ನಾಳೆ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪಟ್ಟಿ ರಿಲೀಸ್: ಡಿಕೆಶಿ

ಸುದ್ದಿ ಸಂಗ್ರಹ ಬೆಂಗಳೂರುನಾಳೆ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪಟ್ಟಿ ಬಿಡುಗಡೆ ಆಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ ಶಿವಕುಮಾರ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 10ಕ್ಕೆ ಕ್ಯಾಬಿನೆಟ್ ಫೈನಲ್ ಮಾಡ್ತಾರೆ. ಮಾಧ್ಯಮದಲ್ಲಿ ಸಂಭಾವ್ಯ ಸಚಿವರ ಹೆಸರು ಬರ್ತಿರೋದು ಅಧಿಕೃತವಲ್ಲ. ನಾಳೆ 10 ಗಂಟೆಗೆ ದೆಹಲಿಯಿಂದ ಲಿಸ್ಟ್ ಕಳಿಸ್ತಾರೆ. ಅದನ್ನ ನಾವೇ ಬಿಡುಗಡೆ ಮಾಡುತ್ತೆವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಯಾರಿಗೆಲ್ಲಾ ಆಹ್ವಾನ […]

Continue Reading

ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್ ಜೇವರ್ಗಿ ಬಳಿ ಪಲ್ಟಿ

ಸುದ್ದಿ ಸಂಗ್ರಹ ಜೇವರ್ಗಿ ತಾಲೂಕಿನ ಕೆಲ್ಲೂರ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕೆಕೆಆರ್‌ಟಿಸಿ ಬಸ್ ಮಂಗಳವಾರ ಸಂಜೆ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸಿಂಧನೂರಿನ ಶಿವಲಿಂಗಮ್ಮ ಸಿದ್ದಣ್ಣ, ಪದ್ಮ ಸತ್ಯನಾರಾಯಣ, ಶ್ರಾವ್ಯ ರಾಘವೇಂದ್ರ, ಭಾಗ್ಯಲಕ್ಷ್ಮಿ, ಮೀನಾಕ್ಷಿ, ಸಮರ್ಥ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಈ ಬಸ್ ಕಲಬುರಗಿ ನಗರದಿಂದ ಧರ್ಮಸ್ಥಳಕ್ಕೆ ಮಂಗಳವಾರ ಮಧ್ಯಾಹ್ನ ಹೊರಟಿತ್ತು. ತಾಲೂಕಿನ ಕೆಲ್ಲೂರ ಗ್ರಾಮದ ಬಳಿ ಚಾಲಕ ನೀರು ಕುಡಿಯುತ್ತಾ ಬಸ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು […]

Continue Reading

ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

ಸುದ್ದಿ ಸಂಗ್ರಹ ವಾಡಿಪಟ್ಟಣದ ರೈಲ್ವೆ ನಿಲ್ದಾಣ ಸಮೀಪದಿಂದ ಹನುಮಾನ ನಗರ, ವಿಜಯ ನಗರ, ಇಂದಿರಾ ನಗರ ಸೇರಿದಂತೆ ನಾಲ್ಕೈದು ಬಡಾವಣೆಗಳಿಗೆ ಸಂಪರ್ಕಿಸುವ ಕಾಲುದಾರಿಯನ್ನು ರೈಲ್ವೆ ಸಿಬ್ಬಂದಿ ತಡೆಮಾಡಿರುವುದಕ್ಕೆ ಬಿಜೆಪಿ, ಮಾದಿಗ ದಂಡೋರ ಹೋರಾಟ ಸಮಿತಿ ಮತ್ತು ಕರವೇ ಸಂಘಟನೆ ಪದಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪರ್ಯಾಯ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ರೈಲ್ವೆ ನಿಲ್ದಾಣದ ಪ್ರಬಂಧಕ ಸಿ.ಎಚ್ ರಾಮಕೃಷ್ಣ ಅವರ ಮುಖಾಂತರ ಮೇಲಾಧಿಕಾರಿಗಳಿಗೆ ಮನವಿ ಪತ್ರ ರವಾನಿಸಿ, ಮಾತನಾಡಿದ ಅವರು, […]

Continue Reading

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್‌ಗಳು ಸಿಗಲ್ಲ, ತಜ್ಞರು ನೀಡಿದ ಆಘಾತಕಾರಿ ಎಚ್ಚರಿಕೆ ಏನು ?

