ಅಕ್ರಮ ಸಂಬಂಧಕ್ಕೆ ಅಡ್ಡಿ: 50 ಸಾವಿರ ರೂ.ಗೆ ಹೆತ್ತ ಮಗುವನ್ನೆ ಮಾರಿದ ಪಾಪಿ ತಾಯಿ

ಸುದ್ದಿ ಸಂಗ್ರಹ ಚಿತ್ರದುರ್ಗ ಹೆತ್ತವರಿಗೆ ಹೆಗ್ಗಣ ಮುದ್ದು ಅಂತಾರೆ. ಆದರೆ ಇಲ್ಲೊಂದು ಪಾಪಿ ತಾಯಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೆ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು […]

Continue Reading

ಬಸ್ ಹತ್ತುವಾಗ 1.85 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು

ಕಲಬುರಗಿ: ಬಸ್‌ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಸುಮಾರು 1.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಕಳ್ಳತನವಾಗಿರುವ ಘಟನೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ನಿವಾಸಿ ಶಿಲ್ಪಾರಾಣಿ ಎಂಬುವವರು ನಗರದಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ, ಮರಳಿ ಊರಿಗೆ ಹೋಗಲು ಬಸ್ ಹತ್ತುವಾಗ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಶಿಲ್ಪಾರಾಣಿ ಬ್ಯಾಗಿನಲ್ಲಿದ್ದ ಪರ್ಸ್ ನಿಂದ 45 ಗ್ರಾಂ ತೂಕದ ಚಿನ್ನದ ಆಭರಣ, 15 ಗ್ರಾಂ ನೆಕ್ಲೆಸ್ ಮತ್ತು ಮೊಬೈಲ್ ಕಳವು ಮಾಡಿದ್ದಾರೆ. […]

Continue Reading

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಸುದ್ದಿ ಸಂಗ್ರಹ ಬೆಂಗಳೂರು ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ 4 ನಿಗಮದ ಮಹಿಳಾ ನೌಕರರಿಗೆ ಕ್ರಿಸ್ […]

Continue Reading

ಉಡುಪಿ ಬೀಚ್​ನಲ್ಲಿ ಪವಾಡ: ಕಡಲಲ್ಲಿ ತೇಲಿ ಬಂತೆ ಕೃಷ್ಣನ ವಿಗ್ರಹ ? ಅಸಲಿಯತ್ತು ಇಲ್ಲಿದೆ

ಸುದ್ದಿ ಸಂಗ್ರಹ ಉಡುಪಿ ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲಾ ವಿಷಯಗಳು ನಂಬಬಾರದು. ಕೆಲವೊಂದು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದ್ದೆ ಘಟನೆಯೊಂದು ನಡೆದಿದೆ. ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೆ ಬೇರೆ. ಅಷ್ಟಕ್ಕೂ ವೈರಲ್​​​ […]

Continue Reading

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸುವತ್ತ ಗಮನ ಹರಿಸಬೇಕು ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ದಿ.ಆದರ್ಶ ಕುಂಬಾರ ಅವರ ಹುಟ್ಟುಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲೇಖನಿ, ಸಲಕರಣೆ ಪರೀಕ್ಷೆ ಪ್ಯಾಡ್‌ಗಳು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಒಳ್ಳೆಯ ನಡೆತೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು […]

Continue Reading

ಚಿತ್ತಾಪುರ: ಡಿ.28 ರಿಂದ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಪ್ರಾರಂಭ, ಜ.3 ರಂದು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಚೌಡೇಶ್ವರಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಪರಮ ಪೂಜ್ಯರ ಸಾನಿಧ್ಯದಲ್ಲಿ ಡಿಸೆಂಬರ್ 28ರಿಂದ ಜನವರಿ 3ರವರೆಗೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಕಾರ್ಯಕ್ರಮ ಹಾಗೂ ರಾಮಲಿಂಗ ಚೌಡೇಶ್ವರಿ ಮತ್ತು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗುವುದು ಎಂದು ಟ್ರಸ್ಟ್ ಅಧ್ಯಕ್ಷ ಬಸವರಾಜ ರಾಜೋಳ್ಳಿ ಮತ್ತು ಉಪಾಧ್ಯಕ್ಷ ರಾಜಶೇಖರ ಬಳ್ಳಾ ತಿಳಿಸಿದ್ದಾರೆ. ಡಿ.30 ರಂದು ಸಂಜೆ 7.30ಕ್ಕೆ ಉಡಿ ತುಂಬುವ ಕಾರ್ಯಕ್ರಮ, ಜನವರಿ 1 ರಂದು ಸಂಜೆ 7.30ಕ್ಕೆ ಸಹಸ್ರ ದೀಪೋತ್ಸವ, […]

Continue Reading

ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ

ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ಸುದ್ದಿ ಸಂಗ್ರಹ ಮಂಗಳೂರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. […]

Continue Reading

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

ಸುದ್ದಿ ಸಂಗ್ರಹ ಬೆಂಗಳೂರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.21 ರವಿವಾರ ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ […]

Continue Reading

ಯಾರಿಗೆ ಹೇಳ್ತಿರಾ ಹೇಳಿ: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLC ತಡೆದು ಅನುಚಿತ ವರ್ತನೆ

ಸುದ್ದಿ ಸಂಗ್ರಹ ವಿಜಯಪುರ ರಾಷ್ಟ್ರೀಯ ಹೆದ್ದಾರಿ 52ರ ಟೋಲ್‌ನಲ್ಲಿ ಎಂಎಲ್‌ಸಿ ಕೇಶವ ಪ್ರಸಾದ್ ಅವರನ್ನು ತಡೆದು ಅನುಚಿತ ವರ್ತನೆ ತೋರಿರುವ ಘಟನೆ ನಡೆದಿದೆ. ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೆಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ. ಬರೋಬ್ಬರಿ ಒಂದು ಗಂಟೆಕಾಲ ಎಂಎಲ್‌ಸಿಯನ್ನು ತಡೆದು ಗೊಂದಲ ಸೃಷ್ಟಿಸಿದ್ದಾರೆ. ಮೊಬೈಲ್, ಪಾಸ್ ಕಸಿದು ‘ಯಾರಿಗೆ ಹೇಳ್ತಿರಾ ಹೇಳಿ’ ಎಂದು ಏರುದ್ವನಿಯಲ್ಲಿ ಮಾತನಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ನೀವೆ […]

Continue Reading