ಡಿಕೆಶಿಯಿಂದ ಮೋದಿ ಭೇಟಿ: ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ

ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೆ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೆ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿ ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ […]

Continue Reading

ಶಹಾಬಾದ್: ನಗರದ ವಿವಿಧ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಸುದ್ದಿ ಸಂಗ್ರಹ ಶಹಾಬಾದ್ನಗರದ ಎಸ್-4 ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜೂನ್ 12 ರಂದು ಶುಕ್ರವಾರ ಬೆಳಗ್ಗೆ 8:30 ರಿಂದ ಸಂಜೆ 5:30 ರವರೆಗೆ ನಗರದ ಪ್ರಮುಖ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಶಹಾಬಾದ ಜೆಸ್ಕಾಂ ಎಇಇ ಅಧಿಕಾರಿ ಸೈಯದ ಯೂನೂಸ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂನ್ 12 ರಂದು ನಗರದ ಲಕ್ಷ್ಮಿ ಗಂಜ, ಶಾಸ್ತ್ರಿ ಚೌಕ, ನಾಲಾ ಟೇಕ್, ಅಪ್ಪರ ಮಡ್ಡಿ, […]

Continue Reading

ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನ

ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತದ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಆಫಜಲಪೂರಕರ್ ಸನ್ಮಾನಿಸಿ ಅಭಿನಂದಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ರಾಜ್ಯದ ಕಾನೂನು- ಸುವ್ಯವಸ್ಥೆ ಮತ್ತಷ್ಟು ಬಲಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ, ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆಯ ಪಾತ್ರ […]

Continue Reading

ಇಂಗಳಗಿ ಅಂಗನವಾಡಿ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ಇಂಗಳಗಿ ಅಂಗನವಾಡಿ ಕಾರ್ಯಕರ್ತೆ ಶೇಖಮ್ಮ ಕುರಿ ಕರ್ತವ್ಯಕ್ಕೆ ಹಾಜರಾಗದೆ ಸತತ ಗೈರು ಇದ್ದು, ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ನಗರದ ಸಿಡಿಪಿಒ ಕಚೇರಿ ಎದುರು ಇಂಗಳಗಿ ಗ್ರಾಮ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂಗಳಗಿ ಗ್ರಾಮದ ಅಂಗನವಾಡಿ ಕೇಂದ್ರ-1ರ ಕಾರ್ಯಕರ್ತೆ ಶೇಖಮ್ಮ ಕುರಿ ಕೇಂದ್ರಕ್ಕೆ ಹೋಗುವುದಿಲ್ಲ. ಮಕ್ಕಳಿಗೆ ಸರಿಯಾಗಿ ಪೌಷ್ಟಿಕ ಆಹಾರ ವಿತರಣೆ ಮಾಡುವುದಿಲ್ಲ. ಕಳೆದ 15 ವರ್ಷಗಳಿಂದ ರಾಜಕೀಯ ಪ್ರಭಾವ ಬೀರಿ, ಅಂಗನವಾಡಿ ಕೇಂದ್ರದ ಕೆಲಸ ಮಾಡದೆ ಅಕ್ರಮವಾಗಿ […]

Continue Reading

ಸುದೀರ್ಘ ಅವಧಿ ಪ್ರಧಾನಿಯಾಗಿ ನರೇಂದ್ರ ಮೋದಿ ಹೊಸ ದಾಖಲೆ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೆ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಭಾಜನರಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಅವರ ಕಟೌಟ್’ಗೆ ಹಾಲಿನ ಅಭಿಷೇಕ ಮಾಡಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ರಾಜಕೀಯ ಮೈಲಿಗಲ್ಲು ತಲುಪಿದ್ದಾರೆ ಎಂದರು. […]

