ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ‌

ಸುದ್ದಿ ಸಂಗ್ರಹ ಚಿಂಚೊಳಿವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ   ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ […]

Continue Reading

ಸಾವಿನಲ್ಲೂ ಸ್ವಾತಂತ್ರ್ಯಕ್ಕಾಗಿ ಪರಿತಪಿಸಿದ ಸಾವರ್ಕರ್: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಜಯಂತಿ ಪ್ರಯುಕ್ತ, ಮುಖಂಡರು ಪುಷ್ಪ ನಮನ‌ ಸಲ್ಲಿಸಿ ವೀರ ಸಾವರ್ಕರ್’ರ ಜಯ ಘೋಷಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಜೈಲಿನಲ್ಲಿ ಅಂಡಮಾನ್‌ನ ಕಾಲಾಪಾನಿ ಜೈಲಿನಲ್ಲಿ ಅನುಭವಿಸಿದ ಚಿತ್ರಹಿಂಸೆಗಳು ಅತ್ಯಂತ ಕ್ರೂರವಾಗಿದ್ದವು, ಅಂತಹ ಪರಿಸ್ಥಿತಿಯಲ್ಲೂ ದೇಶದ ಸ್ವಾತಂತ್ರ್ಯಕ್ಕಾಗಿ ಪರಿತಪಿಸುತ್ತಿದ್ದ ಅಪ್ಪಟ ದೇಶ ಪ್ರೇಮಿ ಸಾವರ್ಕರ್ ಎಂದರು. ಸಾವರ್ಕರ್ ಅವರು 1911 ರಿಂದ 1921ರ ವರೆಗೆ ಸುಮಾರು 10 ವರ್ಷಗಳ […]

Continue Reading

ಸಮಾಜದ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ: ಜ್ಞಾನಪ್ರಕಾಶ ಸ್ವಾಮೀಜಿ

ಸುದ್ದಿ ಸಂಗ್ರಹ ಶಹಾಬಾದ್ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದ ರಾಯಲ್ ಫಂಕ್ಷನ್‌ ಹಾಲ್‌ನಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್‌ ಹಬ್ಬ’ದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ಜಗತ್ತು ಅಂಬೇಡ್ಕರ್‌ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು ಎಂದರು. […]

Continue Reading

ಭೀಮಣ್ಣಾ ಸಾಲಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಆಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರ ಖಾಲಿಯಾಗಿರುವ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಭೀಮಣ್ಣಾ ಸಾಲಿ ಅವರಿಗೆ ಅವಕಾಶ ನೀಡಿ ನಾಮನಿರ್ದೇಶನ ಮಾಡಬೇಕು ಎಂದು ತಾಲೂಕು ಕೋಲಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಕೋಲಿ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ ಹಣಮಂತ ಸಂಕನೂರ ಮಾತನಾಡಿ, ಭೀಮಣ್ಣ ಸಾಲಿ ಅವರು 1976 ರಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷದ […]

Continue Reading

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರುಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೆನೆದೆ, ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Continue Reading

ಕಲಬುರಗಿ–ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರ: ಸಮಯ ಬದಲಾವಣೆ

ಸುದ್ದಿ ಸಂಗ್ರಹ ಕಲಬುರಗಿಜೂನ್‌ 10ರಿಂದ ಆರಂಭವಾಗಲಿರುವ ಕಲಬುರಗಿ– ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರದ ಸಮಯವನ್ನು ಸಂಜೆ ವೇಳೆಯಿಂದ ಬೆಳಗಿನ ವೇಳೆಗೆ ಬದಲಾವಣೆ ಮಾಡಲಾಗಿದೆ. ಸಮಯ ಬದಲಾವಣೆ ಕುರಿತು ಸ್ಟಾರ್ ಏರ್ ಸಂಸ್ಥೆಯವರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಗೆ ಮಾಹಿತಿ ನೀಡಿರುವುದಾಗಿ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ.ಪಪ್ಪಾ, ಗೌರವ ಕಾರ್ಯದರ್ಶಿ ಶಿವರಾಜ್ ವಿ ಇಂಗಿನಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ನಿತ್ಯ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಬೆಳಿಗ್ಗೆ 8.10ಕ್ಕೆ […]