ಸುದ್ದಿ ಸಂಗ್ರಹ ನವದೆಹಲಿಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಚಾಲಕರು ಮತ್ತು ಕೇರ್‌ಟೇಕರ್‌ಗಳಂತಹ ಕೌಶಲ್ಯ ಆಧಾರಿತ ಉದ್ಯೋಗಿಗಳ ತೀವ್ರ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಪೈನ್‌ಟ್ರೀ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ರಿತೇಶ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಅವರ ಈ ವಿಶ್ಲೇಷಣಾತ್ಮಕ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆನಡಾ ಮೂಲದ ಸಂಶೋಧನಾ ಸಂಸ್ಥೆ ಪೈನ್‌ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಅವರು ಲಿಂಕ್ಡ್‌ಇನ್‌ನಲ್ಲಿ ಈ ವಿಚಾರದ ಬಗ್ಗೆ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. ವಿಶ್ವದ […]

Continue Reading

ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶ: ಹಲವೆಡೆ ಇಂದಿನಿಂದ ಐದು ದಿನ ಮಳೆ ಮುನ್ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮುಂದಿನ ಐದು ದಿನಗಳ ವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಗದಗ, ಮೈಸೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು […]

Continue Reading

3,000 ರೂ.ಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಸುದ್ದಿ ಸಂಗ್ರಹ ಕೋಲ್ಕತ್ತಾಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3,000 ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಬಡತನವನ್ನು ಮೆಟ್ಟಿ ನಿಂತು ಶಾಸಕಿಯಾಗಿ ಆಯ್ಕೆಯಾಗಿ, ಇದೀಗ ಸುವೇಂದು ಅಧಿಕಾರಿ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ತಿಂಗಳಿಗೆ ಕೇವಲ 3,000 ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿ ಇದೀಗ ಸುವೇಂದು ಸರ್ಕಾರದಲ್ಲಿ ಸಚಿವೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರ್ಣಾಯಕ ಗೆಲುವು ಸಾಧಿಸಿದ್ದು, […]

Continue Reading

ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಸುದ್ದಿ ಸಂಗ್ರಹ ಬೀದರ್/ಶಿವಮೊಗ್ಗ/ಕಾರವಾರರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ಗಂಟೆಯಿಂದಲೂ ಬೀದರ್‌ನಲ್ಲಿ ಸಿಡಿಲು, ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಈ ಮೂಲಕ ಬಿಸಿಲಿನಿಂದ ಕೆಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ […]

Continue Reading

ಪ್ರಧಾನಿ ಮೋದಿ ಮಾತಿನ ಮಲ್ಲ, ಅವರಿಗೆ ಜನರ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಪ್ರಧಾನಿ ನರೇಂದ್ರ‌ ಮೋದಿ ಬರಿ ಮಾತಿನ‌ ಮಲ್ಲ, ಅವರಿಗೆ ಜನರ ಕಾಳಜಿ ಇಲ್ಲ. ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಟೀಕಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್‌, ಸಿಲಿಂಡರ್ ದರ ದಿನದಿಂದ ದಿನಕ್ಕೆ ಜಾಸ್ತಿ ಮಾಡುತ್ತಿದ್ದಾರೆ. ದರ ಏರಿಕೆಯಿಂದ ಜನರ ಮೇಲೆ ಹೊರೆಯಾಗುತ್ತಿದೆ. ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಆದರೆ ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. […]

Continue Reading

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸುದ್ದಿ ಸಂಗ್ರಹ ಬೆಂಗಳೂರುಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಆದರೆ ಈ ಗೆಲುವಿನ ಸಂಭ್ರಮ ಆಚರಿಸುವ ಭರದಲ್ಲಿ ರಾಜ್ಯದ ಹಲವೆಡೆ ಆರ್‌ಸಿಬಿ […]

Continue Reading

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೆ ಬ್ಲ್ಯಾಕ್‌ಮೇಲ್‌: ಹಣ ಹೊಂದಿಸಲು ಅತ್ತಿಗೆಯನ್ನೆ ಮುಗಿಸಿದ ನಾದಿನಿ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನು ಕೊಂದಿರುವದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ ಜೊತೆಗಿದ್ದ ಆಕೆಯ ನಾದಿನಿ ಭವ್ಯಾ, […]

Continue Reading