ಪ್ಯಾಕೆಟ್​ ಹಾಲಿನಿಂದಲೆ ತಿಂಗಳಿಗೆ 1 ಕೆಜಿ ಬೆಣ್ಣೆ ತೆಗೆಯಬಹುದು, ಆ ಸಿಂಪಲ್​ ಟ್ರಿಕ್​​​ ಇಲ್ಲಿದೆ

ಅಡುಗೆಯಲ್ಲಿ ಬೆಣ್ಣೆಯ ಬಳಕೆ ಸಾಮಾನ್ಯ. ಬೆಳಗ್ಗೆ ತಿಂಡಿ, ರೊಟ್ಟಿ ಅಥವಾ ಇತರ ಖಾದ್ಯಗಳಲ್ಲಿ ಬೆಣ್ಣೆ ಹಚ್ಚಿ ಸವಿಯುವುದು ಎಲ್ಲರಿಗೂ ಇಷ್ಟ. ಆದರೆ ಅಂಗಡಿಯಲ್ಲಿ ಖರೀದಿಸುವ ಬೆಣ್ಣೆ ಗಟ್ಟಿಯಾಗಿರುವುದರಿಂದ ನೈಜ ರುಚಿ ಸಿಗುವುದಿಲ್ಲ. ಫ್ರಿಡ್ಜ್‌ನಲ್ಲಿ ತಿಂಗಳುಗಳ ಕಾಲ ಇಟ್ಟು ಬಳಸುವುದು ಸಹ ರುಚಿ ಕಡಿಮೆ ಮಾಡುತ್ತದೆ. ನಿತ್ಯ ಖರೀದಿಸುವ ಪ್ಯಾಕೆಟ್ ಹಾಲಿನಿಂದ ಮನೆಯಲ್ಲಿ ತಾಜಾ ಬೆಣ್ಣೆ ತಯಾರಿಸಬಹುದು, ಹೇಗೆ ಅಂತ ನೋಡಿ. ಸಾಮಾನ್ಯವಾಗಿ ಹಳ್ಳಿಗಳ ಕಡೆ ಹಸು, ಎಮ್ಮೆ ಹಾಲಿನಿಂದ ಬೆಣ್ಣೆ ಮಾಡುವುದು ನೋಡಿರುತ್ತೆವೆ. ಆದರೆ ಪ್ಯಾಕೆಟ್​ ಹಾಲಿನಿಂದಲೂ […]

Continue Reading

ಶಹಾಬಾದ: ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಕ.ರಾ.ಕಾ.ನಿ ಪ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ ಗುರುವಾರ ಘೋಷಿಸಿದರು. ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಮತದಾರ ಪತ್ರರ್ಕರಿಗೆ ಕೃತಜ್ಞತೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಕ.ರಾ.ಕಾ.ನಿ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅವರ ನಿರ್ದೇಶನದ ಮೇರೆಗೆ ತಾಲೂಕ ಪದಾಧಿಕಾರಿಗಳ ಹೆಸರುಗಳು ಘೋಷಿಸಿದರು. ಕೆ.ರಮೇಶ ಭಟ್ (ಅಧ್ಯಕ್ಷ), ಶಿವಕುಮಾರ ಕುಸಾಳೆ, ನಾಗರಾಜ ದಂಡಾವತಿ (ಉಪಾಧ್ಯಕ್ಷ), […]

Continue Reading

ಕೇವಲ 2 ಸೆಕೆಂಡ್‌ನಲ್ಲಿ 700 ಕಿ.ಮೀ ವೇಗ: ಹೊಸ ವಿಶ್ವ ದಾಖಲೆ ಬರೆದ ಚೀನಾದ ‘ಮ್ಯಾಗ್ಲೆವ್’ ರೈಲು

ಬೀಜಿಂಗ್: ತಂತ್ರಜ್ಞಾನ ಕ್ಷೇತ್ರದಲ್ಲಿ ಜಗತ್ತನ್ನೆ ಬೆರಗುಗೊಳಿಸುವ ಚೀನಾ, ಇದೀಗ ಸಾರಿಗೆ ಕ್ಷೇತ್ರದಲ್ಲಿ ಅಸಾಧ್ಯವಾದದ್ದು ಸಾಧಿಸಿ ತೋರಿಸಿದೆ. ಚೀನಾದ ಅತ್ಯಾಧುನಿಕ ಮ್ಯಾಗ್ಲೆವ್ (ಮ್ಯಾಗ್ನೆಟಿಕ್ ಲೆವಿಟೇಶನ್) ರೈಲು ಕೇವಲ 2 ಸೆಕೆಂಡ್‌ಗಳಲ್ಲಿ 700 ಕಿಲೋಮೀಟರ್ ತಲುಪುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಏನಿದು ಪ್ರಯೋಗ ?ಚೀನಾದ ‘ನ್ಯಾಷನಲ್ ಯೂನಿವರ್ಸಿಟಿ ಆಫ್ ಡಿಫೆನ್ಸ್ ಟೆಕ್ನಾಲಜಿ’ಯ ಸಂಶೋಧಕರು ಈ ಪ್ರಯೋಗ ನಡೆಸಿದ್ದಾರೆ. ಸುಮಾರು 1 ಟನ್ (1,000 ಕೆಜಿ) ತೂಕದ ವಾಹನ ಮ್ಯಾಗ್ಲೆವ್ ಟ್ರ್ಯಾಕ್ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿದೆ. 400 ಮೀಟರ್ […]

