ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠ ಹೋರಾಟ ಮಾಡುತ್ತಿರುವ ಎಐಡಿಎಸ್ಒ ಸಂಘಟನೆ: ತುಳುಜರಾಮ

ಸುದ್ದಿ ಸಂಗ್ರಹ ಶಹಾಬಾದಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ದೇಶಾದ್ಯಂತ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠವಾದ ಚಳುವಳಿ ಕಟ್ಟುತ್ತಾ ಬರುತ್ತಿದೆ. ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಸಾರ್ವತ್ರಿಕ ಶಿಕ್ಷಣ ನಮ್ಮದಾಗಬೇಕು ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಎಐಡಿಎಸ್ಒ ಕರ್ನಾಟಕದಲ್ಲೂ ಬಹಳ ಸಕ್ರಿಯವಾಗಿ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಬಲಿಷ್ಠ ಚಳುವಳಿ ಬೆಳೆಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾಧ್ಯಕ್ಷ ತುಳುಜರಾಮ ಹೇಳಿದರು. ನಗರದ ಹುನಮಾನ ನಗರದಲ್ಲಿ ಸ್ಥಳೀಯ ಸಮಿತಿ ವತಿಯಿಂದ ಎಐಡಿಎಸ್ಒ 72ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೋದಯದ […]

Continue Reading

ಗಾಂಧಿಜೀ ಗ್ರಾಮ ಸ್ವರಾಜ್ ಕಲ್ಪನೆಯೇ ರಾಷ್ಟ್ರೀಯ ಸೇವಾ ಯೋಜನೆ: ರಾಠೋಡ

ಸುದ್ದಿ ಸಂಗ್ರಹ ಶಹಾಬಾದದೇಶದ ಸ್ವಾತಂತ್ರ್ಯದ ನಂತರ ಮಹಾತ್ಮಾ ಗಾಂಧಿ ಚಿಂತನೆಯ ಸರ್ವೋದಯ, ಗ್ರಾಮ ಸ್ವರಾಜ್ ಕಲ್ಪನೆಯೇ ಇಂದು ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಎಂದು ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಪಾಂಡು ಎಲ್.ರಾಠೋಡ ಹೇಳಿದರು. ನಗರದ ಎಸ್.ಎಸ್ ಮರಗೋಳ ಮಹಾವಿದ್ಯಾಲಯದ ಪದವಿ ಪೂರ್ವ ಕಾಲೇಜಿನಲ್ಲಿ ಸೋಮುವಾರ ನಶೆ ಮುಕ್ತ ಭಾರತ ಘೋಷಣೆ ಅಡಿಯಲ್ಲಿ ನಡೆದ ಎನ್‌ಎಸ್‌ಎಸ್‌ನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಹಳ್ಳಿಗಳ ಉದ್ಧಾರ ಆಗಬೇಕಾದರೆ ಗ್ರಾಮ ಸ್ವರಾಜ್ಯಕ್ಕೆ ಸಹಕಾರಿಯಾಗಿ […]

Continue Reading

ವೆಂಕಟೇಶ್ವರ ಕಾಲೋನಿಯಲ್ಲಿ ಮನೆ ಮತ್ತು ಬೈಕ್ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ‌

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಮಂಗಳವಾರ ರಾತ್ರಿ 3 ಗಂಟೆ ಸುಮಾರಿಗೆ ಒಂದು ಬೈಕ್‌ ಮತ್ತು ಮನೆ ಕಳ್ಳತನವಾದ ಘಟನೆ ನಡೆದಿರುವದು ವರದಿಯಾಗಿದೆ. ಕಳ್ಳರ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಟಮದೇವರಹಳ್ಳಿಯ ನಿವಾಸಿ ರಮೇಶ ಶರಣಪ್ಪ ಬೋವಿ ಅವರ ಮನೆಯಿಂದ 10 ಗ್ರಾಂ ಚಿನ್ನ, 16 ತೊಲೆ ಬೆಳ್ಳಿ ಮತ್ತು 1,500 ರೂ.ನಗದು ದೋಚಿದ್ದಾರೆ.ಕಾಲೋನಿಯಲ್ಲಿರುವ ಜಗನ್ನಾಥ ಗುತ್ತೇದಾರ, ಚಂದಯ್ಯ ಗುತ್ತೇದಾರ ಅವರ ಮನೆ ಮುಂಭಾಗ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. […]

Continue Reading

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳು ತಿನ್ನಬೇಡಿ

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೊಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. […]

