ಮನೆ ಮನೆಗೆ ಹೋಗದೆ ಒಂದೆ ಕಡೆ ಕುಳಿತು SIR ಪ್ರಕ್ರಿಯೆ: BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸುದ್ದಿ ಸಂಗ್ರಹ ಚಿಕ್ಕೋಡಿಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೆ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ. ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದ […]

Continue Reading

ಕಲಬುರಗಿ: ಸೆಂಟ್ರಲ್ ‌ಜೈಲಿನಿಂದ‌ ಮೂವರು ಸಜಾ‌ ಕೈದಿಗಳು ಪರಾರಿ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಮಂಗಳವಾರ ನಸುಕಿ‌ನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಮಸ್ತಾನ್, ಸಂತೋಷ್ ಮತ್ತು ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. […]

Continue Reading

ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ: ಶೇ.92 ರಷ್ಟು ಮತದಾನ

ಸುದ್ದಿ ಸಂಗ್ರಹ ಶಹಾಬಾದ್ ಪ್ರಜಾಪ್ರಭುತ್ವದ ನಿಜವಾದ ಆಶಯ ಈಡೇರುವುದು ಉತ್ತಮ ನಾಯಕರ ಆಯ್ಕೆ ಪಾರದರ್ಶಕ ಚುನಾವಣೆ ಅವಲಂಬಿಸಿದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷ ಕೆ ರಮೇಶ ಭಟ್ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಆಮಿಷದ ಮತದಾನ ಪ್ರಜಾಪ್ರಭುತ್ವದ ಆಶಯಗಳನ್ನು ಹಾಳುಮಾಡುತ್ತವೆ. ಆದ್ದರಿಂದ ಯಾವುದೆ ಚುನಾವಣೆಯಲ್ಲಿ ಯಾವುದೆ ಆಸೆ- ಆಮಿಷಕ್ಕೆ […]

Continue Reading

ಡಿವೈಎಸ್ಪಿ ಶಂಕರಗೌಡರಿಗೆ ಪಿತೃ ವಿಯೋಗ

ಸುದ್ದಿ ಸಂಗ್ರಹ ಕಲಬುರಗಿ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ರಾಮಗೇರಿ ನಿವಾಸಿ, ಶಿಕ್ಷಣ ಪ್ರೇಮಿ, ಭೂ ದಾನಿಯಾಗಿದ್ದ ವೀರನಗೌಡ ಪಾಟೀಲ (84) ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನಿಧನ ಹೊಂದಿರುವ ದಿವ್ಯಚೇತನರಾದ ವೀರಗೌಡರಿಗೆ ಪತ್ನಿ, ಪುತ್ರರಾದ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್‌ ಮತ್ತು ಪುತ್ರಿ ಇದ್ದಾರೆ.‌ ವೀರನಗೌಡರು ಶಿಕ್ಷಣದ ಬಗ್ಗೆ ಅಪಾರವಾದ ಗೌರವ ಹೊಂದಿದ್ದು ಇವರನ್ನು ಶಿಕ್ಷಣ ಪ್ರೇಮಿ ಎಂದೆ ಗುರುತಿಸಿಕೊಂಡಿದ್ದಾರೆ. ಇವರ ಪುತ್ರ ಡಿವೈಎಸ್ಪಿ ಶಂಕರಗೌಡ ಪಾಟೀಲರು ಸಹ ತಂದೆಯಂತೆ ಸ್ನೇಹಮಯಿ ಹಾಗೂ ಮಾನವೀಯತೆಗೆ ಹೆಸರುವಾಸಿಯಾಗಿದ್ದಾರೆ. […]

Continue Reading

ಗಿನ್ನೀಸ್ ದಾಖಲೆಗಾಗಿ 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಕೊಟ್ಟ ತಾತ: ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ FIR

ಸುದ್ದಿ ಸಂಗ್ರಹ ಹೈದರಾಬಾದ್ಗಿನ್ನೀಸ್ ದಾಖಲೆ ನಿರ್ಮಿಸಲು 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟಿದ್ದ ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವಾರ ಜು.12 ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಶ್ವದ ಅತ್ಯಂತ ಕಿರಿಯ ಚಾಲಕಿ ಎಂಬ ಗಿನ್ನೀಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್‌ ಪೂಜಾರಿ ತಿರುಪತಿ ಅವರು ಜನಸಂದಣಿಯುಳ್ಳ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮ ಮಗುವನ್ನು ಕಾರಿನ ಸ್ಟೈರಿಂಗ್ ಮುಂದೆ ಕೂರಿಸಿಕೊಂಡು […]

