ಕೆಪಿಎಸ್- ಮ್ಯಾಗ್ನೆಟ್ ಶಾಲೆಯ ಶಂಕುಸ್ಥಾಪನೆಗೆ ಎಐಡಿಎಸ್‍ಒ ಖಂಡನೆ

ಸುದ್ದಿ ಸಂಗ್ರಹ ಶಹಾಬಾದಜಿಲ್ಲೆಯಾದ್ಯಂತ ಪೋಷಕರು ಮತ್ತು ವಿದ್ಯಾರ್ಥಿಗಳು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಜಿಲ್ಲೆಯ ಜನತೆಯ ಈ ತೀವ್ರ ಆಕ್ರೋಶದ ನಡುವೆಯೂ, ಮುಖ್ಯಮಂತ್ರಿಗಳು ನಾಳೆ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಕೆಪಿಎಸ್ ಶಾಲೆಗಳ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಖೇದಕರ ಎಂದು ಎಐಡಿಎಸ್‍ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಹೆಚ್ ಖಂಡಿಸಿದರು. ನಗರದ ರವಿವಾರ ಬಸವೇಶ್ವರ ವೃತ್ತದದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) -ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ […]

Continue Reading

ಶಹಾಬಾದ: ಪ್ರಜಾಸೌಧಕ್ಕೆ ಅಡಿಗಲ್ಲು ಹಾಕಲು ಮುಖ್ಯಮಂತ್ರಿಗಳಿಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದಹೊಸ ತಾಲೂಕು ಯಡ್ರಾಮಿಯಲ್ಲಿ ಮುಖ್ಯಮಂತ್ರಿಗಳು ಪ್ರಜಾಸೌಧ ಉದ್ಘಾಟನೆ ಮಾಡುತ್ತಿರುವುದು ಸಂತೋಷದ ವಿಷಯ, ಅದೆ ರೀತಿ ಶಹಾಬಾದ ತಾಲೂಕಿನ ಪ್ರಜಾಸೌಧದ ಅಡಿಗಲ್ಲು ಶೀಘ್ರವಾಗಿ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮುಖಂಡ ಕೃಷ್ಣಪ್ಪ ಕರಣಿಕ ಆಗ್ರಹಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರಾದಸಂಸ ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ತಾಲೂಕ ಘೋಷಣೆ ಮಾಡಿ, ಕಲಬುರಗಿ ಜಿಲ್ಲೆಯ ಶಹಾಬಾದ, ಕಾಳಗಿ ಮತ್ತು ಚಿತ್ತಾಪುರ ಮೂರು ತಾಲೂಕು ಎಂದು ವಿಭಜಿಸಿ […]

Continue Reading

ಕಲಬುರಗಿ ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳಲ್ಲಿ ಚಿತ್ತಾಪುರ ಮತಕ್ಷೇತ್ರದ ನಾಲ್ವರಿಗೆ ಅವಕಾಶ‌

ಸುದ್ದಿ ಸಂಗ್ರಹ ಚಿತ್ತಾಪುರಕಲಬುರಗಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ನೂತನ ಪದಾಧಿಕಾರಿಗಳಲ್ಲಿ ಚಿತ್ತಾಪುರ ಮತಕ್ಷೇತ್ರದ ನಾಲ್ಕು ಜನ ಮುಖಂಡರಿಗೆ ಅವಕಾಶ ನೀಡಲಾಗಿದೆ. ಬಿಜೆಪಿ ಪಕ್ಷದ ತಾಲೂಕು ಪದಾಧಿಕಾರಿಗಳಾಗಿ, ಜಿಲ್ಲಾ ಪದಾಧಿಕಾರಿಗಳಾಗಿ ಇವರುಗಳು ಈ ಹಿಂದೆ ಕೂಡ ಸೇವೆ ಸಲ್ಲಿಸಿದ್ದಾರೆ. ಶರಣುಜ್ಯೋತಿ ರಾವೂರ ಜಿಲ್ಲಾ ಉಪಾಧ್ಯಕ್ಷರಾಗಿ, ಬಸವರಾಜ ಬೆಣ್ಣೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ಗಿರೀಶ್ ಭಜಂತ್ರಿ ಜಿಲ್ಲಾ ಕಾರ್ಯದರ್ಶಿಗಳಾಗಿ, ಚಂದ್ರಶೇಖರ ಪರಸರೆಡ್ಡಿ ಜಿಲ್ಲಾ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಪದಾಧಿಕಾರಿಗಳ ಸ್ಥಾನಕ್ಕೆ ಯಾರು ಅರ್ಜಿ ಸಲ್ಲಿಸಿಲ್ಲ. […]

Continue Reading

ಹೃದಯಾಘಾತದಿಂದ ಪುತ್ರ ನಿಧನ, ನೋವಿನಲ್ಲಿ 20 ಸಾವಿರ ಕೋಟಿ ರೂ ಆಸ್ತಿ ದಾನ ಮಾಡುವುದಾಗಿ ಉದ್ಯಮಿ ಶಪಥ

