ಸಿದ್ಧೇಶ್ವರ ಸ್ವಾಮಿಜಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಆಧ್ಯಾತ್ಮಿಕ ಪ್ರವಚನದ ಮೂಲಕ ಅಸಂಖ್ಯಾತ ಜನರ ಮನಸ್ಸನ್ನು ಸುಧಾರಿಸಿ ಎರಡನೆ ವಿವೇಕಾನಂದ, ‘ನಡೆದಾಡುವ ದೇವರು’, ‘ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ’ ಸಿದ್ಧೇಶ್ವರ ಸ್ವಾಮೀಜಿಯವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.  ಜಿಲ್ಲೆಯ ಜೇವರ್ಗಿ ಪಟ್ಟಣದ ಶಾಂತನಗರದ ದ್ರೋಣ ಕೋಚಿಂಗ್ ಕೇಂದ್ರದಲ್ಲಿ  ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಸಿದ್ಧೇಶ್ವರ ಸ್ವಾಮಿಜಿಯ ತೃತೀಯ ಲಿಂಗೈಕ್ಯ ಸಂಸ್ಮರೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಪೂಜ್ಯರು ದೇಶ-ವಿದೇಶಗಳಲ್ಲಿ […]

Continue Reading

ತೋಟ್ನಳ್ಳಿ ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಪತ್ರಿಕೆ ಬಿಡುಗಡೆ‌

ಸುದ್ದಿ ಸಂಗ್ರಹ ತೋಟ್ನಳ್ಳಿಗ್ರಾಮದ ಶ್ರೀ ದುರ್ಗಾದೇವಿ ಪಲ್ಲಕ್ಕಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಡಾ.ತ್ರಿಮೂರ್ತಿ ಶಿವಾಚಾರ್ಯರ ನೇತೃತ್ವದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಬಿಡುಗಡೆ ಮಾಡಿದರು. ಆಮಂತ್ರಣ ಪತ್ರಿಕೆಯ ದಾಸೋಹಿಗಳಾದ ವಿಶ್ವನಾಥ ತೋಟ್ನಳ್ಳಿ, ಡಾ.ವಿವೇಕಾನಂದ ಬುಳ್ಳಾ ಮತ್ತು ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಜ.2 ರಂದು ಸಂಜೆ 5 ಗಂಟೆಗೆ ತೋಟ್ಟಳ್ಳಿ ಗ್ರಾಮದ ಮಹಾಂತೇಶ್ವರ ಮಠದಿಂದ ವಾದ್ಯಮೇಳದೊಂದಿಗೆ ದೇವಿಯ ದೇವಸ್ಥಾನದವರೆಗೆ ಪಲ್ಲಕ್ಕಿ ಉತ್ಸವಹಾಗೂ ದುರ್ಗಾದೇವಿಯ ಉತ್ಸವ ಮೂರ್ತಿಯನ್ನು ಬರಮಾಡಿ […]

Continue Reading

ನನ್ನ ಹತ್ಯೆಗೆ ನಾರಾಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

ಸುದ್ದಿ ಸಂಗ್ರಹ ಬಳ್ಳಾರಿ ಬಳ್ಳಾರಿ‌ ನಗರ ಶಾಸಕ ನಾರಾ ಭರತ್ ರೆಡ್ಡಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಮನೆಯ ಮುಂದೆ ನಡೆದ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಕ್ಷೇತ್ರದ ಕೆಲಸಕ್ಕೆ ಹೋಗಿದ್ದೆ. ನಾನು ಇಲ್ಲದ ಸಮಯದಲ್ಲಿ ಭರತ್‌ ರೆಡ್ಡಿ ಬೆಂಬಲಿಗರು ಮನೆಯ ಮುಂದೆ ಕುರ್ಚಿ ಹಾಕಿ ಗಲಾಟೆ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ನಾನು ಶ್ರೀರಾಮುಲು ಅವರಿಗೆ ತಿಳಿಸಿದ್ದೆ. ಅವರು […]

Continue Reading

ಚಿತ್ತಾಪುರ: ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ‌

ಸುದ್ದಿ ಸಂಗ್ರಹ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸೃಜಿಸಿದ 2026ನೇ ಸಾಲಿನ ಕ್ಯಾಲೆಂಡರ್ ಗ್ರೇಡ್- 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಗುರುವಾರ ಬಿಡುಗಡೆ ಮಾಡಿದರು‌. ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರ ನಿರ್ದೇಶನದ ಮೇರೆಗೆ ರಾಜ್ಯ ಸಂಘದಿಂದ ತಯಾರಿಸಿದ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ತಾಲೂಕಿನ ಎಲ್ಲಾ ಇಲಾಖೆಗಳ ನೌಕರರಿಗೆ ವಿತರಿಸಲಾಗುವುದು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.‌‌ ಇದೆ […]

Continue Reading

ವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮಿಜಿ ಕಪಾಳಮೋಕ್ಷ

ಸುದ್ದಿ ಸಂಗ್ರಹ ವಿಜಯಪುರ ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಪ್ರತಿಭಟನೆಯಲ್ಲಿ ಸ್ವಾಮಿಜಿಗಳು ಪಾಲ್ಗೊಂಡಿದ್ದಾರೆ. ಇದೆ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ ಪಾಟೀಲ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮಿಜಿ ಸಿಟ್ಟಿಗೆದ್ದು ಪಿಎಸ್ಐ ಮತ್ತು ಪೊಲೀಸ್ ಪೇದೆಗೆ […]