Continue Reading

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್

ಸುದ್ದಿ ಸಂಗ್ರಹ ಬೆಂಗಳೂರುಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಮುಖ್ಯಾಂಶಗಳು ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ ಕಳೆದ ಮೇ.23 ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ […]

Continue Reading

ಮದುವೆ ಆಗ್ತಿನಿ ಅಂತ ನಂಬಿಸಿ ಯುವತಿಗೆ ವಂಚನೆ ಆರೋಪ: ಎಫ್‌ಐಆರ್‌ ಆದ್ರೂ ಪೊಲೀಸರು ಸೈಲೆಂಟ್

ಸುದ್ದಿ ಸಂಗ್ರಹ ದಾವಣಗೆರೆಪ್ರೀತಿ ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ ನಡೆದಿದೆ. ಮಲೆಬೆನ್ನೂರು ಮೂಲದ ಮುಷ್ರಫ್ ಖಾನ್ ಎಂಬಾತನ ವಿರುದ್ಧ ದಾವಣಗೆರೆಯ ಯುವತಿ ವಂಚನೆ ಆರೋಪ ಮಾಡಿದ್ದಾಳೆ. ಮುಷ್ರಫ್ ಮದುವೆ ಆಗುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಈಗ ನಾಪತ್ತೆಯಾಗಿದ್ದಾನೆ. ಅಲ್ಲದೆ ಪ್ರಭಾವಿ ನಾಯಕರ ಸಂಬಂಧಿ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆ ಆಗಲು 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನ್ಯಾಯಕ್ಕಾಗಿ ಯುವತಿ ಹೋರಾಟ ಮಾಡುತ್ತಿದ್ದಾಳೆ. ಯುವಕ ಹಾಗೂ ಆತನಿಗೆ ಸಾಥ್ […]

Continue Reading

ಕರದಾಳ: ಸಿಡಿಲ ಹೊಡೆತಕ್ಕೆ ಸುಟ್ಟು ಹೋದ ಕಣಕಿ ಬಣಮಿ

ಸುದ್ದಿ ಸಂಗ್ರಹ ಚಿತ್ತಾಪುರ ಮೇ.27ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಡುಗು ಸಹಿತ ಭಾರಿ ಗಾಳಿ- ಮಳೆಯ ಅಬ್ಬರದ ನಡುವೆ ಕಣಕಿ ಬಣಮಿಗೆ ಸಿಡಿಲು ಬಡಿದು, ಕಣಕಿ ಬಣಮಿ ಸಂಪುರ್ಣವಾಗಿ ಹೊತ್ತಿ ಉರಿದ ಘಟನೆ ಕರದಾಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕರದಾಳ ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಎಂಬವರ ಜಮೀನಿನಲ್ಲಿ ಶೇಖರಿಸಿದ್ದ ಕಣಕಿ ಬಣಮಿಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಮಳೆಯ ನಡುವೆಯೂ ಕಣಕಿ ಬಣಮಿ ಬೆಂಕಿಗಾಹುತಿಯಾಗಿದ್ದು, ಗಾಳಿಯ ರಭಸಕ್ಕೆ ಕಣಕಿ ಬಣಮಿಯಿಂದ ಹಾರುತ್ತಿರುವ ಬೆಂಕಿಯ […]

Continue Reading

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಸುದ್ದಿ ಸಂಗ್ರಹ ಬೀದರ್ಭಾರಿ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ನಡೆದಿದೆ. 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಈ ವೇಳೆ ಮೇಲ್ಛಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು […]

Continue Reading