Continue Reading

ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ: ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಜನರಿಗೆ ಗಾಯ

ಸುದ್ದಿ ಸಂಗ್ರಹ ಹಾಸನ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ನಲ್ಲಿ ನಡೆದಿದೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳ ಪೈಕಿ 13 ಜನ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಉಳಿದವರಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ […]

Continue Reading

ಶಹಾಬಾದ: ಶಬರಿಮಲೆ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ

ಸುದ್ದಿ ಸಂಗ್ರಹ ಶಹಾಬಾದನಗರದ ಬಸವೇಶ್ವರ ಬಡವಾಣೆಯಲ್ಲಿ ದೇವೇಂದ್ರಪ್ಪ ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಪಡಿ ಪೂಜೆ, ಶಬರಿಮಲೆ ದೇವಸ್ಥಾನದ ಪವಿತ್ರ 18 ಮೆಟ್ಟಿಲುಗಳಿಗೆ (ಪಡಿ) ವಿಶೇಷ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಭೀಮು ಗುರುಸ್ವಾಮಿ, ಸುಭಾಷ್ ಗುರುಸ್ವಾಮಿ, ದೇವುಹೊಸಮನಿ, ಗುರುಸ್ವಾಮಿ ಸೇರಿದಂತೆ ಅನೇಕರು ಇದ್ದರು.

Continue Reading

ರಜೆ ಕೊಡದ ಕಾರಣ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ: ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

ಸುದ್ದಿ ಸಂಗ್ರಹ ಬೆಂಗಳೂರು ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ಮಾಡುವ ಎಡವಟ್ಟುಗಳಿಗೆ ಏನು ಹೇಳಬೇಕು ಎನ್ನುವುದೆ ಗೊತ್ತಾಗಲ್ಲ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿಬಿಡುತ್ವೆ. ಈಗ ಅಂತಹದ್ದೆ ಒಂದು ಮಹಾ ಎಡವಟ್ಟು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ತಲೆ ನೋವು ಅಂತ ಜಯನಗರ ಆಸ್ಪತ್ರೆಗೆ ಬಂದಿದ್ದ ಪುನೀತ್ ಸೂರ್ಯ ಎಂಬ ವ್ಯಕ್ತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದಕ್ಕೆ ಕಾರಣ ಸಿಬ್ಬಂದಿಯೊಬ್ಬ ಮಾಡಿದ ಎಡವಟ್ಟಿನ ಕೆಲಸ. ವೈದ್ಯರು ರಕ್ತಹೀನತೆ ಆಗಿದೆ, ರಕ್ತ ಕೊಡಬೇಕು […]

Continue Reading

ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಮುಂಬೈ: ನವ ಮುಂಬೈನ ಕಲಾಂಬೋಲಿಯಲ್ಲಿ ಮರಾಠಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬಳು ತನ್ನ 6 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮಗಳ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಮೇಲೆ ಅನುಮಾನಗೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದರು. ಉಸಿರುಗಟ್ಟಿದ ಕಾರಣ ಮಗು ಸಾವನ್ನಪ್ಪಿರುವುದು ದೃಢಪಟ್ಟ ಬಳಿಕ ವಿಚಾರಣೆ ವೇಳೆ ತಾಯಿಯೇ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾಳೆ. ಮಾತನಾಡಲು ತೊಂದರೆ ಇದ್ದ ಮಗು ಹೆಚ್ಚಾಗಿ ಹಿಂದಿ ಮಾತನಾಡುತ್ತಿದ್ದುದರಿಂದ ತಾಯಿ […]