Continue Reading

ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡಿದ್ರೆ 25,000 ರೂ. ಗಿಫ್ಟ್

ಸುದ್ದಿ ಸಂಗ್ರಹ ನವದೆಹಲಿರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ನೆರವು ನೀಡುವವರಿಗೆ ಕೇಂದ್ರ ಸರ್ಕಾರ ರಹಾ-ವೀರ್ ಯೋಜನೆ ಅಡಿಯಲ್ಲಿ 25 ಸಾವಿರ ರೂ ನೀಡಲಿದೆ. ಅಲ್ಲದೆ ಅಂಥವರಿಗೆ ಕಾನೂನಿನ ರಕ್ಷಣೆಯನ್ನೂ ನೀಡಲಾಗುತ್ತದೆ. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯನ್ನು ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ಸಮಯದಲ್ಲಿ ಗಾಯಾಳುವಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆತರೆ ಸಾವು ಅಥವಾ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಬಹುದು. ಹೀಗಾಗಿ ರಹಾ-ವೀರ್ ಆಗಲು ಯಾವುದೆ […]

Continue Reading

ಐಸ್‌ಕ್ರೀಮ್ ಬೇಕಂತ ಹಠ ಮಾಡಿದ್ದಕ್ಕೆ ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಪೊಲೀಸರ ಬಳಿ ಸತ್ಯ ಬಿಚ್ಚಿಟ್ಟ ಆರೋಪಿ ಮೋಹನ್

ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ. ಮಗು ಐಸ್‌ಕ್ರೀಮ್ ಬೇಕೆಂದು ಹಠ ಮಾಡಿದಕ್ಕೆ ಆಕೆಯ ಹೊಟ್ಟೆಗೆ ಬಲವಾಗಿ ಒದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯ ಬಗ್ಗೆ ತಪ್ಪೊಪ್ಪಿಗೆಪೊಲೀಸ್ ತನಿಖೆ ವೇಳೆ ಆರೋಪಿ ಮೋಹನ್ ನೀಡಿದ ಹೇಳಿಕೆ ಅಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 21ರಂದು ಪ್ರಿಯಾಂಕಾ ಮತ್ತು ಮೋಹನ್ ಮಧುರೈಗೆ ಮೂರು ದಿನಗಳ ದೇವಸ್ಥಾನ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಬೆಂಗಳೂರಿಗೆ ವಾಪಸ್ ಬಂದಿದ್ದರು. ಅದೆ […]

Continue Reading

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಒತ್ತಾಯ

ಸುದ್ದಿ ಸಂಗ್ರಹ ವಾಡಿಪಟ್ಟಣದ ನಿವಾಸಿಗಳಿಗೆ ರಸ್ತೆ ಸೇರಿದಂತೆ ಇತರ ಮೂಲ ಸೌಲಭ್ಯಗಳನ್ನು ಒದಗಿಸಕೊಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿಮನೋಜಕುಮಾರ ಗುರಿಕಾರ ಅವರಿಗೆ‌ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಿಸಿದರು. ಪಟ್ಟಣದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ರಸ್ತೆ, ಚರಂಡಿ ನೀರು ತಗ್ಗು ಪ್ರದೇಶಗಳಲ್ಲಿ, ಅಂಗಡಿಗಳಲ್ಲಿ ಮತ್ತು ಮನೆಗಳಲ್ಲಿ ನುಗ್ಗುವುದು ಸಾಮಾನ್ಯವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆಗಳಾದ ಯಾದಗಿರಿ ರಸ್ತೆ, ರಾವೂರ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆ, ಚರಂಡಿ ಮೇಲೆಯೇ ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ […]

Continue Reading

ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೆ ಪರಿಹಾರವೆ ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೈನ್ ಟ್ಯೂಮರ್ ಎಂಬ ಪದವೆ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೆ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೆ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ ಬ್ರೈನ್ ಟ್ಯೂಮರ್‌ […]

Continue Reading

ಜಪಾನ್ ಆಯ್ತು, ಈಗ ನೇಪಾಳದಿಂದಲೂ ಭಾರತದ ಮಾವಿನ ಹಣ್ಣಿಗೆ ನಿರ್ಬಂಧ

ಸುದ್ದಿ ಸಂಗ್ರಹ ಕಠ್ಮಂಡುಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅಂಶಗಳು ಕಂಡುಬಂದಿವೆ. ಗ್ರಾಹಕರ ಆರೋಗ್ಯ ರಕ್ಷಣೆ ಮತ್ತು ಆಹಾರ ಸುರಕ್ಷತಾ ನಿಯಮಗಳ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ. […]

Continue Reading