ನಿರ್ವಹಣೆ ಮಾಡಬೇಕು. ಇದರ ಸೇವನೆ ಆರೋಗ್ಯಕರ ಮತ್ತು ರೈತರಿಗೆ ಲಾಭದಾಯಕ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ಹೇಳಿದರು. ತಾಲೂಕಿನ ಹೆಬ್ಬಾಳ ಸಮೀಪದ ದೇಸಾಯಿಯವರ ಪಪ್ಪಾಯಿ ತೋಟದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಪಪ್ಪಾಯಿ ಹಣ್ಣು ಜೀರ್ಣಾಂಗದ ಆರೋಗ್ಯ ಸುಧಾರಿಸುತ್ತದೆ. […]

Continue Reading

ಕೆಎಸ್‌ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು

ಬೆಂಗಳೂರು: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂ ಲಂಚ ಪಡೆದಿರುವ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಮಾಡಲಾಗಿತ್ತು. ಆ ನಂತರ 13 ಜನ ಅಧಿಕಾರಿಗಳು ಅಮಾನತು ಆಗಿದ್ದರು. ಈಗ ಲಂಚ ಪಡೆಯುವ ಸರದಿ ಕೆಎಸ್‌ಆರ್​ಟಿಸಿಗೂ ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿರುವದು ಸಾಕ್ಷಿ ಲಭ್ಯವಾಗಿದೆ. ಕೆಎಸ್‌ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100 ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆ […]

Continue Reading

ಪ್ರಾಚೀನ ಕಾಲದ ಅಗ್ರಹಾರ, ವಾಣಿಜ್ಯ ಕೇಂದ್ರ ಮಂಗಲಗಿ: ಮುಡುಬಿ ಗುಂಡೇರಾವ

ಕಾಳಗಿ: ಕನ್ನಡಿಗರ ಸಾಧನೆಗಳನ್ನು ಸಾದರಪಡಿಸುವ ಮಂಗಲಗಿಯ ಸ್ಮಾರಕಗಳು ನಾಡಿನ ಇತಿಹಾಸ ಕಟ್ಟಿಕೊಡುವಲ್ಲಿ ಸಹಕಾರಿಯಾಗಿದೆ. 11ನೇ ಶತಮಾನದಲ್ಲಿ ವಿವಿಧ ಧರ್ಮಿಯರು ಬಾಳಿ ಬೆಳಗಿದ ಸಾಮರಸ್ಯದ ನೆಲವೀಡು ಇದಾಗಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಂಗಲಗಿ ಗ್ರಾಮದ ಐತಿಹಾಸಿಕ ಕ್ಷೇತ್ರ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕಲಬುರಗಿಯ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-31ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಮಂಗಲಗಿ ಗ್ರಾಮವು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರ […]

Continue Reading

ದೇಶದ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಗೊತ್ತೆ ?

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದೆ, ಇದರ ವಿಶ್ಲೇಷಣೆ ಪ್ರಕಾರ, ವ್ಯಾಪಕ ವ್ಯತ್ಯಾಸಗಳೊಂದಿಗೆ ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ. 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ಗಳಷ್ಟಿದೆ, 30 ಸಿಎಂಗಳಲ್ಲಿ ಇಬ್ಬರು (7%) ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದರೆ, ಅರುಣಾಚಲ […]

Continue Reading

ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ: ಶಂಕರಗೌಡ ಪಾಟೀಲ

ಚಿತ್ತಾಪುರ: ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪರಿಸರ ಕಾಪಾಡಿಕೊಳ್ಳಬೇಕು ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ್ ಹಬ್ಬದ ಮತ್ತು ಈದ್ – ಮಿಲಾದ್ ಒಟ್ಟಿಗೆ ಬಂದಿದ್ದು, ಹೀಗಾಗಿ ಎಲ್ಲರೂ ಸಂತೋಷದಿಂದ ಹಬ್ಬಗಳು ಆಚುಸಬೇಕು, ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.ಇತರರಿಗೆ ತೊಂದರೆಯಾಗದಂತೆ ಹಬ್ಬಗಳು ಆಚುಸಬೇಕು ಎಂದರು. ಗಣೇಶ ಪ್ರತಿಷ್ಠಾಪಿಸುವ ಉತ್ಸವ ಮಂಡಳಿಯವರುಪೊಲೀಸ್ ಠಾಣೆಗೆ ಮಾಹಿತಿ […]

Continue Reading

ಸ್ವತಃ ದೇವರೇ ಹೇಳಿದರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತು

ತುಮಕೂರು: ಸ್ವತಃ ದೇವರೇ ಹೇಳಿದರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ವಿವರಿಸುತ್ತಿದ್ದ ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡುವಾಗ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದಿನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೆನೆ ಎಂದರು. ಇದೆಲ್ಲಾ ಅಭಿವೃದ್ಧಿ ನಿಮಗಾಗಿ. ನಾನು […]

Continue Reading

ಪ್ರಾಚೀನ ಅವಶೇಷಗಳ ತಾಣ ಹೊಳಕುಂದಾ: ಮುಡಬಿ

ಕಲಬುರಗಿ: ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ, ಬಹುಮನಿ ಅರಸರ ಕಾಲದ ಅನೇಕ ಅವಶೇಷಗಳು, ಸ್ಮಾರಕಗಳುಳ್ಳ ತಾಣ ಹೊಳಕುಂದಾ ಗ್ರಾಮವಾಗಿದೆ. ಇದರ ಇತಿಹಾಸ ರೋಚಕವಾಗಿದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ಕಮಲಾಪುರ ತಾಲೂಕಿನ ಹೊಳಕುಂದಾ ಗ್ರಾಮದ ಐತಿಹಾಸಿಕ ರುಕ್ಮಿಣಿ-ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕಲಬುರಗಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-30ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕನ್ನಡಿಗರ ಧರ್ಮ, ಆಧ್ಯಾತ್ಮಿಕತೆ, ಶಿಕ್ಷಣ, ಆಡಳಿತ, ಶೌರ್ಯ, ಪರಾಕ್ರಮ ಸಾದರ […]

Continue Reading

ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳ ಪಾತ್ರ ಅನನ್ಯ

ಕಲಬುರಗಿ: ಉದ್ಯಮಗಳು ಸರಕುಗಳನ್ನು ಉತ್ಪಾದಿಸಿ ಸೇವೆಗಳನ್ನು ನೀಡುತ್ತವೆ. ಸರ್ಕಾರಕ್ಕೆ ತೆರಿಗೆ ಪಾವತಿಸುತ್ತವೆ. ಗ್ರಾಹಕರಿಗೆ ಅಗತ್ಯ ಸರಕುಗಳು ಪೂರೈಸುತ್ತವೆ. ಉದ್ಯೋಗ ನೀಡುವುದು ಸೇರಿದಂತೆ ಮತ್ತಿತರ ಕೊಡುಗೆ ನೀಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳು ಅನನ್ಯವಾದ ಪಾತ್ರ ವಹಿಸಿವೆ ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಕೇದರನಾಥ ಕುಲಕರ್ಣಿ ಹೇಳಿದರು. ನಗರದ ಸ್ವಾರಗೇಟ್’ನ ‘ರೇವಣಸಿದ್ದೇಶ್ವರ ಮಿನರಲ್ ವಾಟರ್ ಪ್ಲಾಂಟ್’ನ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ವಿಶ್ವ ಉದ್ಯಮಿಗಳ ದಿನಾಚರಣೆ’ಯಲ್ಲಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ […]

Continue Reading

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರ, ಚಂದ್ರನಲ್ಲಿರುವ ವಾತಾವರಣ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆ […]

Continue Reading