Continue Reading

ಬಸ್‌ ನಿಲುಗಡೆಗೆ ಆಗ್ರಹಿಸಿ ಇಂದು ರಸ್ತೆ ತಡೆ

ಸುದ್ದಿ ಸಂಗ್ರಹ ಶಹಾಬಾದ್‌ ಶಹಾಬಾದ್‌ ಮಾರ್ಗವಾಗಿ ಸಂಚರಿಸುವ ಚಿತ್ತಾಪುರ, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿಗೆ ತೆರಳುವ ಬಸ್‌ಗಳನ್ನು ಶಹಾಬಾದ್ ವಾಡಿ ಕ್ರಾಸ್ ಬಳಿ ನಿಲುಗಡೆ ಮಾಡಲು ಆಗ್ರಹಿಸಿ ಜುಲೈ 13 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಯಾದಗಿರಿ-ಕಲಬುರಗಿ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸ್ಥಳೀಯ ಸಮಿತಿ ಸದಸ್ಯ ಜಗನ್ನಾಥ ಎಸ್‌.ಎಚ್ ತಿಳಿಸಿದ್ದಾರೆ. ಹಲವು ಬಾರಿ ಕೆಎಸ್‌ಆರ್‌ಟಿಸಿ ಜಿಲ್ಲಾ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ […]

Continue Reading

ಜು.14 ರಂದು ನಾಲವಾರದಲ್ಲಿ ತನಾರತಿ ವೈಭವ: ಆರಾಧ್ಯ ಗುರುವಿಗೆ ಹರಕೆ ಅರ್ಪಿಸಲಿರುವ ಭಕ್ತಸಾಗರ

ಸುದ್ದಿ ಸಂಗ್ರಹ ಚಿತ್ತಾಪುರ ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀಕ್ಷೇತ್ರ ನಾಲವಾರದಲ್ಲಿ ತಮ್ಮ ಹರಕೆ ಪೂರೈಸಿದರೆ ಪ್ರತೀಕವಾಗಿ ನೆರವೇರುವ ತನಾರತಿ ಸೇವೆಯನ್ನು ಆರಾಧ್ಯ ಸದ್ಗುರುವಿಗೆ ಸಲ್ಲಿಸುವ ವಿಶಿಷ್ಟ ಉತ್ಸವ ಮಂಗಳವಾರ ಮಧ್ಯರಾತ್ರಿ ಸಂಭ್ರಮದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹದೇವ ಗಂವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪೀಠಾಧಿಪತಿ ಪರಮಪೂಜ್ಯ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ವೈಭವದಿಂದ ಶ್ರದ್ಧೆ ಭಕ್ತಿಯ ಮಧ್ಯೆ […]

Continue Reading

ಬೂತ್‌ಗಳಿಗೆ ಬಿಜೆಪಿ ಮುಖಂಡರ ಭೇಟಿ: ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಗೊಳಿಸಲು ಕರೆ

ಸುದ್ದಿ ಸಂಗ್ರಹ ವಾಡಿ ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಯಶಸ್ವಿಯಾಗಿ ಮತ್ತು ಸಮಯಕ್ಕೆ ಸರಿಯಾಗಿ ಮುಗಿಸುವುದು ಬೂತ್ ಅಧಿಕಾರಿಗಳಿಗೆ ಅನಿವಾರ್ಯವಾಗಿದೆ ಎಂದು ವಾಡಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ವಿವಿಧ ಬೂತ್‌ಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ ಅವರೊಂದಿಗೆ ಕೈಗೊಂಡ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸಿ, ಯಾವುದೆ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ […]

Continue Reading

ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಬಿಜೆಪಿ ಮುಖಂಡ ಮಣಿಕಂಠ ವಿರುದ್ಧ ಎಫ್ಐಆರ್

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರದಲ್ಲಿ ಏರುಪೇರಾಗಿ ಮಕ್ಕಳ ಅನಾರೋಗ್ಯದ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಮಾಡುವಾಗ ಅವಾಚ್ಯ ಶಬ್ದಗಳ ಬಳಕೆ ಮಾಡಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈಚೆಗೆ ಎಫ್ಐಆರ್ ದಾಖಲಾಗಿದೆ. ಶಾಲೆಯಲ್ಲಿ ಊಟದ ನಂತರ 50–60 ಹುಡುಗರು ಫುಡ್‌ ಪಾಯಿಸನಿಂಗ್‌ನಿಂದ ಅಸ್ವಸ್ಥ ಆಗಿದ್ದರು. ಇದನ್ನು ಪ್ರಸ್ತಾಪಿಸಿ ಮಣಿಕಂಠ ಕೆಲ ಅವಾಚ್ಯ ಶಬ್ದಗಳನ್ನು […]

Continue Reading

ಶಹಾಬಾದ್: ಜು.15ರಂದು ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಜು.15ರಂದು ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್‌ಎಸ್‌ಎಲ್’ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15 ರಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮಿಗಂಜನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ, ಶಾಸಕ ಬಸವರಾಜ ಮತ್ತಿಮೂಡ್ […]

Continue Reading