ರಾಜ್ಯದ ಹಲವೆಡೆ ಮುಂಗಾರು ಅಬ್ಬರ: ಸೋರುತಿದೆ ಆಸ್ಪತ್ರೆ, ಸರ್ಕಾರಿ ಶಾಲೆ ಜಲಾವೃತ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಮುಂಗಾರು ಪ್ರವೇಶಿಸಿದ ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಬೆಳಗಾವಿಯ ಅಥಣಿ ಪಟ್ಟಣದ ಹಲ್ಯಾಲ ರಸ್ತೆಯಲ್ಲಿರುವ ಎರಡಂತಸ್ತಿನ ಕಟ್ಟಡ ನೆಲಕ್ಕುರುಳಿದೆ. ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡದ ಸರ್ಕಾರಿ ಶಾಲೆ ಜಲಾವೃತವಾಗಿದೆ. ಚಿಕ್ಕಮಗಳೂರಿನ ಎನ್.ಆರ್ ಪುರ ತಾಲೂಕು ಆಸ್ಪತ್ರೆ ಸೋರುತ್ತಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಕರಾವಳಿ ದಕ್ಷಿಣ ಕನ್ನಡದಲ್ಲಿ ಮಳೆ […]

Continue Reading

KGF ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಏಕಾಏಕಿ 50 ಸಿಬ್ಬಂದಿ ವರ್ಗಾವಣೆಗೆ ಆದೇಶ

ಸುದ್ದಿ ಸಂಗ್ರಹ ಕೋಲಾರಸಾರ್ವಜನಿಕ ಹಿತ ದೃಷ್ಠಿಯಿಂದ ಕೆಜಿಎಫ್ ಜಿಲ್ಲಾ ಪೊಲೀಸ್ ನಲ್ಲಿ‌ ಮೇಜರ್ ಸರ್ಜರಿ‌ ಮಾಡಲಾಗಿದೆ. ಏಕಾಏಕಿ 50 ಸಿಬ್ಬಂದಿಯನ್ನ ಸಾರ್ವತ್ರಿಕ ಹಿತ ದೃಷ್ಠಿಯಿಂದ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. 7 ಜನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಸೇರಿ 43 ಜನ ಮುಖ್ಯಪೇದೆಗಳನ್ನ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ ಅವರು ಪೊಲೀಸ್ ಠಾಣೆಗಳಲ್ಲಿ ಪಾರದರ್ಶಕ, ಜನ ಸ್ನೇಹಿ ಮಾಡುವ ಉದ್ದೇಶ ಹೊಂದಿದ್ದಾರೆ. ಹಾಗಾಗಿ ಹಲವು ವರ್ಷಗಳ ಕಾಲ ಒಂದೆ […]

Continue Reading

ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ

ಸುದ್ದಿ ಸಂಗ್ರಹ ಬೆಂಗಳೂರುಕಾಂಗ್ರೆಸ್‌ ಹೈಕಮಾಂಡ್‌ ಮನವೊಲಿಕೆ ಬಳಿಕ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಮಲಿಂಗಾರೆಡ್ಡಿ ಅವರು ವಾಪಸ್‌ ಪಡೆದುಕೊಂಡಿದ್ದಾರೆ.

Continue Reading

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್

ಸುದ್ದಿ ಸಂಗ್ರಹ ರಾಯ್ಪುರಇತ್ತೀಚಿಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಹಬ್ಬಿಕೊಂಡಿತ್ತು. ಇದರ ನಡುವೆ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ ಮೂವರು ಪ್ರಜೆಗಳನ್ನು ದುರ್ಗ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಆವರ ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈವರೆಗೂ ಎಬೋಲಾ ವೈರಸ್ ಇರುವುದು ದೃಢಪಟ್ಟಿಲ್ಲ ಹಾಗೂ ಯಾವುದೆ ರೀತಿಯ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. […]

Continue Reading

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೆ ಕೊಂದ ತಾಯಿ: 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು

ಸುದ್ದಿ ಸಂಗ್ರಹ ಬೆಂಗಳೂರುಜಗತ್ತಿನಲ್ಲಿ ತಾಯಿಗೆ ಅತ್ಯಂತ ಪೂಜ್ಯನೀಯ ಸ್ಥಾನವಿದೆ. ಜಗತ್ತಿನ ಎಲ್ಲಾ ಹೊರ ಶಕ್ತಿಗಳಿಂದ ಮಗುವನ್ನು ರಕ್ಷಿಸಬೇಕಾದವಳು ತಾಯಿ. ಆದರೆ ಇಲ್ಲಿ ರಕ್ಷಕಿಯಾಗಬೇಕಿದ್ದ ತಾಯಿಯೇ ಮಗಳ ಪಾಲಿನ ಮೃತ್ಯು ಸ್ವರೂಪಿಯಾಗಿದ್ದಾಳೆ. ಇದಕ್ಕೆ ಬೆಂಗಳೂರಿನಲ್ಲಿ ನಡೆದಿರುವ ಕೊಲೆ ಪ್ರಕರಣವೇ ತಾಜಾ ಉದಾಹರಣೆಯಾಗಿದೆ. ಕಳ್ಳಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ತಾನು ಹೆತ್ತ ಮಗುವನ್ನೆ ಕೊಲೆಗೈದು ವಿಕೃತಿ ಮೆರೆದಿದ್ದಾಳೆ. ಅಕ್ರಮ ಸಂಬಂಧ, ಮಗುವಿನ ಬಣ್ಣದ ಕಾರಣಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಕಾಡುಗೋಡಿ ಪೊಲೀಸ್ ಠಾಣಾ […]

Continue Reading

ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ: ಮನವೊಲಿಕೆಗೆ ಯತ್ನ

ಸುದ್ದಿ ಸಂಗ್ರಹ ಬೆಂಗಳೂರುಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾಗಿದ್ದಾರೆ. ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ. ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು […]

Continue Reading

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗಬೇಕು: ಸಿಎಸ್ ಆದೇಶ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ. […]

Continue Reading

ಅಂಡಮಾನ್ ದ್ವೀಪದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ

ಸುದ್ದಿ ಸಂಗ್ರಹ ಪೋರ್ಟ್‌ಬ್ಲೇರ್‌ಅಂಡಮಾನ್ ದ್ವೀಪದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದ್ದು, ಈ ಬಗ್ಗೆ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಂಡಮಾನ್ ದ್ವೀಪದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿರುವ ಬಗ್ಗೆ ತಿಳಿಸಿದ್ದಾರೆ. ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಶ್ರೀ ವಿಜಯಪುರಂ-3ನಲ್ಲಿ 355 ಮೀಟರ್ ಆಳದಲ್ಲಿ ನೈಸರ್ಗಿಕ ಅನಿಲ ಪತ್ತೆಯಾಗಿದೆ. ಇದು ಅಂಡಮಾನ್ ಸಮುದ್ರದ ಅಪಾರ ಇಂಧನ ಸಾಮರ್ಥ್ಯವನ್ನು ಬಲಪಡಿಸುತ್ತದೆ. ಜಲಾನಯನ […]

Continue Reading

ಪಕ್ಷದ ನಾಯಕರಿಗೆ, ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ ರಾಜ್ಯದ ಗೃಹ ಇಲಾಖೆ, ಐಟಿಬಿಟಿ ಮತ್ತು ಇ-ಆಡಳಿತ ಇಲಾಖೆಗಳ ಸಚಿವರಾಗಿ ಕೆಲಸ ಮಾಡುವ ಮಹತ್ವದ ಜವಾಬ್ದಾರಿ ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ, ಸಿದ್ದರಾಮಯ್ಯ, ರಂದೀಪ್ ಸುರ್ಜೆವಾಲ ರವರಿಗೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದು ನೂತನ ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವಿಶೇಷವಾಗಿ, ನನಗೆ ಸತತವಾಗಿ […]

Continue Reading

ಖಾತೆ ಹಂಚಿಕೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ ?

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ‌ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಖಾತೆ […]

Continue Reading