Continue Reading

ಸ್ವಾಭಿಮಾನ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಸರ್ವ ಬಾಂಧವರಿ ಧನ್ಯವಾದಗಳು

ಸುದ್ದಿ ಸಂಗ್ರಹ ಕಲಬುರಗಿಸಮಾಜದ ಗುರುಗಳ ಸಾನಿಧ್ಯದಲ್ಲಿ ನಡೆದಂತ ಕೋಲಿ ಕಬ್ಬಲಿಗ ಎಸ್’ಟಿ ಸೇರ್ಪಡೆಗೆ ನಡೆದ ಸ್ವಾಭಿಮಾನ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆ, ತಾಲೂಕು ಮತ್ತು ಪ್ರತಿಯೊಂದು ಹಳ್ಳಿಗಳಿಂದ ಆಗಮಿಸಿದ ಸಮಾಜ ಬಾಂಧವರು ಯಾವುದೆ ಭೇದ-ಭಾವ, ನಾನು-ನೀನು ಎನ್ನದೆ ಸಮಾಜದ ಸ್ವಾಭಿಮಾನದಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸ್ವಾಭಿಮಾನದ ಸಿಂಹ ದಿವಂಗತ ವಿಠ್ಠಲ ಹೇರೂರು ಅವರ ಕನಸನ್ನು ನನಸು ಮಾಡಲು ಸಮಯ ಲೆಕ್ಕಿಸದೆ ಸ್ವ-ಇಚ್ಛೆಯಿಂದ ಆಗಮಿಸಿ ಕಲಬುರಗಿ ಜಿಲ್ಲೆಯಲ್ಲಿ ಇತಿಹಾಸ ನಿರ್ಮಿಸುವಂತೆ ಮಾಡಿದ ಸಮಾಜ ಬಾಂಧವರಿಗೆ ಚಿತ್ತಾಪುರ ತಾಲೂಕ ಯುವ ಕೋಲಿ […]

Continue Reading

ಕುವೆಂಪು ಸಂದೇಶ ಸಮಾಜಕ್ಕೆ ದಾರಿ: ಶರಣಬಸಪ್ಪ ಕೋಬಾಳ

ಸುದ್ದಿ ಸಂಗ್ರಹ ಶಹಾಬಾದ್ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಷ್ಟಕವಿ ಕುವೆಂಪು ಜಗತ್ತಿಗೆ ಸಾರಿದ ವಿಶ್ವ ಮಾನವ ಸಂದೇಶ ಪರಿಕಲ್ಪನೆಯೂ ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕಸಾಪ ಅಧ್ಯಕ್ಷ ಶರಣಬಸಪ್ಪ ಕೋಬಾಳ ಹೇಳಿದರು. ನಗರದ ಲಕ್ಷ್ಮಿಗಂಜ ಬಡಾವಣೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಮಾನವ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸಋಷಿ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ವಿಶ್ವ […]

Continue Reading

ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕರಿಸಿ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಚಿತ್ತಾಪುರಸಮಾಜದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಜಿಲ್ಲಾ ಪೊಲೀಸ್, ಶಹಾಬಾದ ಉಪವಿಭಾಗ ಮತ್ತು ವಾಡಿ. ಪೊಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಹಂತದಲ್ಲಿಯೆ ಮಕ್ಕಳು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವದು ದುರಂತ. ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆ, ಗೊತ್ತಿರದ ಲಿಂಕ್’ಗಳನ್ನು ತೆರೆಯುವುದು, ಆನ್’ಲೈನ್ ಗೇಮ್’ಗಳು ಆಡುವುದು, […]

