ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ

ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ಸುದ್ದಿ ಸಂಗ್ರಹ ಮಂಗಳೂರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. […]

Continue Reading

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

ಸುದ್ದಿ ಸಂಗ್ರಹ ಬೆಂಗಳೂರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.21 ರವಿವಾರ ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ […]

Continue Reading

ಯಾರಿಗೆ ಹೇಳ್ತಿರಾ ಹೇಳಿ: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLC ತಡೆದು ಅನುಚಿತ ವರ್ತನೆ

ಸುದ್ದಿ ಸಂಗ್ರಹ ವಿಜಯಪುರ ರಾಷ್ಟ್ರೀಯ ಹೆದ್ದಾರಿ 52ರ ಟೋಲ್‌ನಲ್ಲಿ ಎಂಎಲ್‌ಸಿ ಕೇಶವ ಪ್ರಸಾದ್ ಅವರನ್ನು ತಡೆದು ಅನುಚಿತ ವರ್ತನೆ ತೋರಿರುವ ಘಟನೆ ನಡೆದಿದೆ. ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೆಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ. ಬರೋಬ್ಬರಿ ಒಂದು ಗಂಟೆಕಾಲ ಎಂಎಲ್‌ಸಿಯನ್ನು ತಡೆದು ಗೊಂದಲ ಸೃಷ್ಟಿಸಿದ್ದಾರೆ. ಮೊಬೈಲ್, ಪಾಸ್ ಕಸಿದು ‘ಯಾರಿಗೆ ಹೇಳ್ತಿರಾ ಹೇಳಿ’ ಎಂದು ಏರುದ್ವನಿಯಲ್ಲಿ ಮಾತನಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ನೀವೆ […]

Continue Reading

ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್: ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ ?

ಆಧುನಿಕ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ನಾನಾ ಪರಿಣಾಮ ಬೀರುತ್ತಿದೆ. ಉತ್ತಮ ಆರೋಗ್ಯಕ್ಕೆ ನಿಗದಿತ ದೈಹಿಕ ಚಟುವಟಿಕೆ ಮತ್ತು ವ್ಯಾಯಾಮ ಅತ್ಯಗತ್ಯ. ಆದರೆ, ಒತ್ತಡದ ಬದುಕು, ಆಲಸ್ಯ ಮನೋಭಾವದಿಂದ ಮನುಷ್ಯ ಆರೋಗ್ಯ ಸುಲಭ ಮಾರ್ಗ ಅನುಸರಿಸುತ್ತಿದ್ದಾನೆ. ವೈದ್ಯಕೀಯ ವಲಯದಲ್ಲಿ ಅದಕ್ಕೆ ಪೂರಕವಾದ ಚಿಕಿತ್ಸೆ, ಔಷಧಿಗಳು ಹೊರಬರುತ್ತಿವೆ. ಇವುಗಳ ಮೇಲಿನ ಅವಲಂಬನೆ ಕೂಡ ಹೆಚ್ಚಾಗುತ್ತಿದೆ. ಈಗಿನ ದಿನಮಾನಗಳಲ್ಲಿ ಜನರನ್ನು ಹೆಚ್ಚಾಗಿ ಬಾಧಿಸುತ್ತಿರುವುದು ಶುಗರ್ ಮತ್ತು ಬೊಜ್ಜುತನ. ದಿಲ್ಲಿಯಿಂದ ಹಳ್ಳಿವರೆಗೆ, ಶ್ರೀಮಂತನಿಂದ ಬಡವನವರೆಗೆ ಸಕ್ಕರೆ ಕಾಯಿಲೆ ತಲುಪಾಗಿದೆ. ಅಂತೆಯೆ, ದೊಡ್ಡವರಿಂದ […]

Continue Reading

ಚಿತ್ತಾಪುರ: ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಿಡಿಪಿಒ ಆರತಿ ತುಪ್ಪದ ಚಾಲನೆ

ಸುದ್ದಿ ಸಂಗ್ರಹ ಚಿತ್ತಾಪುರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಆರತಿ ತುಪ್ಪದ ಅವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಿವಾರ ಮಗುವಿಗೆ ಲಸಿಕೆ ಹಾಕಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು […]

Continue Reading

ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]

Continue Reading

ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ

ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]

Continue Reading

ಮಾನವರೆಲ್ಲರು ಒಂದೆ, ಒಗ್ಗಟ್ಟಾಗಿರುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ   ಮಾನವರೆಲ್ಲರು ಒಂದೆಯಾಗಿದ್ದು, ಜಾತಿ, ಮತ, ಪ್ರದೇಶ, ಸಂಸ್ಕೃತಿ, ಪರಂಪರೆಯಿಂದ ಮೇಲು-ಕೀಳು ಸಲ್ಲದು. ಇವುಗಳು ಮಾನವನನ್ನು ಅಲ್ಪರನ್ನಾಗಿಸುತ್ತವೆ. ಮಾನವರೆಲ್ಲರು ಒಂದೆಯಾಗಿದ್ದು, ಒಗ್ಗಟ್ಟಿನಿಂದ ಜೀವನ‌ ಸಾಗಿಸಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್ ‘ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟು ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ  ಆಚರಿಸುವುದು, ಬಡತನ, ಅಸಮಾನತೆ ಮತ್ತು ಹವಾಮಾನ ಬದಲಾವಣೆಯಂತಹ ಜಾಗತಿಕ […]

Continue Reading

ಕಲಬುರಗಿ: 3 ವರ್ಷದಲ್ಲಿ 87 ಬಾಲ ಕಾರ್ಮಿಕರ ‍ಪತ್ತೆ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲೆಯಲ್ಲಿ ಕಲಿಕಾ ವಯಸ್ಸಿನಲ್ಲೆ ಮಕ್ಕಳನ್ನು ಕೆಲಸಕ್ಕೆ ದೂಡುವ ಅಪಾಯಕಾರಿ ಪ್ರವೃತ್ತಿ ಮುಂದುವರಿದಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲೆಯ 5 ಕಾರ್ಮಿಕ ವೃತ್ತಗಳ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 2,300ಕ್ಕೂ ಅಧಿಕ ಕಡೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿದ್ದ ಒಟ್ಟು 87 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದ್ದಾರೆ. ಈ ಸಂಬಂಧ ಒಟ್ಟು 57 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನೂ […]

Continue Reading