ಸುದ್ದಿ ಸಂಗ್ರಹ ನವದೆಹಲಿ ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಅಧ್ಯಕ್ಷ ಅನೀಲ್ ಅಗರ್ವಾಲ್ ಅವರು ತಮ್ಮ ಜೀವನದ ಅತ್ಯಂತ ಕಠಿಣ ಸಮಯದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಅಮೆರಿಕದಲ್ಲಿ ತಮ್ಮ ಮಗ ಅಗ್ನಿವೇಶ್ ಅಗರ್ವಾಲ್ ಅವರ ಅಕಾಲಿಕ ಮರಣದ ನಂತರ, ಅನೀಲ್ ಅಗರ್ವಾಲ್ ಅವರು ತಮ್ಮ ಒಟ್ಟು ಸಂಪತ್ತಿನ ಶೇ. 75ಕ್ಕಿಂತ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ದಾನ ಮಾಡುವ ತಮ್ಮ ಹಳೆಯ ವಾಗ್ದಾನವನ್ನು ಪುನರುಚ್ಚರಿಸಿದ್ದಾರೆ. ಫೋರ್ಬ್ಸ್‌ ಪ್ರಕಾರ ಅನೀಲ್‌ ಅಗರ್‌ವಾಲ್‌ 3 ಬಿಲಿಯನ್‌ ಡಾಲರ್‌ ಅಂದರೆ ಸುಮಾರು 27 […]

Continue Reading

ಪಾಲಿಕೆ ಆಯುಕ್ತರ ಡಿಪಿ ಹಾಕೊಂಡು ಉಪ ಆಯುಕ್ತರಿಗೆ ಹಣಕ್ಕೆ ಮೆಸೇಜ್‌: ಸೈಬರ್‌ ಖದೀಮರ ಹೊಸ ಆಟ

ಸುದ್ದಿ ಸಂಗ್ರಹ ಬೆಳಗಾವಿ ಸೈಬರ್‌ ವಂಚಕರು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿ ವಂಚನೆಗಿಳಿದಿದ್ದಾರೆ. ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಡಿಪಿ ಹಾಕಿಕೊಂಡು ಉಪ ಆಯುಕ್ತ ಉದಯಕುಮಾರ್ ತಳವಾರಗೆ ಹಣಕ್ಕಾಗಿ ವಾಟ್ಸಪ್‌ನಲ್ಲಿ ಮೆಸೇಜ್ ಕಳುಹಿಸಿದ್ದಾರೆ. ಮೆಸೇಜ್‌ನಲ್ಲಿ ತುರ್ತಾಗಿ 50 ಸಾವಿರ ರೂ. ಅಕೌಂಟ್‍ಗೆ ಹಾಕಿ. ನಾನು ಮೀಟಿಂಗ್‍ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸಿ ಎಂದು ವಂಚಕರು ಮೆಸೆಜ್‌ ಕಳುಹಿಸಿದ್ದಾರೆ. ಮೆಸೇಜ್ ನೋಡಿ ಕಕ್ಕಾಬಿಕ್ಕಿಯಾದ ಉಪ ಆಯುಕ್ತ ಉದಯಕುಮಾರ್ ತಳವಾರ, ಹಣ ಕೇಳಿದ ನಂಬರ್‌ಗೆ ವಾಟ್ಸಪ್ ಕಾಲ್ […]

Continue Reading

ಹಿಂದಿ ಭಾಷೆಗಿದೆ ಜಾಗತಿಕ ಮನ್ನಣೆ: ಸುನೀಲ್ ಚೌಧರಿ

ಸುದ್ದಿ ಸಂಗ್ರಹ ಕಲಬುರಗಿವಿಶ್ವದ ಅನೇಕ ರಾಷ್ಟ್ರಗಳಲ್ಲಿ ಹಿಂದಿ ಭಾಷೆ ಬಳಕೆಯಲ್ಲಿದೆ, ಜಾಗತಿಕ ಮನ್ನಣೆ ದೊರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹಿಂದಿ ಲೇಖಕ ಸುನೀಲ್ ಚೌಧರಿ ಹೇಳಿದರು. ನಗರದ ಶಹಬಾಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಹಿಂದಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಅತಿ ಹೆಚ್ಚು ಜನರು ಹಿಂದಿ ಭಾಷೆಯುಲ್ಲಿ ಮಾತನಾಡುವತ್ತಾರೆ, ಸುಲಭವಾಗಿ ಅರ್ಥವಾಗುವ ಭಾಷೆಯಾಗಿದೆ, ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಹಿಂದಿ ಭಾಷೆಯು […]