Continue Reading

ಶಹಾಬಾದ: ಹಳೆ ವಿದ್ಯಾರ್ಥಿಗಳಿಂದ ಕಂಪ್ಯೂಟರ್ ಕೊಡುಗೆ‌

ಸುದ್ದಿ ಸಂಗ್ರಹ ಶಹಾಬಾದನಗರದ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠದಲ್ಲಿ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮದಲ್ಲಿ 1997-98ನೇ ಸಾಲಿನ ವಿದ್ಯಾರ್ಥಿಗಳು ಶಾಲೆಗೆ 3 ಕಂಪ್ಯೂಟರ್‌’ಗಳು ಕೊಡುಗೆಯಾಗಿ ನೀಡಿದರು.‌ ಕೊಡುಗೆ ಸ್ವೀಕರಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಮುತ್ತಟ್ಟಿ, ಹಳೆಯ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದ ನಡುವೆ ಶಾಲೆಯನ್ನು ನೆನಪಿಸಿಕೊಂಡು, ಹಳೆಯ ವಿದ್ಯಾರ್ಥಿಗಳ ತಾಂತ್ರಿಕ ಶಿಕ್ಷಣಕ್ಕೆ ನೆರವಾಗುತ್ತಿರುವುದು ಹೆಮ್ಮೆಯ ವಿಷಯ. ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆಯಲು ಇಂತಹ ವಿದ್ಯಾರ್ಥಿಗಳ ಪ್ರೇರಣೆಯೆ ಕಾರಣ ಎಂದರು. ಸಂಸ್ಥೆಯ […]

Continue Reading

ಕರ್ನಾಟಕಕ್ಕೆ ಸಗರನಾಡಿನ ಕೊಡುಗೆ ಅಪಾರ: ಮುಡುಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿ ರಾಷ್ಟ್ರಕೂಟರು, ಕಲ್ಯಾಣ ಚಾಲುಕ್ಯರು ಆಳಿದ ಪುಣ್ಯ ನೆಲ, ಪ್ರಾಚೀನ ಕಾಲದಿಂದಲೂ ಕರ್ನಾಟಕಕ್ಕೆ ಸಗರನಾಡಿನ ಕೊಡುಗೆ ಅಪಾರವಾಗಿದೆ ಎಂದು ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತವ್ಯಕ್ತಪಡಿಸಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಹನುಮಾನ ಮಂದಿರದ ಪರಿಸರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಹಮ್ಮಿಕೊಂಡಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ -46 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಗರನಾಡಿನಲ್ಲಿ ದೊರೆಯುವ ಪಾಚೀನ ಸ್ಮಾರಕಗಳು, ಕೋಟೆಕೊತ್ತಲಗಳು, ದೇವಾಲಯಗಳು, ಶಾಸನ, ವೀರಗಲ್ಲುಗಳು ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುತ್ತವೆ. ಕಲ್ಯಾಣ […]

Continue Reading

ಪ್ಯಾಕೆಟ್​ ಹಾಲಿನಿಂದಲೆ ತಿಂಗಳಿಗೆ 1 ಕೆಜಿ ಬೆಣ್ಣೆ ತೆಗೆಯಬಹುದು, ಆ ಸಿಂಪಲ್​ ಟ್ರಿಕ್​​​ ಇಲ್ಲಿದೆ

ಅಡುಗೆಯಲ್ಲಿ ಬೆಣ್ಣೆಯ ಬಳಕೆ ಸಾಮಾನ್ಯ. ಬೆಳಗ್ಗೆ ತಿಂಡಿ, ರೊಟ್ಟಿ ಅಥವಾ ಇತರ ಖಾದ್ಯಗಳಲ್ಲಿ ಬೆಣ್ಣೆ ಹಚ್ಚಿ ಸವಿಯುವುದು ಎಲ್ಲರಿಗೂ ಇಷ್ಟ. ಆದರೆ ಅಂಗಡಿಯಲ್ಲಿ ಖರೀದಿಸುವ ಬೆಣ್ಣೆ ಗಟ್ಟಿಯಾಗಿರುವುದರಿಂದ ನೈಜ ರುಚಿ ಸಿಗುವುದಿಲ್ಲ. ಫ್ರಿಡ್ಜ್‌ನಲ್ಲಿ ತಿಂಗಳುಗಳ ಕಾಲ ಇಟ್ಟು ಬಳಸುವುದು ಸಹ ರುಚಿ ಕಡಿಮೆ ಮಾಡುತ್ತದೆ. ನಿತ್ಯ ಖರೀದಿಸುವ ಪ್ಯಾಕೆಟ್ ಹಾಲಿನಿಂದ ಮನೆಯಲ್ಲಿ ತಾಜಾ ಬೆಣ್ಣೆ ತಯಾರಿಸಬಹುದು, ಹೇಗೆ ಅಂತ ನೋಡಿ. ಸಾಮಾನ್ಯವಾಗಿ ಹಳ್ಳಿಗಳ ಕಡೆ ಹಸು, ಎಮ್ಮೆ ಹಾಲಿನಿಂದ ಬೆಣ್ಣೆ ಮಾಡುವುದು ನೋಡಿರುತ್ತೆವೆ. ಆದರೆ ಪ್ಯಾಕೆಟ್​ ಹಾಲಿನಿಂದಲೂ […]

Continue Reading