Continue Reading

ಸಿಗರೇಟ್, ಗುಟ್ಕಾ ಬಳಸುತ್ತಿರಾ ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ

ಸುದ್ದಿ ಸಂಗ್ರಹ ನವದೆಹಲಿ ಫೆ.1 ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ ಸಿಗರೇಟ್, ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆ.1 ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ ಹೊರೆ […]

Continue Reading

ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರು ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ1 ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೆ ಸಂದರ್ಭದಲ್ಲೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025ರ ಡಿ.31ಕ್ಕೆ ಕೊನೆಯಾದ ಹಿನ್ನೆಲೆ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಆದೇಶದ […]

Continue Reading

ಅರ್ಥಪೂರ್ಣ ಹೊಸ ವರ್ಷಾಚರಣೆ ಇಂದಿನ ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಭಾರತೀಯರ ಹೊಸ ವರ್ಷ ಯುಗಾದಿಯ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕ್ಯಾಲೆಂಡರ್ ವರ್ಷವೆ ಹೊಸ ವರ್ಷವಾಗಿದೆ. ಎಲ್ಲೆಡೆ ವಿಪರೀತ ಪಟಾಕಿ ಸಿಡಿಸುವುದು, ಮಿತಿಮೀರಿ ಮದ್ಯ ಸೇವಿಸಿ ಕುಣಿದು ಕುಪ್ಪಳಿಸುವುದು, ಶಾಂತಿ-ಸಾಮರಸ್ಯ ಕದಡುವ ಸಂದರ್ಭ, ಪಟಾಕಿ ಸದ್ದಿನಲ್ಲಿ ಮಲೀನ ಹೊಗೆ ಸೇವಿಸುತ್ತ ಜನರು ಚಲಿಸುವಂತ ಸ್ಥಿತಿ, ಸಂಪೂರ್ಣ ಕುಡಿದು ವಾಹನ ಚಲಾಯಿಸಿ ಅಪಘಾತವಾಗಿ ನಿಧನ ಹಾಗೂ ಗಾಯವಾಗುವ ಪರಿಸ್ಥಿತಿ ಉಂಟು ಮಾಡದೇ, ಅರ್ಥಪೂರ್ಣ ಆಚರಣೆ ಇಂದಿನ ಅಗತ್ಯವಾಗಿದೆ ಎಂದು ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ […]

Continue Reading

ಭರತನಾಟ್ಯ ಭಾರತದ ಶ್ರೀಮಂತ ಸಂಸ್ಕೃತಿ,  ಪರಂಪರೆಯ ಸಂಕೇತ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಭರತನಾಟ್ಯವು ಕೇವಲ ನೃತ್ಯವಲ್ಲ, ಅದು ಭಾರತದ ಶ್ರೀಮಂತ ಸಾಂಸ್ಕೃತಿಕ, ಪರಂಪರೆಯ ಸಂಕೇತವಾಗಿದೆ. ಆಧ್ಯಾತ್ಮಿಕತೆಯ ಆಳ ಮತ್ತು ಕಲಾತ್ಮಕ ಶ್ರೇಷ್ಠತೆಯ ಪ್ರತೀಕವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ವತಿಯಿಂದ 2023-24ನೇ ಸಾಲಿನ ‘ಅಕಾಡೆಮಿ ಬಾಲಗೌರವ ಪ್ರಶಸ್ತಿ’ ಪುರಸ್ಕೃತೆ, ಭರತನಾಟ್ಯ ಕಲಾವಿದೆ ವರ್ಷಿಣಿ ಆರ್. ಪತ್ತಾರ ಅವರಿಗೆ ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿನ ‘ಶಾಂತಲೆ ಸಾಂಸ್ಕೃತಿಕ ನೃತ್ಯಕಲಾ ಸಂಸ್ಥೆ’ಯಲ್ಲಿ ಬುಧವಾರ ಸಂಜೆ ಬಸವೇಶ್ವರ […]

Continue Reading

ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠ ಹೋರಾಟ ಮಾಡುತ್ತಿರುವ ಎಐಡಿಎಸ್ಒ ಸಂಘಟನೆ: ತುಳುಜರಾಮ

ಸುದ್ದಿ ಸಂಗ್ರಹ ಶಹಾಬಾದಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ದೇಶಾದ್ಯಂತ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠವಾದ ಚಳುವಳಿ ಕಟ್ಟುತ್ತಾ ಬರುತ್ತಿದೆ. ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಸಾರ್ವತ್ರಿಕ ಶಿಕ್ಷಣ ನಮ್ಮದಾಗಬೇಕು ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಎಐಡಿಎಸ್ಒ ಕರ್ನಾಟಕದಲ್ಲೂ ಬಹಳ ಸಕ್ರಿಯವಾಗಿ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಬಲಿಷ್ಠ ಚಳುವಳಿ ಬೆಳೆಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾಧ್ಯಕ್ಷ ತುಳುಜರಾಮ ಹೇಳಿದರು. ನಗರದ ಹುನಮಾನ ನಗರದಲ್ಲಿ ಸ್ಥಳೀಯ ಸಮಿತಿ ವತಿಯಿಂದ ಎಐಡಿಎಸ್ಒ 72ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೋದಯದ […]

Continue Reading