Continue Reading

ತ್ಯಾಗವೀರ ಲಿಂಗರಾಜ ದೇಸಾಯಿಯವರ ಬಹುಮುಖ ಕೊಡುಗೆ ಅಪಾರ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಈ ನಾಡು ಕಂಡ ಅಪ್ರತಿಮ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿಯವರ ತ್ಯಾಗ ಮತ್ತು ಉದಾರ ಮನೋಭಾವ ಸದಾ ಸ್ಮರಣೀಯವಾದದ್ದು. ಕನ್ನಡ ನಾಡಿಗೆ  ಅಪಾರ ಸೇವೆ ಸಲ್ಲಿಸಿ, ಜೀವನವನ್ನೆ ತ್ಯಾಗ ಮಾಡಿದ ದೇಸಾಯಿಯವರ ಸಂಪೂರ್ಣ ಪರಿಚಯ ನಮ್ಮ ನಾಡಿಗೆ ಆಗಬೇಕಿದೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಹೇಳಿದರು.     ನಗರದ ಆಳಂದ ರಸ್ತೆಯ ಶಿವನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ್ಯಾಗವೀರ ಲಿಂಗರಾಜ ದೇಸಾಯಿಯವರ […]

Continue Reading

ನಾಲವಾರ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ ಮತ್ತು ಕಡಕೋಳ ಮಡಿವಾಳೇಶ್ವರ ಪುರಾಣ ಪ್ರಾರಂಭ

ಸುದ್ದಿ ಸಂಗ್ರಹ ನಾಲವಾರಕಲಬುರಗಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ನಿಮಿತ್ಯ ಕಡಕೋಳದ ಮಡಿವಾಳೇಶ್ವರ ಪುರಾಣ ಪ್ರಾರಂಭೋತ್ಸವ, ಜಾತ್ರಾ ಮಹೋತ್ಸವದ ಭಿತ್ತಿ ಪತ್ರಗಳ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಚಾಲನಾ ಸಮಾರಂಭವು ಗುರುವಾರ ಅತ್ಯಂತ ಅದ್ಧೂರಿಯಾಗಿ ನೆರವೇರಿತು. ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಕರಡಕಲ್ಲ ಕೋರಿಸಿದ್ಧೇಶ್ವರ ಶಾಖಾ ಮಠದ ಶಾಂತರುದ್ರಮುನಿ ಮಹಾಸ್ವಾಮಿಗಳು ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ನಾಡಿನ ಪ್ರಖರ ಪ್ರವಚನಕಾರರೆಂದು ಪ್ರಖ್ಯಾತರಾದ ಸಿದ್ಧಬಸವಕಬೀರ […]

Continue Reading

ಜಯಮಾಲ, ಸಾ.ರಾ ಗೋವಿಂದಗೆ ಡಾ.ರಾಜಕುಮಾರ್‌ ಪ್ರಶಸ್ತಿ, ಸುಂದರ್‌ರಾಜ್‌ಗೆ ವಿಷ್ಣುವರ್ಧನ ಪ್ರಶಸ್ತಿ ಪ್ರಕಟ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯ ಸರ್ಕಾರ 2020 ಹಾಗೂ 2021ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ ಮತ್ತು ಡಾ. ವಿಷ್ಣುವರ್ಧನ್‌ ಪ್ರಶಸ್ತಿ ಪ್ರಕಟ ಮಾಡಿದೆ. 2020ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿ ಹಿರಿಯ ನಟಿ ಡಾ.ಜಯಮಾಲಾ ಅವರಿಗೆ ನೀಡಲಾಗಿದೆ, ಇನ್ನು 2021ನೇ ಸಾಲಿನ ಪ್ರಶಸ್ತಿಯನ್ನು ಹಿರಿಯ ನಿರ್ಮಾಪಕ ಸಾ.ರಾ ಗೋವಿಂದ್‌ ಅವರಿಗೆ ಘೋಷಿಸಿಸಲಾಗಿದೆ. ಇನ್ನು 2020ನೇ ಸಾಲಿನ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ ಹಿರಿಯ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಎಂಎಸ್‌ ಸತ್ಯ ಅವರಿಗೆ ಘೋಷಿಸಲಾಗಿದ್ದರೆ, 2021ನೇ […]

Continue Reading

ಜ.12 ರಂದು ಚಿತ್ತಾಪುರಕ್ಕೆ ಮುಖ್ಯಮಂತ್ರಿ ಆಗಮನ

ಸುದ್ದಿ ಸಂಗ್ರಹ ಚಿತ್ತಾಪುರಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜ.12 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದು. ಬುಧವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸ್ಥಳಕ್ಕೆ ಭೇಟಿಯಾಗಿ ಪರಿಶೀಲಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವ‌ರ್’ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರ್ ಶ್ರೀನಿವಾಸಲು ಅವರು ಕಾರ್ಯಕ್ರಮ ಆಯೋಜನೆ ಮಾಡಲು ಉದ್ದೇಶಿಸಿರುವ ಪಟ್ಟಣದ ಕಡೆಚೂರು ಮೈದಾನ ಪರಿಶೀಲನೆ ಮಾಡಿದರು. ವೇದಿಕೆ ನಿರ್ಮಾಣ, ಶಾಮೀಯಾನ, ಪೊಲೀಸ್ ಬ್ಯಾರಿಕೇಡ್, ಪಾರ್ಕಿಂಗ್ ಸ್ಥಳಗಳ ಹಾಗೂ ಹೆಲಿಕಾಪ್ಟರ್ […]

Continue Reading