Continue Reading

ರಾಷ್ಟ್ರಗೀತೆ ಭಾರತದ ಸಾರ್ವಭೌಮತೆಯ ಸಂಕೇತ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರವೀಂದ್ರನಾಥ ಟ್ಯಾಗೋರ್ ರಚಿಸಿ, ಸಂಗೀತಕ್ಕೆ ಅಳವಡಿಸಿದ ಹಾಗೂ ಕ್ಯಾಪ್ಟನ್ ರಾಮ್‌ಸಿಂಗ ಠಾಕೂರ್ ರಾಗಬದ್ಧವಾಗಿ ಸಂಗೀತ ಸಂಯೋಜಿಸಿರುವ ‘ಜನಗಣಮನ ಅಧಿನಾಯಕ ಜಯಹೇ’ ಎಂಬ ಭಾರತದ ರಾಷ್ಟ್ರಗೀತೆಯು ಭಾರತೀಯರೆಲ್ಲರು ಒಂದೇ ಎಂದು ತಿಳಿಸಿದ, ದೇಶದ ಹಿರಿಮೆ-ಗರಿಮೆ, ಭೌಗೋಳಿಕ ಪ್ರದೇಶ, ನೌಸರ್ಗಿಕ ಸಂಪತ್ತು, ಸಾರ್ವಭೌಮತೆ, ಅಖಂಡತೆ ಸಾರುವ ಗೀತೆಯಾಗಿದ್ದು, ಅದಕ್ಕೆ ಎಲ್ಲರು ಹೃದಯಾಂತರದಿಂದ ಗೌರವ ನೀಡಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ […]

Continue Reading

ಕೇವಲ 12 ಜನರು ಪ್ರಯಾಣಿಸುವ ಭಾರತದ ಅತಿ ಚಿಕ್ಕ ರೈಲು ಎಲ್ಲಿದೆ ಗೊತ್ತೆ ?‌

ನವದೆಹಲಿ: ಭಾರತೀಯ ರೈಲ್ವೆ ವಿಶಾಲವಾದ ರೈಲು ಜಾಲ ಮತ್ತು ವೈವಿಧ್ಯಮಯ ರೈಲುಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿದೆ. ದೂರದ ಪ್ರಯಾಣವಾಗಿರಲಿ ಅಥವಾ ಸ್ಥಳೀಯ ಪ್ರಯಾಣವಾಗಿರಲಿ ಪ್ರತಿಯೊಂದು ಅಗತ್ಯಕ್ಕೂ ರೈಲು ಸೇವೆಗಳು ಲಭ್ಯವಿದೆ. ಭಾರತೀಯ ರೈಲ್ವೆ ಎಲ್ಲಾ ವರ್ಗದ ಜನರಿಗೆ ಅನುಕೂಲಕರ ಮತ್ತು ಸುಲಭವಾಗಿ ತಲುಪಬಹುದಾದ ಪ್ರಯಾಣ ಸಾಧನವಾಗಿದೆ. ಇದರಲ್ಲಿ ಅನೇಕ ಕೌತುಕಗಳು ಮತ್ತು ಅದ್ಬುತಗಳಿವೆ. ವೇಗದ ರೈಲುಗಳ ಜೊತೆಗೆ ಅತಿ ನಿಧಾನವಾಗಿ ಓಡುವ ರೈಲುಗಳು ಮತ್ತು ಯಾವಾಗಲೂ ಹೆಚ್ಚಿನ ಪ್ರಯಾಣಿಕರಿಂದ ತುಂಬಿರುವ ನಿಲ್ದಾಣಗಳಿವೆ. ಇದಲ್ಲದೆ ರೈಲ್ವೆ ಪ್ರಯಾಣವು ಅನುಕೂಲತೆಯ ಬಗ್ಗೆ ಮಾತ್ರವಲ್ಲ. ಇದು ಅದ್ಭುತ […]

Continue Reading

ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ: ವಿಶ್ವನಾಥ

ಸುದ್ದಿ ಸಂಗ್ರಹ ಶಹಾಬಾದಸಮಾಜಕ್ಕೆ ಹಾನಿಕಾರಕ ವಿಷಯದ ಬದಲು ಉಪಯುಕ್ತ ಉತ್ತಮ ಮೌಲ್ಯಗಳು, ವಿಶೇಷತೆ ಹಾಗೂ ಮಹತ್ವವನ್ನು ನಾಡಿನ ಜನತೆಗೆ ಸಾರುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಬರಹಗಾರರು ಹಾಗೂ ಶಿಕ್ಷಣ ತಜ್ಞ ಕೆ.ಎಂ ವಿಶ್ವನಾಥ ಮರತೂರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಗದಂಬಾ ದೇವಸ್ಥಾನದ ಆವರಣದಲ್ಲಿ ಶನಿವಾರ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಯಾದಗಿರಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ, ಕವಿಗೋಷ್ಠಿ ಮತ್ತು ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ […]

Continue Reading